Blog

  • ಸೌಹಾರ್ದಯುತವಾಗಿ ಹಬ್ಬಗಳು ಆಚರಿಸಿ – ಡಿ.ವೈ.ಎಸ್.ಪಿ ಸುರೇಶ್

    ಸೌಹಾರ್ದಯುತವಾಗಿ ಹಬ್ಬಗಳು ಆಚರಿಸಿ – ಡಿ.ವೈ.ಎಸ್.ಪಿ ಸುರೇಶ್

    ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿ.ವೈ.ಎಸ್. ಪಿ ಸುರೇಶ್. ಎಮ್. ಹೇಳಿದರು.

    ತಾಲೂಕಿನ ಚಂಡ್ರಿಕಿ ಗ್ರಾಮದಲ್ಲಿ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಉಂಟಾಗದಂತೆ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯೊಂದಿಗೆ ನಡೆದುಕೊಳ್ಳಬೇಕು’ ಎಂದರು.

    ಇದೇ ಸಂಧರ್ಭದಲ್ಲಿ ಪಿ. ಐ. ವೀರಣ್ಣ ದೊಡ್ಡಮನಿ ಮಾತನಾಡಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಣ್ಣ ಪುಟ್ಟ ಮಕ್ಕಳು ಮೆರವಣಿಗೆ ಹೋಗದಂತೆ ಪೋಷಕರು ಗಮನಹರಿಸಿ ಹಾಗೂ ಮೂರ್ತಿಗಳ ವಿಸರ್ಜನೆ ನಮ್ಮ ಇಲಾಖೆ ಬೇಕಾದ ಅಗತ್ಯ ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೇ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ತ್ಯಾಜ್ಯವನ್ನು ಒಂದು ನಿಗದಿಪಡಿಸಿದ ಸ್ಥಳದಲ್ಲಿ ಹಾಕಬೇಕು ಎಂದು ಸಲಹೆ ನೀಡಿದರು.

    ಈ ವೇಳೆ ತಹಸೀಲ್ದಾರ್ ಶಾಂತಗೌಡ ಬಿರಾದಾರ, ಪಿ.ಡಿ.ಓ. ಗೀತಾ, ಶಿವರಾಮ ರೆಡ್ಡಿ ಸೇರಿದಂತೆ ಊರಿನ ಮುಖಂಡರುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

    apvc-iconPost Views: 63
  • ಗೋಶಾಲೆಯಲ್ಲಿ ಸಾಕಿದ್ದ ಜಿಂಕೆ ಮರಿ ವಶ

    ಗೋಶಾಲೆಯಲ್ಲಿ ಸಾಕಿದ್ದ ಜಿಂಕೆ ಮರಿ ವಶ

    ಸತ್ಯಕಾಮ ವಾರ್ತೆ ಯಾದಗಿರಿ :
    ಯಾದಗಿರಿ ನಗರದ ಹೊರವಲಯದಲ್ಲಿರುವ ಭಗವಾನ್ ಮಹಾವೀರ ಜೈನ್ ಗೋಶಾಲಾದಲ್ಲಿ ಸಾಕಿದ್ದ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

    ಮೂಲಗಳ ಮಾಹಿತಿ ಪ್ರಕಾರ, ಪಕ್ಕದ ಜಮೀನಿನಲ್ಲಿ ಸಿಕ್ಕಿದ್ದ ಜಿಂಕೆಯನ್ನು ಗೋಶಾಲಾ ಸಿಬ್ಬಂದಿಗಳು ಕಳೆದ ಒಂದು ವರ್ಷದಿಂದ ಸಾಕುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಜಿಂಕೆ ಪತ್ತೆಯಾಗಿದೆ.

    ಜಿಂಕೆಯನ್ನು ವಶಕ್ಕೆ ಪಡೆಯುವ ವೇಳೆ ಗೋಶಾಲಾ ಸಿಬ್ಬಂದಿಗಳು ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯವೂ ಅಲ್ಲಿ ಕಂಡುಬಂದಿತು. ಆದಾಗ್ಯೂ, ಅರಣ್ಯ ಕಾಯ್ದೆ ಪ್ರಕಾರ ಕಾಡುಪ್ರಾಣಿಗಳನ್ನು ಮನೆಗಳಲ್ಲಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಕುವುದು ಕಾನೂನು ಬಾಹಿರವಾಗಿರುವುದರಿಂದ ಅಧಿಕಾರಿಗಳು ಜಿಂಕೆಯನ್ನು ವಶಕ್ಕೆ ಪಡೆದು ಎಲೆರಿ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇದರ ನಡುವೆ, ಜಿಂಕೆ ಗೋಶಾಲೆಯಲ್ಲಿ ಗೋಪ್ಯವಾಗಿ ಇಟ್ಟ ಗೋಶಾಲೆಯ ಮುಖ್ಯಸ್ಥರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗಿತ್ತು ಎಂಬ ಸಾರ್ವಜನಿಕರ ಬೇಡಿಕೆ ವ್ಯಕ್ತವಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅರಣ್ಯ ಇಲಾಖೆ ತಿಳಿಸಿದೆ.

    apvc-iconPost Views: 182
  • ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

    ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

    ಯಾದಗಿರಿ: ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ದೆಹಲಿಯ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಸಿದ್ದಪ್ಪ ಎಸ್ ಹೊಟ್ಟಿ ಅವರಿಗೆ ಹೊಟ್ಟಿಯ ಆತ್ಮೀಯ ಬಳಗದ ವತಿಯಿಂದ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಲಯದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

    ಸನ್ಮಾನ ನೇರವೆರಿಸಿ ಮಾತನಾಡಿದ  ಸಹಕಾರ ಯೂನಿಯನ್ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಪೂರ ಗಿರಿ ಜಿಲ್ಲೆಯ ಸಹಕಾರ ಸಂಘದಲ್ಲಿ ಗುರಿತಿಕೊಂಡಿದ್ದ ಸಿದ್ದಪ್ಪ ಹೊಟ್ಟಿ ದೇಶದ ದೆಹಲಿಯಲ್ಲಿರುವ ನೆಪೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ನಮ್ಮ ಹಿಂದುಳಿದ  ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

