Blog

  • ಮೈಕ್ ಡಿ.ಜೆ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಸಭೆ

    ಮೈಕ್ ಡಿ.ಜೆ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಸಭೆ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ಮುಂಜಾನೆ 6 ರಿಂದ ಸಾಯಾಂಕಾಲ 10 ಗಂಟೆಯೊಳಗೆ ಸೌಂಡ ಸಿಸ್ಟಮ್ ಆಳವಡಿಸುವದು. ಇದಕ್ಕೆ ಮೀರಿ ನಡೆದರೆ ಜೈಲು ಶಿಕ್ಷೆ ಮತ್ತು ಭಾರಿ ಜುಲ್ಮಾನೆಗೂ ಹೊಣೆಗಾರರಾಗಿರುತ್ತೀರಿ ಎಂದು ಗುರುಮಠಕಲ್ ಪಿ. ಐ. ಈರಣ್ಣ ದೊಡ್ಡಮನಿ ಹೇಳಿದರು.

    ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುಮಠಕಲ್ ವಲಯ ಸೌಂಡ್ ಮತ್ತು ಲೈಟಿಂಗ್ ಮಾಲೀಕರ ಕ್ಷೇಮಭಿವೃದ್ಧಿ ಸಂಘದ ಸದಸ್ಯರೊಂದಿಗೆ ಅವರು ಸಮಾಲೋಚನೆ ನಡೆಸಿ ಸರಕಾರದಿಂದ ಹೊರಡಿಸಿದ ನಡಾವಳಿ ಕುರಿತು ಮನವರಿಕೆ ಮಾಡಿದರು.

    ಗಣೇಶ ಹಬ್ಬದಲ್ಲಿ ಪ್ರತಿ ಬಡಾವಣೆ ಸೇರಿದಂತೆ ಮುಖ್ಯ ಬೀದಿಗಳಲ್ಲಿ ಗಣೇಶ ಕೂಡಿಸಿದ ಸಂಧರ್ಭದಲ್ಲಿ ಸರಕಾರದ ನಿಯಮಾವಳಿಯಂತೆ ಸಮಯ ಪಾಲನೆ ಮಾಡಿ ಸೌಂಡ್ ಬಳಸಬೇಕು.

    ಸಾರ್ವಜನಿಕರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಸೌಂಡ್ ಬಳಸದೆ ಹಾಗೂ ವಿಸರ್ಜನೆ ಸಮಯದಲ್ಲಿ ರಾತ್ರಿ 10-11 ಘಂಟೆಯ ಒಳಗೆ ಮೆರವಣಿಗೆ ಮುಗಿಯುವಂತೆ ನೋಡಿಕೊಳ್ಳಬೇಕು ಕಟ್ಟು ನಿಟ್ಟಾಗಿ ಹೇಳಿದರು.

    ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂಧಿ ಶಿವರಾಮ್ ರೆಡ್ಡಿ, ಮೈಕ್ ಸಂಘದ ಪಾಪಣ್ಣ ಎ ಅಧ್ಯಕ್ಷ, ಅಬ್ದುಲ್ ರೌಫ್ ಗೌ. ಉಪಾಧ್ಯಕ್ಷ, ಮಲ್ಲೇಶಪ್ಪ ಮಳಖೆಡ್ಕರ್, ಮೋಹನ್ ಕುಮಾರ್ ಬುರ್ಬುರೆ ಉಪಾಧ್ಯಕ್ಷ, ರಮೇಶ ಚಕ್ಕೊಲೆ ಖಜಾಂಚಿ, ನರಸಪ್ಪ ಕಾವಲಿ, ನರಸಿಂಹಲು ಗಂಗನೋಳ್, ರಮೇಶ ಅಲ್ಲಿಪುರ, ರಾಮು ಚಾವ್ಲ, ಸುರೇಶ ಸ್ವಾಮಿ ಕಾಕಲವಾರ, ವಿಜಯ ಬೆಟ್ಟದಹಳ್ಳಿ, ಮನೋಹರ ಟಪ್ಪ, ರವಿ ಡಿ. ಜೆ ಬುದುರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    apvc-iconPost Views: 396
  • ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ

    ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ

    ಕಿಲ್ಲನಕೇರಾ: ಒಣಬೇಸಾಯಕ್ಕೆ ಅನುಕೂಲವಾಗುವಂತೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿದ್ದ ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಕಿಲ್ಲನಕೇರಾ ಗ್ರಾಮದಲ್ಲಿ ವಿಫಲವಾಗಿದೆ. ಸಣ್ಣ ನೀರಾವರಿ ಇಲಾಖೆಯ ಅವೈಜ್ಞಾನಿಕ ನಿರ್ಮಾಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕೆರೆಗೆ ನೀರು ಸೇರದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ನೇತೃತ್ವದಲ್ಲಿ ರೈತರು ಕೆರೆಯ ತೀರದಲ್ಲಿ ಪ್ರತಿಭಟನೆ ನಡೆಸಿ, ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದರು. ಯೋಜನೆ ಇದ್ದೂ, ನೀರು ಬಂದಿಲ್ಲ; ಅಧಿಕಾರಿಗಳ ನಿರ್ಧಾರದಿಂದ ರೈತರ ಜೀವನ ಹಾಳಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಭರ್ಜರಿ ಮಳೆಯಿಂದ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಭೀಮಾ ನದಿಗಳು ತುಂಬಿ ಹರಿಯುತ್ತಿದ್ದರೂ, ಕಿಲ್ಲನಕೇರಾ ಗ್ರಾಮದ ಮೂರು ಕೆರೆಗಳು ಖಾಲಿಯಾಗಿವೆ. ಕೆರೆಗೆ ಪೈಪ್‌ಲೈನ್ ಇದ್ದರೂ, ಕೆಲವರ ಅರ್ಜಿಯ ಆಧಾರದಲ್ಲಿ ಇಲಾಖೆಯವರು ನೀರು ಬಿಡದೇ ತಡೆಹಿಡಿದಿರುವುದಾಗಿ ರೈತರು ಆರೋಪಿಸಿದರು.

    ಪ್ರತಿಭಟನೆಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಮರೆಪ್ಪ ನಾಟೇಕಾರ ಸೇರಿದಂತೆ ಅನೇಕ ರೈತರು ಹಾಗೂ ಗ್ರಾಮಸ್ಥರು ಭಾಗವಹಿಸಿದರು.

    apvc-iconPost Views: 13
  • ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ

    ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ

    ದೋರನಹಳ್ಳಿ:  ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾ ಸ್ವಾಮೀಜಿ ಹೇಳಿದರು.

    ದೋರನಹಳ್ಳಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ಶ್ರವಾಣ ಮಾಸದ ನೂಲ ಹುಣ್ಣಿಮೆ ಹಿನ್ನಲೆಯಲ್ಲಿ ವಿಶ್ವಕರ್ಮ ಸಮಾಜದಿಂದ ನಡೆದ ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಆಶಿರ್ವಚನ ನೀಡಿ ಮಾತನಾಡಿದರು.ಮನುಷ್ಯ ಹುಟ್ಟುವಾಗ ಸಂಸ್ಕಾರ ರಹಿತನಾಗಿ ಬರುತ್ತಾನೆ. ನಂತರ ಸಂಸ್ಕಾರ ಪಡೆದುಕೊಂಡು ಶ್ರೇಷ್ಠ ವ್ಯಕ್ತಿ ಆಗುತ್ತಾನೆ. ಹಾಗೆ ಸಂಸ್ಕಾರ ಪಡೆದು ಶ್ರೇಷ್ಠ ವ್ಯಕ್ತಿಯಾಗಿಸುವ ಶಕ್ತಿ ಗಾಯತ್ರಿ ಮಂತ್ರಕ್ಕಿದೆ. ಗಾಯತ್ರಿ ಮಂತ್ರ ಕಲಿಯುವ ಕಾಲಘಟ್ಟವೇ ಉಪನಯನ ಅಥವಾ ಬ್ರಹ್ಮಪದೇಶ. ಎಂಟನೇ ವರ್ಷಕ್ಕೆ ಉಪನಯನ ಮಾಡಬೇಕು, ಅದು ಸಾಧ್ಯ ಆಗದಿದ್ದಲ್ಲಿ ಎಂಟರಿAದ ಹದಿನಾರರ ಒಳಗೆ ಮಾಡಬೇಕು. ಅದು ಅವರ ಅನುಕೂಲ ಅಥವಾ ಬೌದ್ಧಿಕ ಮಟ್ಟ ಅವಲಂಬನೆ ಆಗಿದೆ. ಉಪನಯನ ಮಾಡುವಾಗ ಸಮ ವರ್ಷ ಅಥವಾ ವಿಷಮ ಪ್ರಶ್ನೆ ಇಲ್ಲ ಎಂದರು. ಗಾಯತ್ರಿ ಮಂತ್ರ ಬೋಧನೆ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಇದನ್ನು ಪಡೆದುಕೊಂಡು ಪಠಣ ಮಾಡುವ ವ್ಯಕ್ತಿ ಶ್ರೇಷ್ಠ ವ್ಯಕ್ತಿ ಆಗುತ್ತಾನೆ, ಗೆಲುವು ಪಡೆಯುತ್ತಾನೆ, ತೇಜಸ್ಸು ಪಡೆಯುತ್ತಾನೆ. ಅಂತಹ ಗಾಯತ್ರಿ ಮಂತ್ರದ ಮಹಿಮೆಯನ್ನು ವಿವರಿಸಿದರು.

