amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
Special News

ನ.01ರಿಂದ ಹೊಸ ಆರ್ಥಿಕ ಮತ್ತು ಪಡಿತರ ನಿಯಮಗಳಲ್ಲಿ ಬದಲಾವಣೆ!

ನವೆಂಬರ್ 1, 2025ರಿಂದ ದೇಶಾದ್ಯಂತ ಹಲವು ಪ್ರಮುಖ ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ಸಾಮಾನ್ಯ ನಾಗರಿಕರು, ಬ್ಯಾಂಕ್ ಗ್ರಾಹಕರು, ಹೂಡಿಕೆದಾರರು ಹಾಗೂ ಪಡಿತರ ಚೀಟಿದಾರರ ಬದುಕಿನ ಮೇಲೆ ನೇರವಾಗಿ ಪರಿಣಾಮ ಬೀರುವಂತಿವೆ.

ಬ್ಯಾಂಕಿಂಗ್, ಆಧಾರ್ ನವೀಕರಣ, ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆ, ಮ್ಯೂಚುವಲ್ ಫಂಡ್ ಹೂಡಿಕೆ ನಿಯಮಗಳು ಮತ್ತು ಉಚಿತ ಪಡಿತರ ವ್ಯವಸ್ಥೆ ಇವುಗಳೆಲ್ಲವೂ ಹೊಸ ರೂಪ ಪಡೆಯಲಿವೆ. ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು ಈ ಬದಲಾವಣೆಗಳನ್ನು ಪಾರದರ್ಶಕತೆ, ಸುರಕ್ಷತೆ ಮತ್ತು ಸಮರ್ಥ ನಿರ್ವಹಣೆಯನ್ನು ಹೆಚ್ಚಿಸಲು ತರಲಿವೆ.

ಆಧಾರ್ ನವೀಕರಣ ಪ್ರಕ್ರಿಯೆಯಲ್ಲಿ ದೊಡ್ಡ ಸುಧಾರಣೆ: 

ಯುಐಡಿಎಐ (UIDAI) ಈಗ ಆಧಾರ್ ನವೀಕರಣ ಪ್ರಕ್ರಿಯೆಯನ್ನು ಪೂರ್ಣವಾಗಿ ಡಿಜಿಟಲ್ ಮಾಡಿದ್ದಾರೆ.

ಹಿಂದಿನಂತೆ ಕೇಂದ್ರಕ್ಕೆ ಹೋಗಿ ದಾಖಲೆ ನೀಡುವ ಅವಶ್ಯಕತೆ ಇಲ್ಲ. ಈಗ ನೀವು ಆನ್‌ಲೈನ್‌ನಲ್ಲಿ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ ಮುಂತಾದ ಮಾಹಿತಿಯನ್ನು ಸುಲಭವಾಗಿ ನವೀಕರಿಸಬಹುದು.

ಕೇವಲ ಬಯೋಮೆಟ್ರಿಕ್ (ಫಿಂಗರ್ ಪ್ರಿಂಟ್ ಅಥವಾ ಐರಿಸ್) ಬದಲಾವಣೆಗೆ ಮಾತ್ರ ಆಧಾರ್ ಕೇಂದ್ರಕ್ಕೆ ಭೇಟಿ ಅಗತ್ಯ.

ಹೊಸ ವ್ಯವಸ್ಥೆಯಡಿಯಲ್ಲಿ, ಪ್ಯಾನ್, ಪಾಸ್‌ಪೋರ್ಟ್, ರೇಷನ್ ಕಾರ್ಡ್, MGNREGA ಅಥವಾ ಶಾಲಾ ದಾಖಲೆಗಳಂತಹ ಸರ್ಕಾರಿ ಡೇಟಾಬೇಸ್‌ಗಳೊಂದಿಗೆ UIDAI ನಿಮ್ಮ ವಿವರಗಳನ್ನು ಸ್ವಯಂಚಾಲಿತವಾಗಿ ಪರಿಶೀಲಿಸುತ್ತದೆ ಅಂದರೆ ದಾಖಲೆ ಅಪ್‌ಲೋಡ್ ಪ್ರಕ್ರಿಯೆ ಇಲ್ಲದೆ ನವೀಕರಣ ಸಾಧ್ಯ.

ಬ್ಯಾಂಕ್ ನಿಯಮಗಳಲ್ಲಿ ಹೊಸ ತಿದ್ದುಪಡಿ: 

ಬ್ಯಾಂಕಿಂಗ್ ವಲಯದಲ್ಲಿಯೂ ನವೆಂಬರ್ 1ರಿಂದ ಪ್ರಮುಖ ಬದಲಾವಣೆ ಜಾರಿಗೆ ಬರುತ್ತದೆ.

ಬ್ಯಾಂಕಿಂಗ್ ಕಾನೂನು (ಪರಿಷ್ಕರಣೆ) ಕಾಯ್ದೆ 2025 ಪ್ರಕಾರ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆ, ಲಾಕರ್ ಮತ್ತು ಸುರಕ್ಷಿತ ಕಸ್ಟಡಿ ಖಾತೆಗಳಿಗೆ ಗರಿಷ್ಠ ನಾಲ್ಕು ನಾಮಿನಿಗಳನ್ನು ನೇಮಿಸಿಕೊಳ್ಳಬಹುದು.

ಅಷ್ಟೇ ಅಲ್ಲ, ಪ್ರತಿಯೊಬ್ಬ ನಾಮಿನಿಗೆ ಶೇಕಡಾವಾರು ಪಾಲು (percentage share) ನೀಡುವ ಅವಕಾಶವೂ ಇದೆ.

ಮೊದಲ ನಾಮಿನಿ ಜೀವಂತವಾಗಿಲ್ಲದಿದ್ದರೆ, ಅವರ ಪಾಲು ಸ್ವಯಂಚಾಲಿತವಾಗಿ ಮುಂದಿನ ನಾಮಿನಿಗೆ ವರ್ಗಾಯಿಸಲಾಗುತ್ತದೆ.

ಇದು ಬ್ಯಾಂಕ್ ಗ್ರಾಹಕರಿಗೆ ಅವರ ಹಣಕಾಸು ಹಕ್ಕುಗಳನ್ನು ನಿರ್ವಹಿಸಲು ಹೆಚ್ಚಿನ ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಒದಗಿಸುತ್ತದೆ.

ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರಿಗಾಗಿ ಹೊಸ ನಿಯಮಗಳು: 

SBI ಕ್ರೆಡಿಟ್ ಕಾರ್ಡ್ ಗ್ರಾಹಕರಿಗೂ ನವೆಂಬರ್ 1ರಿಂದ ಹೊಸ ನಿಯಮಗಳು ಅನ್ವಯಿಸುತ್ತವೆ. ಅಸುರಕ್ಷಿತ ಕ್ರೆಡಿಟ್ ಕಾರ್ಡ್‌ಗಳಿಗೆ ಈಗ 3.75% ಶುಲ್ಕ ವಿಧಿಸಲಾಗುತ್ತದೆ. D CRED, CheQ, Mobikwik ಮುಂತಾದ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳ ಮೂಲಕ ಶಾಲೆ ಅಥವಾ ಕಾಲೇಜು ಶುಲ್ಕ ಪಾವತಿಸಿದರೆ, ಹೆಚ್ಚುವರಿ 1% ಶುಲ್ಕ ಅನ್ವಯಿಸುತ್ತದೆ, ಆದರೆ ಶಾಲೆಯ ಅಧಿಕೃತ ವೆಬ್‌ಸೈಟ್ ಅಥವಾ POS ಯಂತ್ರದ ಮೂಲಕ ನೇರ ಪಾವತಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ.

₹1,000 ಕ್ಕಿಂತ ಹೆಚ್ಚು ಮೊತ್ತವನ್ನು ವ್ಯಾಲೆಟ್‌ಗೆ ಲೋಡ್ ಮಾಡಿದರೆ 1% ಶುಲ್ಕ ವಿಧಿಸಲಾಗುತ್ತದೆ. ಕ್ರೆಡಿಟ್ ಕಾರ್ಡ್‌ನಿಂದ ಚೆಕ್ ಪಾವತಿಗಳಿಗೆ ₹200 ಶುಲ್ಕ ವಿಧಿಸಲಾಗುತ್ತದೆ.

ಈ ಕ್ರಮಗಳು ಕ್ರೆಡಿಟ್ ಕಾರ್ಡ್ ಬಳಕೆಯಲ್ಲಿ ನಿಯಂತ್ರಣ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಎಸ್‌ಬಿಐ ಕೈಗೊಂಡಿರುವ ಕ್ರಮಗಳಾಗಿವೆ.

ಸೆಬಿ (SEBI) ಹೊಸ ಹೂಡಿಕೆ ನಿಯಮಗಳು: 

ಹೂಡಿಕೆ ವಲಯದಲ್ಲಿ ಪಾರದರ್ಶಕತೆ ಹೆಚ್ಚಿಸಲು ಭಾರತೀಯ ಮೌಲ್ಯಪತ್ರ ಮತ್ತು ವಿನಿಮಯ ಮಂಡಳಿ (SEBI) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮ್ಯೂಚುವಲ್ ಫಂಡ್ ಕ್ಷೇತ್ರದಲ್ಲಿ ಅಧಿಕಾರಿಗಳು ಅಥವಾ ಅವರ ಕುಟುಂಬ ಸದಸ್ಯರು ₹15 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು (ಟ್ರಾನ್ಸಾಕ್ಷನ್) ಮಾಡಿದರೆ, ಅದನ್ನು ಅನುಸರಣಾ ಅಧಿಕಾರಿಗೆ (Compliance Officer) ಕಡ್ಡಾಯವಾಗಿ ವರದಿ ಮಾಡಬೇಕಾಗಿದೆ.

ಇದರಿಂದ ಒಳಗಿನ ವಹಿವಾಟು (insider trading) ನಿಯಂತ್ರಣ ಹಾಗೂ ಹೂಡಿಕೆದಾರರ ಹಿತಾಸಕ್ತಿ ಕಾಪಾಡುವುದು ಉದ್ದೇಶ.

ಪಡಿತರ ಚೀಟಿ (Ration Card) ನಿಯಮಗಳಲ್ಲಿ ಬದಲಾವಣೆ:

ಕೇಂದ್ರ ಸರ್ಕಾರವು ಉಚಿತ ಪಡಿತರ ಯೋಜನೆಯಲ್ಲೂ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಹೊಸ ನಿಯಮಗಳು ನವೆಂಬರ್ 1, 2025 ರಿಂದ ಜಾರಿಗೆ ಬರುತ್ತವೆ ಮತ್ತು ಕೋಟ್ಯಂತರ ಪಡಿತರ ಚೀಟಿದಾರರ ಮೇಲೆ ಪರಿಣಾಮ ಬೀರುತ್ತವೆ. ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೂ ಹೊಸ ಅರ್ಹತಾ ಪರಿಶೀಲನೆ ನಡೆಸಲಿದೆ.

ಕೆಳಗಿನವರು ತಮ್ಮ BPL ಪಡಿತರ ಚೀಟಿಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ:

ನಿಗದಿತ ಆದಾಯ ಮಿತಿಗಿಂತ ಹೆಚ್ಚುಗಳಿಸುವವರು.

ಸರ್ಕಾರಿ ಉದ್ಯೋಗಿಗಳು ಅಥವಾ ಪಿಂಚಣಿ ಪಡೆಯುವವರು.

ವಸತಿ ಯೋಜನೆಗಳು ಅಥವಾ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುವವರು. ನಾಲ್ಕು ಚಕ್ರದ ವಾಹನ ಅಥವಾ ದೊಡ್ಡ ವ್ಯವಹಾರ ಹೊಂದಿರುವವರು. ಸುಳ್ಳು ಅಥವಾ ನಕಲಿ ಮಾಹಿತಿ ನೀಡಿದವರು. ಪರಿಶೀಲನೆಯಲ್ಲಿ ಸಹಕರಿಸದವರು.

ಸರ್ಕಾರವು ಒನ್ ನೇಷನ್, ಒನ್ ರೇಷನ್ ಕಾರ್ಡ್ ನೀತಿಯಡಿಯಲ್ಲಿ ಪಡಿತರ ಚೀಟಿದಾರರ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ ಪರಿಶೀಲಿಸುತ್ತದೆ, ಅರ್ಥಾತ್ ಅರ್ಹತೆ ಇಲ್ಲದ ಫಲಾನುಭವಿಗಳನ್ನು ಬೇರ್ಪಡಿಸಲಾಗುತ್ತದೆ.

ಒಟ್ಟಾರೆಯಾಗಿ, ನವೆಂಬರ್ 1, 2025ರಿಂದ ಜಾರಿಗೆ ಬರುವ ಈ ನಿಯಮಗಳು ಭಾರತದ ಆರ್ಥಿಕ, ಹೂಡಿಕೆ ಹಾಗೂ ಸಾರ್ವಜನಿಕ ವಲಯದ ಕಾರ್ಯವಿಧಾನದಲ್ಲಿ ದೊಡ್ಡ ಬದಲಾವಣೆಯನ್ನು ತರಲಿವೆ.

ಆಧಾರ್‌ನಿಂದ ಹಿಡಿದು ಬ್ಯಾಂಕ್ ಖಾತೆ, ಕ್ರೆಡಿಟ್ ಕಾರ್ಡ್, ಮ್ಯೂಚುವಲ್ ಫಂಡ್ ಮತ್ತು ಪಡಿತರ ಚೀಟಿದಾರರಿಗೆ ಪ್ರತಿಯೊಂದು ವಿಭಾಗದಲ್ಲಿಯೂ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸುರಕ್ಷತೆಯ ನವೀನ ವ್ಯವಸ್ಥೆ ಸ್ಥಾಪನೆಯಾಗಲಿದೆ.

Total Visits: 7
All time total visits: 31078
Satyakam NewsDesk

55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,

Recent Posts

“ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ” – ಕೆಎಲ್ ರಾಹುಲ್

ಕ್ರಿಕೆಟ್ ಲೋಕದಲ್ಲಿ ಕೆಎಲ್ ರಾಹುಲ್ ಎಂಬ ಹೆಸರು ಅಷ್ಟೇ ಶಾಂತವಾಗಿ, ಅಷ್ಟೇ ಪ್ರಭಾವಶಾಲಿಯಾಗಿ ಬೆಳಗುತ್ತಿದೆ. ಮೈದಾನದಲ್ಲಿ ಗಂಭೀರವಾಗಿ, ದೃಢತೆಯಿಂದ ಆಟವಾಡುವ…

51 minutes ago

ಹುಬ್ಬಳ್ಳಿ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಕಾರ್ತಿಕ ಮಾಸದ ಏಕಾದಶಿ ಅಂಗವಾಗಿ ನೈರುತ್ಯ ರೈಲ್ವೆ ಹುಬ್ಬಳ್ಳಿ–ಪಂಢರಪುರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ ಹಮ್ಮಿಕೊಂಡಿದೆ. ಈ ವೇಳೆ ಭಕ್ತರ…

1 hour ago

5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ

ಉದ್ಯೋಗ ಜೀವನದಲ್ಲಿ ಪ್ರತಿಯೊಬ್ಬ ನೌಕರನಿಗೂ ಒಂದು ಗುರಿ ಇರುತ್ತದೆ ಭದ್ರ ಭವಿಷ್ಯವನ್ನು ನಿರ್ಮಿಸುವುದು. ವರ್ಷಗಳ ಕಾಲ ನಿಷ್ಠೆಯಿಂದ, ಪರಿಶ್ರಮದಿಂದ ಕೆಲಸ…

10 hours ago

ವೀರಪ್ಪನ್ ಪುತ್ರಿ ವಿದ್ಯಾರಾಣಿ ಈಗ ಎಲ್ಲಿದ್ದಾರೆ? ಹೇಗಿದ್ದಾರೆ?

ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿರುವ ಒಂದು ವಿಡಿಯೋ ತುಣುಕಿನಿಂದ ಕಾಡಿನ ಕಳ್ಳ ವೀರಪ್ಪನ್ ಅವರ ಪುತ್ರಿಯರು ಮತ್ತೆ ಸುದ್ದಿಯಲ್ಲಿದ್ದಾರೆ. ಅಂಕಣಕಾರ…

15 hours ago

ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರು ಸಿ.ಎಸ್ ನಾಡಗೌಡ ಅವರಿಗೆ ಬರುವ ಪುನರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೇಳಬಾರದು…

1 day ago

ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ

ಶತಮಾನಗಳಿಂದ ಕೋಟ್ಯಂತರ ಭಕ್ತರ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಮಂದಿರ ಇದೀಗ ಸಂಪೂರ್ಣ ರೂಪ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ…

2 days ago