    ಸಹಕಾರ ಯುನಿಯನ್ ನಿರ್ದೇಶಕ ಕೆಂಚಪ್ಪ ನಗನೂರ ಮಾತನಾಡಿ ಸಿದ್ದಪ್ಪ ಎಸ್ ಹೊಟ್ಟಿ ಅವರು ದೆಹಲಿ ನೆಪೆಡ್ ಸಂಸ್ಥೆಯ ಮತ್ತ ನೂತನವಾಗಿ ಆಯ್ಕೆಯಾದ ಎನ್ ಎಚ್ ಆರ್ ಡಿ ಎಪ್ ಸಂಸ್ಥೆಯ ವತಿಯಿಂದ ಬರುವ ಸವಲತ್ತುಗಳನ್ನು ನಮ್ಮ ಗಿರಿ ಜಿಲ್ಲೆಗೆ ತರುವಂತಹ ಕೆಲಸ ಆಗಬೇಕು ನಮ್ಮ ಸ್ಥಳೀಯ ಸಹಕಾರ ಸಂಘಗಳಿಗೆ ಆರ್ಥಿಕ ಶಕ್ತಿ ತುಂಬುವಂತಹ ಕೆಲಸ ತಾವು ಮಾಡಬೇಕು ಎಂದು ಹೇಳಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿದ್ದಪ್ಪ ಎಸ್ ಹೊಟ್ಟಿ  ನಾನು ಸಹಕಾರ ಕ್ಷೇತ್ರದಲ್ಲಿ ಇಂದು ಈ ಮಟಕ್ಕೆ ಹೋಗಲು ದಿವಂಗತ ಸದಾಶಿವರೆಡ್ಡಿ ಕಂದಕೂರ ಅವರ ಆಶಿರ್ವಾದದಿಂದ ನಾನು ಸಹಕಾರ ಕ್ಷೇತ್ರದಲ್ಲಿ ಬೇಳೆಯಲು ಸಾದ್ಯವಾಗಿದೆ ಎಂದು ಹೇಳಿದರು.  ನಾನು ತಾಲೂಕು ಒಕ್ಕಲುತನ ಹುಟ್ಟವಳಿ ಮಾರಟ ಸಹಕಾರ ಸಂಘದ ಅಧ್ಯಕ್ಷರಾಗಿ ನಿರ್ದೇಶಕರಾಗಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಇನ್ನೂ ಅನೇಕ ಸಂಘಗಳಲ್ಲಿ ಹುದ್ದೆಯನ್ನು ನಿಭಾಯಿಸಲು ನಿಮ್ಮೇಲ್ಲರ ಸಹಕಾರದಿಂದ ಸೇವೆ ಮಾಡುತ್ತಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ಕಲಬುರಗಿ ಹಾಗೂ ಯಾದಗಿರಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಪವನ ಕುಮಾರ. ಅಯ್ಯಣ್ಣ ಹುಂಡೇಕಾರ.ಪ್ರಕಾಶ ಅಂಗಡಿ ಕನ್ನೆಳ್ಳಿ. ಆರ್ ಮಾಹದೇವಪ್ಪಗೌಡ ಅಬ್ಬೆತುಮಕುರ. ಬಸವಂತ್ರಾಯ ಮಾಲಿಪಾಟೀಲ್. ಬಸವರಾಜ ಮೊಟ್ನಳ್ಳಿ. ಡಾ. ಭೀಮರಾಯ ಲಿಂಗೇರಿ.ಡಾ. ಎಸ್ ಎಸ್ ನಾಯಕ. ಚೆನ್ನಪ್ಪ ಠಾಣಗುಂದಿ, ಸೂಗಪ್ಪ ಪಾಟೀಲ್, ಅಮರಣ್ಣಗೌಡ ಗಡ್ಡೆಸೂಗೂರು, ವೈಜನಾಥ ತುಮಕೂರು, ನಾಗೇಂದ್ರ ಜಾಜಿ. ವಿ ಎಸ್ ಜಾಕಾಮಠ. ವೀರಭದ್ರಯ್ಯ ಮೋಟಾರ. ಶರಣಪ್ಪ ಗುಳಗಿ. ನಾಗಪ್ಪ ಸಜ್ಜನ. ಮಲ್ಲಿನಾಥ ಆಯರಕರ್. ಶೇಖರ ಅರಳಿ. ಲಕ್ಮೀನಾರಯಣ. ಅಯ್ಯಣ್ಣ ಗೌಡ ಕ್ಯಾಸಪನಳ್ಳಿ. ದೇವರಾಜ ವರ್ಕನಳ್ಳಿ,  ಸುಜಾತ ಮಠ.ರೇಖಾ ಮ್ಯಾಗೇರಿ. ಮಲ್ಲು ಸ್ವಾಮಿ,ಸಿದ್ದಪ್ಪ ಹೊಟ್ಟಿಯ ಆತ್ಮೀಯ ಬಳಗದಿಂದ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

    apvc-iconPost Views: 44
  • ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

    ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

    ಗುರುಮಠಕಲ್: ಭಾರತ ಸ್ವಾತಂತ್ರದ ನಂತರ ಹಲವಾರು ದಶಕಗಳ ವರೆಗೂ ಸಣ್ಣಪುಟ್ಟ ರಾಷ್ಟ್ರಗಳೊಂದಿಗೆ ಹೋಲಿಕೆ ಆಗುತ್ತಿತ್ತು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಲಾಢ್ಯ ರಾಷ್ಟ್ರಗಳ ಜೊತೆ ಸರಿಸಮವಾಗಿ ಜಾಗತಿಕ ಮಟ್ಟದಲ್ಲಿ ಎಲ್ಲಾ ರಂಗದಲ್ಲಿ ಸ್ಪರ್ಧೆ ನೀಡುವಂತಾಗಿದ್ದೇವೆ ಎಂದು ಶಾಸಕ ಶರಣು ಗೌಡ ಕಂದಕೂರು ಹೇಳಿದರು.

    ಪಟ್ಟಣದ ಜವಾಹರಲಾಲ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವತಂತ್ರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಯೋತ್ಪಾದಕರ ಕುತಂತ್ರಕ್ಕೆ 27 ಜನ ಭಾರತೀಯರು ಬಲಿಯಾಗಿರುವ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಚರಣೆ ವಿರೋಧಿಗಳಿಗೆ ನಿದ್ದೆಗೆಡಿಸಿದೆ. ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಷವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದು ಅವರು ಬಣ್ಣಿಸಿದರು.

    ಅಧ್ಯಕ್ಷ ಭಾಷಣಕ್ಕೂ ಮುಂಚೆ ಕಲಬುರಗಿ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧೀಪತಿಗಳಾದ ಡಾ||ಶರಣಬಸಪ್ಪ ಅವರಿಗೆ ಸಂತಾಪ ಸೂಚಿಸಿದರು, ವೇದಿಕೆ ಮೇಲಿದ್ದ ಪುರಸಭೆ ಮುಖ್ಯಾಧಿಕಾರಿಗಳಿಗೆ ಮತ್ತು ತಾಲೂಕ ದಂಡಾಧಿಕಾರಿಗಳಿಗೆ ಶಿಸ್ತು ಮತ್ತು ಸಮಯ ಪರಿಪಾಲನೆ ಮಾಡುವಂತೆ ಎಚ್ಚರಿಕೆ ನೀಡಿದರು.

    ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಿದ ಚಂದ್ರಶೇಖರ್ ಪಾಟೀಲ್, ಅಜ್ಞಾತ ಸ್ವಾತಂತ್ರ ವೀರರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸೋಣ ಕೇವಲ ಒಂದು ವ್ಯಕ್ತಿಯಿಂದ ಸ್ವಾತಂತ್ರ ನಮಗೆ ಬಂದಿಲ್ಲ, ಸಾವಿರಾರು ದೇಶಭಕ್ತರು ದೇಶಕ್ಕಾಗಿ ಹುತಾತ್ಮರಾಗಿರುವ ಪ್ರಯುಕ್ತ ನಮಗೆ ದೇಶ ಸ್ವಾತಂತ್ರ ಸಿಕ್ಕಿದೆ ಜಲಿಯನ್ ವಾಲಿಬಾಲ್ ಹತ್ಯಾಕಾಂಡ ಹಾಗೂ ದೇಶಭಕ್ತ ಉದಂ ಸಿಂಗ್ ಅವರ ಕುರಿತು ವಿವರಿಸಿ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಿದರು.

    ಇದಕ್ಕೂ ಮುಂಚೆ ತಾಲೂಕ ದಂಡಾಧಿಕಾರಿ ಹಾಗೂತಹಸೀಲ್ದಾರ ಶಾಂತಗೌಡ ಬಿರಾದಾರ ಧ್ವಜಾರೋಹಣ ನೆರವೇರಿಸಿ ಪ್ರಾಸ್ಥಾವಿಕ ನುಡಿ ಹೇಳಿದರು.

    ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಿದ್ದರು.

    ಈ ವೇಳೆ ವೇಧಿಕೆಮೇಲೆ ಜಯಶ್ರೀ ಪೊ.ಪಾಟೀಲ್ ಪುರಸಭೆ ಅಧ್ಯಕ್ಷರು, ರೇಣುಕಾ ವಿ.ಪಡಿಗೆ ಉಪಾಧ್ಯಕ್ಷರು, ಅಂಬ್ರೇಶ್ ಪಾಟೀಲ್ ತಾ.ಪಂ ಇ. ಓ, ಭಾರತಿ.ಸಿ.ದಂಡೋತಿ ಪುರಸಭೆ ಮುಖ್ಯಾಧಿಕಾರಿ, ವೀರಣ್ಣ.ಎಸ್. ದೊಡ್ಡಮನಿ ಆರಕ್ಷಕ ನಿರೀಕ್ಷಕರು, ನರಸಿಂಹಸ್ವಾಮಿ ಉಪ ತಹಶೀಲ್ದಾರ್ ಸೇರಿದಂತೆಮುಖಂಡರುಗಳು ಸಾರ್ವಜನಿಕಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    apvc-iconPost Views: 55
  • ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

    ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

    ಕಲಬುರಗಿ: ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ, ಕಲಬುರಗಿಯ ಮಹಾ ದಾಸೋಹಿ ಪರಂ ಪೂಜ್ಯ ಶರಣಬಸಪ್ಪ ಅಪ್ಪ (92) ಅವರು ಇಂದು ರಾತ್ರಿ 9.23ಕ್ಕೆ ದಾಸೋಹ ಮಹಾ ಮನೆಯಲ್ಲಿ ಲಿಂಗೈಕ್ಯರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅಪ್ಪಾಜಿ, ಕೆಲವು ದಿನಗಳಿಂದ ಮಠದಲ್ಲೇ ವೆಂಟಿಲೇಟರ್‌ನಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಪರಮಧಾಮ ಪ್ರವೇಶಿಸಿದರು.

    ಕುಟುಂಬಸ್ಥರು ದೇವಸ್ಥಾನದ ಮುಂಭಾಗದಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಿದ್ದು, ಭಕ್ತರ ಭಾರಿ ಆಗಮನದ ಹಿನ್ನಲೆ ಕಲಬುರಗಿ ಪೊಲೀಸ್ ಇಲಾಖೆ ಕಠಿಣ ಬಂದೋಬಸ್ತ್ ಕೈಗೊಂಡಿದೆ. ಅಂತಿಮ ದರ್ಶನದ ವೇಳೆಯನ್ನು ಕುಟುಂಬ ಸಮಾಲೋಚನೆ ಬಳಿಕ ಪ್ರಕಟಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ತಿಳಿಸಿದ್ದಾರೆ.

    apvc-iconPost Views: 127
  • ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಸ್ಪಂದನೆ

    ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಸ್ಪಂದನೆ

    ತೆರಿಗೆ ವಸೂಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ನಿಶ್ಚಿತ ಗುರಿ ಸಾಧಿಸಿರುವುದು ಸ್ವಾಗತಾರ್ಹ ಕ್ರಮ

    ಯಾದಗಿರಿ :  ಜಿಲ್ಲೆಯಲ್ಲಿ ಕರವಸೂಲಾತಿಗೆ ಹಮ್ಮಿಕೊಂಡಿದ್ದ ಒಂದೇ ದಿನದಲ್ಲಿ ಕೋಟಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, 2025ರ ಆಗಸ್ಟ್ 12 ರಂದು 1,46,00,855 ಕೋ.ರೂ.ಗಳ ದಾಖಲೆಯ ತೆರಿಗೆ ಸಂಗ್ರಹವಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ.

    ಯಾದಗಿರಿ ಜಿಲ್ಲೆಯಾದ್ಯಂತ ಒಂದೇ ದಿನ 1,46,00,855 ಕೋ.ರೂ.ಗಳ ದಾಖಲೆಯ ಹಿನ್ನೆಲೆ ಕಾಯಕವನ್ನು ಮಾಡುವಾಗ ಮನಸ್ಸು ಶುದ್ಧವಾಗಿರಬೇಕು, ಅಂದರೆ ಯಾವುದೇ ದುರುದ್ದೇಶವಿಲ್ಲದೆ, ಭಕ್ತಿಯಿಂದ ಮಾಡಿದ ಕೆಲಸಕ್ಕೆ ಯಶಸ್ಸು ಸಾಧ್ಯ ಎನ್ನುವಂತೆ ಇಂದಿನ ತೆರಿಗೆ ಸಂಗ್ರಹಣೆಯಲ್ಲಿ ನಿಷ್ಟೆಯಿಂದ, ಭಕ್ತಿಯಿಂದ ಕೆಲಸ ನಿರ್ವಹಿಸಿದ್ದಕ್ಕಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಾಯಿತು

    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಿಸುವ ಮೂಲಕ ರಾಜ್ಯ ಮಟ್ಟದಲ್ಲಿ ತೆರಿಗೆ ಸಂಗ್ರಹಣೆಯಲ್ಲಿ ಸಾಧನೆಯ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಅಭಿಯಾನ ಪ್ರಾರಂಭಿಸಲಾಗಿತ್ತು. ಅದರಂತೆ, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎನ್.ಆರ್.ಎಲ್.ಎಮ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಎಲ್ಲಾ ಸಿಬ್ಬಂದಿಗಳು ಸೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಮನವೊಲಿಸಿ ತೆರಿಗೆ ಸಂಗ್ರಹಣೆಗೆ ಸಹಕರಿಸುವಂತೆ ಕೋರಿ ಯಶಸ್ವಿಯಾಗಿದ್ದಾರೆ. ಒಂದೇ ದಿನದಲ್ಲಿ 1,46,00,855 ರೂ.ಗಳ ತೆರಿಗೆ ವಸೂಲಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ನಿಶ್ಚಿತ ಗುರಿ ಸಾಧಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ.

    2025ರ ಆಗಸ್ಟ್ 10 ರಂದು ಯಾದಗಿರಿ ಜಿಲ್ಲೆಯ ರಾಜ್ಯದ ಕರವಸೂಲಾತಿ ಪ್ರಗತಿಯಲ್ಲಿ ಕೊನೆಯ ಎರಡನೇ ಸ್ಥಾನದಲ್ಲಿತ್ತು ಆದರೆ 2025ರ ಆಗಸ್ಟ್ 12 ರಂದು ನಡೆದ ಕರವಸೂಲಾತಿಯಲ್ಲಿ ಕೋಟಿ ಅಭಿಯಾನ ಪ್ರಯುಕ್ತ ಯಾದಗಿರಿ ಜಿಲ್ಲೆ ರಾಜ್ಯದಲ್ಲಿ 20ನೇ ಸ್ಥಾನದಲ್ಲಿ ಬಂದಿರುತ್ತದೆ. ಒಟ್ಟಾರೆಯಾಗಿ ಯಾದಗಿರಿ ಜಿಲ್ಲೆಯಲ್ಲಿ ರೂ.18.74 ಕೋಟಿ ಚಾಲ್ತಿ ಬೇಡಿಕೆಗೆ ಎದುರಾಗಿ 2025ರ ಆಗಸ್ಟ್ 12 ರಂದು ಒಟ್ಟು ರೂ.4.35 (ಶೇ.23.22%) ಕೋಟಿ ತೆರಿಗೆ ವಸೂಲಿ ಮಾಡಲಾಯಿತು ಎಂದರು.

    ಯಾದಗಿರಿ ತಾಲೂಕಿ ಮುದ್ನಾಳ ಗ್ರಾಮ ಪಂಚಾಯತ 6,06,706 ರೂ.ಗಳ, ಹತ್ತಿಕುಣಿ ಗ್ರಾಮ ಪಂಚಯತ್ 5,08,571 ರೂ.ಗಳ, ಶಹಾಪೂರ ತಾಲೂಕಿನ ಉಕ್ಕಿನಾಳ 4,18,736 ರೂ.ಗಳ, ಖಾನಾಪೂರ ಗ್ರಾಮ ಪಂಚಾಯತ್3,92,257 ರೂ.ಗಳ, ಹುಣಸಗಿ ತಾಲೂಕಿನ ನಾರಾಯಣಪೂರ ಗ್ರಾಮ ಪಂಚಾಯತ್ 3,15,862 ರೂ.ಗಳ, ಕಾಮನಟಗಿ ಗ್ರಾಮ ಪಂಚಾಯತ್ 2,13,336 ರೂ.ಗಳ, ಸುರಪುರ ತಾಲೂಕಿನ ಏವೂರ ಗ್ರಾಮ ಪಂಚಾಯತ್ 3,07,768 ರೂ.ಗಳ, ಮಲ್ಲ ಬಿ 2,13,431 ರೂ.ಗಳ, ವಡಗೇರಾ ತಾಲೂಕಿನ ವಡಿಗೇರಾ 3,03,881 ರೂ.ಗಳ, ಬೆಂಡೆಬೆAಬಳಿ ಗ್ರಾಮ ಪಂಚಾಯತ್ 2,48,746 ರೂ.ಗಳ, ಗುರುಮಠಕಲ್ ತಾಲೂಕಿನ ಚಂದ್ರಿಕಿ ಗ್ರಾಮ ಪಂಚಾಯತ್ 1,73,920 ರೂ.ಗಳ, ಕಾಕಲ್ವರ್ ಗ್ರಾಮ ಪಂಚಾಯತ್ 1,71,233 ರೂ.ಗಳ, ಇದೆ. ಶಹಾಪೂರ, ಯಾದಗಿರಿ, ಸುರಪುರ, ಹುಣಸಗಿ, ವಡಗೇರಾ, ಗುರುಮಠಕಲ್ ತಾಲೂಕಿನಲ್ಲಿ ಒಟ್ಟು 1,46,11854.99 ಕೋ.ರೂ.ಗಳ ತೆರಿಗೆ ವಸೂಲಿ ಮಾಡಲಾಯಿತು.

    ಗ್ರಾಮ ಪಂಚಾಯತ್ ಅಭಿವೃದ್ಧಿಗೆ ತೆರಿಗೆಯ ಮೂಲ ಅತೀ ದೊಡ್ಡ ಶಕ್ತಿಯಾಗಿ ಪರಿಣಮಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಾರ್ವಜನಿಕರಲ್ಲಿ ತೆರಿಗೆಯ ಬಗ್ಗೆ ಮನವೊಲಿಸಿ ಯಾದಗಿರಿ ಜಿಲ್ಲೆಯು ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಬರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ತೆರಿಗೆ ಪಾವತಿಯಿಂದ ಗ್ರಾಮ ಪಂಚಾಯತಿಯ ವಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಅನುಕೂಲವಾಗುತ್ತದೆ. ಹೀಗಾಗಿ ಕೋಟಿ ಅಭಿಯಾನ ಹೆಸರಿನಲ್ಲಿ ಒಂದು ದಿನದಲ್ಲಿ ಕೋಟಿ ಸಂಗ್ರಹಣೆ ಮಾಡಿರುತ್ತಾರೆ. ವಿಶೇಷವೆಂದರೆ ತೆರಿಗೆ ವಸೂಲಿ ಮಾಡಲು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಾಬಂಧನ ಹಬ್ಬದ ಪ್ರತೀಕರವಾಗಿ ಸಹೋದರರಿಗೆ ಕಾಣಿಕೆಯಾಗಿ ತೆರಿಗೆ ಪಾವತಿಸುವಂತೆ ಮನವೊಲಿಸಿದ್ದು ವಿಶೇಷವಾಗಿತ್ತು. ಅದರಂತೆ ತೆರಿಗೆ ಸಂಗ್ರಹಿಸಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    apvc-iconPost Views: 54
  • ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

    ಗುರುಮಠಕಲ್: ತಾಲೂಕಿನ ಬೋರಾಬಂಡ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಅ.15 ಶುಕ್ರವಾರದಂದು ಎರಡನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್. ಎಲ್. ಟಿ ದೇವಸ್ಥಾನದ ವ್ಯವಸ್ಥಾಪಕ ನರೇಂದ್ರ ರಾಠೋಡ್ ಹೇಳಿದರು.

    ಪಟ್ಟಣದ ಎಸ್.ಎಲ್.ಟಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 5:30ಕ್ಕೆ ಸುಪ್ರಭಾತ ಸೇವೆ. 6:30ಕ್ಕೆ ಪಂಚಾಮೃತ ಹಾಗೂ ಅಲಂಕಾರ ಸೇವಾ ಮಹಾಪೂಜೆ, 9:30ಕ್ಕೆ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಾರಂಭ, 11.ಗಂ ರಥೋತ್ಸವ ನಂತರ ಮಹಾನೈವೇದ್ಯ, ಮಹಾ ಮಂಗಳಾರತಿ, ತದನಂತರದಲ್ಲಿ ತೀರ್ಥಪ್ರಸಾದವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

    ಶ್ರೀ ಕೃಷ್ಣ ಜನೋತ್ಸವ ಪ್ರಯುಕ್ತ ಅ. 17ರಂದು ಬೆಳಗ್ಗೆ 9-00ಕ್ಕೆ ಬೋಡಬಂಡ ಗ್ರಾಮದ ಶ್ರೀ ಹನುಮಾನ ದೇವಸ್ಥನದಿಂದ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದವರೆಗೆ ಶ್ರೀಕೃಷ್ಣ ದೇವರ ಪಲ್ಲಕ್ಕಿ ಉತ್ಸವ ಜೊತೆಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಮಹಾದ್ವಾರದ ಹತ್ತಿರ ಮೊದಲನೆಯ ಮೊಸರಿನ ಗಡಿಗೆ ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನ ಸನ್ನಿಧಿಯಲ್ಲಿ ಎರಡನೇ ಮೊಸರಿನ ಗಡಿಗೆ ಹೊಡೆದು, ಬಣ್ಣದ ಓಕುಳಿ ಆಡಲಾಗುವುದು ಎಂದು ಅವರುತಿಳಿಸಿದರು.

    ಶ್ರೀ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ಮೋ.8885011111, 7021261844 ಸಂಖ್ಯೆಗೆ ಕರೆಮಾಡಿ ಹೆಸರನ್ನು ನೊಂದಾಯಿಸಬೇಕು ಹಾಗೂ ಕಡ್ಡಾಯವಾಗಿ ದಂಪತಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಅವರು ವಿನಂತಿಸಿಕೊಂಡರು.

    ಈ ಸಂಧರ್ಭದಲ್ಲಿ ಬಂಜಾರ ಸಮುದಾಯದ ಮುಖಂಡ ಕಾಶಿನಾಥ ರಾಠೋಡ್, ಶರಣಪ್ಪ, ಹಫೀಜ್ ಮಡ್ಕಿ ಉಪಸ್ಥಿತರಿದ್ದರು.

    apvc-iconPost Views: 6
  • ನಶಾ ಮುಕ್ತ ಭಾರತಕ್ಕೆ ಎಲ್ಲರೂ ಸಹಕರಿಸಿ: ನ್ಯಾ. ಮರಿಯಪ್ಪ

    ನಶಾ ಮುಕ್ತ ಭಾರತಕ್ಕೆ ಎಲ್ಲರೂ ಸಹಕರಿಸಿ: ನ್ಯಾ. ಮರಿಯಪ್ಪ

    ಯಾದಗಿರಿ: ನಶಾ ಮುಕ್ತ ಭಾರತ ನಿರ್ಮಾಣ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಹೇಳಿದರು.
    ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು 5 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬುಧವಾರ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಹಾಗೂ ಸಾಮೂಹಿಕ ಪ್ರತಿಜ್ಞೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಇಂದು ಯುವಜನತೆ ಇದಕ್ಕೆ ಅತಿಯಾಗಿ ಅಂಟಿಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ಅನೇಕ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಇದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ‌.ಈ ನಿಟ್ಟಿನಲ್ಲಿ‌ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ನ್ಯಾಯಧೀಶರು ಹೇಳಿದರು.
    ಇದೇ ಸಂದರ್ಭದಲ್ಲಿ ನಶಾಮುಕ್ತ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
    ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಜಿಲ್ಲಾ ಆಯುಷ್ ಅಧಿಕಾರಿ ವಂದನಾ ಗಾಳಿ,ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
    apvc-iconPost Views: 8
  • ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

    ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

    ಜಗದ್ಗುರುಗಳ, ಸಮಾಜದ ಮುಖಂಡರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ ಮಾಡಿದ ಸಾವಿರಾರು ಜನರು.

    ಯಾದಗಿರಿ:‌ ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂದುತ್ವಗಳನ್ನು ರದ್ದು ಪಡಿಸುವುದು ಸೇರಿದಂತೆಯೇ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆ ವಿರಾಟ ಸ್ವರೂಪ ಪಡೆದು ವಾಲ್ಮೀಕಿಗಳ ಕೂಗು  ಸರ್ಕಾರದ ಕಿವಿ ಗಡಚುವಂತೆಯೇ ಮಾಡಿತು.

    ಅತಿ ಹೆಚ್ಚಿನ ಜನಸಂಖ್ಯೆ ಹೊಂದಿರುವ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಈ ಎಲ್ಲ ಬೇಡಿಕೆಗಳಿಗೆ ಒತ್ತಾಯಿಸಲು ನೂರಾರು ಊರುಗಳಿಂದ ಬಂದಿದ್ದ ಸಾವಿರಾರು ವಾಲ್ಮೀಕಿ ಸಮುದಾಯ ಜನರು ಇಲ್ಲಿನ ತಹಸಿಲ್ ಕಚೇರಿ ಬಳಿ ಜಮಾಗೊಂಡರು.

    ಕೈ,ಕೊರಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಧ್ವಜ ಹಾಗೂ ಕರವಸ್ತ್ರ ಹಿಡಿದ ಅಪಾರ ಜನರು ಬೇಡಿಕೆಗಳಿಗೆ ಆಗ್ರಹಿಸಿ ನಿರಂತರ ಘೋಷಣೆ ಕೂಗಿ ಶಾಸ್ತ್ರಿ ಚೌಕ್ ಮೂಲಕ ಹಾದು ನೇತಾಜಿ ಸುಭಾಸಚಂದ್ರ ಬೋಸ್ ಸರ್ಕಲ್ ಗೆ ಆಗಮಿಸಿದಾಗ ಸಿಡಿದೆದ್ದ ವಾಲ್ಮಿಕಿಗರು ತಮಗಾದ ಅನ್ಯಾಯದ ವಿರುದ್ದ ಸರ್ಕಾರದ ವಿರುದ್ಧ ಭಾರಿ ಧ್ವನಿಯಲ್ಲಿ ಪ್ರತಿಭಟಿಸಿ ಹಕ್ಕುಗಳಿಗಾಗಿ ಒತ್ತಾಯಿಸಿದರು.ದಾವಣಗೇರಿ ಜಿಲ್ಲೆಯ ರಾಜನಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳ ಸಾನಿಧ್ಯದಲ್ಲಿ ಸಮಾಜದ ಉತ್ತರ ಕರ್ನಾಟಕ ಭಾಗದ ಅಧ್ಯಕ್ಷ ಮಾರೆಪ್ಪ ನಾಯಕ್ ಮಗ್ದಂಪುರ, ಜಿಲ್ಲಾಧ್ಯಕ್ಷ ಕೃಷ್ಣಪ್ಪಗೌಡ ಆಲ್ದಾಳ್, ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ  ಚಳುವಳಿ ರಾಜಣ್ಣ, ನಗರಸಭೆ ಸದಸ್ಯ ಹಣಮಂತ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಾಯಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಸಾವಿರಾರು ಇಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆ ಬಂದು ಡಿಸಿ ಕಚೇರಿ ದ್ವಾರದ ಬಳಿ ಸಮಾವೇಶಗೊಂಡರು.

     

    ಈ ವೇಳೆ ಮಾತನಾಡಿದ ಸಾನಿಧ್ಯ ವಹಿಸಿದ್ದ ಗುರುಗಳು ಮತ್ತು ನೇತೃತ್ವ ವಹಿಸಿದ್ದ ಮುಖಂಡರು ಮಾತನಾಡಿ, ಹಿಂದುಳಿದ ಪ್ರವರ್ಗ 1ರಲ್ಲಿ ಬರುವ ಅಂಬಿಗಾ, ಬೆಸ್ತಾ, ಕಬ್ಬಲಿಗಾ, ಮತ್ತು ಕೋಲಿ ಜನಾಂಗದ ವೃತ್ತಿ ಸೂಚಕ ತಳವಾರರನ್ನು ಹಿಂದುಳಿದ ಪ್ರವರ್ಗ 1ರ ಕ್ರಮ ಸಂಖ್ಯೆ 6 ರ ಬೆಸ್ತಾರ 38 ನೇ ಪದವಾಗಿ ಸೇರಿಸಬೇಕು, ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ, ಸಿಂದುತ್ವಗಳು ಪಡೆದುಕೊಳ್ಳುತ್ತಿರುವುದನ್ನು ತಡೆಯಬೇಕು ಮತ್ತು ಉಚ್ಛ ನ್ಯಾಯಾಲಯದ ಆದೇಶದಂತೆಯೇ  ನಕಲಿ ಜಾತಿ ಪ್ರಮಾಣ ಪತ್ರ ನೀಡುತ್ತಿರುವ ತಹಸಿಲ್ದಾರ, ಸಿಬ್ಬಂದಿಗಳ ಹಾಗೂ  ಪಡೆದುಕೊಳ್ಳುತ್ತಿರುವವರ ಮೇಲೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದರು.

     

    ಈ ಸಮಾಜದ ಕಾಲೇಜು,ಉನ್ನತ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ವಿದ್ಯಾರ್ಥಿವೇತನ,ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಈ ಇಲಾಖೆಗೆ ಕೂಡಲೇ ಸಚಿವರನ್ನು ನೇಮಿಸಬೇಕು, ಬುಡಕಟ್ಟು ವಿವಿ ಸ್ಥಾಪಿಸಿ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದರು.
    ಈ ಜನಾಂಗದ ಜನರ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ಥಿತಿ,ಗತಿ ಅಧ್ಯಯನಕ್ಕೆ ಅನುದಾನ ನೀಡಬೇಕು, ದೌರ್ಜನ್ಯ, ದಬ್ಬಾಳಿಕೆ, ಕೊಲೆ,ಅತ್ಯಾಚಾರ ಹೀಗೆ ವಿವಿಧ ಅಹಿತಕರ ಘಟನೆಗಳು ಈ ಸಮಾಜದ ಮೇಲೆ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ತಡೆಯಬೇಕೆಂದು ಅವರು ಆಗ್ರಹಿಸಿದರು.

     

    ನಿಖರ ಕಾರಣವಿಲ್ಲದೇ ಏಕಾಏಕಿ ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ತೆಗೆಯುವ ಮೂಲಕ ಸಮಸ್ತ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದ್ದು, ಕೂಡಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮತ್ತು ಕೆಕೆ ಭಾಗದ ಕಲಬುರಗಿ,ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ಟಿಎಸ್ ಪಿ ಅನುದಾನವನ್ನು ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಬಳಸದೇ ಬೇರೆ ಕಡೆ ಬಳಕೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ವಿವಿಧ ತಾಲೂಕುಗಳ ಅಧ್ಯಕ್ಷ ಮತ್ತು ಪದಾಧಿಕಾರಿಗಳಾದ ಸಾಹೇಬಗೌಡ ಗೌಡಗೇರಾ,ಶ್ರವಣಕುಮಾರ ನಾಯಕ, ಮರೆಪ್ಪ ಪ್ಯಾಟಿ, ಭೀಮಣ್ಣಗೌಡ ಯಮನೂರು, ಬಸಣ್ಣಗೌಡ ಕಡದ್ರಾಳ, ಕಾಶಪ್ಪ ನಾಯಕ, ತಿಮ್ಮಣ್ಣ ನಾಯಕ್ ಸೇರಿದಂತೆಯೇ ಸಾವಿರಾರು‌ ಜನರು ಭಾಗವಹಿಸಿದ್ದರು. ಡಿಸಿ ಹರ್ಷಲ್ ಭೋಯರ್ ಅವರಿಗೆ ಶ್ರೀ ಸದ್ಗುರು ರಂಗಲಿಂಗೇಶ್ವರ ಮಠದ‌ ಪೀಠಾಧಿಪತಿ ಶ್ರೀ ತ್ರಿಶೂಲಪ್ಪ ಶರಣರು ಮುಡಬೂಳ ಶ್ರೀಗಳು ಸೇರಿದಂತೆಯೇ ಮುಖಂಡರು ಮನವಿ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಶ್ರೀ ತ್ರೀಶೂಲಪ್ಪ ಶರಣರು ಮುಡಬೂಳ. ಬೀದರ ಜಿಲ್ಲಾ ಅಧ್ಯಕ್ಷ ದಶರಥ ನಾಯಕ. ಬಳ್ಳಾರಿ ಜಿಲ್ಲಾ ಅಧ್ಯಕ್ಷ ಯರ್ರಿಸ್ವಾಮಿ. ವಿಜಯ ನಗರ ಜಿಲ್ಲಾ ಅಧ್ಯಕ್ಷ ಜಂಬಯ್ಯ ನಾಯಕ. ರಾಯಚೂರು ಜಿಲ್ಲಾ ಅಧ್ಯಕ್ಷ ರಘುವೀರ ನಾಯಕ ಹಾಗೂ ಶಾರದ ಹುಲಿನಾಯಕ. ಬಿಜಾಪೂರ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಕೌಲಗಿ. ಭೀಮರಾಯ ಠಾಣಗುಂದಿ. ಅಂಬುನಾಯಕ. ಟಿ ಎನ್ ಬೀಮುನಾಯಕ. ಸಾಬು ಬಗ್ಲಿ. ರಮೇಶ ದೊರೆ. ಗಂಗಾಧರ ನಾಯಕ. ವೆಂಕಟೇಶ ಬೇಟೆಗಾರ. ಹಣಮಂತ್ರಾಯ ದೊರೆ ವನದುರ್ಗಾ. ಶೇಖರ ದೊರೆ. ಪ್ರಭು ಹುಲಿನಾಯಕ. ವೆಂಕಟೇಶ ಬೈರಮಡಗಿ. ಚಂದ್ರಕಾಂತ ಕವಲ್ದಾರ. ನರಸಪ್ಪ ಬೂಡಯ್ಯನೋರ. ವಿಶ್ವನಾಥ ನಾಯಕ. ಹಣಮಂತ ನಾಯಕ. ಸಿದ್ದುನಾಯಕ ಹತ್ತಿಕುಣಿ.ದೊಡಯ್ಯ ನಾಯಕ ಹಳಿಗೇರ. ಹಣಮಂತ ನಾಯಕ ಖಾನಹಳ್ಳಿ. ಮಲ್ಲಮ್ಮ ಕೋಮರ. ರೇಣುಕಾ ಮೋನಪ್ಪ ಹಳಿಗೇರ ಸೇರಿದಂತೆಯೇ ಕಲ್ಯಾಣ ಕರ್ನಾಟಕದ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಯಾದಗಿರಿ ಜಿಲ್ಲೆಯ ವಾಲ್ಮೀಕಿ ಸಮುದಾಯದ ಮುಖಮಡರು ಸಮಾಜದ ಭಾಂದವರು ಉಪಸ್ಥಿತರಿದ್ದರು.
    apvc-iconPost Views: 221
  • ಕಾರ್ಮಿಕರ ಕೊರತೆ: ಕೃಷಿ ಕ್ಷೇತ್ರದಲ್ಲಿ ತಲೆದೋರಿದೆ ಅಸ್ಥಿರತೆ

    ಕಾರ್ಮಿಕರ ಕೊರತೆ: ಕೃಷಿ ಕ್ಷೇತ್ರದಲ್ಲಿ ತಲೆದೋರಿದೆ ಅಸ್ಥಿರತೆ

    ರಾಯಚೂರು: ಕೃಷಿ ಕ್ಷೇತ್ರದಲ್ಲಿ ದಿನೇದಿನೇ ತೀವ್ರಗೊಳ್ಳುತ್ತಿರುವ ಕಾರ್ಮಿಕರ ಕೊರತೆ ಬಗ್ಗೆ ಲೋಕಸಭೆಯಲ್ಲಿ ಗಂಭೀರ ಚಿಂತನೆ ವ್ಯಕ್ತಪಡಿಸಿದ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ, ಇದು ರೈತರ ಜೀವನೋಪಾಯ ಹಾಗೂ ದೇಶದ ಆಹಾರ ಭದ್ರತೆಗೆ ದೊಡ್ಡ ಸವಾಲಾಗಿದೆ ಎಂದು ಎಚ್ಚರಿಸಿದರು.

    ಸಂಸದರು ತಿಳಿಸಿದಂತೆ, ಕಳೆದ ಐದು ವರ್ಷಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಕಾರ್ಮಿಕರ ತೊಡಗುವಿಕೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಸ್ವಲ್ಪ ಮಟ್ಟಿಗೆ ಇಳಿದಿರುವುದಾದರೂ, ನೆಲಮಟ್ಟದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ವಿಶೇಷವಾಗಿ ಬಿತ್ತನೆ ಮತ್ತು ಕೊಯ್ಲಿನ ಹಂತಗಳಲ್ಲಿ, ಕರ್ನಾಟಕದ ಬಹುತೇಕ ಭಾಗಗಳಂತೆಯೇ ತಮ್ಮ ಕ್ಷೇತ್ರದಲ್ಲೂ ರೈತರು ಕಾರ್ಮಿಕರ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರಿಂದ ಉತ್ಪಾದಕತೆ ಹಾಗೂ ರೈತರ ಆದಾಯದ ಮೇಲೆ ನೇರವಾಗಿ ಕೆಟ್ಟ ಪರಿಣಾಮ ಬೀರುತ್ತಿದೆ.

    ಕೇಂದ್ರ ಸರ್ಕಾರ ಕೃಷಿ ಕಾರ್ಮಿಕರನ್ನು ಬಲಪಡಿಸಲು ಮತ್ತು ಶಾಶ್ವತ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಬದ್ಧವಾಗಿದೆ ಎಂದು ಸಂಸದರು ತಿಳಿಸಿದರು. ಇದಕ್ಕಾಗಿ ಕೌಶಲ್ಯಾಭಿವೃದ್ಧಿ, ಯಾಂತ್ರೀಕರಣಕ್ಕೆ ಬೆಂಬಲ, ಆರ್ಥಿಕ ಪ್ರೋತ್ಸಾಹ ಹಾಗೂ ಆಧುನಿಕ ತಂತ್ರಜ್ಞಾನ ಒದಗಿಸುವ ಹಲವು ಕಾರ್ಯಕ್ರಮಗಳು ಜಾರಿಯಲ್ಲಿವೆ. ಕೃಷಿ ಯಾಂತ್ರೀಕರಣ ಉಪಮಿಷನ್‌ (SMAM), ಕೃಷಿ ವಿಜ್ಞಾನ ಕೇಂದ್ರಗಳು (KVKs) ಮತ್ತು ಗುರಿ ಸಾಧಿಸುವ ಕೌಶಲ್ಯಾಭಿವೃದ್ಧಿ ಯೋಜನೆಗಳಂತಹ ಕ್ರಮಗಳನ್ನು ಅವರು ಸ್ವಾಗತಿಸಿದರೂ, ಇನ್ನಷ್ಟು ಬಲಿಷ್ಠ ಕ್ರಮಗಳ ಅಗತ್ಯವಿದೆ ಎಂದರು.

    ಸಂಸದರು ಸರ್ಕಾರಕ್ಕೆ ಒತ್ತಾಯಿಸಿದ್ದು, ಯಾಂತ್ರೀಕರಣವನ್ನು ವೇಗಗೊಳಿಸಿ, ಆರ್ಥಿಕ ಪ್ರೋತ್ಸಾಹಗಳನ್ನು ಸಮಯಕ್ಕೆ ತಕ್ಕಂತೆ ನೀಡುವುದು ಮತ್ತು ಆಧುನಿಕ ಕೃಷಿ ಉಪಕರಣಗಳನ್ನು ಸಣ್ಣ ಹಾಗೂ ಅಲ್ಪಭೂಸ್ವಾಮ್ಯ ರೈತರಿಗೆ ತಲುಪುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು. ಜೊತೆಗೆ, ಗ್ರಾಮೀಣ ಯುವಕರಿಗೆ ಕೃಷಿ ಕ್ಷೇತ್ರವನ್ನು ಆಕರ್ಷಕ ಜೀವನೋಪಾಯವನ್ನಾಗಿಸಲು ಕೌಶಲ್ಯಾಭಿವೃದ್ಧಿ, ನವೀನತೆ ಮತ್ತು ಮೂಲಸೌಕರ್ಯ ಹೂಡಿಕೆಗಳ ಮೇಲೆ ಹೆಚ್ಚು ಗಮನ ಹರಿಸಬೇಕೆಂದು ಹೇಳಿದರು.

    ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿದ ರಾಯಚೂರು ಜಿಲ್ಲೆಗೆ ಈ ಯೋಜನೆಗಳಲ್ಲಿ ವಿಶೇಷ ಸ್ಥಾನಮಾನ ದೊರಕಬೇಕು ಎಂದು ಅವರು ಒತ್ತಾಯಿಸಿದರು. ಕಾರ್ಮಿಕರ ಕೊರತೆಯಿಂದ ನಮ್ಮ ರೈತರು ಹಿಂದುಳಿಯಲು ಅವಕಾಶ ನೀಡಲಾಗದು. ಶಾಶ್ವತ ಪರಿಹಾರ ದೊರೆಯುವವರೆಗೂ ನಾನು ಈ ವಿಚಾರವನ್ನು ಮುಂದುವರಿಸುತ್ತೇನೆ, ಎಂದು ಸಂಸದ ಜಿ. ಕುಮಾರ ನಾಯಕ ಸ್ಪಷ್ಟಪಡಿಸಿದರು.

    apvc-iconPost Views: 6