    ಎಲ್ಲ ಧರ್ಮಗಳಲ್ಲೂ ಮಾನವೀಯ ಮೌಲ್ಯಗಳಿವೆ. ಅವುಗಳನ್ನು ತಿಳಿದುಕೊಂಡು ಬದುಕಿ, ಸಮಾಜದ ಶ್ರೇಯಸ್ಸಿಗೆ ಶ್ರಮಿಸಬೇಕು. ವಿಶ್ವಶಾಂತಿ ಬಯಸಿ, ಜಗತ್ತಿನ ಕಲ್ಯಾಣಕ್ಕಾಗಿ ಧಾರ್ಮಿಕ ಕಾರ್ಯ ಕಲಾಪ ಸತತವಾಗಿ ಸಾಗಬೇಕು ಎಂದರು. ಶ್ರಾವಣ ಮಾಸವು ವಿಶಿಷ್ಠ ಮಾಸವಾಗಿದ್ದು, ಪ್ರತಿ ದಿನವೂ ವೈಶಿಷ್ಟ್ಯವನ್ನು ಹೊಂದಿದೆ. ಶ್ರಾವಣದಲ್ಲಿ ಭಗವಂತನ ಪೂಜೆ, ಕೀರ್ತನೆ ಮತ್ತು ಶ್ರವಣದಿಂದ ಅಜ್ಞಾನ ನಶಿಸಿ, ಜ್ಞಾನವು ಸಿಗಲಿದೆ’ ಎಂದು ಹೇಳಿದರು.

    ವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ ಪ್ರಾಸ್ತಾವಿಕವಾಗಿ ಮಾತನಾಡಿದರು ದೇವಸ್ಥಾನದ ಅರ್ಚಕ ಮನೋಹರ ಪತ್ತಾರ ಅವರಿಂದ ಶ್ರೀಕಾಳಿಕಾದೇವಿ ಮೂರ್ತಿಗೆ ಪೂಜೆ, ಮಹಾಭಿಷೇಕ, ಕುಂಕುಮಾರ್ಚನೆ ,ಆರುತಿ, ಅಲಂಕಾರ ಪೂಜೆ, ತುಪ್ಪದಾರುತಿ, ಮಂಗಳಾರುತಿ ಸೇರಿದಂತೆ, ಘಂಟೆ- ಜಾAಗಟೆಗಳೊAದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.ನಂತರ ವಿಶ್ವಕರ್ಮ ಸಮಾಜದ ಬಾಂಧವರು ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮವನ್ನು ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗಿತು. ನಂತರ ಮಹಾ ಪ್ರಸಾದ ನೆರವೇರಿತು.

    ಈ ಸಂದರ್ಭದಲ್ಲಿವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ, ಉಪಾಧ್ಯಕ್ಷ ಮಹೇಶ ಡಿ.ಪತ್ತಾರ,ಮತ್ತು ಸಮಾಜದ ಹಿರಿಯ ಮುಖಂಡರಾದ ಕಾಳಪ್ಪ ಪತ್ತಾರ,ಮನೋಹರ ಪತ್ತಾರ,ಮಲಕಪ್ಪ ಕಂಚಗಾರ,ಮಲ್ಲೇಶಪ್ಪ ಕಂಬಾರ,ಚAದ್ರಶೇಖರ ಪತ್ತಾರ,ಕಾಳಪ್ಪ ಕಂಚಗಾರ,ಇAದ್ರಪ್ಪ ಕಂಚಗಾರ,ಮಾನಪ್ಪ ಕಂಬಾರ,ಗುರುನಾಥ ಕAಚಗಾರ, ಮಹೇಶ ಕಂಚಗಾರ,ವಿರೇಶ ಕಂಬಾರ,ಕಾಶಿನಾಥ ಕಂಚಗಾರ ಮುAತಾದ ಸಮಾಜದ ಬಂಧುಗಳು ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡಿದ್ದರು.

    apvc-iconPost Views: 20
  • ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ

    ಯಾದಗಿರಿ: ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ವಿಳಂಬ ಉಂಟಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೃಷಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

    ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರ ಸರ್ಕಾರ ಯೂರಿಯಾ ಮತ್ತು ಡಿಎಪಿ ರಸಗೊಬ್ಬರವನ್ನು ನಿರೀಕ್ಷೆಗೂ ಮೀರಿ ಪೂರೈಸಿದ್ದರೂ, ರಾಜ್ಯ ಸರ್ಕಾರವು ರೈತರಿಗೆ ಸಮಯಕ್ಕೆ ಸರಿಯಾಗಿ ವಿತರಣೆ ಮಾಡಲು ವಿಫಲವಾಗಿದ್ದೂ, ಸಿಎಂ ಸಿದ್ದರಾಮಯ್ಯನವರು ಕೇಂದ್ರದಿಂದ ಗೊಬ್ಬರ ಬಾರದಂತೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಗನೂರ ಆರೋಪಿಸಿದರು.

    ರಾಜ್ಯದಲ್ಲಿ ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ, ಏಕಕಾಲದಲ್ಲಿ ಬಿತ್ತನೆ ಪ್ರಾರಂಭವಾಗದೆ, ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ಯೂರಿಯಾ ಮತ್ತು ಬೀಜಗಳ ಪ್ರಮಾಣವನ್ನು ಮುಂಚಿತವಾಗಿ ಅಂದಾಜು ಮಾಡಬೇಕಿತ್ತು. ಆದರೆ, ಗೋದಾಮುಗಳಲ್ಲಿ ಸರಿಯಾಗಿ ದಾಸ್ತಾನು ಮಾಡದೆ, ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳುತ್ತಿದೆ.

    ಗ್ಯಾರಂಟಿ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವ ಸರ್ಕಾರ, ಎಲ್ಲೆಡೆ ಕಾರ್ಯಕ್ರಮಗಳನ್ನು ಆಯೋಜಿಸಿ ನಮ್ಮ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ, ರೈತರ ರಸಗೊಬ್ಬರದ ಸಂಕಷ್ಟ ಇವರಿಗೆ ಕಾಣಿಸುತ್ತಿಲ್ಲ.ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯದ ಫಲವನ್ನು ರೈತರು ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕೃಷಿ ಸಚಿವರು ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳುವುದು ವಾಸ್ತವಿಕತೆಗೆ ದೂರವಾಗಿದೆ. ಜಿಲ್ಲೆಗಳ ಪರಿಸ್ಥಿತಿ ಅರಿತುಕೊಳ್ಳಲು ಅವರು ಎಲ್ಲಿಗೂ ಭೇಟಿ ನೀಡಿಲ್ಲ. ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದರೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸರ್ಕಾರದ ಗಮನಕ್ಕೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದರು.

    ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗದು. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಟೀಕಿಸಿದರು.

    ಇದು ರೈತ ವಿರೋಧಿ ಸರಕಾರ, ಹಗರಣಗಳ ಸರಕಾರ. ರೈತರ ಕುರಿತು ಜವಾಬ್ದಾರಿಯಿಂದ ಮಾತನಾಡದೆ ಕೇಂದ್ರವನ್ನು ದೂಷಿಸಿದರೆ ಒಳ್ಳೆಯದಾಗದು ಎಂದ ಅವರು ಕೂಡಲೇ ರೈತರಿಗೆ ರಸಗೊಬ್ಬರದ ಸಮಸ್ಯೆಯನ್ನು ಪರಿಹರಿಸುವಲ್ಲಿ ಮುಂದಾಗಬೇಕು ಇಲ್ಲವಾದಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    apvc-iconPost Views: 18
  • ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

    ಸತ್ಯಕಾಮ ವಾರ್ತೆ ಯಾದಗಿರಿ:

    ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಠಾಣಾಧಿಕಾರಿ ಮಂಜನಗೌಡ ರಕ್ಷಾ ಬಂಧನ ಸ್ವೀಕರಿಸಿ ಮಾತನಾಡಿದ ಅವರು ಹಬ್ಬವು ಜಾತಿ,ಬೇಧ ಹೋಗಲಾಡಿಸಿ ಸಹೋದರತೆಯ ಭಾವವನ್ನು ಬಿಂಬಿಸುವುದಾಗಿದೆ. ನಮ್ಮ ದೇಶದಲ್ಲಿ ಸಂಬಂಧಗಳಿಗಿರುವ ಮಹತ್ವ ಜಗತ್ತಿನ ಯಾವ ದೇಶದಲ್ಲಿಯೂ ಕಂಡು ಬರುವುದಿಲ್ಲ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್ ಮಾತನಾಡಿ ಅಣ್ಣತಂಗಿಯರ ಹಬ್ಬ, ಅಕ್ಕತಮ್ಮಂದಿರ ಹಬ್ಬ. ಅಕ್ಕತಂಗಿಯರ ರಕ್ಷಣೆಗಾಗಿ ನಡುಕಟ್ಟಿ ನಿಲ್ಲುವ ಅಣ್ಣತಮ್ಮಂದಿರನ್ನು ಪ್ರೀತಿಯಿಂದ ಹರಸಿ ಹಾರೈಸುವ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನು ಎಲ್ಲ ಅಕ್ಕತಂಗಿಯರು ತಮ್ಮ ಅಣ್ಣತಮ್ಮಂದಿರಿಗಾಗಿ ಆಚರಿಸುತ್ತಾರೆ. ಅಣ್ಣತಮ್ಮಂದಿರ ಕ್ಷೇಮ ಅವರ ಆರೋಗ್ಯ ಆಯಸ್ಸು ಚೆನ್ನಾಗಿರಲೆಂದು ಪ್ರಾರ್ಥಿಸುತ್ತಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ,ಪ್ರಧಾನ ಕಾರ್ಯದರ್ಶಿ ರಮಾದೇವಿ ಕಾವಲಿ, ಕಾರ್ಯದರ್ಶಿ ಶಕುಂತಲಾ ಗುಜನೂರು,ಉಪಾಧ್ಯಕ್ಷೆ ಮಂಜುಳಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು..

    apvc-iconPost Views: 70
  • ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಲವೀಶ್ ಒರ್ಡಿಯಾ ಭೇಟಿ

    ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಲವೀಶ್ ಒರ್ಡಿಯಾ ಭೇಟಿ

    ಯಾದಗಿರಿ (ಗುರುಮಠಕಲ್) : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಕ್ಕಳು ಹಾಗೂ ತಾಯಂದಿರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ತಯಾರಿಕಾ ಘಟಕದಲ್ಲಿ ಗುಣಮಟ್ಟ ಹಾಗೂ ಶುಚಿತ್ವ ಕಾಪಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಲವೀಶ್ ಒರ್ಡಿಯಾ ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಮಕ್ಕಳ ಹಾಗೂ ಮಹಿಳೆಯರ ಆರೋಗ್ಯ ರಕ್ಷಣೆ ಕಾಪಾಡುವ ನಿಟ್ಟಿನಲ್ಲಿ ಯಾದಗಿರಿಯಲ್ಲಿರುವ ಗುರುಮಠಕಲ್ ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅವರು ಯಂತ್ರಗಳ ಸಹಾಯದಿಂದ ಮಕ್ಕಳಿಗೆ ನೀಡಲಾಗುವ ಪೌಷ್ಟಿಕಾಂಶ ಆಹಾರಗಳ ತಯಾರಿಕೆಯನ್ನು ವೀಕ್ಷಿಸಿದರು.

    ಮಹಿಳೆಯರ ತಂಡ ಮಕ್ಕಳಿಗೆ ಅಗತ್ಯವಾಗಿ ಬೇಕಿರುವ ಪೌಷ್ಟಿಕಾಂಶಗಳನ್ನು ಉತ್ಪಾದಿಸುವ ರೀತಿಯನ್ನು ಪರಿಶೀಲಿಸಿದರು. ಅಕ್ಕಿ, ಗೋದಿ, ಹೆಸರು ಬೇಳೆ, ಹೆಸರು ಕಾಳು, ಕಡಲೇ ಬೇಳೆ, ಬೆಲ್ಲ, ಎಣ್ಣೆ ಮುಂತಾದ ವಸ್ತುಗಳ ವರ್ಗೀಕರಣ ಮಾಡುವ ವಿಧಾನವನ್ನೂ ಪರಿಶೀಲಿಸಿದರು. ಆಹಾರ ಧಾನ್ಯಗಳ ಗುಣಮಟ್ಟವನ್ನು ಪರೀಕ್ಷಿಸಿ, ಕಚ್ಚಾವಸ್ತುಗಳ ದಾಸ್ತಾನು ಕ್ರಮವನ್ನು ಸರಿಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.

    ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕದಲ್ಲಿ ಶುಚಿತ್ವ ಹಾಗೂ ಗುಣಮಟ್ಟವನ್ನು ಕಾಪಾಡಿಕೊಂಡಿರುವ ಕುರಿತು ಸಮಾಧಾನ ವ್ಯಕ್ತಪಡಿಸಿದರು.

    ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖಾ ಉಪ ನಿರ್ದೇಶಕ ತಿಪ್ಪಣ್ಣ ಶಿರಸಿಗಿ ಹಾಗೂ ಅಧಿಕಾರಿ ಭೀಮರಾಯ, ಗುರುಮಠಕಲ್ ಸಿ. ಡಿ. ಪಿ. ಓ ಶರಣಬಸವ, ಶಿಶು ಅಭಿವೃದಿ ಯೋಜನಾ ಅಧಿಕಾರಿಗಳು ಸೇರಿದಂತೆ ಮಹಿಳಾ ಪೂರಕ ಉತ್ಪಾದನಾ ಘಟಕದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

    apvc-iconPost Views: 55
  • ಚೆನ್ನಾರೆಡ್ಡಿಗೌಡ ಬಿಳಾರ್ ಅಭಿಮಾನಿಗಳಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಕಿಟ್ ವಿತರಣೆ

    ಚೆನ್ನಾರೆಡ್ಡಿಗೌಡ ಬಿಳಾರ್ ಅಭಿಮಾನಿಗಳಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಕಿಟ್ ವಿತರಣೆ

    ಯಾದಗಿರಿ: ಬಿಜೆಪಿ ಮುಖಂಡ ಚೆನ್ನಾರೆಡ್ಡಿಗೌಡ ಬಿಳಾರ್ ಅವರ ಹುಟ್ಟುಹಬ್ಬದ ಅಂಗವಾಗಿ, ಅವರ ಅಭಿಮಾನಿ ಬಳಗದ ವತಿಯಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಿಸಲಾಯಿತು. ಸಮಾಜ ಸೇವೆಯೊಂದಿಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು.

    ನಗರದಲ್ಲಿನ ವೃದ್ದಾಶ್ರಮ ಮತ್ತು ಅನಾಥಾಶ್ರಮಗಳಿಗೆ ಭೇಟಿ ನೀಡಿ, ಅಲ್ಲಿನ ನಿರ್ಗತಿಕರಿಗೆ ಮತ್ತು ವೃದ್ಧರಿಗೆ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಿದರು. ಈ ಕಿಟ್‌ಗಳಲ್ಲಿ ಅಕ್ಕಿ, ದಾಲ್, ಎಣ್ಣೆ, ಸಕ್ಕರೆ, ಬಿಸ್ಕತ್, ತಿಂಡಿಪದಾರ್ಥಗಳು ಸೇರಿದಂತೆ ದಿನಬಳಕೆಯ ಪದಾರ್ಥಗಳಿದ್ದವು.

    ಚೆನ್ನಾರೆಡ್ಡಿಗೌಡ ಬಿಳಾರ್ ಅವರು ಸದಾ ಜನಸೇವೆಗಾಗಿ ಶ್ರಮಿಸುತ್ತಾರೆ. ಅವರ ಸೇವಾ ಮನೋಭಾವದಿಂದ ಪ್ರೇರಿತರಾಗಿ ನಾವು ಸಹ ಸಮಾಜ ಸೇವೆಗೆ ಕೈಜೋಡಿಸಿದ್ದೇವೆ. ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಲ್ಲಿ ವಾಸಿಸುವವರಿಗೆ ಸಹಾಯ ಮಾಡಿದ ಸಂತೋಷವೇ ನಮ್ಮಿಗೆ ನಿಜವಾದ ಹುಟ್ಟುಹಬ್ಬದ ಸಂಭ್ರಮ ಎಂದು ಅಭಿಮಾನಿಗಳು ತಿಳಿಸಿದರು.

