ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ
Latest News

ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ

ಮಾಧ್ವಾರದಂತಹ ಗ್ರಾಮೀಣ ಭಾಗದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ತನ್ನ ಶಾಖೆಯನ್ನು ಆರಂಭಿಸಿದ್ದು, ಸ್ವಾಗತಾರ್ಹ ಈ ಭಾಗದ ಜನರು ಬ್ಯಾಂಕ್ ನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ತಿಳಿಸಿದರು.

Satyakam NewsDesk
Last updated: 2025/08/06 at 4:37 PM
Satyakam NewsDesk
Share
2 Min Read
SHARE

ಗುರುಮಠಕಲ್ : ಮತಕ್ಷೇತ್ರದ ಮಾಧ್ವಾರದಂತಹ ಗ್ರಾಮೀಣ ಭಾಗದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ತನ್ನ ಶಾಖೆಯನ್ನು ಆರಂಭಿಸಿದ್ದು, ಸ್ವಾಗತಾರ್ಹ ಈ ಭಾಗದ ಜನರು ಬ್ಯಾಂಕ್ ನ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಶಾಸಕ ಶರಣಗೌಡ ಕಂದಕೂರ ಅವರು ತಿಳಿಸಿದರು.

ಸಮೀಪದ ಮಾಧ್ವಾರ ಗ್ರಾಮದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನವಾಗಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.

ಗುರುಮಠಕಲ್ ತಾಲೂಕು ಕೇಂದ್ರದಲ್ಲೇ ಹೆಚ್ ಡಿಎಫ್ ಸಿ ಬ್ಯಾಂಕ್ ಬ್ಯಾಂಕ್ ಶಾಖೆ ಇಲ್ಲ ಅದರಲ್ಲಿ ಮಾಧವಾರ ಗ್ರಾಮದಲ್ಲಿ ಸ್ಥಾಪನೆ ಮಾಡಿದ್ದು ಸಂತಸದ ಸುದ್ದಿ. ಬ್ಯಾಂಕ್ ನ ಸ್ಥಾಪನೆಗೆ ಕಾರಣೀಭೂತರಾದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಮ್ಮ ಭಾಗದ ಜನರು ಮುಗ್ಧರು, ಅದರಲ್ಲಿ ಅನಕ್ಷರಸ್ಥರು ಇದ್ದಾರೆ ಅವರಿಗೆ ಬ್ಯಾಂಕ್ ನ ವ್ಯವಹಾರಗಳ ಬಗ್ಗೆ ಮಾಹಿತಿ ಕಡಿಮೆ. ಬ್ಯಾಂಕ್ ಸಿಬ್ಬಂದಿಯವರು ತಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿವರವಾಗಿ ಮಾಹಿತಿ ನೀಡುವ ಮೂಲಕ ಅವರನ್ನು ತಮ್ಮ ಗ್ರಾಹಕರನ್ನಾಗಿ ಮಾಡಿಕೊಳ್ಳಬೇಕು ಇದರಿಂದ ಇಬ್ಬರಿಗೂ ಲಾಭವಾಗುತ್ತದೆ. ಬ್ಯಾಂಕ್ ನ ಸಿಬ್ಬಂದಿ ಗ್ರಾಮೀಣ ಜನರೊಂದಿಗೆ ಉತ್ತಮ ಒಡನಾಟವನ್ನು ಇಟ್ಟುಕೊಂಡು ಜನರಿಗೆ ಸಹಕಾರ ಕೊಡಿ ಎಂದು ಸೂಚಿಸಿದರು. ಎಚ್ ಡಿ ಎಫ್ ಸಿ ಬ್ಯಾಂಕ್ ನ ಅಧಿಕಾರಿಗಳು ಪ್ರತಿ ತಾಲೂಕು ಕೇಂದ್ರಗಳಲ್ಲಿ ತಮ್ಮ ಬ್ಯಾಂಕ್ ಶಾಖೆ ಪ್ರಾರಂಭಿಸುವಂತೆ ಕ್ಲಸ್ಟರ್ ಮುಖ್ಯಸ್ಥರಾದ ರವಿ ಸುರಪುರ ಅವರಿಗೆ ಹೇಳಿದರು.

ಇದಕ್ಕೂ ಮುನ್ನ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ ಅವರು ಮಾತನಾಡಿ ಮಾಧವಾರ ಗ್ರಾಮದಲ್ಲಿ ಶಾಖೆ ಸ್ಥಾಪನೆ ಮಾಡುವ ಬಗ್ಗೆ ಆರ್ಥಿಕ ವಿಭಾಗದಿಂದಲೇ ಸೂಚನೆ ಬಂದಿತ್ತು. ಹೀಗಾಗಿ ಹೆಚ್ ಡಿಎಫ್ ಸಿ ಅವರು ಕೇವಲ ಒಂದು ತಿಂಗಳ ಕಾಲಾವಧಿಯಲ್ಲೇ ಶಾಖೆ ಸ್ಥಾಪನೆ ಮಾಡಿದ್ದಾರೆ. ಈ ಭಾಗದ ಪ್ರತಿಯೊಬ್ಬರೂ ಖಾತೆ ತೆಗೆದು ಬ್ಯಾಂಕ್ ನ ಲಾಭ ಪಡೆಕೊಳ್ಳುವಂತೆ ಸಲಹೆ ನೀಡಿದರು.

ಹೆಚ್ ಡಿಎಫ್ ಸಿ ಬ್ಯಾಂಕ್ ನ ಕ್ಲಸ್ಟರ್ ಹೆಡ್ ರವಿ ಸುರಪುರ ಅವರು ಮಾತನಾಡಿ ನಮ್ಮ ಬ್ಯಾಂಕ್ ಭಾರತ ಮಾತ್ರವಲ್ಲ ಪ್ರಪಂಚದಾದ್ಯಂತ ಕಾರ್ಯನಿರ್ವಹಿಸುತ್ತಿದ್ದು ಅಂತರ ರಾಷ್ಟ್ರೀಯ ಬ್ಯಾಂಕ್ ಆಗಿದೆ. ಇತರ ಸೇವೆಗಳಿಗಿಂತ ಗುಣಮಟ್ಟದ ಸೇವೆಯನ್ನು ನೀಡುತ್ತಿದ್ದೇವೆ. ರಾಷ್ಟ್ರ, ರಾಜಧಾನಿ, ಜಿಲ್ಲಾ, ತಾಲೂಕು ಮಾತ್ರವಲ್ಲದೆ ಗ್ರಾಮೀಣ ಭಾಗದಲ್ಲೂ ಶಾಖೆಯನ್ನು ಪ್ರಾರಂಭಿಸಿ ಜನರಿಗೆ ಸೇವೆ ನೀಡುತ್ತಿದ್ದೇವೆ. ಇಲ್ಲಿ ಮನೆ, ಆಸ್ತಿ, ಬೆಳೆ, ವ್ಯಾಪಾರ, ಸೇರಿದಂತೆ ಇತ್ಯಾದಿ ಸೇವೆಗಳನ್ನು ಗ್ರಾಹಕರು ಪಡೆಕೊಳ್ಳಬಹುದು. ಯಾದಗಿರಿ ಜಿಲ್ಲೆಯಲ್ಲಿ ನಮ್ಮ ಬ್ಯಾಂಕ್ ವ್ಯವಹಾರ ಉತ್ತಮವಾಗಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷ್ ಕಟಕಟಿ, ಗ್ರಾಪಂ ಅಧ್ಯಕ್ಷ ಶಂಕ್ರಪ್ಪ, ಪಿಡಿಓ ಗಿರಿಮಲ್ಲಣ್ಣ, ವಲಯ ಮುಖ್ಯಸ್ಥರಾದ ರಾಮನಾರಾಯಣ, ಪ್ರಾದೇಶಿಕ ಮುಖ್ಯಸ್ಥರದ ಜಾರ್ಜ ಡಾ.ಕೋಸ್ಟಾ, ಶಾಖಾ ಮುಖ್ಯಸ್ಥರಾದ ಸಂತೋಷ ಕುಮಾರ ಸೇರಿದಂತೆ ಮುಂತಾದವರಿದ್ದರು.

  • ಶಾಸಕ ಕಂದಕೂರ ಜನಪರ ಕಾಳಜಿ ಶ್ಲಾಘನೀಯ

ಸರಕಾರದ ವಿವಿಧ ಯೋಜನಗಳ ಅಡಿಯಲ್ಲಿ ಜನರಿಗೆ ಮಂಜೂರಾದ ಸಾಲ, ಮತ್ತಿತರ ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬವಾದರೆ ಕೂಡಲೇ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರ ಕರೆ ಬರುತ್ತೆ, ಕೆಲಸ ಆಗುವವರೆಗೂ ಅವರು ನಮ್ಮನ್ನು ಸುಮ್ಮನಿರಲು ಬಿಡುವುದಿಲ್ಲ, ಇಡೀ ಜಿಲ್ಲೆಯ ಎಲ್ಲಾ ಶಾಸಕರಿಗಿಂತಲೂ ಗುರುಮಠಕಲ್ ಶಾಸಕರ ಕರೆಗಳು ಹೆಚ್ಚಿರುತ್ತವೆ. ಇಲ್ಲಿನ ಜನರ ಬಗ್ಗೆ ಅವರಿಗಿರುವ ಕಾಳಜಿ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಂಚಾಳ ಅವರು ತಿಳಿಸಿದರು.

apvc-iconPost Views: 94

You Might Also Like

ಚೋರ್ಲಾ ಘಾಟ್‌ನಲ್ಲಿ ಭಾರಿ 400 ಕೋಟಿ ರೂ ದರೋಡೆ

ವ್ಹೀಲಿಂಗ್‌ ಹಾವಳಿಗೆ ಬ್ರೇಕ್: ಬೆಂಗಳೂರು ಗ್ರಾಮಾಂತರ ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ

ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ

‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು

ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ

TAGGED: HDFC new Branch
Satyakam NewsDesk August 6, 2025 August 6, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ದೂರುದಾರರಿಂದ ಪೊನ್ ಪೇ ಮೂಲಕ ಹಣ ಸ್ವೀಕರಿಸಿದ್ದ ಇಬ್ಬರು ಪೊಲೀಸರು ಅಮಾನತು.
Next Article ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ

Stay Connected

Facebook Like
Twitter Follow
Instagram Follow
Youtube Subscribe

Latest News

ಚೋರ್ಲಾ ಘಾಟ್‌ನಲ್ಲಿ ಭಾರಿ 400 ಕೋಟಿ ರೂ ದರೋಡೆ
Latest News January 25, 2026
ವ್ಹೀಲಿಂಗ್‌ ಹಾವಳಿಗೆ ಬ್ರೇಕ್: ಬೆಂಗಳೂರು ಗ್ರಾಮಾಂತರ ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ
Latest News January 25, 2026
ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube