Blog

  • ಗುಣಮಟ್ಟದ ಕೆಲಸದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಿ: ಶಾಸಕ ಪಾಟೀಲ್ ಸೂಚನೆ

    ಗುಣಮಟ್ಟದ ಕೆಲಸದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಿ: ಶಾಸಕ ಪಾಟೀಲ್ ಸೂಚನೆ

    ಸತ್ಯಕಾಮ ವಾರ್ತೆ ಯಾದಗಿರಿ:

    ಗುಣಮಟ್ಟ ಕಾಮಗಾರಿ ಆಗಬೇಕು ಮತ್ತು ನಿಗದಿತ ಅವಧಿಯಲ್ಲಿ ಮುಗಿಸಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.

    ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಯ ಮ್ಯಾಕ್ರೋ ಯೋಜನೆ ಅಡಿಯಲ್ಲಿ 3.48 ಕೋಟಿ ರೂ. ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಕುರಕುಂದಾದಲ್ಲಿ ಅಡಿಗಲ್ಲು ನೆರವೇರಿಸಿ ಮಾತನಾಡಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಸತಿ ನಿಲಯಗಳ ಕಟ್ಟಡಗಳ ಬೇಡಿಕೆ ಬಹುದಿನಗಳಿಂದಲ್ಲೂ ಇತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. ಬರುವ ದಿನಗಳಲ್ಲಿ ಉತ್ತಮ ಕಟ್ಟಡಗಳು ಈ ಗ್ರಾಮ ಹೊಂದಲಿದೆ ಎಂದರು.

    ರಾಜ್ಯದ ಸಮಗ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಅದರಲ್ಲಿ ಜನರ ಆರೋಗ್ಯ ಕಾಪಾಡುವಲ್ಲಿ ವಿಶೇಷ ಕಾಳಜಿ ಹೊಂದಿದೆ ಎಂದರು.

    ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿ.ಎಸ್. ಸೂಗುರೆಡ್ಡಿ ಮಾತನಾಡಿ, ಶಾಸಕರ ಕಾಳಜಿ ಮತ್ತು ಸತತ ಪ್ರಯತ್ನದ ಫಲವಾಗಿ ಈ ಕೆಲಸ ಕಾರ್ಯರೂಪಕ್ಕೆ ಬರುತ್ತಿದೆ. ನಿಗದಿತ ಅವಧಿಯೊಳಗೆ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದೆಂದು ಹೇಳಿದರು.

    ಕಾರ್ಯಕ್ರಮದಲ್ಲಿ EO ಮಲ್ಲಿಕಾರ್ಜುನ ಸಂಗವಾರ ವಡಗೇರಾ, ತಾಲೂಕ ಆರೋಗ್ಯ ಅಧಿಕಾರಿ ರಮೇಶ ಗುತ್ತೇದಾರ, ಖಾಜಾ ಮೊನುದ್ದಿನ್ ಮಿರ್ಚಿ,ಸಾಬಣ್ಣ ಗುಂಜನೂರ್, ಬನಪ್ಪ, ಶೂಪುತ್ರಪ್ಪ ಪದ್ದಿ, ರಾಮಲಿಂಗ ಕುದರೆ, ಶರಣಬಸಪ್ಪ, ದೇವಪ್ಪ ವಟ್ಟ, ಕಾಸಿಮ್ ಮುತ್ಯಾ, ಕುರುಕುಂದಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಮುದ್ದಮ್ಮ ಗುಡುಸಾಬ, ಕುರಕುಂದಾ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಮಲ್ಲಪ್ಪ ಹಣಮಂತ ಇದ್ದರು.

    apvc-iconPost Views: 60
  • ಸೆ.15 ರಂದು ಇಂಜಿನಿಯರ್ ದಿನಾಚರಣೆ: ಭೀಮಣ್ಣಗೌಡ ಕ್ಯಾತನಾಳ

    ಸೆ.15 ರಂದು ಇಂಜಿನಿಯರ್ ದಿನಾಚರಣೆ: ಭೀಮಣ್ಣಗೌಡ ಕ್ಯಾತನಾಳ

    ಸತ್ಯಕಾಮ ವಾರ್ತೆ ಯಾದಗಿರಿ:

    ಇಲ್ಲಿನ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಅಸೋಸಿಯೇಶನ್ ನಿಂದ ನಗರದ ವಿವೇಕಾನಂದ ನಗರದ ತಾಯಮ್ಮ ದೇವಿ, ಹನುಮಾನ ಹಾಗೂ ಈಶ್ವರ ದೇವಾಲಯದ ಸಭಾಂಗಣದಲ್ಲಿ ಸೆ. 15 ರಂದು ಮಧ್ಯಾಹ್ನ 12 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಅವರ 164 ಜನ್ಮದಿನದಂಗವಾಗಿ ಇಂಜಿನಿಯರ್ ಡೇ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇನ್ ಅಧ್ಯಕ್ಷ ಭೀಮಣ್ಣಗೌಡ ಕ್ಯಾತನಾಳ್ ತಿಳಿಸಿದ್ದಾರೆ.

    ಶುಕ್ರವಾರ ಪತ್ರಿಕಾ ಭವನದಲ್ಲಿ‌ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಿಸಿ ಹರ್ಷಲ್ ಬೋಯರ್, ಜಿಪಂ ಸಿಇಒ ಲವೀಶ್ ಓರ್ಡಿಯಾ ಮತ್ತು ಎಸ್ ಪಿ ಪ್ರಥ್ವಿಕ್ ಶಂಕರ್ ಅವರು ಭಾಗವಹಿಸುವರು. ವಿವಿಧ ಇಲಾಖೆಗಳ ಪೌರಾಯುಕ್ತ ಉಮೇಶ ಚವ್ಹಾಣ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಪೂಜಾರಿ,ಇಂಜಿನಿಯರ್ ಪ್ರಕಾಶ, ನಫೆಡ್ ರಾಷ್ಟ್ರಿಯ ಉಪಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ವಿಶ್ವೇಶ್ವರಯ್ಯ ಕಾರ್ಮಿಕ ಸಂಘದ ಅಧ್ಯಕ್ಷ ದೇವಜಿ ಯಾದವ್ ಸೇರಿದಂತೆಯೇ ಇತರರು ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು, ಅಧಿಕಾರಿಗಳನ್ನು‌ ಮತ್ತು ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಗುವುದೆಂದು ಕ್ಯಾತನಾಳ್ ಹೇಳಿದರು.

    ಇದರಂಗವಾಗಿ ಸೆ.14 ರಂದು ಬೆಳಗ್ಗೆ 6.30ರಿಂದ ಇಲ್ಲಿನ ಸರ್ಕಾರಿ‌ ಡಿಗ್ರಿ ಕಾಲೇಜಿನಿಂದ ಲೋಕೋಪಯೋಗಿ ಕಚೇರಿಯವರೆಗೂ ಮ್ಯಾರಥಾನ ಹಮ್ಮಿಕೊಳ್ಳಲಾಗಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಅಸೋಸಿಯೇನ್ ಪದಾಧಿಕಾರಿಗಳಾದ ಇರ್ಫಾನ್ ಬಾದಲ್, ಸೋಮಶೇಖರ ಗಣದೂರ, ಬಸವರಾಜ ಕಲಕೇರಿ, ಲೂಕಮಾನ್ ಅಹ್ಮದ್, ಲಕ್ಷ್ಮಣ ಬಾಹುರ, ಗೋಪಿ ಸೇರಿದಂತೆಯೇ ಇತರರಿದ್ದರು.

    apvc-iconPost Views: 30
  • ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

    ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

    ಸತ್ಯಕಾಮ ವಾರ್ತೆ ಯಾದಗಿರಿ:

    ಅನ್ನದಾತರನ್ನು ಆ ಭಗವಂತ ಗಣೇಶ ಕಾಪಾಡಲಿ, ಅತಿವೃಷ್ಠಿಯಿಂದ ಹಾನಿಗೀಡಾದ ಪರಿಹಾರ ನೀಡಲು ಸರ್ಕಾರಕ್ಕೆ ಗಣಪತಿ ದೇವ ಸದ್ಬುದ್ದಿ ಕೊಡಲಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

    ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಹಿರಿಯ ಸಹೋದರ ಮಲ್ಲಿಕಾರ್ಜುನ ರಡ್ಡಿ ಆಶಯದಂತೆ ನಮ್ಮ ಕುಟುಂಬದವರು ಗಣೇಶನಿಗೆ ಪ್ರತಿವರ್ಷ ವಿಶೇಷ ಪೂಜೆ ಸಲ್ಲಿಸುತ್ತೇವೆ. ಗಣಪತಿ ನಮ್ಮ ಜನರ ಎಲ್ಲಾ ಕಷ್ಟಗಳನ್ನು ಪರಿಹರಿಸಲಿ ಎಂದರು.

    ಹಿAದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಮಂಟಪವನ್ನು ಅಯೋಧ್ಯೆಯಂತೆ ವಾತಾವರಣ ನಿರ್ಮಾಣ ಮಾಡಿ, ಮಹಾಭಾರತದ ವಿಶೇಷ ಚಿತ್ರಗಳನ್ನು ಭಿತ್ತರಿಸಿರುವುದು ಎಲ್ಲರೂ ಭಕ್ತಿಯಿಂದ ಪುನಿತರಾಗುವಂತೆ ಮಾಡಲಾಗಿರುವುದು ಹಿಂದೂ ಕಾರ್ಯಕರ್ತರ ಭಕ್ತಿಗೆ ಸಾಕ್ಷಿಯಾಗಿದೆ ಎಂದರು.

    ಶನಿವಾರದAದು ಜರುಗುವ ಹಿಂದೂ ಮಹಾಗಣಪತಿಯ ವಿಸರ್ಜನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ಇದೊಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿಸಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ, ಪ್ರಮುಖರಾದ ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಶಿರವಾಳ, ಬಂದಪ್ಪ ಅರಳಿ, ಮಲ್ಲಣಗೌಡ ಹಳಿಮನಿ ಕೌಳೂರು, ಮಲ್ಲಣಗೌಡ ಹೊಸಳ್ಳಿ, ಮಲ್ಲಿಕಾರ್ಜುನ ಅರುಣಿ, ಸಾಹೇಬಗೌಡ ಗೌಡಗೇರಾ, ಈಶ್ವರನಾಯಕ ಸೇರಿದಂತೆ ಇತರರಿದ್ದರು.

    apvc-iconPost Views: 37
  • ಧಾರಾಕಾರ ಮಳೆ – ಕೆರೆಯಂತಾದ ಶಾಲಾ ಆವರಣ

    ಧಾರಾಕಾರ ಮಳೆ – ಕೆರೆಯಂತಾದ ಶಾಲಾ ಆವರಣ

    ಸತ್ಯಕಾಮ ವಾರ್ತೆ ಕಲಬುರಗಿ: 

    ನಗರದ ವಿವಿಧೆಡೆ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಬ್ರಹ್ಮಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸಂಪೂರ್ಣವಾಗಿ ಮಳೆನೀರಿನಿಂದ ಕೇರೆಯಂತಾಗಿದ್ದು, ಶಾಲೆಗೆ ತೆರಳಿದ ಮಕ್ಕಳು ಪರದಾಡುವಂತಾಗಿದೆ.

    ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಆವರಣದ ಒಳಗೇ ನೀರು ನಿಂತುಹೋಗಿದೆ. ಬೆಳಗ್ಗೆ ಪೋಷಕರು ಮಕ್ಕಳನ್ನು ಶಾಲೆಗೆ ಕೊಂಡೊಯ್ಯಲು ತೊಂದರೆ ಅನುಭವಿಸಿದರೆ, ಕೆಲವು ವಿದ್ಯಾರ್ಥಿಗಳು ನೀರನ್ನು ದಾಟಿ ತರಗತಿಗೆ ಸೇರಬೇಕಾಯಿತು.

    ಶಾಲಾ ಆವರಣದಲ್ಲಿ ನೀರು ಹೋಗುವುದಕ್ಕೆ ಸಮರ್ಪಕ ವ್ಯವಸ್ಥೆ ಇಲ್ಲದಿರುವುದೇ ಪ್ರಮುಖ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    “ಪ್ರತಿ ಬಾರಿ ಮಳೆ ಬಿದ್ದಾಗ ಇದೇ ಪರಿಸ್ಥಿತಿ. ಹೀಗಾದರೆ ಮಕ್ಕಳು ಓದುವುದು ಹೇಗೆ?” ಎಂದು ಪೋಷಕರು ಪ್ರಶ್ನಿಸಿದರು.

    apvc-iconPost Views: 4
  • ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ

    ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ

    ಸತ್ಯಕಾಮ ವಾರ್ತೆ ಯಾದಗಿರಿ:
    ಇದೇ ಸೆ.22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ವೇಳೆ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ ತಿಳಿಸಿದ್ದಾರೆ.

    ಸೋಮವಾರ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಾರ, ಬಡಿಗೇರ, ಅಕ್ಕಸಾಲಿಗ, ಪತ್ತಾರ, ವಿಶ್ವಬ್ರಾಹ್ಮಣ ಹೀಗೆ ಉಪಜಾತಿಗಳನ್ನು ಬರೆಯಿಸದೇ ಎಲ್ಲರೂ ಒಂದಾಗಿ ಹಿಂದೂ ವಿಶ್ವಕರ್ಮ ಎಂದೇ ಬರೆಯಬೇಕೆಂದು ಮನವಿ ಮಾಡಿದ್ದಾರೆ.

    ಹಿಂದೇ ನಡೆಸಿದ ಸಮೀಕ್ಷೆ ಸರಿಯಾಗಿಲ್ಲ, ರಾಜ್ಯದಲ್ಲಿ ಒಟ್ಟು ಸುಮಾರು 45 ಲಕ್ಷ ಜನರು ವಿಶ್ವಕರ್ಮ ಜನರಿದ್ದು, ಅಲ್ಲಿ ಕೇವಲ  15 ಲಕ್ಷ ಜನರೆಂದು ತೊರಿಸುವ ಮೂಲಕ ಅನ್ಯಾಯ ಮಾಡಲಾಗಿದೆ. ಕಾರಣ, ಈಗ ನಡೆಯುವ ಸಮೀಕ್ಷೆ ವೇಳೆ ನಾವೇ ಬೇರೆ, ಬೇರೆಯಾಗಿ ಬರೆಸಿದರೇ ನಮ್ಮ ಜನಸಂಖ್ಯೆಯ ನಿಖರ ಮಾಹಿತಿ ಸಿಗುವುದಿಲ್ಲ ಎಂದರು.

    ಸೇ. 17 ರಂದು ನಡೆಯುವ ವಿಶ್ವಕರ್ಮ ಜಯಂತಿಯಲ್ಲಿ ಸಮಾಜದ ಎಲ್ಲರೂ ಭಾಗವಹಿಸಬೇಕು.ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೇ ಶೇ.70 ರಷ್ಟು ಅಂಕಗಳನ್ನು ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದೆಂದರು.

    ಇದಕ್ಕಾಗಿ ಬನ್ನಪ್ಪ ಕಾಳಬೆಳಗುಂದಿ 70194023439, ದೇವೇಂದ್ರಪ್ಪ ತಳವಾರಗೇರಿ 8660620887, ಗಣೇಶ ಪತ್ತಾರ 9980778380, ಮನೋಹರ 9448561261, ಶ್ರೀನಿವಾಸ 8095760145 ಮತ್ತು ಬನ್ನಪ್ಪ ಬಿಳ್ಹಾರ 9901546261 ಗೇ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

    ಮಹಾಸಭೆಯ ಪ್ರಮುಖರಾದ ದೇವೀಂದ್ರಪ್ಪ ವಡಗೇರಿ,ರಮೇಶ ಹತ್ತಿಕುಣಿ, ಶಿವಣ್ಣ ಹೂನುರು, ಮೌನೇಶ ನಾಯ್ಕಲ್, ಹಣಮಂತ್ರಾಯ ಉಳ್ಳೆಸೂಗುರು, ಜೀವಣ್ಣ ನಾಯ್ಕಲ್, ಮೌನಪ್ಪ ಪಸಪುಲ್, ಬನ್ನಪ್ಪ ಕಾಳೆಬೆಳಗುಂದಿ ಮತ್ತು ಶೇಖರ ತಾತಾ ಮುಸ್ಠೂರ ಸೇರಿದಂತೆಯೇ ಇತರರಿದ್ದರು.
    apvc-iconPost Views: 25
  • ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

    ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರ ಜೂನ್ 21ರಂದು ನಡೆದ ಬಾಲ್ಯ ವಿವಾಹ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
    ಈ ಕುರಿತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಮಲ್ಲೇಶಿ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿ, ಈಗಾಗಲೇ ಮಗುವಿಗೂ ಜನ್ಮ ನೀಡಿದ್ದಾಳೆ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
    ಈ ಹಿನ್ನೆಲೆಯಲ್ಲಿ, ವರ ಹಾಗೂ ಅವರ ಪೋಷಕರು ಮತ್ತು ವಧುವಿನ ತಂದೆ-ತಾಯಿಯನ್ನು ಸೇರಿ ಒಟ್ಟು ಐವರು ವಿರುದ್ಧ ಐಪಿಸಿ ಕಲಂ 376(2)(ಎನ್), ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಲಂ 9, 10, 11, ಮತ್ತು ಪೋಕ್ಸೋ ಕಾಯ್ದೆ 2012/2013 ಅಡಿಯಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    apvc-iconPost Views: 106
  • ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

    ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

    ಗುರುಮಠಕಲ್ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇಂದು ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ರಾಜ್ಯದ ಜನತೆ ಲಾಭ ಪಡೆಯುತ್ತಿದ್ದಾರೆ, ಇದರಿಂದ ಜನ ಸಂತೃಪ್ತರಾಗಿದ್ದಾರೆ ಎಂದು ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.

    ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ, 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಡವರ ಪಾಲಿನ ಅನ್ನರಾಮಯ್ಯರಾಗಿದ್ದಾರೆ.

    ವಿಡಿಯೋ ನೋಡಿ : ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ,

    ಗುರುಮಠಕಲ್ ಮತಕ್ಷೇತ್ರದ ಕುರಿತು ರಾಷ್ಟ್ರೀಯ ನಾಯಕರು ನಿರಂತರ ಮಾಹಿತಿ ಪಡೆಯುತ್ತಲೇ ಇದ್ದಾರೆ, ಇಂದು ಹೊಟ್ಟೆಕಿಚ್ಚಿಗೆ ಈ ರೀತಿ ಘಟನೆ ಜರುಗಿದ್ದು ಜನರ ಅಭಿವೃದ್ಧಿಯೆ ನನ್ನ ಕರ್ತವ್ಯ, ಇಂದಿನಿಂದ ಶಿಷ್ಠಚಾರದ ಪ್ರಕಾರ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಹಾಗೂ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸೇವೆ ಮಾಡುವೆ ಎಂದರು.

    ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಶರಣಪ್ಪ ಮನೆಗಾರ ಮಾತನಾಡಿ, ಇಂದು ಜೆಡಿಎಸ್ ಶಾಸಕರು ಸರಕಾರದ ಕಾರ್ಯಕ್ರಮಗಳಲ್ಲಿ ತಮ್ಮ ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ, ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ ಎಂದರು.

    ರಾಜ್ಯ ಸರಕಾರ ಇಂದು ಬಾಬುರಾವ ಚಿಂಚನಸೂರು ಅವರ ಮೇಲಿನ ಗೌರವ, ಅನುಭವ ಹಾಗೂ ಹಿರಿಯ ನಾಯಕತ್ವ ಕಂಡು ಸಂಪುಟ ಸ್ಥಾನಮಾನ ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಿದ್ದಾರೆ ಆದರೆ ಇಂದು ಅಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದರು.

    ಇದೇ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಕೃಷ್ಣ ಚಪೆಟ್ಲಾ ಉಪಸ್ಥಿತರಿದ್ದರು. (more…)

    apvc-iconPost Views: 70
  • ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು

    ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು

    ಸತ್ಯಕಾಮ ವಾರ್ತೆ ಯಾದಗಿರಿ:

    ನಾಯ್ಕಲ್ ಗ್ರಾಮದ ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದೂ, ಈ ಬಗ್ಗೆ ಜಿಲ್ಲಾ ಪಂಚಾಯಿತಿ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ್ ಅವರು ಐವರ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

     

    ನಾಯ್ಕಲ್ ಗ್ರಾಮದ 1500 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ (FHTC) ನೀಡುವ ಕಾಮಗಾರಿಗೆ ₹411 ಲಕ್ಷ ವೆಚ್ಚ ನಿಗದಿಯಾಗಿತ್ತು. ಆದರೆ, ವಾಸ್ತವಿಕವಾಗಿ ಕೇವಲ 529 ಮನೆಗಳಲ್ಲಿ (35%) ಮಾತ್ರ ಕಾಮಗಾರಿ ಪೂರ್ಣಗೊಂಡಿದ್ದರೂ, ದಾಖಲೆಗಳಲ್ಲಿ 1257 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ ಎಂದು ತೋರಿಸಿ ₹330.39 ಲಕ್ಷ (82.5%) ಬಿಲ್‌ ಪಾವತಿ ಮಾಡಲಾಗಿದ್ದೂ, ಅಲ್ಲದೇ ಇದಕ್ಕೆ ಹೆಚ್ಚುವರಿಯಾಗಿ ₹190 ಲಕ್ಷ ಮೊತ್ತವನ್ನು ಕೆಲಸ ಪೂರ್ಣಗೊಳ್ಳದೇ ಇರುವ ಪರಿಸ್ಥಿತಿಯಲ್ಲೇ ಪಾವತಿಸಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

     

    ತಪಾಸಣೆಯಲ್ಲಿ, MDPE ಪೈಪುಗಳನ್ನು ಸರಿಯಾಗಿ ಅಳವಡಿಸದೇ GI ಪೈಪುಗಳಿಂದ ಮುಚ್ಚಿಲ್ಲ, ನೆಲದಡಿಯಲ್ಲಿ ಹಾಕಬೇಕಾದ ಪೈಪುಗಳನ್ನು ಮೇಲ್ಮೈಯಲ್ಲಿ ಅಳವಡಿಸಲಾಗಿದೆ, ಸುಳ್ಳು ದೃಢೀಕರಣ ಪತ್ರಗಳು ಮತ್ತು ನಕಲಿ ವರದಿಗಳ ಆಧಾರದಲ್ಲಿ ಬಿಲ್‌ಗಳು ಅನುಮೋದನೆಗೊಂಡಿರುವುದು ಪತ್ತೆಯಾಗಿದ್ದು, ಇದು ತುರ್ತು ಕ್ರಮಕ್ಕೆ ಕಾರಣವಾಗಿದೆ.

     

    ಈ ಅವ್ಯವಹಾರದಲ್ಲಿ ಭಾಗಿಯಾದ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಉಪ ವಿಭಾಗ ಅಧಿಕಾರಿ (ಪ್ರ) ಸಹಾಯಕ ಇಂಜಿನಿಯರ್-2 ಎನ್. ಶ್ರೀನಿವಾಸ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಉಪ ವಿಭಾಗ ಶಹಾಪೂರ ಪ್ರಸಕ್ತ ದೇವದುರ್ಗ ಲೋಕೋಪಯೋಗಿ ಇಲಾಖೆ, ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿರುವ ಬನ್ನಪ್ಪ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಯಾದಗಿರಿ ವಿಭಾಗದ ಕಾರ್ಯಪಾಲಕ ಅಭಿಯಂತರ ಆನಂದ, ಗುತ್ತಿಗೆದಾರ ವೆಂಕಟೇಶ್ ಜಿ. ಗುರಸಣಗಿ,Transportech Consultants, ಬೆಂಗಳೂರು (ಮೂರನೇ ತನಿಖಾ ತಂಡ) ಇವರ ವಿರುದ್ಧ ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    ಈ ಕುರಿತು ಗುನ್ನೆ ನಂ.153/2025 ಕಲಂ 318(2), 418(4), 336(3) BNS-2023 ಅಡಿ ಕ್ರಿಮಿನಲ್ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    apvc-iconPost Views: 1261
  • ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

    ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

    ಸತ್ಯಕಾಮ ವಾರ್ತೆ ಯಾದಗಿರಿ:

    ಸ್ವಂತ ಮನೆ ಹೊಂದುವ ಕನಸಿನ ಕಡುಬಡವರ ಪಾಲಿಗೆ ಆಶ್ರಯ ಸಮಿತಿ ಆಶಾಕಿರಣವಾಗಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಸೂಚಿಸಿದರು.

    ಇಲ್ಲಿನ ನಗರಸಭೆ ಸಭಾಂಗಣದಲ್ಲಿ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿ ಸಹಾಯದಿಂದ ಭೂಮಿ ಖರೀದಿ ಮಾಡಿ ಅರ್ಹರಿಗೆ ನಿವೇಶನ ಹಂಚುವ ಯೋಜನೆ ಯಶಸ್ವಿಯಾಗಲು ಎಲ್ಲರೂ ಪಕ್ಷಬೇಧ ಮರೆತು ಶ್ರಮಿಸಬೇಕು ಎಂದರು.

    ಈಗಿರುವ ಆಶ್ರಯ ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಮಾತ್ರ ಅರ್ಹರಿಗೆ ನಿವೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ೨೦೨೫-೨೬ನೇ ಸಾಲಿನ ೨.೦ ಪಿಎಂಎವೈ (ಯು) ಅರ್ಜಿಗಳ ವಿಲೇವಾರಿ ಕುರಿತು ಸುದೀರ್ಘ ಚರ್ಚೆ ನಡೆಸಿದ ಶಾಸಕರು, ನಗರದ ಮಂಗಳಮುಖಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

    ಒಟ್ಟು ೩೦೫೦ ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳನ್ನು ಶೀಘ್ರ ಪರಿಶೀಲಿಸಿ ವ್ಯಾಲಿಡೇಶನ್ ಮಾಡಲು ಸೂಚನೆ ನೀಡಿದರು, ಸರ್ವೆ ನಂ.೧೫೧/೧ರಲ್ಲಿ ೯ ಜನ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ನೀಡುವ ನಿರ್ಣಯ ಕೈಗೊಳ್ಳಲಾಯಿತು.

    ಸರ್ವೆ ನಂ.೧೫೧ರಲ್ಲಿ ಇರುವ ೪೨ ನಿವೇಶನಗಳ ಬಗ್ಗೆ ಕಾನೂನು ಸಲಹೆ ಪಡೆದು ಪರಿಶೀಲನೆ ನಡೆಸಲು ಸೂಚಿಸಿದರು. ಅಲ್ಲದೆ ಹೈಟೆನ್ಶನ್ ವೈಯರ್ ಇರುವ ಪ್ರದೇಶದಲ್ಲಿ ಮನೆಗಳಿರುವುದರಿಂದ, ಜೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ವೈರ್ ಸ್ಥಳಾಂತರ ಹಾಗೂ ರಸ್ತೆ ನಿರ್ಮಾಣದ ತ್ವರಿತ ಕ್ರಮ ಕೈಗೊಳ್ಳುವಂತೆ ಹೇಳಿದರು.

    ಸರ್ವೆ ನಂ.೮೮/೬ ಮತ್ತು ೯೦/೨ರಲ್ಲಿ ಹಲವು ವರ್ಷಗಳಿಂದ ಅತಿಕ್ರಮಣ ನಡೆದಿರುವ ವಿಷಯವನ್ನು ಸದಸ್ಯರು ಗಮನಕ್ಕೆ ತಂದರು. ಅತಿಕ್ರಮಣ ಮಾಡಿದ ೭೦ ಜನರಿಗೆ ನೋಟಿಸ್ ನೀಡಲು ಶಾಸಕ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಸಭೆಯಲ್ಲಿ ಸದಸ್ಯರು ಆಶ್ರಯ ಸಮಿತಿಗೆ ಪ್ರತ್ಯೇಕ ಕಚೇರಿ ಮಾಡುವಂತೆ ಮನವಿ ಮಾಡಿದ್ದು, ಶಾಸಕರು ಕೂಡಲೇ ಕಚೇರಿ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ನಗರಸಭೆ ಪೌರಯುಕ್ತ ಉಮೇಶ ಚೌಹಾಣ್, ಆಶ್ರಯ ಸಮಿತಿ ಸದಸ್ಯರು ಪ್ರಭಾಕರ್ ಜಿ., ಆರತಿ ಅಮರೇಶ್ ಜಾಕ, ಶಿವಕುಮಾರ್ ಕರದಳ್ಳಿ, ಇಮುನವೆಲ್ ಕ್ರಿಸ್ಟೋಫರ್ ಬೆಳ್ಳಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

    apvc-iconPost Views: 6
  • ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

    ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯಲ್ಲಿ ಅಕ್ರಮ ಮರಮ್ ಗಣಿಗಾರಿಕೆ ತಡೆಗಟ್ಟಲು ಆಡಳಿತ ಕ್ರಮ ಕೈಗೊಂಡಿರುವ ವೇಳೆಯಲ್ಲಿ, ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೇ ದಂಧೆಗೆ ಬೆನ್ನೆಲುಬಾಗಿ ನಿಂತಿರುವ ಆಡಿಯೋ ಬಯಲಾಗಿದೆ.
     
    ಕಂದಾಯ ನಿರೀಕ್ಷಕ ಮಹೇಂದ್ರ ಲಂಚ ಪಡೆದು ಗಣಿಗಾರಿಕೆ ಮುಂದುವರಿಯಲು ಅವಕಾಶ ನೀಡುತ್ತಿದ್ದಾನೆಂಬುದು ಆಡಿಯೋದಲ್ಲಿ ಬಯಲಾಗಿದ್ದು, ಮೀನು ಸಾಗಾಟಕ್ಕೆ ಹುಂಡಾ ಹೊಡೆದಿದ್ದೇವೆ ಎಂದು ತಹಶೀಲ್ದಾರ್‌ಗೆ ಹೇಳ್ತೀನಿ ಎಂಬ ಮಾತು ಸ್ವತಃ RI ಬಾಯಿಂದಲೇ ಕೇಳಿಬಂದಿದೆ.
    ಮೇಲಾಧಿಕಾರಿಗಳಿಗೆ RI ಯಾವ ರೀತಿ ತಪ್ಪು ಮಾಹಿತಿಯನ್ನು ಕೊಡುತ್ತೇನೆ ಎಂಬುದಕ್ಕೆ ಈ ಆಡಿಯೋ  ಸಾಕ್ಷಿಯಾಗಿದ್ದೂ. ಗ್ರಾಮ ಲೆಕ್ಕಾಧಿಕಾರಿ ದೇವೇಂದ್ರ ಅವರ ಹೆಸರೂ ಈ ಆಡಿಯೋದಲ್ಲಿ ಕೇಳಿಬರುತ್ತಿದೆ.
    ಪಟ್ಟಾ ಲ್ಯಾಂಡ್‌ನಲ್ಲೇ ಮರಮ್ ಗಣಿಗಾರಿಕೆ ಸಾಗುತ್ತಿರುವುದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದೂ,RI–VA ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ಅಕ್ರಮಕ್ಕೆ ಸಾಥ್ ನೀಡುತ್ತಿರುವ ತಹಶೀಲ್ದಾರ್‌ ಮೇಲೂ ತನಿಖೆ ನಡೆಯಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.
    ಹಲವೆಡೆ ಅಕ್ರಮ ಗಣಿಗಾರಿಕೆ; 
    ಶಹಾಪುರ ತಾಲೂಕಿನ ವಿಭೂತಿಹಳ್ಳಿ, ಗೋಗಿ, ಇಬ್ರಾಹಿಂಪುರ, ಹುರಸುಗುಂಡಿಗಿ, ದೋರನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ನಿರ್ಬಂಧವಿಲ್ಲದೆ ಅಕ್ರಮ ಗಣಿಗಾರಿಕೆ ಸಾಗುತ್ತಿದೆ. ಅಧಿಕಾರಿಗಳ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.
    apvc-iconPost Views: 44