    ಈ ಸಂದರ್ಭದಲ್ಲಿ ಬಸವರಾಜ್ ಸಾವೂರ್, ಬಾಬಾ ಖಾನ್, ಮರಿಗೌಡ, ರೆಡ್ಡಿ ತಂಗಡಗಿ, ಚೇತನ್ ಟಿಂಗ್ರೆ, ವಿಶ್ವ ಮುರಗನೂರ್, ಮಾರ್ಥಂಡಪ್ಪ ಸೇರಿದಂತೆ ಇನ್ನಿತರರು ಇದ್ದರು.

    apvc-iconPost Views: 24
  • ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರನಾಗಿ ಮೋಹನ್ ಚೌಹಾಣ್ ನೇಮಕ

    ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರನಾಗಿ ಮೋಹನ್ ಚೌಹಾಣ್ ನೇಮಕ

    ಯಾದಗಿರಿ: ಲಿಂಗೇರಿ ತಾಂಡದ ಮೋಹನ್ ಚೌಹಾಣ್ ಅವರನ್ನು ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ (ರಿ) ಯಾದಗಿರಿ ಜಿಲ್ಲಾ ವಕ್ತಾರನಾಗಿ ನೇಮಕ ಮಾಡಲಾಗಿದೆ.

    ನಗರದ ಹಳೆ ಐಬಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಬಂಗಾರು ಜೆ.ಬಿ. ರಾಠೋಡ ಅವರ ನೇತೃತ್ವದಲ್ಲಿ ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು, ಸಂಘದ ಪರವಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿ, ಬಂಜಾರ ಸಮುದಾಯದ ಅಭಿವೃದ್ಧಿಗೆ ಬದ್ಧತೆಯಿಂದ ಸಹಕರಿಸಬೇಕು ಎಂದು ಹೇಳಿದರು.

    ಹೊಸ ವಕ್ತಾರನ ನೇಮಕಾತಿ ಸಂಘದ ಚಟುವಟಿಕೆಗಳು, ಸಮುದಾಯದ ಹಕ್ಕು-ಹೆಮ್ಮೆಗಳು ಹಾಗೂ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದಲ್ಲಿ ಪ್ರಾಬಲ್ಯದಿಂದ ಧ್ವನಿ ಎತ್ತಲು ನೆರವಾಗಲಿದೆ ಎಂದು ಸಂಘದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

    ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರ. ಕಾರ್ಯದರ್ಶಿ ವಿಜಯ್‌ ಜಾದವ್‌, ಜಿಲ್ಲಾ ಉಪಾಧ್ಯಕ್ಷ ಅಂಬರೇಶ್ ಅರಕೇರಾ, ಯಾದಗಿರಿ, ತಾ. ಅಧ್ಯಕ್ಷ ವಿಕ್ರಮ್ ಚೌಹಾಣ್, ಖಜಾಂಜಿ ಗೋಪಾಲ ಚೌಹಾಣ್, ವಡಗೇರಾ ತಾ. ಅಧ್ಯಕ್ಷ ಗೋವಿಂದ ರಾಠೋಡ, ಯುವ ಘಟಕ ಜಿಲ್ಲಾಧ್ಯಕ್ಷ ರಾಜು ರಾಠೋಡ, ಉಪಾಧ್ಯಕ್ಷ ಕುಮಾರ್, ಮೋಹನ್ ಜಾದವ್, ಪರಮೇಶ್ ಸೌದಾಗರ್ ತಾಂಡ ಸೇರಿದಂತೆ ಹಲವರು ಭಾಗವಹಿಸಿದರು.

    apvc-iconPost Views: 8
  • ವಾಲಿಬಾಲ್: ಕ್ಯಾತನಾಳ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    ವಾಲಿಬಾಲ್: ಕ್ಯಾತನಾಳ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    ಸತ್ಯಕಾಮ ವಾರ್ತೆ ವಡಗೇರಾ:
    ಆಗಸ್ಟ್ 5 ರಂದು ಶಹಾಪುರ ನಗರದಲ್ಲಿ ನಡೆದ ಹೋಬಳಿ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ವಡಗೇರಾ ತಾಲೂಕಿನ ಕ್ಯಾತನಾಳ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

     
    ಮಕ್ಕಳ ಸಾಧನೆ ಕುರಿತು ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಬಾಗ್ಲಿ ಮಾತನಾಡಿದರು.ಗ್ರಾಮೀಣ  ಪ್ರತಿಭೆಗಳಿಗೆ ಕ್ರೀಡೆಯಲ್ಲಿ ಅತಿ ಹೆಚ್ಚು ಸಾಧನೆ ಮಾಡುತ್ತಿದ್ದು ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಇಲಾಖೆಯ ಅಧಿಕಾರಿಗಳು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಮುಂದೆ ನಡೆಯುವ  ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಯಶಾಲಿಯಾಗಿ ಎಂದು ಹಾರೈಸಿದರು.
     
