ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನ.01ರಿಂದ ಹೊಸ ಆರ್ಥಿಕ ಮತ್ತು ಪಡಿತರ ನಿಯಮಗಳಲ್ಲಿ ಬದಲಾವಣೆ!
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನ.01ರಿಂದ ಹೊಸ ಆರ್ಥಿಕ ಮತ್ತು ಪಡಿತರ ನಿಯಮಗಳಲ್ಲಿ ಬದಲಾವಣೆ!
Special News

ನ.01ರಿಂದ ಹೊಸ ಆರ್ಥಿಕ ಮತ್ತು ಪಡಿತರ ನಿಯಮಗಳಲ್ಲಿ ಬದಲಾವಣೆ!

Satyakam NewsDesk
Last updated: 2025/10/29 at 7:11 PM
Satyakam NewsDesk
Share
3 Min Read
SHARE

ನವೆಂಬರ್ 1, 2025ರಿಂದ ದೇಶಾದ್ಯಂತ ಹಲವು ಪ್ರಮುಖ ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಸಾಮಾನ್ಯ ನಾಗರಿಕರು, ಬ್ಯಾಂಕ್ ಗ್ರಾಹಕರು, ಹೂಡಿಕೆದಾರರು ಹಾಗೂ ಪಡಿತರ ಚೀಟಿದಾರರ ಬದುಕಿನ ಮೇಲೆ ನೇರವಾಗಿ ಪರಿಣಾಮ ಬೀರುವಂತಿವೆ.

ಬ್ಯಾಂಕಿಂಗ್, ಆಧಾರ್ ನವೀಕರಣ, ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆ, ಮ್ಯೂಚುವಲ್ ಫಂಡ್ ಹೂಡಿಕೆ ನಿಯಮಗಳು ಮತ್ತು ಉಚಿತ ಪಡಿತರ ವ್ಯವಸ್ಥೆ ಇವುಗಳೆಲ್ಲವೂ ಹೊಸ ರೂಪ ಪಡೆಯಲಿವೆ. ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು ಈ ಬದಲಾವಣೆಗಳನ್ನು ಪಾರದರ್ಶಕತೆ, ಸುರಕ್ಷತೆ ಮತ್ತು ಸಮರ್ಥ ನಿರ್ವಹಣೆಯನ್ನು ಹೆಚ್ಚಿಸಲು ತರಲಿವೆ.

ಆಧಾರ್ ನವೀಕರಣ ಪ್ರಕ್ರಿಯೆಯಲ್ಲಿ ದೊಡ್ಡ ಸುಧಾರಣೆ: 

ಯುಐಡಿಎಐ (UIDAI) ಈಗ ಆಧಾರ್ ನವೀಕರಣ ಪ್ರಕ್ರಿಯೆಯನ್ನು ಪೂರ್ಣವಾಗಿ ಡಿಜಿಟಲ್ ಮಾಡಿದ್ದಾರೆ.

ಹಿಂದಿನಂತೆ ಕೇಂದ್ರಕ್ಕೆ ಹೋಗಿ ದಾಖಲೆ ನೀಡುವ ಅವಶ್ಯಕತೆ ಇಲ್ಲ. ಈಗ ನೀವು ಆನ್‌ಲೈನ್‌ನಲ್ಲಿ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ ಮುಂತಾದ ಮಾಹಿತಿಯನ್ನು ಸುಲಭವಾಗಿ ನವೀಕರಿಸಬಹುದು.

ಕೇವಲ ಬಯೋಮೆಟ್ರಿಕ್ (ಫಿಂಗರ್ ಪ್ರಿಂಟ್ ಅಥವಾ ಐರಿಸ್) ಬದಲಾವಣೆಗೆ ಮಾತ್ರ ಆಧಾರ್ ಕೇಂದ್ರಕ್ಕೆ ಭೇಟಿ ಅಗತ್ಯ.

ಹೊಸ ವ್ಯವಸ್ಥೆಯಡಿಯಲ್ಲಿ, ಪ್ಯಾನ್, ಪಾಸ್‌ಪೋರ್ಟ್, ರೇಷನ್ ಕಾರ್ಡ್, MGNREGA ಅಥವಾ ಶಾಲಾ ದಾಖಲೆಗಳಂತಹ ಸರ್ಕಾರಿ ಡೇಟಾಬೇಸ್‌ಗಳೊಂದಿಗೆ UIDAI ನಿಮ್ಮ ವಿವರಗಳನ್ನು ಸ್ವಯಂಚಾಲಿತವಾಗಿ ಪರಿಶೀಲಿಸುತ್ತದೆ ಅಂದರೆ ದಾಖಲೆ ಅಪ್‌ಲೋಡ್ ಪ್ರಕ್ರಿಯೆ ಇಲ್ಲದೆ ನವೀಕರಣ ಸಾಧ್ಯ.

ಬ್ಯಾಂಕ್ ನಿಯಮಗಳಲ್ಲಿ ಹೊಸ ತಿದ್ದುಪಡಿ: 

ಬ್ಯಾಂಕಿಂಗ್ ವಲಯದಲ್ಲಿಯೂ ನವೆಂಬರ್ 1ರಿಂದ ಪ್ರಮುಖ ಬದಲಾವಣೆ ಜಾರಿಗೆ ಬರುತ್ತದೆ.

ಬ್ಯಾಂಕಿಂಗ್ ಕಾನೂನು (ಪರಿಷ್ಕರಣೆ) ಕಾಯ್ದೆ 2025 ಪ್ರಕಾರ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆ, ಲಾಕರ್ ಮತ್ತು ಸುರಕ್ಷಿತ ಕಸ್ಟಡಿ ಖಾತೆಗಳಿಗೆ ಗರಿಷ್ಠ ನಾಲ್ಕು ನಾಮಿನಿಗಳನ್ನು ನೇಮಿಸಿಕೊಳ್ಳಬಹುದು.

ಅಷ್ಟೇ ಅಲ್ಲ, ಪ್ರತಿಯೊಬ್ಬ ನಾಮಿನಿಗೆ ಶೇಕಡಾವಾರು ಪಾಲು (percentage share) ನೀಡುವ ಅವಕಾಶವೂ ಇದೆ.

ಮೊದಲ ನಾಮಿನಿ ಜೀವಂತವಾಗಿಲ್ಲದಿದ್ದರೆ, ಅವರ ಪಾಲು ಸ್ವಯಂಚಾಲಿತವಾಗಿ ಮುಂದಿನ ನಾಮಿನಿಗೆ ವರ್ಗಾಯಿಸಲಾಗುತ್ತದೆ.

ಇದು ಬ್ಯಾಂಕ್ ಗ್ರಾಹಕರಿಗೆ ಅವರ ಹಣಕಾಸು ಹಕ್ಕುಗಳನ್ನು ನಿರ್ವಹಿಸಲು ಹೆಚ್ಚಿನ ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಒದಗಿಸುತ್ತದೆ.

ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರಿಗಾಗಿ ಹೊಸ ನಿಯಮಗಳು: 

SBI ಕ್ರೆಡಿಟ್ ಕಾರ್ಡ್ ಗ್ರಾಹಕರಿಗೂ ನವೆಂಬರ್ 1ರಿಂದ ಹೊಸ ನಿಯಮಗಳು ಅನ್ವಯಿಸುತ್ತವೆ. ಅಸುರಕ್ಷಿತ ಕ್ರೆಡಿಟ್ ಕಾರ್ಡ್‌ಗಳಿಗೆ ಈಗ 3.75% ಶುಲ್ಕ ವಿಧಿಸಲಾಗುತ್ತದೆ. D CRED, CheQ, Mobikwik ಮುಂತಾದ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳ ಮೂಲಕ ಶಾಲೆ ಅಥವಾ ಕಾಲೇಜು ಶುಲ್ಕ ಪಾವತಿಸಿದರೆ, ಹೆಚ್ಚುವರಿ 1% ಶುಲ್ಕ ಅನ್ವಯಿಸುತ್ತದೆ, ಆದರೆ ಶಾಲೆಯ ಅಧಿಕೃತ ವೆಬ್‌ಸೈಟ್ ಅಥವಾ POS ಯಂತ್ರದ ಮೂಲಕ ನೇರ ಪಾವತಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ.

₹1,000 ಕ್ಕಿಂತ ಹೆಚ್ಚು ಮೊತ್ತವನ್ನು ವ್ಯಾಲೆಟ್‌ಗೆ ಲೋಡ್ ಮಾಡಿದರೆ 1% ಶುಲ್ಕ ವಿಧಿಸಲಾಗುತ್ತದೆ. ಕ್ರೆಡಿಟ್ ಕಾರ್ಡ್‌ನಿಂದ ಚೆಕ್ ಪಾವತಿಗಳಿಗೆ ₹200 ಶುಲ್ಕ ವಿಧಿಸಲಾಗುತ್ತದೆ.

ಈ ಕ್ರಮಗಳು ಕ್ರೆಡಿಟ್ ಕಾರ್ಡ್ ಬಳಕೆಯಲ್ಲಿ ನಿಯಂತ್ರಣ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಎಸ್‌ಬಿಐ ಕೈಗೊಂಡಿರುವ ಕ್ರಮಗಳಾಗಿವೆ.

ಸೆಬಿ (SEBI) ಹೊಸ ಹೂಡಿಕೆ ನಿಯಮಗಳು: 

ಹೂಡಿಕೆ ವಲಯದಲ್ಲಿ ಪಾರದರ್ಶಕತೆ ಹೆಚ್ಚಿಸಲು ಭಾರತೀಯ ಮೌಲ್ಯಪತ್ರ ಮತ್ತು ವಿನಿಮಯ ಮಂಡಳಿ (SEBI) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮ್ಯೂಚುವಲ್ ಫಂಡ್ ಕ್ಷೇತ್ರದಲ್ಲಿ ಅಧಿಕಾರಿಗಳು ಅಥವಾ ಅವರ ಕುಟುಂಬ ಸದಸ್ಯರು ₹15 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು (ಟ್ರಾನ್ಸಾಕ್ಷನ್) ಮಾಡಿದರೆ, ಅದನ್ನು ಅನುಸರಣಾ ಅಧಿಕಾರಿಗೆ (Compliance Officer) ಕಡ್ಡಾಯವಾಗಿ ವರದಿ ಮಾಡಬೇಕಾಗಿದೆ.

ಇದರಿಂದ ಒಳಗಿನ ವಹಿವಾಟು (insider trading) ನಿಯಂತ್ರಣ ಹಾಗೂ ಹೂಡಿಕೆದಾರರ ಹಿತಾಸಕ್ತಿ ಕಾಪಾಡುವುದು ಉದ್ದೇಶ.

ಪಡಿತರ ಚೀಟಿ (Ration Card) ನಿಯಮಗಳಲ್ಲಿ ಬದಲಾವಣೆ:

ಕೇಂದ್ರ ಸರ್ಕಾರವು ಉಚಿತ ಪಡಿತರ ಯೋಜನೆಯಲ್ಲೂ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಹೊಸ ನಿಯಮಗಳು ನವೆಂಬರ್ 1, 2025 ರಿಂದ ಜಾರಿಗೆ ಬರುತ್ತವೆ ಮತ್ತು ಕೋಟ್ಯಂತರ ಪಡಿತರ ಚೀಟಿದಾರರ ಮೇಲೆ ಪರಿಣಾಮ ಬೀರುತ್ತವೆ. ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೂ ಹೊಸ ಅರ್ಹತಾ ಪರಿಶೀಲನೆ ನಡೆಸಲಿದೆ.

ಕೆಳಗಿನವರು ತಮ್ಮ BPL ಪಡಿತರ ಚೀಟಿಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ:

ನಿಗದಿತ ಆದಾಯ ಮಿತಿಗಿಂತ ಹೆಚ್ಚುಗಳಿಸುವವರು.

ಸರ್ಕಾರಿ ಉದ್ಯೋಗಿಗಳು ಅಥವಾ ಪಿಂಚಣಿ ಪಡೆಯುವವರು.

ವಸತಿ ಯೋಜನೆಗಳು ಅಥವಾ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುವವರು. ನಾಲ್ಕು ಚಕ್ರದ ವಾಹನ ಅಥವಾ ದೊಡ್ಡ ವ್ಯವಹಾರ ಹೊಂದಿರುವವರು. ಸುಳ್ಳು ಅಥವಾ ನಕಲಿ ಮಾಹಿತಿ ನೀಡಿದವರು. ಪರಿಶೀಲನೆಯಲ್ಲಿ ಸಹಕರಿಸದವರು.

ಸರ್ಕಾರವು ಒನ್ ನೇಷನ್, ಒನ್ ರೇಷನ್ ಕಾರ್ಡ್ ನೀತಿಯಡಿಯಲ್ಲಿ ಪಡಿತರ ಚೀಟಿದಾರರ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ ಪರಿಶೀಲಿಸುತ್ತದೆ, ಅರ್ಥಾತ್ ಅರ್ಹತೆ ಇಲ್ಲದ ಫಲಾನುಭವಿಗಳನ್ನು ಬೇರ್ಪಡಿಸಲಾಗುತ್ತದೆ.

ಒಟ್ಟಾರೆಯಾಗಿ, ನವೆಂಬರ್ 1, 2025ರಿಂದ ಜಾರಿಗೆ ಬರುವ ಈ ನಿಯಮಗಳು ಭಾರತದ ಆರ್ಥಿಕ, ಹೂಡಿಕೆ ಹಾಗೂ ಸಾರ್ವಜನಿಕ ವಲಯದ ಕಾರ್ಯವಿಧಾನದಲ್ಲಿ ದೊಡ್ಡ ಬದಲಾವಣೆಯನ್ನು ತರಲಿವೆ.

ಆಧಾರ್‌ನಿಂದ ಹಿಡಿದು ಬ್ಯಾಂಕ್ ಖಾತೆ, ಕ್ರೆಡಿಟ್ ಕಾರ್ಡ್, ಮ್ಯೂಚುವಲ್ ಫಂಡ್ ಮತ್ತು ಪಡಿತರ ಚೀಟಿದಾರರಿಗೆ ಪ್ರತಿಯೊಂದು ವಿಭಾಗದಲ್ಲಿಯೂ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸುರಕ್ಷತೆಯ ನವೀನ ವ್ಯವಸ್ಥೆ ಸ್ಥಾಪನೆಯಾಗಲಿದೆ.

apvc-iconTotal Visits: 10
apvc-iconAll time total visits: 31117

You Might Also Like

ಹುಬ್ಬಳ್ಳಿ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ವೀರಪ್ಪನ್ ಪುತ್ರಿ ವಿದ್ಯಾರಾಣಿ ಈಗ ಎಲ್ಲಿದ್ದಾರೆ? ಹೇಗಿದ್ದಾರೆ?

ಬಿಪಿಎಲ್ ಕಾರ್ಡ್‌ ರದ್ದು ಅನರ್ಹರಿಗಷ್ಟೆ-ಸಚಿವ ಮುನಿಯಪ್ಪ ಸ್ಪಷ್ಟನೆ

ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!

Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ

TAGGED: Bank rules change, BPL Card, New economic and ration rules change!, Ration Card new update, SEBI Updates
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article 5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ
Next Article ಹುಬ್ಬಳ್ಳಿ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

Stay Connected

Facebook Like
Twitter Follow
Instagram Follow
Youtube Subscribe

Latest News

ನ. 28ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ಮತ್ತು ಶ್ರೀಕೃಷ್ಣನ ದರ್ಶನ
National October 30, 2025
“ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ” – ಕೆಎಲ್ ರಾಹುಲ್
Entertainment Sports October 29, 2025
ಹುಬ್ಬಳ್ಳಿ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ
Special News October 29, 2025
5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ
Latest News October 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube