ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ ಬಳಿಕ ೩೩ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ, ಭೇದಿ ಮತ್ತು ಹೊಟ್ಟೆನೋವಿನಿಂದ ಬಳಲಿರುವ ಘಟನೆ ಬೆಳಕಿಗೆ ಬಂದಿದೆ.
ರಾತ್ರಿ ೭.೩೦ರ ಸುಮಾರಿಗೆ ಚಿಕನ್, ಚಪಾತಿ, ಅನ್ನ ಸೇವಿಸಿದ ಬಳಿಕ ಕೆಲವೇ ಗಂಟೆಗಳಲ್ಲಿ ವಿದ್ಯಾರ್ಥಿನಿಯರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಗುರುಮಠಕಲ್ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ.
ಒಟ್ಟು ೧೫೦ ವಿದ್ಯಾರ್ಥಿಗಳಲ್ಲಿ ೩೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿರುವುದರಿAದ ಫುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದೆ ಎಂದು ಚಿಕಿತ್ಸಕ ವೈದ್ಯರು ಹೇಳಿದ್ದಾರೆ.
ತುರ್ತು ಪರಿಸ್ಥಿತಿಯನ್ನು ಮನಗಂಡು ತಾಲೂಕ ಆಸ್ಪತ್ರೆ ವೈದ್ಯರ ಜೊತೆಗೆ ಪಟ್ಟಣದ ಸ್ಥಳೀಯ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಕೂಡ ಸೇರ್ಪಡೆಗೊಂಡು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ಎಲ್ಲಾ ವಿದ್ಯಾರ್ಥಿನಿಯರ ಸ್ಥಿತಿ ಈಗ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯ ಮಾಹಿತಿ ತಿಳಿದ ಜಿಲ್ಲಾ ಆಡಳಿತದ ತಂಡ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಾಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ತಹಸೀಲ್ದಾರ್ ಹಾಗೂ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸಾ ವ್ಯವಸ್ಥೆ ಪರಿಶೀಲಿಸಿದರು.
ಗುರುಮಠಕಲ್ ಪೊಲೀಸ್ ಠಾಣೆ ಸಿಬ್ಬಂದಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಹಾಸ್ಟೆಲ್ನ ಅಡಿಗೆ, ಸಂಗ್ರಹಣೆ ಹಾಗೂ ಸ್ವಚ್ಛತೆ ಕುರಿತು ಆಹಾರ ಸುರಕ್ಷತಾ ಇಲಾಖೆಯು ತಪಾಸಣೆ ಆರಂಭಿಸಿದೆ.
ಘಟನೆಯಿAದ ಆತಂಕಗೊAಡ ಪೋಷಕರು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ವಿಚಾರಿಸಿದರು.
