Blog

  • ಅಗ್ನಿವೀರ್ ನೇಮಕಾತಿ ರ‍್ಯಾಲಿ: ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಬಿಡುಗಡೆ

    ಅಗ್ನಿವೀರ್ ನೇಮಕಾತಿ ರ‍್ಯಾಲಿ: ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಬಿಡುಗಡೆ

    ಯಾದಗಿರಿ: ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿಯು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08 ರಿಂದ ಆಗಸ್ಟ್ 25ರವರೆಗೆ ನಡೆಯಲಿದ್ದು, ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಬಿಡುಗಡೆ ಮಾಡಲಾಗಿದೆ.

    ಆಸಕ್ತರು ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು jomdianarmy.nic.in. ನಲ್ಲಿ ಪ್ರಕಟಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡ್ಗಳನ್ನು ಈಗಾಗಲೇ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ನೀಡಲಾಗಿದೆ.

    ಸೇನೆಯಲ್ಲಿ ಎಲ್ಲಾ ವರ್ಗಗಳ ದಾಖಲಾತಿಗಾಗಿ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಸೇನೆಯಲ್ಲಿ ನಿರ್ದಿಷ್ಟಪಡಿಸಿದ ವರ್ಗಗಳಲ್ಲಿ ದಾಖಲಾತಿಗಾಗಿ ವಯಸ್ಸು, ಶಿಕ್ಷಣ ಅರ್ಹತೆ ಮತ್ತು ಇತರ ಮಾನದಂಡಗಳ ವಿವರಗಳು 12 ಮಾರ್ಚ್ 2025 ರಂದು ಆರ್ಮಿ ರಿಕ್ರೂಟಿಂಗ್ ಸಿಲಿಸ್ ಬೆಳಗಾವಿ ಪ್ರಕಟಿಸಿದ ರ‍್ಯಾಲಿ ಅಧಿಸೂಚನೆಯ ಪ್ರಕಾರ. ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರವೇಶ ಕಾರ್ಡ್ಗಳನ್ನು ಈಗಾಗಲೇ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ನೀಡಲಾಗಿದೆ. ಅಲ್ಲದೆ Join Indian Army Website ನಲ್ಲಿಯೂ ಲಭ್ಯವಿದೆ. ಮತ್ತು ವೈಯಕ್ತಿಕ ಕ್ರಿಯೆಯ ಲಾಗಿನ್ ಮತ್ತು ನೋಂದಾಯಿತ ಇ-ಮೇಲ್ ಐಡಿ ಮೂಲಕ ಸ್ವೀಕರಿಸಲಾಗುತ್ತದೆ.

    ಸಿಇಇ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆ ಮತ್ತು ಅಂತಿಮ ತೀರ್ಮಾನ ಯಾವುದೇ ದಲ್ಲಾಳಿಗಳಿಗೆ ಅಥವಾ ಮಧ್ಯವರ್ತಿಗಳಿಗೆ ಬಲಿಯಾಗದಂತೆ ಅಭ್ಯರ್ಥಿಗಳ ಎಚ್ಚರ ವಹಿಸಬೇಕೆಂದು ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

    apvc-iconPost Views: 100
  • ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಗರ ಜಿಲ್ಲೆ, ಜುಲೈ 30 (ಕರ್ನಾಟಕ ವಾರ್ತೆ) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ / ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ವೆಬ್‍ ಸೈಟ್ http://www.dwdsc.karnataka.gov.in  ಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಕನ್ನಡ ಭಾಷೆಯಲ್ಲಿ ದ್ವಿಪ್ರತಿಗಳಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಅಕ್ಟೋಬರ್‍ 15,2025ರೊಳಗಾಗಿ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560 029 ಅಥವಾ ದೂರವಾಣಿ ಸಂಖ್ಯೆ : 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    apvc-iconPost Views: 47
  • ಮಾನವ ಕಳ್ಳ ಸಾಗಣೆ ಎನ್ನುವುದು ಸಮಾಜಕ್ಕೆ ಅಂಟಿದ ಪಿಡುಗು- ಜಿ.ಆರ್.ಬನ್ನಾಳ

    ಮಾನವ ಕಳ್ಳ ಸಾಗಣೆ ಎನ್ನುವುದು ಸಮಾಜಕ್ಕೆ ಅಂಟಿದ ಪಿಡುಗು- ಜಿ.ಆರ್.ಬನ್ನಾಳ

    ಸತ್ಯಕಾಮ ವಾರ್ತೆ ಸುರಪುರ: 

    ಮಾನವ ಕಳ್ಳ ಸಾಗಣೆ ಎನ್ನುವುದು ಇದೊಂದು ಸಮಾಜಕ್ಕೆ ಅಂಟಿದ ಪಿಡುಗಾಗಿದೆ ಎಂದು ಹಿರಿಯ ನ್ಯಾಯವಾದಿ ಗುರುಪಾದಪ್ಪ ಬನ್ನಾಳ ತಿಳಿಸಿದರು.

    ತಾಲೂಕಿನ ಲಕ್ಷಿö್ಮÃಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ತಾಲ್ಲೂಕ ಕಾನೂನು ಸೇವಾ ಸಮಿತಿ,ತಾಲ್ಲೂಕ ನ್ಯಾಯವಾದಿಗಳ ಸಂಘ ಮತ್ತು ಸರಕಾರಿ ಪ್ರೌಢ ಶಾಲೆ ಲಕ್ಷಿö್ಮÃಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ, ಮಾನವ ಕಳ್ಳ ಸಾಗಣೆಗೆ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗುತ್ತಿದ್ದಾರೆ.ಕಾರಣ ಶಕ್ತಿಶಾಲಿಗಳಲ್ಲದವರು ಎನ್ನುವ ಕಾರಣಕ್ಕೆ ಮಕ್ಕಳನ್ನು ಕಳ್ಳ ಸಾಗಣೆ ಮಾಡುತ್ತಾರೆ,ಇಂತಹ ಸಮಾಜ ವಿರೋಧಿ ಚಟುವಟಿಕೆಯನ್ನು ಯಾರೂ ಬೆಂಬಲಿಸದೆ ಇದನ್ನು ತಡೆಗಟ್ಟಲು ಎಲ್ಲರು ಧ್ವನಿ ಎತ್ತಬೇಕು ಎಂದರು.

    ಇಂತಹ ಪ್ರಕರಣದಲ್ಲಿ ತೊಡಗಿದವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದೆ ಎನ್ನುವುದನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದರು.

    ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಸರಕಾರಿ ಅಭಿಯೋಜಕ ಸುರೇಶ ಪಾಟೀಲ್ ಮಾತನಾಡಿ,ಮಾನವ ಕಳ್ಳ ಸಾಗಣೆ ಎನ್ನುವುದು ಅತ್ಯಂತ ಘೋರ ಅಪರಾಧವಾಗಿದೆ,ಇಂತಹ ಕೃತ್ಯದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಇದೆ.ಅಲ್ಲದೆ ಮಾನವ ಕಳ್ಳ ಸಾಗಾಣಿಕೆ ಯಾಕೆ ಮಾಡುತ್ತಾರೆ ಎಂದರೆ ಕಳ್ಳ ಸಾಗಾಣಿಕೆಯಿಂದ ಅವರನ್ನು ಅತ್ಯಂತ ಕೆಟ್ಟ ಕಾರ್ಯಗಳಿಗೆ ಉಪಯೋಗಿಸಲು ಕಳ್ಳ ಸಾಗಣೆ ಮಾಡುತ್ತಾರೆ.ಯಾರೂ ಇದಕ್ಕೆ ಸಹಕರಿಸಬಾರದು ಇಂತಹ ಘಟನೆ ತಮಗೆ ಎಲ್ಲಿಯಾದರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಅಥವಾ ಸಂಭಂದಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು ಎಂದರು.

    ಮನುಷ್ಯನನ್ನು ಮನುಷ್ಯನೆ ಕಳ್ಳತನ ಮಾಡುವುದು ಮಾನವ ಸಮಾಜ ತಲೆ ತಗ್ಗಿಸುವ ಕಾರ್ಯ ಇದಾಗಿದೆ ಎಂದರು.ಅಲ್ಲದೆ ಮಹಿಳೆಯರು ಮತ್ತು ಮಕ್ಕಳು ಸದಾಕಾಲ ಜಾಗೃತಿ ವಹಿಸುವಂತೆ ಸಲಹೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರು ಹಸೀನಾಬಾನು ಪಟೇಲ್ ವಹಿಸಿ ಮಾತನಾಡಿದರು.ಪ್ರಾಥಮಿಕ ಶಾಲೆಯ ಮುಖ್ಯಗುರು ರಾಯಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕ ಶಿವರಾಜ ನೆರವೇರಿಸಿದರು,ಶಿಕ್ಷಕ ಮಲ್ಲಿಕಾರ್ಜುನತ್ತ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಶಿಕ್ಷಕರು,ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಭೀಮು ಬನಸೋಡೆ ಸೇರಿದಂತೆ ಎಲ್ಲಾ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.

    apvc-iconPost Views: 45
  • ಕರವೇ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ

    ಕರವೇ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ

    ಪಲ್ಲಿಗಳು ಹಳ್ಳಿಗಳಾಗಿಸಿ, ಮೊರಾರ್ಜಿ, ಏಕಲವ್ಯ ಶಾಲೆ ಸಮಸ್ಯೆ ಪರಿಹರಿಸಿ

    ಸಮಸ್ಯೆ ಪರಿಹರಿಸಲು ಹೋರಾಟ ರೂಪಿಸಿ; ಭೀಮುನಾಯಕ ಕರೆ

    ಸುರಪುರ: ಕರವೇ ನಡೆ ಹಳ್ಳಿ ಕಡೆ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲ್ಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಸಲಹೆ ನೀಡಿದರು.

    ಕಸಾಪ ಭವನದಲ್ಲಿ ಬುಧವಾರ ಜರುಗಿದ ಕರವೇ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳು ಬಹಳಷ್ಟಿವೆ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಇನ್ನು ಹೆಚ್ಚಾಗಿದ್ದು, ಇವುಗಳ ಪರಿಹಾರಕ್ಕೆ ಕರವೇ ಕಾರ್ಯಕರ್ತರು ಹೋರಾಟ ರೂಪಿಸಬೇಕು ಎಂದು ತಿಳಿಸಿದರು.

    ವಿಶೇಷವಾಗಿ ಗುರುಮಠಕಲ್ ತಾಲ್ಲೂಕಿನಾದ್ಯಂತ ಅನೇಕ ಸಮಸ್ಯೆಗಳಿವೆ ಅನೇಕ ಹಳ್ಳಿಗಳು ಇನ್ನು ಪಲ್ಲಿ ಎಂದು ತೆಲುಗಿನಲ್ಲಿಯೇ ಇದ್ದು ಇವುಗಳ ಬದಲಿಸಲು ಜಿಲ್ಲಾಡಳಿತ, ಸಚಿವ, ಶಾಸಕರು ಶ್ರಮಿಸಬೇಕು ಈಗಾಗಲೇ ಕೊಲಾರದ ಬಾಗೇಪಲ್ಲಿಯನ್ನು ಸರ್ಕಾರ ಭಾಗ್ಯನಗರ ಎಂದು ಬದಲಿಸಿದೆ ಇದೇಮಾದರಿಯಲ್ಲಿ ಗುರುಮಠಕಲ್ ತಾಲ್ಲೂಕಿನಲ್ಲಿ ಹತ್ತಾರು ಹಳ್ಳಿಗಳು ಪಲ್ಲಿಗಳಾಗಿಯೇ ಉಳಿದಿವೆ. ಇವನ್ನು ಬದಲಿಸಲು ಹೋರಾಟ ಮಾಡಬೇಕೆಂದು ತಿಳಿಸಿದರು.

    ಮೋಟ್ನಳ್ಳಿ ಮೊರಾರ್ಜಿ ವಸತಿ ಶಾಲೆ ಶಿಥಿಲಗೊಂಡಿದ್ದು, ಅದನ್ನು ಬಂದಳ್ಳಿ ಗೆ ಸ್ಥಳಾಂತರಿಸಿದ್ದು, ೫ ವರ್ಷಗಳಾದರೂ ಕಟ್ಟಡ ದುರಸ್ತಿ ಮಾಡಿಸಲು ಆಗುವುದಿಲ್ಲ ಎಂದರೆ ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಶಾಸಕರು ಇದ್ದು ಏನು ಪ್ರಯೋಜನ, ಆ ಶಾಲೆಯ ಮಕ್ಕಳ ಸಮಸ್ಯೆ ಕಾಣುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸೌಲಭ್ಯ ಇರುವ ಶಾಲೆಗಳಿಗೆ ಭೇಟಿ ನೀಡುವ ಶಾಸಕ, ಸಚಿವ ಹಾಗೂ ಇನ್ನಿತರ ಜನಪ್ರತಿನಿಧಿಗಳಿಗೆ ಮೋಟ್ನಳ್ಳಿ ಶಾಲೆ ಸಮಸ್ಯೆ ಕಾಣುತ್ತಿಲ್ಲವೇ? ಎಂದು ಅವರು ಕೆಂಡ ಕಾರಿದರು.

    ಬಂದಳ್ಳಿ ಏಕಲವ್ಯ ವಸತಿ ಶಾಲೆಗೂ ಮೂಲಭೂತ ಸೌಕರ್ಯಗಳಿಲ್ಲ, ಆರಂಭವಾದಾಗಿನಿAದ ಸಮಸ್ಯೆಯ ಗೂಡಾಗಿದೆ ತಕ್ಷಣ ಜಿಲ್ಲಾಧಿಕಾರಿಗಳು ಈ ಎರಡು ಶಾಲೆಗಳ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕೆAದು ಆಗ್ರಹಿಸಿದರು.

    ಇನ್ನು ಕರವೇ ಪದಾಧಿಕಾರಿಗಳು ಸಂಘಟನೆ ಹಾಗೂಹೋರಾಟದ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮತ್ತು ಕರವೇ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ರಾಜಿಯ ಮಾತೇ ಇಲ್ಲ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಅದ್ಯಕ್ಷ ಮಲ್ಲು ಮಾಳಿಕೇರಿ, ಸಂತೋಷ ನಿರ್ಮಲಕರ್, ಚೌಡಯ್ಯ ಬಾವೂರ, ಹಣಮಂತ ಖಾನಳ್ಳಿ, ಶರಣಪ್ಪ ದಳಪತಿ, ಪಪ್ಪುಗೌಡ ಚಿನ್ನಾಕಾರ, ಪ್ರಕಾಶ ಪಾಟೀಲ್ ಜೈಗ್ರಾಮ್, ಸಾಹೇಬಗೌಡ ನಾಯಕ, ಅರ್ಜುನ ಪವಾರ್, ಯಮುನಯ್ಯ ಗುತ್ತೇದಾರ, ವಿಶ್ವರಾಜ ಪಾಟೀಲ್, ವೆಂಕಟೇಶ ಬೈರಿಮಡ್ಡಿ, ಶರಣಬಸಪ್ಪ ಯಲ್ಹೇರಿ, ಅಬ್ದುಲ್ ಚಿಗಾನೂರ, ಬಸವರಾಜ ಚೆನ್ನೂರ, ಭೀಮು ಮಲ್ಲಿಭಾವಿ, ಸಿದ್ದಪ್ಪ ಕೂಯಿಲೂರ, ಸಿದ್ದಪ್ಪ ಕ್ಯಾಸಪನಳ್ಳಿ, ಭೀಮರಾಯ ರಾಮಸಮುದ್ರ, ಹಣಮಂತ್ರಾಯ ತೇಕರಾಳ, ಸುರೇಶ ಬೆಳಗುಂದಿ, ಜನಾರ್ಧನ್ ಚಾಮನಳ್ಳಿ, ಹುಲುಗಪ್ಪ ಚಟ್ನಳ್ಳಿ, ಸಲಿಮ್ ಯರಗೋಳ, ಯಲ್ಲಾಲಿಂಗ ಚಾಮನಳ್ಳಿ, ಸೈದಪ್ಪ ಗೌಡಗೇರಾ, ನಾಗಪ್ಪ ಗೋಪಾಳಪುರ,ಮಲ್ಲಿಕಾರ್ಜುನ ಕನ್ನಡಿ, ವೆಂಕಟರಾಮು ಸೈದಾಪೂರ, ಅಬ್ದುಲ್ ರಿಯಾಜ್ ಸೇರಿದಂತೆ ಅನೇಕರು ಪಾಲ್ಗೊಂಡರು.

    apvc-iconPost Views: 10
  • ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಎಲ್ಲರೂ ಶ್ರಮಿಸೋಣ: ಡಿಸಿ ಹರ್ಷಲ್ ಭೋಯರ್

    ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಎಲ್ಲರೂ ಶ್ರಮಿಸೋಣ: ಡಿಸಿ ಹರ್ಷಲ್ ಭೋಯರ್

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲಾಡಳಿತ, ಜಿಪಂ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ,ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಸಂಪೂರ್ಣವಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ
    ಹರ್ಷಲ್ ಭೋಯರ್ ಹೇಳಿದರು.

    ಕೇಂದ್ರ ಸರ್ಕಾರದ ನೀತಿ ಆಯೋಗದ ಮಹಾತ್ವಾಕಾಂಕ್ಷಿ ಜಿಲ್ಲೆ ಯಾದಗಿರಿ ಮತ್ತು ಮಹಾತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಹ ಮತ್ತು ಆಕಾಂಕ್ಷಾ ಹಾಟ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಾಧಕ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿ ಅವರು ಮಾತನಾಡಿದರು.

    ಅಭಿವೃದ್ಧಿಗಾಗಿ ಸರ್ಕಾರ ನೀಡಿದ ಸೂಚಾಂಕ್ಯಗಳಲ್ಲಿ ಮಹಾತ್ವಾಕಾಂಕ್ಷಿ ಜಿಲ್ಲೆ ಯಾದಗಿರಿ ತನ್ನ ನಿಗದಿತ ಗುರಿ ಆರಕ್ಕೆ ಮಾಡುವ ಮೂಲಕ ಗುರಿ ತಲುಪಿದರೆ, ವಡಗೇರಾ ಬ್ಲಾಕ್ ಆರಲ್ಲಿ ಐದು ಕೆಲಸಗಳನ್ನು ಮಾಡುವ ಮೂಲಕ ಹೆಚ್ಚಿನ‌ ಸಾಧನೆ ಮಾಡಿದೆ ಎಂದರು.  ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದಿಸಿದ ಡಿಸಿ ಅವರು, ಮುಂದೇ ಕೂಡಾ ಇದೆ ರೀತಿ ಕೆಲಸ ಮಾಡುವಂತೆ ಸಲಹೆ ನೀಡಿದರು.

    ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಲವೀಶ್ ಒರಡಿಯಾ, ಈ ಸಾಧನೆಗೆ ಆಶಾ, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಕಿದ ಶ್ರಮಕ್ಕೆ ಫಲ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಆದೇಶದಂತೆ ಈ ಕಾರ್ಯಕ್ರಮ ಆಯೋಜಿಸಿ, ಗುರಿ ತಲುಪಲು ಶ್ರಮಿಸಿದ ತಳಮಟ್ಟದಿಂದ ಹಿರಿಯ ಅಧಿಕಾರಿಗಳನ್ನು ಗುರುತಿಸಿ ಇಂದು ಪ್ರಮಾಣ ಪತ್ರ ನೀಡುವ ಮೂಲಕ ಗೌರವಿಸಲಾಗಿದೆ ಎಂದರು.

    ಇನ್ನೂ ಹೆಚ್ಚಿನ ರೀತಿಯಲ್ಲಿ ನಾವೆಲ್ಲರೂ ಕೆಲಸ ಮಾಡುವ‌ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ಸಿಯಾಗಿ ಮಾಡೋಣ ಎಂದರು.
    ಹೆಚ್ಚುವರಿ ಡಿಸಿ ರಮೇಶ ಕೋಲಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಥ್ವಿಕ್ ಶಂಕರ್, ಸಿಪಿಒ ಕುಮಲಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಜಿಲ್ಲಾ,ತಾಲೂಕು ಮಟ್ಟದ ಅಧಿಕಾರಿಗಳು, ಆಶಾ,ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು. ಅಧಿಕಾರಿ ರಿಯಾಜ್ ಪಟೇಲ್ ನಿರೂಪಿಸಿದರು.

    ಬೆಳ್ಳಿ ಪದಕ ನೀಡಿ ಗೌರವ

    ವಡಗೇರಾ ತಾಲೂಕಿನ ತಾಪಂ ಇಒ ಮಲ್ಲಿಕಾರ್ಜನ ಸಂಗ್ವಾರ್ ಅವರಿಗೆ ನೀತಿ ಆಯೋಗದ ಆದೇಶದಂತೆ ಡಿಸಿ ಹರ್ಷಲ್ ಭೋಯರ್ ಅವರು ಬೆಳ್ಳಿಪದಕ ನೀಡಿ ವಿಶೇಷವಾಗಿ ಸನ್ಮಾನಿಸಿದರು. ವಿವಿಧ ಇಲಾಖೆಗಳ ಸುಮಾರು 90 ಜನರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

    ಸೀರೆ ಖರೀದಿಸಿದ ಡಿಸಿ !

    ಇಂದಿನಿಂದ ಮೂರು ದಿನಗಳವರೆಗೂ ಇರುವ ಆಕಾಂಕ್ಷಾ ಹಾಟ್ ನ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದ ಡಿಸಿ ಹರ್ಷಲ್ ಭೋಯರ್ ಅವರು ಸಿರಿ ಮಳಿಗೆ ಕಾಣುತ್ತಲೇ ಅಲ್ಲಿಗೆ ತೆರಳಿ ಸೀರೆಯೊಂದು ಖರೀದಿಸಿರು. ಅದೇ ರೀತಿ ಪೆನ್ಸಿಲ್ ಇತರೆ ವಸ್ತುಗಳನ್ನು ಸಹ ಹಣ ನೀಡಿ ಖರೀದಿಸಿದ್ದು ಗಮನ ಸೆಳೆಯಿತು.ಈ ವೇಳೆ ಅಲ್ಲಿ ಹಾಕಲಾಗಿರುವ ವಿವಿಧ ವಸ್ತುಗಳ ಮಾರಾಟದ ಸುಮಾರು 15ಕ್ಕೂ ಹೆಚ್ಚು ಮಳಿಗೆಗಿಗೆ ಎಸ್ಪಿ ಪ್ರಥ್ವಿಕ್ ಶಂಕರ್, ಜಿಪಂ ಸಿಇಒ ಲವೀಶ್ ಓರ್ಡಿಯಾ ಅವರ ಜೊತೆ ಭೇಟಿ ನೀಡಿದ ಡಿಸಿ ಅಲ್ಲಿನ ವಿವಿಧ ವಸ್ತುಗಳ ಬಗ್ಗೆ ತಿಳಿದುಕೊಂಡರು. ಮೂರು ದಿನಗಳ ಈ ಆಕಾಂಕ್ಷಾ ಹಾಟ್ ಸ್ಥಳಕ್ಕೆ ಜನರು ಹೆಚ್ಚಿಗೆ ಬಂದು ವಸ್ತುಗಳನ್ನು ಖರೀದಿಸಿ ವ್ಯಾಪಾರಕ್ಕೆ ಪ್ರೋತ್ಸಾಹ ನೀಡಬೇಕೆಂದರು.

     

    apvc-iconPost Views: 24
  • ರಸಗೊಬ್ಬರ ಮಾರಾಟ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೃಷಿ ಅಧಿಕಾರಿ ಎಚ್ಚರಿಕೆ

    ರಸಗೊಬ್ಬರ ಮಾರಾಟ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೃಷಿ ಅಧಿಕಾರಿ ಎಚ್ಚರಿಕೆ

    ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ; ಪರಿಶೀಲನೆ

    ಸತ್ಯಕಾಮ ವಾರ್ತೆ ಸಿರವಾರ:

    ತಾಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ನೂಗಡೋಣಿ,ಎನ್ ಹೊಸೂರ, ಬಲ್ಲಟಗಿ,ಬಸವಣ್ಣ ಕ್ಯಾಂಪ್, ಮತ್ತು ಬಾಗಲವಾಡ ಗ್ರಾಮಗಳಲ್ಲಿನ ರಸಗೊಬ್ಬರ ಕೀಟನಾಶಕ ಮಾರಾಟ ಮಳಿಗೆಗಳಿಗೆ ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ಯರಗಲ್ ಭೇಟಿ ನೀಡಿ ದಾಸ್ತಾನು ಪರಿಶೀಲನೆ ಮಾಡಿದರು.

    ರಸಗೊಬ್ಬರ ಅಗತ್ಯ ವಸ್ತುಗಳ ಕಾಯ್ದೆಯಡಿ ಬರುವುದರಿಂದ, ಹೆಚ್ಚಿನ ಧರಕ್ಕೆ ಮಾರಾಟ ಮಾಡುವುದು, ಅಕ್ರಮ ದಾಸ್ತಾನು ಮಾಡುವುದು ಕಾನೂನಿನ ಪ್ರಕಾರ ತಪ್ಪು. ಅವಧಿ ಮೀರಿದ, ಬೀಜ ಹಾಗೂ ಕೀಟನಾಶಕಗಳ ಮಾರಾಟ, ನಿಷೇಧಿತ ಬಯೋ ಕೀಟನಾಶಕಗಳ ಮಾರಾಟವನ್ನು ನಿಷೇಧಿಸಲಾಗಿದೆ. ನಿತ್ಯವೂ ದಾಸ್ತಾನು ಫಲಕ (ಸ್ಟಾಕ್ ಬೋರ್ಡ್) ಬರೆಯಬೇಕು. ತಪ್ಪದೇ ರೈತರಿಗೆ ಖರೀದಿಯ ರಶೀದಿ ನೀಡಬೇಕು ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.


    ಈ ಸಂದರ್ಭದಲ್ಲಿ ಕೃಷಿ ವ್ಯವಸ್ಥಾಪಕ ನಾಗರಾಜ ಕಂಬಾರ್ ಮತ್ತು ಆಂಜನೇಯ ಕೃಷಿ ಮಿತ್ರರು ಹಾಗೂ ರೈತರು ಇದ್ದರು.

    apvc-iconPost Views: 13
  • ನಾಳೆ ನಗರಸಭೆ ಸಾಮಾನ್ಯ ಸಭೆ

    ನಾಳೆ ನಗರಸಭೆ ಸಾಮಾನ್ಯ ಸಭೆ

    ಸತ್ಯಕಾಮ ವಾರ್ತೆ ಯಾದಗಿರಿ:

    ನಗರಸಭೆ ಅಧ್ಯಕ್ಷರಾದ ಕು.ಲಲಿತಾ ಅನಪೂರ ಅವರ ಅಧ್ಯಕ್ಷತೆಯಲ್ಲಿ 2025ರ ಜುಲೈ 31ರ ಗುರುವಾರ (ನಾಳೆ) ಅಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸದಸ್ಯರ ಸಾಮಾನ್ಯ ಸಭೆಯು ಯಾದಗಿರಿ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಉಮೇಶ್ ಚವ್ಹಾಣ್ ತಿಳಿಸಿದ್ದಾರೆ.

    apvc-iconPost Views: 60
  • ಅಧಿಕಾರಿಗಳು ತಾಲೂಕಿನ ಹಿರಿಮೆ ಹೆಚ್ಚುವ ಕಾರ್ಯ ಮಾಡಿದ್ದಾರೆ-ಶಾಸಕ ರಾಜುಗೌಡ

    ಅಧಿಕಾರಿಗಳು ತಾಲೂಕಿನ ಹಿರಿಮೆ ಹೆಚ್ಚುವ ಕಾರ್ಯ ಮಾಡಿದ್ದಾರೆ-ಶಾಸಕ ರಾಜುಗೌಡ

    ಸಂಪೂರ್ಣತಾ ಅಭಿಯಾನದ ಸನ್ಮಾನ ಸಮಾರಂಭ
    ಸತ್ಯಕಾಮ ವಾರ್ತೆ ತಾಳಿಕೋಟೆ:

    ಹಿಂದೂಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವಂತಹ ಕೆಲಸವನ್ನು ಅಧಿಕಾರಿಗಳು ಮಾಡಿರುವದು ಸಂತಸ ಪಡುವಂತಹದ್ದಾಗಿದೆ ಎಂದು ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಅವರು ಹೇಳಿದರು.

    ಮಂಗಳವಾರರಂದು ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್ ವಿಜಯಪುರ, ತಾಲೂಕಾಡಳಿತ ತಾಲೂಕಾ ಪಂಚಾಯತ್ ತಾಳಿಕೋಟೆ ಇವರ ಸಹಯೋಗದಲ್ಲಿ ಮಹಾತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮದಡಿ ಸಂಪೂರ್ಣತಾ ಅಭಿಯಾನ ಸನ್ಮಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ದೇಶದಲ್ಲಿ ಅತೀ ಹಿಂದೂಳಿದ ತಾಲೂಕುಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ದಿ ಪಡಿಸಬೇಕೆಂಬ ಇಚ್ಚೆಯೊಂದಿಗೆ ಕೇಂದ್ರ ಸರ್ಕಾರವು ನೀತಿ ಆಯೋಗದ ಮೂಲಕ ರಾಜ್ಯದ ೧೪ ತಾಲೂಕುಗಳನ್ನು ಗುರುತಿಸಿ ಅತೀ ಹಿಂದೂಳಿದ ತಾಲೂಕುಗಳಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಸೇರಿಸಿತ್ತು ಅದರಲ್ಲಿ ೩೯ ಸೂಚಂಕಗಳನ್ನು ಅಭಿವೃದ್ದಿ ಪಡಿಸುವದರಲ್ಲಿ ಕೇವಲ ೨ ವರ್ಷಗಳಲ್ಲಿ ೬ ಸೂಚಂಕಗಳನ್ನು ಶೇ.೧೦೦ ರಷ್ಟು ಅಭಿವೃದ್ದಿ ಪಡಿಸಿ ಬಂಗಾರದ ಪಧಕ ಪಡೆದುಕೊಳ್ಳುವಂತಹ ಕೆಲಸ ಅಧಿಕಾರಿಗಳು ಮಾಡಿರುವದು ಸಂತಸ ಪಡುವಂತಹದ್ದಾಗಿದೆ ಅಭಿವೃದ್ದಿ ಕಾರ್ಯಗಳಾಗಬೇಕಾದರೆ ಅಧಿಕಾರಿಗಳ ಸಾರ್ವಜನಿಕರ ಸಹಕಾರವೆಂಬುದು ಬಹುಮುಖ್ಯವಾಗಿ ಬೇಕಾಗುತ್ತದೆ ಕೃಷಿ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಒಳಗೊಂಡು ೬ ಸೂಚಂಕಗಳನ್ನು ಶೇ.೧೦೦ ರಷ್ಟು ಅಧಿಕಾರಿಗಳು ಗುರಿಸಾದಿಸಿರುವದು ಮೆಚ್ಚುವಂತಹದ್ದಾಗಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀ ಯೋಜನೆಯನ್ನು ಅಧಿಕಾರಿಗಳು ಅಚ್ಚುಕ್ಕಟ್ಟಾಗಿ ಕೆಲಸ ಮಾಡುವದರ ಜೊತೆಗೆ ಈ ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಗೌರವಿಸುವಂತಹ ಕೆಲಸ ಮಾಡಿರುವದು ಶ್ಲಾಘನೀಯವಾಗಿದೆ ತಾಳಿಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು ಹಳ್ಳಿಗಳು ಬರುವದು ದೇವರ ಹಿಪ್ಪರಗಿ ಮತಕ್ಷೇತ್ರಕ್ಕೆ ಒಳಪಡುತ್ತವೆ ಈ ತಾಲೂಕಿನ ಅಭಿವೃದ್ದಿಗೆ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆಂದರು.

    ಇನ್ನೋರ್ವ ಅಧ್ಯಕ್ಷತೆ ವಹಿಸಿದ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಮಾತನಾಡಿ ತಾಳಿಕೋಟೆ ನಗರವು ಐತಿಹಾಸಿಕ ನಗರವಾಗಿದೆ ಮತ್ತು ವ್ಯಾಪಾರಿಕರಣ ನಗರವಾಗಿ ದಿನದಿಂದ ದಿನಕ್ಕೆ ಬೆಳೆಯುತ್ತಾ ಸಾಗಿದೆ ಆದರೆ ಕೇಂದ್ರ ಸರ್ಕಾರವು ೩೯ ಮಾನದಂಡಗಳನ್ನು ಸೇರಿಸಿ ಅತೀ ಹಿಂದೂಳಿದ ತಾಲೂಕುಗಳ ಪಟ್ಟಿಯಲ್ಲಿ ಸೇರಿಸಿ ಅಭಿವೃದ್ದಿ ಕಾರ್ಯಗಳಿಗೆ ಮುನ್ನುಡಿಯನ್ನು ಬರೆದಿತ್ತು ಅದರಂತೆ ಅಧಿಕಾರಿಗಳು ಕೇವಲ ೨ ವರ್ಷಗಳಲ್ಲಿ ಶ್ರಮವಹಿಸಿ ೩೯ ಮಾನದಂಡಗಳಲ್ಲಿ ೬ ರಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಿ ಗೋಲ್ಡ್ ಮೇಡಲ್ ಪಡೆದುಕೊಂಡಿರುವದು ಸಂತೋಷ ಪಡುವಂತಹದ್ದಾಗಿದೆ ಈ ತಾಳಿಕೋಟೆ ತಾಲೂಕು ವಿಜಯಪುರ ಜಿಲ್ಲೆಯ ಕೊನೆಯ ತಾಲೂಕಾ ಕೇಂದ್ರವಾಗಿತ್ತು ಈ ತಾಲೂಕಿಗೆ ಹೈದ್ರಾಬಾದ ಕರ್ನಾಟಕವು ಸೇರಿಕೊಳ್ಳುತ್ತಿರುವದರಿಂದ ಸಹಜವಾಗಿಯೇ ಹಿಂದೂಳಿದ ಪಟ್ಟಿಯಲ್ಲಿ ಸೇರಿಕೊಂಡಿತ್ತು ಯಾವುದೇ ಕೆಲಸ ಮಾಡಬೇಕೆಂದರೆ ಆತ್ಮ ಸ್ಥೈರ್ಯ, ಆತ್ಮ ವಿಸ್ವಾಸವೆಂಬುದು ಬೇಕಾಗುತ್ತದೆ ಅಂತಹ ಆತ್ಮ ವಿಸ್ವಾಸವನ್ನು ಹೊಂದಿದ ಅಧಿಕಾರಿಗಳು ತಾಲೂಕಿನ ಜನರ ಸಹಕಾರದೊಂದಿಗೆ ೬ ಸೂಚಂಕಗಳಲ್ಲಿ ಶೇ. ೧೦೦ ರಷ್ಟು ಗುರಿ ಸಾಧಿಸಿ ರಾಜ್ಯದ ಹಿಂದೂಳಿದ ೧೪ ತಾಲೂಕುಗಳಲ್ಲಿ ತಾಳಿಕೋಟೆ ತಾಲೂಕು ಗೋಲ್ಡ ಮೇಡಲ್ ಪಡೆದುಕೊಂಡು ಮೊದಲನೇಯದಾಗಿ ಹೊರಬರಲು ಪ್ರಯತ್ನಿಸಿರುವದು ಹೆಮ್ಮೆ ಪಡುವಂತಹದ್ದಾಗಿದೆ ಇನ್ನೂ ೩೩ ಸೂಚಂಕಗಳನ್ನು ಪೂರೈಸಬೇಕಾಗಿದೆ ಅಧಿಕಾರಿಗಳು ಕೆಲಸ ಮಾಡುತ್ತಿರುವ ಪರಿಯನ್ನು ಲಕ್ಷೀಸಿದರೆ ನಮ್ಮಲ್ಲಿಯೂ ಆತ್ಮ ವಿಸ್ವಾಸವೆಂಬುದು ಹೆಚ್ಚಿಸುವಂತೆ ಮಾಡಿದೆ ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಮುಟ್ಟಬೇಕಾಗಿದೆ ಇದರಿಂದ ಹಳ್ಳಿಯಿಂದ ತಾಲೂಕು, ಜಿಲ್ಲೆ ದೇಶ ಎಂದಿಗೂ ಬಡವಾಗುವದಿಲ್ಲಾ ಅಧಿಕಾರಿಗಳ ಆತ್ಮ ಸ್ಥೈರ್ಯದ ಜೊತೆಗೆ ನಿಲ್ಲುವಂತಹ ಕೆಲಸ ರಾಜಕಾರಣಿಗಳು ಸಹ ಮಾಡಬೇಕೆಂದರು.

    ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ ಕೇಂದ್ರ ಸರ್ಕಾರವು ೨೦೧೮ ರಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯೊಂದಿಗೆ ನಮ್ಮ ರಾಜ್ಯದ ೧೪ ತಾಲೂಕುಗಳನ್ನು ಗುರುತಿಸಿ ಹಿಂದೂಳಿದ ತಾಲೂಕುಗಳೆಂದು ಘೋಷಣೆ ಮಾಡಿತ್ತು ಅದರಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಒಳಗೊಂಡಿತ್ತು ಇದನ್ನು ಸವಾಲಾಗಿ ಅಧಿಕಾರಿಗಳು ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದರ ಪರಿಣಾಮ ೬ ಸೂಚಂಕಗಳಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಿದ್ದೇವೆ ಇನ್ನೂ ೩೩ ಸೂಚಂಕಗಳಿದ್ದು ಅವುಗಳನ್ನು ಸಾಧಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿವರ್ಗದವರು ಸಾಗಲಿದ್ದಾರೆಂದರು.

    ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎ.ಡಿ.ಅಲ್ಲಾಪೂರ ಅವರು ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯ ಬಗ್ಗೆ ತಿಳಿ ಹೇಳಿದರು. ತಾಪಂ ಇಓ ನಿಂಗಪ್ಪ ಮಸಳಿ ಪ್ರಾಸ್ಥಾವಿಕ ಮಾತನಾಡಿದರು.

    ಇದೇ ಸಮಯದಲ್ಲಿ ೬ ಸೂಚಂಕಗಳಲ್ಲಿ ಸಾಧನೆ ಮಾಡಿದ ಕೃಷಿ ಇಲಾಖೆಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ, ಆರೋಗ್ಯ ಇಲಾಖೆಯೊಳಗೊಂಡ ಅಧಿಕಾರಿವರ್ಗದವರನ್ನು ಹಾಗೂ ಗರ್ಭಿಣಿ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಈ ಸಮಯದಲ್ಲಿ ತಾಲೂಕಾಡಳಿತದ ಅಧಿಕಾರಿಗಳಾದ ತಾಲೂಕಾ ತಹಶಿಲ್ದಾರ ವಿನಯಾ ಹೂಗಾರ, ಶರಣಗೌಡ ಬಿಳಗಿ, ಡಾ.ಸತೀಶ ತಿವಾರಿ, ಶಿವಮೂರ್ತಿ ಕುಂಭಾರ, ಆರ್.ಎಸ್.ಹಿರೇಗೌಡರ, ಬಿ.ಎಸ್.ಸಾವಳಗಿ, ಮತ್ತು ಎಚ್.ಎಸ್.ಪಾಟೀಲ, ಪ್ರಭುಗೌಡ ಮದರಕಲ್ಲ, ಮಡುಸಾಹುಕಾರ ಬಿರಾದಾರ, ಸಿದ್ದನಗೌಡ ಪಾಟೀಲ(ನಾವದಗಿ), ಮೊದಲಾದವರು ಉಪಸ್ಥಿತರಿದ್ದರು.

    ಸಿಆರ್‌ಸಿ ರಾಜು ವಿಜಾಪೂರ ನಿರೂಪಿಸಿದರು. ತಾಪಂ ಸಹಾಯಕ ನಿರ್ದೇಶಕ ಬಿ.ಎಂ.ಸಾಗರ ವಂದಿಸಿದರು.

    apvc-iconPost Views: 32
  • ಜಿಲ್ಲೆಯ ಶಿಕ್ಷಣ ವ್ಯವಸ್ಥೆಯ ವಿಫಲತೆಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ– ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆಕ್ರೋಶ

    ಜಿಲ್ಲೆಯ ಶಿಕ್ಷಣ ವ್ಯವಸ್ಥೆಯ ವಿಫಲತೆಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ– ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆಕ್ರೋಶ

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರ ಹಿನ್ನಡೆ ಅನುಭವಿಸುತ್ತಿದ್ದು, ಇದರ ಪ್ರಮುಖ ಕಾರಣ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪತ್ರಿಕಾ ಹೇಳಿಕೆ ನೀಡಿರುವ ