amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} /* Inline styles */ figure.acss2676c{max-width:300px;}p.acss2f015{text-align:center;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
ಸತ್ಯಕಾಮ ವಾರ್ತೆ ಯಾದಗಿರಿ :
ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ದಾಖಲಾದ ಗರ್ಭೀಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಶೇಕಡವಾರು ಅತ್ಯಂತ ಕಡಿಮೆ ಪ್ರಮಾಣದಲ್ಲಿ ೮,೯ ಹೀಗೆ ೧೦ರೊಳಗೆ ಇರುವುದನ್ನು ಕಂಡು ಶಾಸಕ ಶರಣಗೌಡ ಕಂದಕೂರ ಕಳವಳ ವ್ಯಕ್ತಪಡಿಸಿದರು.
ಗುರುಮಠಕಲ್ ಮತಕ್ಷೇತ್ರದ ಪಿಹೆಚ್ಸಿ, ಸಿಹೆಚ್ಸಿ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿದ ವಿಷಯ ಕಂಡು ಶಾಸಕರು ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಶೀಘ್ರ ಕಾರಣ ಹುಡುಕು ಪಟ್ಟಿ ಮಾಡಿ ವರದಿ ಸಲ್ಲಿಸುವಂತೆ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರೆಡ್ಡಿಯವರಿಗೆ ಸೂಚಿಸಿದರು.
ಔಷಧಿನೇ ಇಲ್ಲಂದ್ರ ಆಸ್ಪತ್ರೆ ಹ್ಯಾಂಗ್ ನಡೆಸ್ತಿರಿ :
ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಕೆಲವು ಕಡೆ ತಜ್ಞ ವೈದ್ಯರಿಲ್ಲ, ವೈದ್ಯರಿದ್ದರೂ ಒಬ್ಬೊರಿಗೆ ಹಲವು ಆಸ್ಪತ್ರೆಗಳು ಪ್ರಭಾರ ಇರುವುದರಿಂದ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಯಾವುದೇ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯವಿಲ್ಲವೆಂದು ಜನರು ದೂರಿದರೆ, ನಾಯಿ ಕಡಿತಕ್ಕೆ ಕಳೆದ ೬ ತಿಂಗಳಿAದ ಲಸಿಕೆ ಲಭ್ಯವಿಲ್ಲ, ೪ ತಿಂಗಳಿAದ ಐವಿ ಪ್ಲೂಡ್ಸ್ ಸರಬರಾಜಿಲ್ಲ, ಕೆಲವೊಂದು ಔಷಧಿಗಳು ಆಸ್ಪತ್ರೆಯ ನಿರ್ವಹಣಾ ವೆಚ್ಚದಲ್ಲಿ ಖರೀದಿ ಮಾಡುತ್ತೇವೆ ಹೀಗೆ ಸಾಲು ಸಾಲು ಸಮಸ್ಯೆಗಳು ಗುರುಮಠಕಲ್ ಮತಕ್ಷೇತ್ರದ ಹಲವು ಆಸ್ಪತ್ರೆಗಳಲ್ಲಿ ಕಂಡು ಬಂದವು.
ಕAಡು ಬಂದ ಹಲವು ದೃಶ್ಯಗಳನ್ನು ಕಂಡು ದಂಗಾದ ಶಾಸಕ ಇದೇ ರೀತಿ ಆಸ್ಪತ್ರೆಗಳಲ್ಲಿ ಔಷಧಿನೇ ಇಲ್ಲಂದ್ರ ಆಸ್ಪತ್ರೆ ಹ್ಯಾಂಗ್ ರೀ ನಡೆಸ್ತೀರಿ ಎಂದು ಡಿಹೆಚ್ಒ ಅವರನ್ನು ತರಾಟೆಗೆ ತೆಗೆದುಕೊಂಡರು.
ಸಮಜಾಯಿಸಿ ನೀಡಲು ಬಂದ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರಡ್ಡಿಯವರಿಗೆ ಸುಮ್ನೆ ಇರಪ್ಪ ನಾ ಬಂದಾಗ ಈ ಸಮಸ್ಯೆ ಗೊತ್ತಾಯಿತು. ಇಷ್ಟು ದಿನ ನಿವೆಲ್ಲ ಏನ್ರಿ ಮಾಡಿದ್ದೀರಿ, ಯಾವಗಾದರೂ ಬಂದು ಆಸ್ಪತ್ರೆಗೆ ವಿಸಿಟ್ ಮಾಡಿದ್ದೀರಾ, ಮಾಡಿದ್ದರೆ ಎಂದೋ ಈ ಸಮಸ್ಯೆ ಬಗೆ ಹರಿತಿತ್ತು. ಆಸ್ಪತ್ರೆಗಳಲ್ಲಿ ಇಷ್ಟೊಂದು ಸಮಸ್ಯೆ ಇದೆ ನೀವೇನ್ರಿ ಮಾಡ್ತಿರಿ ಎಂದು ಗದರಿದರು.
ತದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಸೇರಿದಂತೆ ಹಲವು ಮೇಲಾಧಿಕಾರಿಗಳಿಗೆ ಸ್ಥಳದಿಂದಲೇ ಪೋನ್ ಸಂಪರ್ಕ ಮಾಡಿ ವಿಷಯದ ತೀವ್ರತೆ ಮತ್ತು ಸಮಸ್ಯೆಗಳ ಪರಿಹರಿಸುವಂತೆ ಕೋರಿದರು.
ಕೋಟಗೇರಾ ಆಸ್ಪತ್ರೆಗೆ ಭೇಟಿ :
ಮತಕ್ಷೇತ್ರದ ಕೋಟಗೇರಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಟಾಫ್ ನರ್ಸ್ಗಳ ವರ್ತನೆ, ಫಾರ್ಮಾಸಿಸ್ಟ್ ನಿರ್ಲಕ್ಷö್ಯ ಕಂಡು ಕೆರಳಿದ ಶಾಸಕರು ಕೂಡಲೇ ಇಬ್ಬರಿಗೆ ನೊಟಿಸ್ ನೀಡುವಂತೆ ಸೂಚಿಸಿದರು.
ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ನಂತರ ಆಸ್ಪತ್ರೆ ಸ್ವಚ್ಚತೆ ಕಾಪಾಡಬೇಕು, ಕಾಂಪೌಡ್ ಒಳಗೆ ಸಿಸಿ ರಸ್ತೆ, ಗಾರ್ಡ್ನ್ ನಿರ್ಮಿಸಲು ಕ್ರಮಕೈಗೋಳ್ಳಬೇಕು, ಜನರು ಆಸ್ಪತ್ರೆಗೆ ರೋಗ ವಾಸಿ ಮಾಡಿಕೊಳ್ಳಲು ಬರಬೇಕು ರೋಗ ಹಚ್ಚಿಕೊಂಡು ಹೋಗುವಂತಾಗಬಾರದು ಮತ್ತೊಮ್ಮೆ ಬರುವ ವೇಳೆಗೆ ಎಲ್ಲಾ ಸರಿಯಾಗಬೇಕು ಇಲ್ಲಂದ್ರ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು.
ಗಾಜರಕೋಟ್ ಆಸ್ಪತ್ರೆಗೆ ಭೇಟಿ :
ಮತಕ್ಷೇತ್ರದ ಗಾಜರಕೋಟ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಯಿ ಕಡಿತ ಲಸಿಕೆ, ಐವಿ ಪ್ಲೂಡ್ಸ್ ಕೊರತೆ ಗಮನಕ್ಕೆ ಬಂದಿದ್ದು, ಕೂಡಲೇ ಕ್ರಮಕೈಗೊಳ್ಳುವಂತೆ ಡಿಹೆಚ್ಒಗೆ ಸೂಚನೆ ನೀಡಿದರು. . ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ಆಸ್ಪತ್ರೆ ಸಿಬ್ಬಂದಿಗಳು ಜನರು ಆಸ್ಪತ್ರೆ ಕಾಂಪೌAಡ್ ಒಳಗೆ ಟ್ರಾಕ್ಟರ್ ನಿಲ್ಲಿಸುವುದು, ಮೂತ್ರ ವಿಸರ್ಜನೆ ಮಾಡುವುದು ಮಾಡುತ್ತಿದ್ದು ಕ್ರಮಕೈಗೊಳ್ಳಬೇಕೆಂದು ತಿಳಿಸಿದಾಗ ಸ್ಥಳದಲ್ಲಿದ್ದ ಪಿಡಿಒಗೆ ಕೂಡಲೇ ಪೊಲೀಸ್ ಸ್ಟೇಶನ್ಗೆ ಕಂಪ್ಲೆಟ್ ಕೊಟ್ಟು ಬಿಡಿ ಎಂದು ಸೂಚಿಸಿದರು.