    ಈ ಮಕ್ಕಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಶರಣಪ್ಪ ಬಾಗ್ಲಿ ,ಶಿಕ್ಷಕ ಸಿಬ್ಬಂದಿ ವರ್ಗದವರು ಗ್ರಾಮಸ್ಥರು ಗ್ರಾ ಪಂ ಸದಸ್ಯರಾದ ಮಂಜುಳಾ ಎಚ್. ಬಿ ಪಾಟೀಲ, ಮಲ್ಲಿಕಾರ್ಜುನ್ ಠಾಣಗುಂದಿ , ವಿದ್ಯಾಧರ್ ಜಾಕಾ, ದೇವೇಂದ್ರಪ್ಪ ಗುಡ್ಡೆನೂರು, ಸಿದ್ದಮ್ಮ, ದೇವೇಂದ್ರಪ್ಪ ಮಲ್ಲಳ್ಳಿ, ಸೋಫಿಯಾ ಬೇಗಂ, ಹಾಗೂ ಇನ್ನಿತರರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
    apvc-iconPost Views: 11
  • ಜಿಲ್ಲಾ ಆಸ್ಪತ್ರೆಗೆ ಶಾಸಕ ಪಾಟೀಲ್ ಭೇಟಿ

    ಜಿಲ್ಲಾ ಆಸ್ಪತ್ರೆಗೆ ಶಾಸಕ ಪಾಟೀಲ್ ಭೇಟಿ

    ಯಾದಗಿರಿ: ಇಲ್ಲಿನ‌ ಜಿಲ್ಲಾ ಆಸ್ಪತ್ರೆಗೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಗುರುವಾರ ಭೇಟಿ ನೀಡಿ ಅಲ್ಲಿ ನಡೆದಿರುವ ವಿವಿಧ ಕಾಮಗಾರಿಗಳನ್ನು ಮತ್ತು ಆಸ್ಪತ್ರೆ ಕೋಣೆಗಳನ್ನು ಪರಿಶೀಲಿಸಿದರು.

    ಈ ವೇಳೆ ಹಾಜರಿದ್ದ ಮೆಡಿಕಲ್ ಕಾಲೇಜಿನ ಡಿನ್ ಡಾ.ಸಂದೀಪ್ ಅವರು, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಒಳಚರಂಡಿ ಕೆಲಸ, ಕೋಣೆಗಳ ದುರಸ್ತಿ ಸೇರಿದಂತೆಯೇ ವಿವಿಧ ಕೆಲಸಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.

    ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ, ಅವಶ್ಯವಾಗಿ ಬೇಕಾದ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂದು ಡಿನ್ ಸಂದೀಪ್ ಶಾಸಕರಿಗೆ ಹೇಳಿದರು.

    ರೋಗಿಗಳಿಗೆ ತೊಂದರೆಯಾಗದಂತೆಯೇ ಚಿಕಿತ್ಸೆ ನೀಡಬೇಕು. ಇನ್ನೂ ಏನಾದರೂ ಅವಶ್ಯ ಕೆಲಸಗಳು ಆಗಬೇಕಾದರೇ ತಿಳಿಸಿದರೇ ಸೂಕ್ತಕ್ರಮ ತೆಗೆದುಕೊಳ್ಳಲಾಗುವುದೆಂದು ಶಾಸಕರು ಹೇಳಿದರು.

    ಕ್ಯಾಂಟಿನ್ ಉದ್ಘಾಟನೆ: ಇದೇ ವೇಳೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಕ್ಯಾಂಟಿನ್ ಉದ್ಘಾಟಿಸಿದರು.
    ರುಚಿಯಾದ ಮತ್ತು ಗುಣಮಟ್ಟದ ಉಪಹಾರ ನೀಡಬೇಕೆಂದರು.


    ಡಿಎಸ್ ಡಾ. ರೀಜ್ವಾನ್ ಆಫ್ರಿನ್, ವಿವಿಧ ವಿಭಾಗಳ ವೈದ್ಯರು ಮತ್ತು ಸಿಬ್ಬಂದಿ ಇದ್ದರು.

    apvc-iconPost Views: 215