ಸತ್ಯಕಾಮ ವಾರ್ತೆ ಯಾದಗಿರಿ:
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ತಾತಳಗೇರಾ ಗ್ರಾಮದಲ್ಲಿ ಕಾನೂನು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೊಹರಂ ಹಬ್ಬವನ್ನು ಸಾರ್ವಜನಿಕವಾಗಿ ಗುಂಪುಗುಂಪಾಗಿ ಆಚರಿಸುವುದನ್ನು ಮತ್ತು ಸಾರ್ವಜನಿಕವಾಗಿ ಮೆರವಣಿಗೆ ಮಾಡುವುದನ್ನು ನಿಷೇಧಿಸಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುಶೀಲ ಬಿ ಅವರು ಆದೇಶ ಹೊರಡಿಸಿದ್ದಾರೆ.
ಗುರಮಠಕಲ್ ತಾಲೂಕಿನ ತಾತಳಗೇರಾ. ಗ್ರಾಮದಲ್ಲಿ ಜುಲೈ 4 ರಿಂದ ಜುಲೈ 7 ರವರೆಗೆ ನಡೆಯಲಿರುವ ಮೊಹರಂ ಹಬ್ಬದ ಆಚರಣೆಯ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಅಡಿ ಗ್ರಾಮದಲ್ಲಿ ಮೊಹರಂ ಹಬ್ಬ ಗುಂಪು ಗುಂಪಾಗಿ ಆಚರಿಸುವುದನ್ನು ಹಾಗೂ ಸಾರ್ವಜನಿಕವಾಗಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