ಗುರುಮಠಕಲ್ ಆಸ್ಪತ್ರೆಗೆ ಭೇಟಿ :
ಗುರುಮಠಕಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ . ಆಸ್ಪತ್ರೆಯಲ್ಲಿನ ರಜಿಸ್ಟರ್ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು. ಜನರು ಆಸ್ಪತ್ರೆ ಅವ್ಯವಸ್ಥೆ ಕುರಿತು ಹಲವು ದೂರುಗಳು ಬರುತ್ತಿದ್ದು, ಎಚ್ಚರದಿಂದ ಇರಿ, ಆಸ್ಪತ್ರೆಗೆ ಬಡವರು ರ್ತಾರೆ ಅವರನ್ನು ಮಾನವೀಯತೆ ಇಂದ ಕಾಣಿ, ನರ್ಸ್ಗಳು ಜನರೊಡನೆ ಸೌಜನ್ಯದಿಂದ ವರ್ತಿಸದಿದ್ದಲ್ಲಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದರು. ಆಸ್ಪತ್ರೆ ಸ್ವಚ್ಚತೆಗೆ ಹೆಚ್ಚಿನ ಗಮನ ನೀಡಬೇಕು, ಈ ಆಸ್ಪತ್ರೆಯನ್ನು ೧೦೦ ಬೆಡ್ ಆಸ್ಪತ್ರೆಗೆ ಏರಿಸಲು ಕ್ರಮವಹಿಸಲಾಗಿದ್ದು, ಈ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ನಿವಾರಣೆಯಾಗಲಿದೆ ಎಂದರು.
ಸೈದಾಪುರ ಆಸ್ಪತ್ರೆಗೆ ಭೇಟಿ : ಸೈದಾಪೂರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಆಸ್ಪತ್ರೆ ಸ್ವಚ್ಚತೆ ಪರಿಶೀಲಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು.
ತದನಂತರ ಆಸ್ಪತ್ರೆ ಸಿಬ್ಬಂದಿಗಳ ಕ್ವಾಟರಸ್ ವೀಕ್ಷಿಸಿ ಈ ಭಾಗದಲ್ಲಿಯೇ ಇಷ್ಟೊಂದು ಅತ್ಯುತ್ತಮ ಕ್ವಾಟರಸ್ ನಮ್ಮ ಕೈಯಿಂದಲೇ ಮಾಡಿಸಿದ್ದೇನೆ, ನೀವು ಕೇವಲ ಜನರ ಸೇವೆ ಮಾಡಿ ಸಾಕು ನಿಮಗೇ ಯಾವ ರೀತಿಯ ಸೌಲಭ್ಯ ಬೇಕು ನಾವ್ ಕೊಡ್ತಿವಿ, ಜನರ ದೂರು ಬರದಂತೆ ಗಮನವಹಿಸಬೇಕು ಎಂದು ಸೂಚಿಸಿದರು.
ಮಲ್ಹಾರ ಆಸ್ಪತ್ರೆಗೆ ಭೇಟಿ : ಮತಕ್ಷೇತ್ರದ ಮಲ್ಹಾರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಸ್ವಚ್ಚತೆಗೆ ಶಬ್ಬಾಸ್ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿನ ರಜಿಸ್ಟರ್ನಲ್ಲಿ ಗರ್ಭೀಣಿಯರ ದಾಖಲಾತಿ ಮತ್ತು ಅವರ ಹಿಮೋಗ್ಲೋಬಿನ್ ಪ್ರಮಾಣ ಕುರಿತು ಪರಿಶೀಲಿಸಿದರು.
