Blog

  • ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ 

    ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ 

    ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ (ರಿ.) ವತಿಯಿಂದ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಅದರಂತೆ ಆನಂದ್ ಪಿ. ಮಣ್ಣೂರ ಅವರನ್ನು ಅಧ್ಯಕ್ಷರಾಗಿ, ಚಂದ್ರಕಾಂತ್ ಹಾವನೂರ್ ಅವರನ್ನು ಉಪಾಧ್ಯಕ್ಷರಾಗಿ, ಹಾಗೂ ಶಿವಕುಮಾರ್ ತೋಟ್ನಲ್ಲಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

    ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಅವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    apvc-iconPost Views: 137
  • ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!

    ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!

    ಸತ್ಯಕಾಮ ವಾರ್ತೆ ಬೆಂಗಳೂರು:

    ಕಲ್ಯಾಣ ಕರ್ನಾಟಕದ ಪತ್ರಿಕೆಗಳ ಧ್ವನಿ ಇದೀಗ ಸರ್ಕಾರದ ಬಾಗಿಲಲ್ಲಿ ಗಟ್ಟಿಯಾಗಿ ಮೊಳಗಿದೆ. ಹಲವು ವರ್ಷಗಳ ಆಶೆ, ಬೇಡಿಕೆ ಮತ್ತು ಹೋರಾಟಕ್ಕೆ ಹೊಸ ಆಶಾಕಿರಣ ಮೂಡಿಸಿದ್ದು, ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದ ನಿಯೋಗವು ಮೂರು ದಿನಗಳ ಕಾಲ ಬೆಂಗಳೂರಿನ ಪ್ರವಾಸದ ವೇಳೆ ಪ್ರಮುಖ ನಾಯಕರನ್ನು ಭೇಟಿಯಾಗಿ ವಿಷಯವನ್ನು ಸರ್ಕಾರದ ಮಟ್ಟಕ್ಕೆ ತಲುಪಿಸಿದೆ. ಈ ಹೋರಾಟಕ್ಕೆ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿರುವುದು ಸಂಪಾದಕರ ಹೋರಾಟದ ಮಹತ್ತರ ಹೆಜ್ಜೆಯಾಗಿದೆ.

    ನಿಯೋಗವು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಅಜಯ್ ಸಿಂಗ್ ಅವರನ್ನು ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ವಿಸ್ತೃತ ಚರ್ಚೆ ಮಾಡಲಾಯಿತು. ಸಂಪಾದಕರ “ಕಲ್ಯಾಣ ಕರ್ನಾಟಕದ ಪತ್ರಿಕೆಗಳು ಕೇವಲ ಸುದ್ದಿಯ ವೇದಿಕೆಗಳಲ್ಲ — ಇದು ಜನರ ಧ್ವನಿ, ಹೋರಾಟದ ಶಕ್ತಿ, ಮತ್ತು ನಾಡಿನ ನಿಜವಾದ ಮುಖ” ಎಂದು ಭಾವನಾತ್ಮಕವಾಗಿ ಮನವರಿಕೆ ಮಾಡಿದರು. ಮಂಡಳಿ ಅಧ್ಯಕ್ಷರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

    ನಂತರ ನಿಯೋಗವು ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿಯಾಗಿ ವಿಷಯದ ತೀವ್ರತೆಯನ್ನು ತಿಳಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು. ಅವರು ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಕ್ರಮದ ಭರವಸೆ ನೀಡಿದರು. ಅದೇ ದಿನ ವಿಧಾನಸೌಧದಲ್ಲಿ ಇರುವ ಬ್ಯಾಂಕೆಟ್ ಹಾಲ್‌ನಲ್ಲಿ ಕಲ್ಯಾಣ ಕರ್ನಾಟಕ ಸಂಪಾದಕರ ಸಂಘ ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ಪತ್ರ ಸಲ್ಲಿಸಲಾಯಿತು.

    ಈ ಪ್ರಯಾಣದ ಅತ್ಯಂತ ಪ್ರಭಾವಶೀಲ ಹಂತವೆಂದರೆ ಕಲ್ಬುರ್ಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ಭೇಟಿಯಾದ ಕ್ಷಣ. ಸಚಿವರು ವಿಷಯದ ಗಂಭೀರತೆಯನ್ನು ಮನಗಂಡು, “ನಿಮ್ಮ ಧ್ವನಿ ನ್ಯಾಯಸಮ್ಮತವಾಗಿದೆ. ಮಂಡಳಿ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡುತ್ತೇನೆ. ಈ ಬೇಡಿಕೆಗೆ ಸ್ಪಂದನೆ ದೊರೆಯಲಿದೆ,” ಎಂದು ಸ್ಪಷ್ಟ ಭರವಸೆ ನೀಡಿದರು. ಈ ಮಾತು ಕಲ್ಯಾಣ ಕರ್ನಾಟಕ ಸಂಪಾದಕರ ಹೋರಾಟಕ್ಕೆ ಹೊಸ ಉತ್ಸಾಹ ನೀಡಿತು.

    ಈ ಹೋರಾಟದ ಮುಂಚೂಣಿಯಲ್ಲಿ ಗೌರವಾಧ್ಯಕ್ಷರು ಸುರೇಶ ಗೌರೆ, ಪ್ರಧಾನ ಕಾರ್ಯದರ್ಶಿ ಹನುಮಂತ್ ಭೋಧಾನಕರ್, ಉಪಾಧ್ಯಕ್ಷರು ಆನಂದ ಮಣ್ಣೂರ, ಚಂದ್ರಶೇಖರ ಕವಲಗಿ, ಶಿವಕುಮಾರ್ ತೊಟ್ನಲಳಿ, ಸದಸ್ಯರು ವಿಠಲ್ ಚಿಕಣಿ ಮತ್ತು ಬಾಬು ಚೌಹಾಣ್ ಇದ್ಧರು. ಎಲರ ಒಗ್ಗಟ್ಟು, ಹೋರಾಟ ಮತ್ತು ಧ್ವನಿ ಸರ್ಕಾರದ ಕಿವಿಗೆ ತಲುಪುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು.

    ಸಂಘದ ಅಧ್ಯಕ್ಷರು ಹಾಗೂ ಸದಸ್ಯರು — ಮಾಧ್ಯಮ ಮಾನ್ಯತಾ ಸಮಿತಿ ಗುರುರಾಜ ಕುಲಕರ್ಣಿ ಅವರು ಘೋಷಣಾತ್ಮಕವಾಗಿ ಹೇಳಿದರು, ನಮ್ಮ ಧ್ವನಿ ಕೇವಲ ಪತ್ರಿಕೆಗಳಲ್ಲ, ಈಗ ಸರ್ಕಾರದ ಕಿವಿಯಲ್ಲೂ ಮೊಳಗುತ್ತಿದೆ. 2 ಪುಟ ಜಾಹೀರಾತು ನಮ್ಮ ಹಕ್ಕು — ಈ ಹೋರಾಟ ಕೇವಲ ಬೇಡಿಕೆಯಲ್ಲ, ಮಾಧ್ಯಮದ ಗೌರವದ ಹೋರಾಟ. ಈಗ ಹಿಂದಿರುಗುವುದಿಲ್ಲ.” “ಒಗ್ಗಟ್ಟಾಗಿದಾಗ ಪತ್ರಕರ್ತರ ಧ್ವನಿ ಗೋಡೆಗಳನ್ನೇ ಕಂಪಿಸುತ್ತದೆ. ಈ ಹೋರಾಟದ ಗೆಲುವಿನ ಬಾಗಿಲು ತೆರೆಯಲಾಗಿದೆ. ಅಂತಿಮ ನಿರ್ಧಾರ ಬರುವ ತನಕ ನಮ್ಮ ಹೋರಾಟ ತೀವ್ರಗೊಳ್ಳುತ್ತದೆ,” ಎಂದು ಸ್ಪಷ್ಟಪಡಿಸಿದರು.

    ಸಂಘವು ಮುಂದಿನ ಹಂತದಲ್ಲಿ ಮಂಡಳಿ ಅಧ್ಯಕ್ಷರು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಅಂತಿಮ ಮಾತುಕತೆ ನಡೆಸಲು ಸಜ್ಜಾಗಿದೆ. ಸಂಪಾದಕರ ಧ್ವನಿ ಇದೀಗ ಶಕ್ತಿ — ಸರ್ಕಾರದ ಕಿವಿಗೊಡಬೇಕಾದ ನಾದವಾಗಿದೆ.

    apvc-iconPost Views: 69
  • ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ

    ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ

    ಸತ್ಯಕಾಮ ವಾರ್ತೆ ಯಾದಗಿರಿ:

    ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅವಧಿಯನ್ನು ಇ-ಕೆವೈಸಿ ಮೂಲಕ ಪೂರ್ಣಗೊಳಿಸಲಾಗುತ್ತಿದ್ದು, ಎಲ್ಲ್ಲಾ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ರವರು ಮನವಿ ಮಾಡಿದ್ದಾರೆ.

    ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಮೌಲ್ಯೀಕರಿಸುತ್ತಿದ್ದು, ನರೇಗಾ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅಭಿಯಾನದ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮೂಲಕ ಪೂರ್ಣಗೊಳಿಸಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದರು.

    ತರಬೇತಿ ಪಡೆದ ಎಲ್ಲಾ ಸಿಬ್ಬಂದಿಗಳು ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಕೂಲಿಕಾರ್ಮಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳದ ಜಾಬ್-ಕಾರ್ಡ್ಗಳು ನಿಷ್ಕ್ರಿಯವಾಗುತ್ತವೆ ಎಂದು ತಿಳಿಸಿದ್ದಾರೆ.

    ಮಹಾತ್ಮಗಾಂಧಿ ನರೇಗಾ ಯೋಜನೆಯ ಹೆಚ್ಚು ಪಾರದರ್ಶಕ ಅನುಷ್ಟಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ತಮ್ಮ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಅಷ್ಟೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನಮ್ಮ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶಹಾಪುರ 51944, ಸುರಪುರ 56669, ಯಾದಗಿರಿ 40934, ಗುರುಮಿಟಕಲ್ 22022, ವಡಗೇರಾ 32215 ಹಾಗೂ ಹುಣಸಗಿ 48155 ಸೇರಿ ಒಟ್ಟು 2,51,939 ಜನ ಸಕ್ರಿಯ ಕೂಲಿಕಾರ್ಮಿಕರಿದ್ದು, ಎಲ್ಲರೂ ಸಹ ತಪ್ಪದೇ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಅಪ್ಲೇಟ್ ಮಾಡಿಕೊಳ್ಳಲು ತಿಳಿಸಿದ್ದಾರೆ.

    ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್ಟಿ, ಜಿಕೆಎಂ ಸೇರಿದಂತೆ ನರೇಗಾ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

    apvc-iconPost Views: 22
  • ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

    ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

    ಸತ್ಯಕಾಮ ವಾರ್ತೆ ಯಾದಗಿರಿ:

    ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಿಢೀರ್ ಭೇಟಿ ನೀಡಿ,  ಕಚೇರಿಯ ಕೆಲಸಕಾರ್ಯಗಳು ಸರಿಯಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಲೋಕಾಯುಕ್ತ ಪಿಐ ರಾಜಶೇಖರ್ ಹಳಿಗೋಧಿ ಅವರ ನೇತೃತ್ವದಲ್ಲಿ ಈ ಪರಿಶೀಲನೆ ನಡೆದಿದೆ.

    ಆ ಸಮಯದಲ್ಲಿ ಕಚೇರಿಯಲ್ಲಿದ್ದ ಬಾಕಿ ಉಳಿದ ಕಡತಗಳ ಪರಿಶೀಲನೆ ಕೈಗೊಳ್ಳಲಾಯಿತು. ಕೆಲ ದಾಖಲೆಗಳಲ್ಲಿ ವಿಳಂಬ ಹಾಗೂ ಅಪೂರ್ಣ ಮಾಹಿತಿಯಿರುವ ಕುರಿತು ಅಧಿಕಾರಿಗಳು ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ.

    ಪರಿಶೀಲನೆ ವೇಳೆ ಸಿಬ್ಬಂದಿಗಳಾದ ಅಮರನಾಥ್, ಸಂತೋಷಮ್ಮ ಸೇರಿದಂತೆ ಇತರರು ಹಾಜರಿದ್ದರು.

    apvc-iconPost Views: 163
  • ನಿಧನ ವಾರ್ತೆ :

    ನಿಧನ ವಾರ್ತೆ :

    ಗುರುಮಠಕಲ್ : ಪಟ್ಟಣದ ನಿವಾಸಿ ದೇವೀಂದ್ರಮ್ಮ ಗಂ. ಲಕ್ಷ್ಮಪ್ಪ ಯಾದವ (70) ರವಿವಾರ ಬೆಳಿಗ್ಗೆ ಅನಾರೋಗ್ಯಾದಿಂದ ನಿಧನರಾಗಿದ್ದಾರೆ.

    ಪುತ್ರ ನರಸಿಂಹಲು ಶಾಕಾಧಿಕಾರಿ(ಜೇಸ್ಕಾಂ) ಹಾಗೂ ಬುಗ್ಗಪ್ಪ (ಜೆಸ್ಕಾಂ) ಸೇರಿದಂತೆಯೇ ಐವರು ಪುತ್ರರು ಹಾಗೂ ನಾಲ್ವರು ಪುತ್ರಿ, ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಅಂತ್ಯ ಕ್ರಿಯೆಯು ನಾಳೆ ಮಧ್ಯಾಹ್ನ 2 ಗಂಟೆಗೆ ಗುರುಮಟಕಲನ ಲಕ್ಷ್ಮೀನಗರ ರುದ್ರಭೂಮಿಯಲ್ಲಿ ನೆರೆವೇರಿಸಲಾಗುವುದು ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

    apvc-iconPost Views: 260
  • ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

    ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

    ಯಾದಗಿರಿ: ಇಲ್ಲಿನ ನಗರಸಭೆಯ ಬಿಲ್ ಕಲೆಕ್ಟರ್ ನರಸಪ್ಪ ಮಾಣಿಕಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದಿದ್ದಾರೆ.

    ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ನಿವಾಸಿ ಶಶಿಕುಮಾರ್ ಜ್ಞಾನಮಿತ್ರ ಅವರ ದೂರು ಆಧರಿಸಿ ದಾಳಿ ನಡೆಸಲಾಗಿದೆ. ದೂರುದಾರರಿಗೆ ಇ–ಖಾತಾ ಮಾಡಿಕೊಡಲು ನರಸಪ್ಪ ಅವರು ಹಲವಾರು ಬಾರಿ ಕಚೇರಿಗೆ ಅಲೆದಾಡಿಸಿದರು ಮತ್ತು ₹8 ಸಾವಿರ ಲಂಚ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ಕೋರ್ಟ್ ಮುಂಭಾಗದ ರಸ್ತೆಯ ಬದಿಯಲ್ಲಿ ₹5 ಸಾವಿರ ಲಂಚದ ಹಣವನ್ನು ಫೋನ್‌ಪೇ ಮೂಲಕ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಿಲ್ ಕಲೆಕ್ಟರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    apvc-iconPost Views: 66
  • ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    ಯಾದಗಿರಿ: ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯ ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ‌ ಪದವಿ ಮಹಾವಿದ್ಯಾಲಯದ‌ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಇಂದು ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಅಧಿಕವಾಗಿದೆ. ಅವರು ನಮ್ಮ ತಂದೆ,ತಾಯಿ, ಅಜ್ಜ,ಅಜ್ಜಿ ಅಲ್ಲದೆ ಪ್ರತಿ ಮನೆಯ ಹಿರಿಯ ಜೀವಿಗಳಾಗಿದ್ದಾರೆ. ಅಂತಹ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕೆಂದು ಶಾಸಕರು ಮಾರ್ಮಿಕವಾಗಿ ನುಡಿದರು.

    ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೇ, ಅವರ ಮಾರ್ಗದರ್ಶನ, ಸಲಹೆ ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆಯೇ ನಮ್ಮನ್ನು ತಿದ್ದಿ,ತೀಡಿ‌ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ, ಆದರೇ ಅದನ್ನು ಪಾಸಿಟಿವ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ಮಾಡುವುದೇ ಹೆಚ್ಚಾಗಿದೆ. ಇದು ನಿಲ್ಲಬೇಕು, ಅವರೆಂದಿಗೂ ನಮ್ಮ ಜೊತೆಯಲ್ಲಿಯೇ ಇರುವಂತಹ ವಾತಾವರಣ ಮೂಡಿಸಬೇಕೆಂದು ಪ್ರಸಕ್ತ ಸನ್ನಿವೇಶವನ್ನು ಶಾಸಕ ಪಾಟೀಲ್ ವಿವರಿಸಿದರು.

    ಹಿರಿಯರೇ ಆಸ್ತಿ, ಆದರೇ ಇಂದು ಬಹಳಷ್ಟು ಜನರು ಅವರನ್ನು ಸಾಕಲು ಹಿಂದೆ,ಮುಂದೆ ನೋಡಿ ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತವಿದ್ದಾಗಲೇ ಒಂಟಿ ಮಾಡಿ ನೋವು ಕೊಡುತ್ತಿದ್ದೇವೆ. ಹೀಗೆ ಮಾಡುವವರು ಒಮ್ಮೆ ಆಲೋಚನೆ ಮಾಡಬೇಕು, ಮುಂದೆ ನಾವೂ ಕೂಡಾ ಹಿರಿಯರಾಗುತ್ತೇವೆ, ಆಗ ನಮ್ಮ ಮಕ್ಕಳು ನಮ್ಮನ್ನು ಅನಾಥರಾಗಿ ಮಾಡಿದರೇ ಪರಸ್ಥಿತಿ ಏನಾಗುತ್ತದೆ ಎಂಬುವುದನ್ನು ತಿಳಿದುಕೊಂಡು ಗೌರವದಿಂದ ನಡೆಸಿಕೊಳ್ಳಬೇಕೆಂದು‌ ಶಾಸಕ ಚನ್ನಾರಡ್ಡಿ ಮನಮುಟ್ಟುವಂತೆಯೇ ತಿಳಿಸಿದರು.

    ಕಾರ್ಯಕ್ರಮದಲ್ಲಿ‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

    ಜಿಲ್ಲಾ ಅಧಿಕಾರಿ‌ ಶರಣಪ್ಪ ಪಾಟೀಲ್ ಮಾತನಾಡಿ, ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

    ಹಿರಿಯರಾದ ಸಿ.ಎಮ್‌ ಪಟ್ಟೇದಾರ ಮಾತನಾಡಿದರು.

    ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯರಾದ ನಿವೃತ್ತ ಎಎಸ್ ಐ ಸಾಮೂವೆಲ್, ಕಂದಾಯ ಇಲಾಖೆ ಲಕ್ಷ್ಮಣ ದೇಗಲಮಡಿ, ನಿರಾವರಿ ಇಲಾಖೆ ಮಲ್ಲಿನಾಥ ಮಲಗೊಂಡ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ವಾಹೀದ್ ಮಿಯಾ,‌ ಶಿಕ್ಷಣ ಕ್ಷೇತ್ರ ಚಂದ್ರಾಮಪ್ಪ ಬಳಿಚಕ್ರ, ಸಮಾಜ ಸೇವಕ ಸಭಾಪತಿ ಮಹಾದೇವಪ್ಪ ಕಡ್ಡಿ ಅಬ್ಬೆತುಮಕೂರು, ಸಮಾಜ ಸೇವೆ ಶರಣಪ್ಪ ಜಾಕಾ, ನಿವೃತ್ತ ಶಿಕ್ಷಕರಾದ ಸಿದ್ದಪ್ಪ ಬಬಲಾದ, ಮಾಜಿ ನಗರಸಭೆ ಸದಸ್ಯರಾದ ಸಂಗಣ್ಣ ಬುಕಿಸ್ಟಗಾರ ಶಹಾಪುರ, ಸಮಾಜ ಸೇವೆ ನಿರ್ಮಲ್ ಕುಮಾರ ಜೈನ್, ಸಮಾಜ ಸೇವಕರಾದ ಬಿ.ಸಿ ಪಾಟೀಲ್, ನಿವೃತ್ತ ಶಿರಸ್ತೆದಾರ ನ್ಯಾಯಾಂಗ ಇಲಾಖೆ ಭೀಮರಾಯ, ಸಮಾಜ ಸೇವಕ ಮಾಣಿಕಮ್ಮ ಸೋಮಯ್ಯ ಸ್ವಾಮೀ, ಸಮಾಜ ಸೇವಕ ಶರಣಪ್ಪ ಆರ್ ಬಡಿಗೇರ್, ಸಮಾಜ ಸೇವಕ ಯಂಕೋಬಾ ಚಿಂತನಳ್ಳಿ ಅವರಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನಗರಠಾಣೆ ಪಿಎಸ್ ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಬಂಡೆಪ್ಪ‌ ಆಕಳ, ಸಿ.ಎಮ್ ಪಟೇದಾರ್, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಸುಭಾಶ್ಚಂದ್ರ ಕೌಲಗಿ ಇದ್ದರು.

    apvc-iconPost Views: 12
  • ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

    ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾದ ರಂಗAಪೇಟಿಯ ಕನ್ನಡ ಸಾಹಿತ್ಯ ಸಂಘದ ೮೩ ನೇ ವರ್ಷದ ನಾಡ ಹಬ್ಬಕ್ಕೆ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ಭುವನೇಶ್ವರಿ ದೇವಿ ಮೂರ್ತಿಗೆ ಯಜ್ಙೇಶ್ವರ ಭಟ್ ಅವರು ನಾಡದೇವಿಗೆ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು.

    ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗೂರೇಶ್ವರ ವಾರದ್, ಕಾರ್ಯಾಧ್ಯಕ್ಷ ಶ್ರೀರಂಗಯ್ಯ ಮಿರಿಯಾಲ,ಉಪಾಧ್ಯಕ್ಷರಾದ ಯಂಕಣ್ಣ ಗದ್ವಾಲ್, ಸೋಮರಾಯ ಶಖಾಪುರ,ಶರಣಗೌಡ ಎಂ. ಪಾಟೀಲ್ ಜೈನಾಪುರ, ಪ್ರಧಾನ ಕಾರ್ಯದರ್ಶಿ ಮುದ್ದಪ್ಪ ಅಪ್ಪಾಗೋಳ,ಸಹ ಕಾರ್ಯದರ್ಶಿಗಳಾದ ಸಿದ್ದಯ್ಯ ಮಠ, ಪ್ರಕಾಶ ಆಲಬನೂರ, ಸಂಘಟನಾ ಕಾರ್ಯದರ್ಶಿ ಮಹಾದೇವಪ್ಪ ಗುತ್ತೇದಾರ್, ಖಜಾಂಚಿ ರವಿಕುಮಾರ ತ್ರಿವೇದಿ, ಹಿರಿಯ ಪತ್ರಕರ್ತ ಮಲ್ಲು ಗುಳಗಿ,ವೆಂಕಟೇಶ ಟೊಣಪೆ, ದಿಲೀಪ್ ಗೆಜ್ಜೆಲ್, ಭೀಮರಾಯ ಭಜಂತ್ರಿ,ಭಾಗಣ್ಣ ಹಸನಾಪುರ ಸೇರಿದಂತೆ ಇತರರಿದ್ದರು.

    apvc-iconPost Views: 11
  • ಭೀಮಾನದಿ ತೀರದ ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ

    ಭೀಮಾನದಿ ತೀರದ ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಜಿಲ್ಲೆಯ ವಡಗೇರಾ ತಾಲೂಕಿನ ಭೀಮಾನದಿ ತೀರದ ಹಲವು ಗ್ರಾಮಗಳಲ್ಲಿ ಪ್ರವಾಹದಿಂದ ಬೆಳೆ ಹಾನಿ ಸಂಭವಿಸಿದ್ದು, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮಂಗಳವಾರ ಜೋಳದಡಗಿ ಹಾಗೂ ಶಿವನೂರು ಗ್ರಾಮಗಳಿಗೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲಿಸಿದರು.

    ಮೊದಲು ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ಮಾಡಿದರು. ಈ ವೇಳೆ ಜೋಳದಡಗಿ ಗ್ರಾಮದ ರೈತ ದೇವೇಂದ್ರಪ್ಪ ಪೂಜಾರಿ, ಗೌಡರೆ ನೀರು ಬಂದು ನನ್ನ 4 ಎಕರೆ ಭತ್ತದ ಬೆಳೆ ನೀರಾಗ ಹೋಗ್ಯಾದ.ಪ್ರತಿ ವರ್ಷ ಇದೆ ಪರಿಸ್ಥಿತಿ ಆಗ್ಯಾದ್ ಎಂದು ನೋವು ತೊಡಿಕೊಂಡರು. ಅದೇ ರೀತಿ ರೈತ ಮಹಿಳೆ ಲಕ್ಷ್ಮಿ ಸಹ ಹಾನಿ ಕುರಿತು ಶಾಸಕರಿಗೆ ಕಷ್ಟ ತೊಡಿಕೊಂಡರು.

    ನಂತರ ಶಿವನೂರು ಗ್ರಾಮದಲ್ಲಿ ಭತ್ತ ಹಾಗೂ ಹತ್ತಿ ಬೆಳೆ ಹಾನಿ ವೀಕ್ಷಿಸಿದ ಶಾಸಕರು, ರೈತರ ಮನವಿಗಳನ್ನು ಆಲಿಸಿದರು. ರೈತ ಹಂಪಯ್ಯ ಮಾತನಾಡಿ ಕಳೆದ ವರ್ಷ ಪರಿಹಾರ ತುಂಬಾ ಕಡಿಮೆಯಿತ್ತು. ಈ ಬಾರಿ ಹೆಚ್ಚಿನ ನೆರವು ನೀಡಬೇಕು ಎಂದು ಮನವಿ ಮಾಡಿದರು.

    ಈ ವೇಳೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು, ನಮ್ಮ ಸರಕಾರ ಸದಾ ರೈತರ ಪರವಾಗಿಯೇ ಕಾರ್ಯನಿರ್ವಹಿಸಿದೆ. ಸುಮಾರು 3.5 ಲಕ್ಷ ಕ್ಯೂಸೆಕ್ ನೀರು ಬಿಡಲ್ಪಟ್ಟ ಕಾರಣ 22 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಸಮಗ್ರ ಸಮೀಕ್ಷೆ ಮಾಡಿ ಯಾವುದೇ ರೈತರ ಜಮೀನು ಮಿಸ್ ಆಗದಂತೆ ನೋಡಿಕೊಳ್ಳಬೇಕು. ಶೀಘ್ರದಲ್ಲೇ ಸೂಕ್ತ ಪರಿಹಾರ ದೊರಕುವಂತೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

    ಶಿವನೂರು ಗ್ರಾಮ ಪ್ರವಾಹ ಪೀಡಿತ ಪ್ರದೇಶವಾಗಿರುವುದರಿಂದ ಭವಿಷ್ಯದಲ್ಲಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಯೋಜನೆಯೂ ಕೈಗೊಳ್ಳಲಾಗುತ್ತದೆ. ತಾತ್ಕಾಲಿಕವಾಗಿ ಹೆಚ್ಚಿನ ನೀರು ಬಂದರೆ ಕಾಳಜಿ ಕೇಂದ್ರಗಳಿಗೆ ಗ್ರಾಮಸ್ಥರನ್ನು ಕರೆದೊಯ್ಯಲಾಗುತ್ತದೆ ಎಂದರು.

    ಈ ವೇಳೆ ವಡಗೇರಾ ತಹಶಿಲ್ದಾರ ಮಂಗಳಾ,ತಾಪಂ ಇಓ ಮಲ್ಲಿಕಾರ್ಜುನ ಸಂಗ್ವಾರ, ಡಿವೈಎಸ್ಪಿ ಸುರೇಶ್, ಪಶುಸಂಗೋಪನೆ ಇಲಾಖೆ ಡಿಡಿ ರಾಜು ದೇಶಮುಖ, ವೆಂಕಟರೆಡ್ಡಿ ಪಾಟೀಲ, ಶಂಕರಗೌಡ ಪಾಟೀಲ,ಬಾಪುಗೌಡ ಮಾಚನೂರು,ಸಿದ್ದಪ್ಪಗೌಡ ಸೋಮಯ್ಯ ಸ್ವಾಮಿ ಸೇರಿದಂತೆ ಅನೇಕರು ಇದ್ದರು.

     

     

    apvc-iconPost Views: 39
  • ಸಮೀಕ್ಷೆ ವೇಳೆ ಹೆಮ್ಮಯಿಂದ ಮಾದಿಗ ಎಂದು ಬರೆಸಿ – ನೀಲೇಶ್ ಕೊಯಿನಿ

    ಸಮೀಕ್ಷೆ ವೇಳೆ ಹೆಮ್ಮಯಿಂದ ಮಾದಿಗ ಎಂದು ಬರೆಸಿ – ನೀಲೇಶ್ ಕೊಯಿನಿ

    ಸತ್ಯಕಾಮ ವಾರ್ತೆ ಗುರುಮಠಕಲ್ : 

    ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ನಡೆಸಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ತಪ್ಪದೆ ಭಾಗವಹಿಸಿ, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸಬೇಕು, ಕೋಡ್ 61– ಮಾದಿಗ’ ಎಂದು ತಾಲೂಕ ಮಾದಿಗ ದಂಡೋರ ಕಾರ್ಯದರ್ಶಿ ನೀಲೇಶ್ ಕೊಯಿನಿ ಹೇಳಿದರು.

    ಈ ಮೂಲಕ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚು ಮೀಸಲಾತಿ ಪಡೆಯುವ ಪ್ರಯತ್ನ ಮಾಡಬೇಕಿದೆ. ಜನಸಂಖ್ಯೆಯಲ್ಲಿ ಕಡಿಮೆ ಇರುವವರು ಅಭಿವೃದ್ಧಿಯಲ್ಲಿ ಮುಂದಿದ್ದಾರೆ. ಆದರೆ, ಜನಸಂಖ್ಯೆಯಲ್ಲಿ ಮುಂದಿರುವ ನಾವು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದೇವೆ.

    ಸರ್ಕಾರದ ಮೂರೂ ಆಯೋಗಗಳು ಮಾದಿಗರ ಸಂಖ್ಯೆ ಹೆಚ್ಚಿದೆ, ಆದರೆ ಹಿಂದುಳಿದಿದ್ದಾರೆ ಎಂದು ಹೇಳಿವೆ. ಈಗ ಒಳ ಮೀಸಲಾತಿ ಜಾರಿಯಾಗಿದೆ. ಆದರೂ, ನಮ್ಮ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಂಡು, ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಸಮುದಾಯದ ಜಾಗೃತರಾಗಿ ಎಂದರು.

    apvc-iconPost Views: 35