ಡಿ.5ರಂದು ವಕ್ಫಾಸುರನ ವಿರುದ್ಧ ಶಹಾಪೂರದಲ್ಲಿ ಬೃಹತ್ ಪ್ರತಿಭಟನೆ: ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

ಸತ್ಯಕಾಮ ವಾರ್ತೆ ಯಾದಗಿರಿ:

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರೈತರು, ಮಠಾಧೀಶರ ಜೊತೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಶಹಾಪೂರ ನಗರದಲ್ಲಿ ಡಿ. 5 ರಂದು ಬೆಳಗ್ಗೆ 11 ಕ್ಕೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯಲ್ಲಿ ವಕ್ಫ್ ಹೆಸರಿನಲ್ಲಿ ರೈತರ, ಮಠ ಮಾನ್ಯಗಳ ಸೇರಿದಂತೆ ಎಲ್ಲರ ಜಮೀನು ನುಂಗುವ ನಿಟ್ಟಿನಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಹಾಗೂ ಮುಡಾ ಹಗರಣ, ನಿಗಮಗಳ ಹಗರಣಗಳು ಸೇರಿದಂತೆ ಸರ್ಕಾರದ ವೈಫಲ್ಯದ ವಿರುದ್ಧವೂ ಪ್ರತಿಭಟನೆ ನಡೆಯಲಿದೆ.

ಅಂದು ಬೆಳಗ್ಗೆ 11 ಕ್ಕೆ ಸಿಬಿ ಕಮಾನ್ ನಿಂದ ಹೊರಟು ಶ್ರೀ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ಅಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಲಿದೆ. ಇದರಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಬೈರತಿ ಬಸವರಾಜ, ಪಿ. ರಾಜೀವ್ ಸೇರಿದಂತೆ ಜಿಲ್ಲೆಯ ರಾಜ್ಯಮಟ್ಟದ ನಾಯಕರು ಭಾಗಿಯಾಗಲಿದ್ದಾರೆ.

4ನೇ ತಾರೀಖಿನಂದು ಬೀದರ ಕಲ್ಬುರ್ಗಿ ಪೂರ್ಣಗೊಳಿಸಿ 5 ರಂದು ಯಾದಗಿರಿ ರಾಯಚೂರಿನಲ್ಲಿ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಂತರ ಮುಂದೆ ಸಾಗಿ ಬೆಳಗಾವಿಗೆ ಈ ನಿಯೋಗ ತೆರಳಲಿದೆ ಎಂದು ಅವರು ತಿಳಿಸಿದರು.

ಮನವಿ: ಇದು ರೈತರ ಹಾಗೂ ಮಠ ಮಾನ್ಯಗಳ ಆಸ್ತಿಯನ್ನು ಅಕ್ರಮವಾಗಿ ನುಂಗುತ್ತಿರುವ ವಕ್ಫಾಸುರ ಕೃತ್ಯದ ವಿರುದ್ಧ ಇರುವುದರಿಂದ ರೈತರು, ಮಠಾಧೀಶರು, ಪ್ರಗತಿಪರರು,ರೈತ ಪರ ಸಂಘಟನೆಗಳು ಸೇರಿದಂತೆ ಎಲ್ಲರಿಗೂ ಮನವಿ ಮಾಡಿಕೊಂಡಿದ್ದು ಪ್ರತಿಯೊಬ್ಬರೂ ಭಾಗವಹಿಸಿ ಈ ಅಕ್ರಮದ ವಿರುದ್ಧ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್,ಯುವ ಮುಖಂಡ ಮಹೇಶರಡ್ಡಿಗೌಡ ಮುದ್ನಾಳ,ಅಲೆಮಾರಿ ನಿಗಮದ ಮಾಜಿ ಅದ್ಯಕ್ಷ ದೇವೇಂದ್ರನಾಥ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಜಿಲ್ಲಾ ಖಜಾಂಚಿ ತಿರುಪತಿ ರಡ್ಡಿ,ನಗರ ಮಂಡಲ ಲಿಂಗಪ್ಪ ಹತ್ತಿಮನಿ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಇದ್ದರು.

apvc-iconPost Views: 40

Comments

Leave a Reply

Your email address will not be published. Required fields are marked *