ಜನರ ಸಮಸ್ಯೆ ಆಲಿಸಿ ಜನರು ಆಸ್ಪತ್ರೆ ಸಿಬ್ಬಂದಿ ವರ್ತನೆ ಸರಿ ಇಲ್ಲವೆಂದು ದೂರಿದಾಗ ಕೆರಳಿದ ಶಾಸಕರು ನೀವು ಎಷ್ಟೇ ಒಳ್ಳಯವರಾಗಿ ಕೆಲಸ ಮಾಡಿದರೂ ಜನರೊಗೆ ಉತ್ತಮ ನಡವಳಿಕೆ ಇಲ್ಲಂದ್ರ ನೀವು ಮಾಡಿದ ಕೆಲಸ ವ್ಯರ್ಥ, ಆಸ್ಪತ್ರೆಗೆ ಬರುವವರೊಮದಿಗೆ ಸೌಜನ್ಯದಿಂದ ವರ್ತನೆ ಮಾಡಬೇಕು ಎಂದರು. ನಂತರ ಆಸ್ಪತ್ರೆ ಹಳೆಯದಾಗಿರುವುದರಿಂದ ಹೊಸ ಆಸ್ಪತ್ರೆ ನಿರ್ಮಿಸಬೇಕಾ ಅಥವಾ ಹೆಚ್ಚುವರಿ ಕೋಣೆ ನಿರ್ಮಿಸಿಬೇಕಾ ವರದಿ ಕೊಡಿ ಎಂದು ಡಿಹೆಚ್ಒ ರವರಿಗೆ ಸೂಚಿಸಿದರು.
೯ ಆರೋಗ್ಯ ಕ್ಷೇಮ ಕೇಂದ್ರಗಳ ಸ್ಥಾಪನೆ
ಗುರುಮಠಕಲ್ ಮತಕ್ಷೇತ್ರದ ಬಂದಳ್ಳಿ, ಬೆಳಗುಂದಿ, ಅಚ್ಚೋಲಾ, ಸೈದಾಪುರ, ಮಾಧ್ವಾರ, ಅಜಲಾಪೂರ, ವಂಕಸAಬ್ರ, ಮೊಗದಂಪೂರ, ಕಂದಕೂರ ಹೀಗೆ ೯ ಗ್ರಾಮಗಳಲ್ಲಿ ತಲಾ ೬೫ ಲಕ್ಷ ವೆಚ್ಚದಲ್ಲಿ ಆರೋಗ್ಯ ಕ್ಷೇಮ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ. ಈ ಎಲ್ಲಾ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಈ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು.
-ಶರಣಗೌಡ ಕಂದಕೂರ ಶಾಸಕರು, ಗುರುಮಠಕಲ್
೬ ತಿಂಗಳಿAದ ನಾಯಿ ಕಡಿತ ಲಸಿಕೆ ಸರಬರಾಜಿಲ್ಲ
ನಾಯಿ ಕಡಿತವೆಂದು ಬರುವ ರೋಗಿಗಳಿಗೆ ಚಿಕಿತ್ಸೆಗಾಗಿ ಸರ್ಕಾರ ಕಳೆದ ೬ ತಿಂಗಳಿAದ ಲಸಿಕೆ ಸರಬರಾಜು ಮಾಡಿಲ್ಲವೆಂದರೆ ಏನ್ರಿ ಅರ್ಥ ನಾಯಿ ಕಡಿದು ಜನರು ಸತ್ತರೆ ಏನ್ರಿ ಮಾಡ್ತಿರಾ, ಅವರ ಜೀವಕ್ಕೆ ಯಾವ ಬೆಲೆ ಇಲ್ಲವಾ ಎಂದು ಶಾಸಕ ಶರಣಗೌಡ ಕಂದಕೂರ ಆಕ್ರೋಶ ವ್ಯಕ್ತಪಡಿಸಿದರು.
ಗಾಜರಕೋಟ್ ಗ್ರಾಮದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಳಿ ಬಂದ ಸಮಸ್ಯೆಗೆ ಕೆರಳಿ ಕೆಂಡವಾದ ಶಾಸಕ ಕಂದಕೂರ ಆಸ್ಪತ್ರೆಯಿಂದಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ರವರಿಗೆ ಪೋನ್ ಮಾಡಿ ನಾಯಿ ಕಡಿತಕ್ಕೆ ಚಿಕಿತ್ಸೆ ಲಭ್ಯವಿಲ್ಲ, ಕಳೆದ ೬ ತಿಂಗಳಿAದ ಲಸಿಕೆ ಸರಬರಾಜಿಲ್ಲವೆಂದು ಗಮನಕ್ಕೆ ತಂದು ಕೂಡಲೇ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಹರ್ಷಗುಪ್ತ ಕೂಡಲೇ ಕ್ರಮಕೈಗೊಳ್ಳುವುದಾಗಿ ಶಾಸಕರಿಗೆ ಭರವಸೆ ನೀಡಿದರು.
ಎಲ್ಲಾ ಆಸ್ಪತ್ರೆಗಳಿಗೆ ಆರ್ಒ ಪ್ಲಾಂಟ್
ಗುರುಮಠಕಲ್ ಮತಕ್ಷೇತ್ರದ ಎಲ್ಲಾ ಆಸ್ಪತ್ರೆಗಳಿಗೆ ಸಿಸಿ ರಸ್ತೆ, ಕಾಂಪೌAಡ್, ಮೂಲಸೌಕರ್ಯ ಜೊತೆಗೆ ಆರ್ಒ ಪ್ಲಾಂಟ್ಗಳನ್ನು ನಿರ್ಮಿಸಿಕೊಡಲಾಗುವುದು, ಅವಶ್ಯಕತೆ ಇರುವ ಆಸ್ಪತ್ರೆಗಳ ಪಟ್ಟಿ ಮಾಡಿ ಕೊಡಬೇಕು, ಎಲ್ಲಾ ಆಸ್ಪತ್ರೆಗಳ ಅಭಿವೃದ್ಧಿಗೆ ಕೆಕೆಆರ್ಡಿಬಿಯಿಂದ ಸಾಕಷ್ಟು ಅನುದಾನ ನೀಡುವುದಾಗಿ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.
ಆಸ್ಪತ್ರೆಗಳಲ್ಲಿ ಐವಿ ಪ್ಲೂಡ್ಸ್ ಲಭ್ಯವಿಲ್ಲ
ಕಳೆದ ೪ ತಿಂಗಳಿAದ ಆಸ್ಪತ್ರೆಗಳಲ್ಲಿ ಐವಿ ಪ್ಲೂಡ್ಸ್ ಲಭ್ಯವಿಲ್ಲ ಹಿಂಗಾದರೆ ಹೇಗೆ ಆಸ್ಪತ್ರೆ ನಡೆಸ್ತಿರಿ, ಇದರಿಂದ ಜನರಿಗೆ ಹೇಗೆ ನೀವು ಉತ್ತಮ ಆರೋಗ್ಯ ಸೇವೆ ನೀಡಲು ಸಾಧ್ಯವೆಂದು ಡಿಹೆಚ್ಒ ವಿರುದ್ದ ಶಾಸಕರು ಗರಂ ಆದರು. ಇದಕ್ಕೆ ಸಮಜಾಯಿಸಿ ನೀಡಿದ ಡಿಹೆಚ್ಒ ತಕ್ಷಣದಿಂದಲೇ ಮೇಲಾಧಿಕಾರಿಗಳ ಜೊತೆ ಮಾತನಾಡಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಗುರುಮಠಕಲ್ ಕ್ಷೇತ್ರದ ನಸಲವಾಯಿ, ಬಾಡಿಯಾಳಕ್ಕೆ ಹೊಸ ಆಸ್ಪತ್ರೆ
ಗುರುಮಠಕಲ್ ಮತಕ್ಷೇತ್ರದ ನಸಲವಾಯಿ ಮತ್ತು ಬಾಡಿಯಾಳ ಗ್ರಾಮದಲ್ಲಿ ಹೊಸ ಆಸ್ಪತ್ರೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಗೆ ಕ್ರಮಕೈಗೊಳ್ಳಲಾಗುವುದು, ಇದರ ಜೊತೆಗೆ ಗುರುಮಠಕಲ್ ಮತಕ್ಷೇತ್ರದ ಎಲ್ಲಾ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲು ಪಣತೊಟ್ಟಿದ್ದು, ತಾಲೂಕಿನ ಎಲ್ಲಾ ಆಸ್ಪತ್ರೆಗಳ ಮೂಲಸೌಕರ್ಯಗಳ ಪಟ್ಟಿ ಮಾಡಿ ವರದಿ ನೀಡುವಂತೆ ತಾಲೂಕು ಆರೋಗ್ಯ ಅಧಿಕಾರಿ ಹಣಮಂತರೆಡ್ಡಿಯವರಿಗೆ ಸೂಚನೆ ನೀಡಿದರು.
ಕೋಟಗೇರಾ ಫಾರ್ಮಾಸಿಸ್ಟ್ಗೆ ನೊಟೀಸ್
ಮಕ್ಕಳ ನಿಯಂತ್ರಣ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಶಾಸಕರು ಕೇಳಿದಾಗ ಪ್ಯಾರಾಸೆಟಾಮಾಲ್ ಔಷಧಿ, ಕೊಡುವುದು, ಅವಧಿ ಮುಗಿಯುವ ಹಂತದಲ್ಲಿರುವ ಮಾತ್ರೆಗಳು ಆಸ್ಪತ್ರೆಗಳಲ್ಲಿಟ್ಟು ದಿನಾಂಕ ಗಮನಿಸದೇ ಮೇಲಾಧಿಕಾರಿಗಳಿಗೆ ವರ್ತಮಾನದ ಕುರಿತು ಮಾಹಿತಿ ನೀಡದೇ ನಿರ್ಲಕ್ಷö್ಯ ವಹಿಸಿದ ಕೋಟಗೇರಾ ಫಾರ್ಮಾಸಿಸ್ಟ್ಗೆ ನೊಟೀಸ್ ನೀಡುವಂತೆ ಶಾಸಕ ಕಂದಕೂರ ಸೂಚನೆ.
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾವಾಗಿ ನ.2 ರಂದು ಬೆಳಗ್ಗೆ 10.30 ಕ್ಕೆ…
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಭಾರತ ಮಹಿಳಾ ತಂಡ ಐತಿಹಾಸಿಕ ಸಾಧನೆಯನ್ನು ಗೈದು ಫೈನಲ್ಗೆ ಪ್ರವೇಶಿಸಿದೆ. ಗುರುವಾರ ನಡೆದ ಸೆಮಿಫೈನಲ್ನಲ್ಲಿ…
ನಮ್ಮ ಭಾರತೀಯ ಆಹಾರ ಸಂಸ್ಕೃತಿಯಲ್ಲಿ ಅನ್ನ ಅಂದರೆ ಅಕ್ಕಿ, ಜೀವನದ ಅವಿಭಾಜ್ಯ ಭಾಗವಾಗಿದೆ. ದಿನದ ಮೂರು ಹೊತ್ತು ಊಟದ ಮಾತು…
ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್ . ಗವಾಯಿ ಮೇಲೆ ಶೂ ಎಸೆದ ಪ್ರಕರಣ ಹಾಗೂ…
ಸತ್ಯಕಾಮ ವಾರ್ತೆ ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿಯವರ ಪ್ರೊಫೈಲ್ ಚಿತ್ರವನ್ನು ಬಳಸಿಕೊಂಡು ವಾಟ್ಸಪ್ನಲ್ಲಿ ನಕಲಿ ಖಾತೆ ತೆರೆದು ಆರೋಗ್ಯ ಇಲಾಖೆಯ ಮಹಿಳಾ…
ಸದ್ಯ ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಅಭಿಮಾನಿ…