amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
Categories: Latest News

ಅಗಲಿದ ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ ಸೆರಿ ಐವರು ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ

ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದ ಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್ , ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್ ಅವರುಗಳಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನುಡಿ ನಮನ ಸಲ್ಲಿಸಿ, ಅವರೆಲ್ಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಚೇತನಗಳ ಸ್ಮರಣಾರ್ಥ ಎರಡು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನುಡಿನಮನ ಕಾರ್ಯಕ್ರಮಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಅಗಲಿದ ಹಿರಿಯ ಪತ್ರಕರ್ತರರುಗಳು ಕೆಯುಡಬ್ಲ್ಯೂಜೆ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.

ಜಿನ್ನಾರ್ ಪತ್ರಿಕೋದ್ಯಮದಲ್ಲಿ
ಶಿಸ್ತಿನ ಸಿಪಾಯಿ: ಬಿ.ಕೆ ರವಿ

ಹಿರಿಯ ಪತ್ರಕರ್ತ ಜಿ.ಎನ್. ರಂಗನಾಥ್ ರಾವ್ ಅವರ ಬಗ್ಗೆ ಮಾತಾಡಿದ ಕೊಪ್ಪಳ ವಿ.ವಿ ಕುಲಪತಿ ಪ್ರೊ.ಬಿ.ಕೆ.ರವಿ, ಕನ್ನಡ ಭಾಷಾ ಬೆಳವಣಿಗೆಯಲ್ಲಿ ಜಿ.ಎನ್.ರಂಗನಾಥ್ ರಾವ್ ಅವರ ಕೊಡುಗೆ ಅನನ್ಯ. ಪ್ರಜಾವಾಣಿ ಪತ್ರಿಕೆಯಲ್ಲಿ ಸಾಹಿತ್ಯ ಸಾಪ್ತಾಹಿಕವನ್ನು ಅವರು ವಿಭಿನ್ನವಾಗಿ ರೂಪಿಸಿದರಲ್ಲದೆ, ಪತ್ರಿಕೋದ್ಯಮದಲ್ಲಿ ಅವರು ಶಿಸ್ತಿನ ಸಿಪಾಯಿಯಾಗಿಯೂ ಜನಪ್ರಿಯರಾದರು ಎಂದು ತಮಗೆ ಮಾರ್ಗದರ್ಶನ ನೀಡಿದ ನೆನಪನ್ನು ಮೆಲುಕು ಹಾಕಿದರು. ಅಗಲಿದ ಹಿರಿಯರ ನೆನಪಿನಲ್ಲಿ ಕೆಯುಡಬ್ಲ್ಯೂಜೆ ಕಾರ್ಯಕ್ರಮ ರೂಪಿಸಿ ಮಾದರಿ ಹೆಜ್ಜೆ ಇಟ್ಟಿದೆ ಎಂದು ಶ್ಲಾಘಿಸಿದರು. ಸಚ್ಚಿದಾನಂದಮೂರ್ತಿ ಅವರು ದೆಹಲಿಯಲ್ಲಿ ಮೂರು ದಶಕಗಳ ಕಾಲ ಪತ್ರಕರ್ತನಾಗಿ ಉತ್ತಮ ಸೇವೆ ಸಲ್ಲಿಸಿದರು ಎಂದರು.

ಸಚ್ಚಿ ಅವರ ಪ್ರತಿಭೆ ಅನನ್ಯ:
ಎಚ್. ಬಿ. ದಿನೇಶ್:

ದೆಹಲಿ ಪತ್ರಿಕೋದ್ಯಮದಲ್ಲಿ ತನ್ನದೇ ಛಾಪು ಮೂಡಿಸಿದ್ದ ಸಚ್ಚಿದಾನಂದ ಮೂರ್ತಿ ಸದಾ ಸ್ನೇಹಪರರಾಗಿದ್ದರು. ರಾಜ್ಯದ ಅಭಿವೃದ್ಧಿ ಯೋಜನೆಗೆ ದೆಹಲಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದರು ಎಂದು ವಾರ್ತಾ ಇಲಾಖೆಯ ನಿವೃತ್ತ ಹಿರಿಯ ಜಂಟಿ ನಿರ್ದೇಶಕ ಎಚ್.ಬಿ. ದಿನೇಶ್ ಹೇಳಿದರು.

ಸಿ.ಆರ್.ಕೆ. ಚಳುವಳಿಗಳ ನೇತಾರ: ಸಿದ್ಧನಗೌಡ ಪಾಟೀಲ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯದರ್ಶಿ ಹುದ್ದೆ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಸಿ.ಆರ್.ಕೃಷ್ಣರಾವ್ ಅವರು ಚಳುವಳಿಗಳ ನೇತಾರ ಆಗಿದ್ದರು ಎಂದು ನವಕರ್ನಾಟಕ ಪಬ್ಲಿಕೇಶನ್ಸ್ ನ “ಹೊಸತು” ಮಾಸಿಕದ ಸಂಪಾದಕ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಪಟ್ಟರು. ಸಿ.ಆರ್.ಕೆ. ರಾವ್ ಅವರು ಪತ್ರಕರ್ತರ ಮತ್ತು ಪತ್ರಿಕಾ ಸಂಸ್ಥೆಗಳ‌ ಕೊಂಡಿಯಾಗಿ ಪ್ರಧಾನ ಪಾತ್ರ ವಹಿಸಿಕೊಂಡಿದ್ದರು ಎಂದೂ ಗುಣಗಾನ ಮಾಡಿದರು.

ಮಣೂರ ಅವರ ಪತ್ರಿಕಾ ರಂಗದ ಸೇವೆ ಅನನ್ಯ: ಬಿ.ವಿ.ಮಲ್ಲಿಕಾರ್ಜುನಯ್ಯ

ಹಿರಿಯ ಪತ್ರಕರ್ತರಾಗಿದ್ದ ಪಿ.ಎಂ.ಮಣೂರ ಅವರು ಬಹಳಷ್ಟು ಪತ್ರಕರ್ತರನ್ನು ಬೆಳೆಸುವ ಮೂಲಕ, ಪತ್ರಿಕೋದ್ಯಮದಲ್ಲಿ ಅಜಾತಶತ್ರುವಾಗಿದ್ದರು ಎಂದು ಐ.ಎಫ್.ಡಬ್ಲ್ಯೂ.ಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಹೇಳಿದರು.
ವಿವಿಧ ವಿಷಯಗಳಲ್ಲಿ ಪ್ರಭುತ್ವ ಹೊಂದಿದ್ದ ಮಣೂರರವರ ಪತ್ರಿಕಾ ಸೇವೆ ನಿಜಕ್ಕೂ ಸ್ಮರಣೀಯ ಎಂದರು.

ಕೆ.ಪ್ರಹ್ಲಾದರಾವ್ ಉತ್ತಮ ಸಂಘಟಕರಾಗಿದ್ದರು: ಪಿ.ಶೇಷಚಂದ್ರಿಕಾ
ಕೋಲಾರವು ಹಿರಿಯ ಪತ್ರಕರ್ತರಾಗಿದ್ದ ಕೆ.ಪ್ರಹ್ಲಾದರಾವ್ ಅವರ ಕರ್ಮಭೂಮಿ ಆಗಿದ್ದರೂ, ಜಿಲ್ಲಾ ಮಟ್ಟದ ಪತ್ರಕರ್ತರ ಕಷ್ಟಗಳನ್ನು ಪರಿಹರಿಸುವಲ್ಲಿ ಅವರು ಸರ್ಕಾರ ಅಧಿಕಾರಿಗಳ ಬಳಿಗೆ ಹೋಗುವ ಮೂಲಕ ಉತ್ತಮ ಸಂಘಟಕರೂ ಆಗಿದ್ದರು ಎಂದು ಹಿರಿಯ ಪತ್ರಕರ್ತ ಪಿ.ಶೇಷಚಂದ್ರಿಕಾ ನುಡಿದರು.

ಹಿರಿಯ ಪತ್ರಕರ್ತರಾದ ಈಶ್ವರ ದೈ ತೋಟ ಅವರು ಮಾತನಾಡಿ, ತಾವು ಬೆಂಗಳೂರುಬಂದ ಸಂದರ್ಭದಲ್ಲಿ ಇವರೆಲ್ಲರ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು ಹಾಕಿದರು.
ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಧಾರವಾಡ ಕರ್ನಾಟಕ ವಿವಿ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರೊ.ಜೆ.ಎಂ.ಚಂದುನವರ, ಸಾಗ್ಗರೆ ರಾಮಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗಲಿದ ಚೇತನಗಳ ಗುಣಗಾನ ಮಾಡಿದರು.

ವಿತರಕರಿಬ್ಬರ ಸಾವಿಗೆ ಸಂತಾಪ:
ಾಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಾದ ಕುಮಾರ್ ಮತ್ತು ಮನೋಜ್ ಅವರಿಗೆ ಸಭೆಯಲ್ಲಿ ಸಂತಾಪ ವ್ಯಕ್ತಪಡಿಸಲಾಯಿತು. ಅವರುಗಳ ಬಗ್ಗೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆ.ಯೂ.ಡಬ್ಲ್ಯೂ.ಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಉಪಾಧ್ಯಕ್ಷ ಕೆ.ಎಂ.ಜಿಕ್ರಿಯಾ, ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ್ ಸೇರಿದಂತೆ ಸಂಘದ ಹಲವಾರು ಸದಸ್ಯರು ನುಡಿನಮನ ಕಾರ್ಯಕ್ರಮದಲ್ಲಿ ಹಾಜರಿದ್ದರು .

ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಸಂಘದ ಖಜಾಂಚಿ ವಾಸುದೇವ ಹೊಳ್ಳ ಅವರು ವಂದನಾರ್ಪಣೆ ಮಾಡಿದರು.

Total Visits: 0
All time total visits: 31802
Satyakam NewsDesk

55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,

Recent Posts

ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ

ಸ್ಯಾಂಡಲ್‍ವುಡ್‌ ಚರ್ಚೆಯಲ್ಲಿ ಮತ್ತೆ ದರ್ಶನ್ ಮತ್ತು ಪವಿತ್ರಾ ಗೌಡರ ಹೆಸರು ಕೇಳಿಬರುತ್ತಿದೆ. ಇಬ್ಬರೂ ಒಟ್ಟಿಗೆ ಜೀವನ ನಡೆಸಿದ್ದರು ಎಂಬ ಮಾತು…

6 hours ago

ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾವಾಗಿ ನ.2 ರಂದು ಬೆಳಗ್ಗೆ 10.30 ಕ್ಕೆ…

12 hours ago

ಭಾರತದ ಮಹಿಳಾ ತಂಡ ಫೈನಲ್‌ಗೆ; ಆಸ್ಟ್ರೇಲಿಯಾ ಮಣಿಸಿ ಇತಿಹಾಸಿಕ ಗೆಲುವು

ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಐತಿಹಾಸಿಕ ಸಾಧನೆಯನ್ನು ಗೈದು ಫೈನಲ್‌ಗೆ ಪ್ರವೇಶಿಸಿದೆ. ಗುರುವಾರ ನಡೆದ ಸೆಮಿಫೈನಲ್‌ನಲ್ಲಿ…

12 hours ago

ಅನ್ನ ನಿಲ್ಲಿಸಿದರೆ ತೂಕ ಇಳಿಕೆ, ಸಕ್ಕರೆ ನಿಯಂತ್ರಣ.! ಆದರೆ ಪೌಷ್ಟಿಕಾಂಶ ಕೊರತೆಯಾಗುತ್ತೆ ಎಚ್ಚರ!

ನಮ್ಮ ಭಾರತೀಯ ಆಹಾರ ಸಂಸ್ಕೃತಿಯಲ್ಲಿ ಅನ್ನ ಅಂದರೆ ಅಕ್ಕಿ, ಜೀವನದ ಅವಿಭಾಜ್ಯ ಭಾಗವಾಗಿದೆ. ದಿನದ ಮೂರು ಹೊತ್ತು ಊಟದ ಮಾತು…

13 hours ago

ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್ . ಗವಾಯಿ ಮೇಲೆ ಶೂ ಎಸೆದ ಪ್ರಕರಣ ಹಾಗೂ…

15 hours ago

ಜಿಲ್ಲಾಧಿಕಾರಿಯ ಹೆಸರಿನಲ್ಲಿ ವಾಟ್ಸಪ್ ಮೂಲಕ ₹50 ಸಾವಿರ ವಂಚನೆ!

ಸತ್ಯಕಾಮ ವಾರ್ತೆ ಯಾದಗಿರಿ:  ಯಾದಗಿರಿ ಜಿಲ್ಲಾಧಿಕಾರಿಯವರ ಪ್ರೊಫೈಲ್ ಚಿತ್ರವನ್ನು ಬಳಸಿಕೊಂಡು ವಾಟ್ಸಪ್‌ನಲ್ಲಿ ನಕಲಿ ಖಾತೆ ತೆರೆದು ಆರೋಗ್ಯ ಇಲಾಖೆಯ ಮಹಿಳಾ…

17 hours ago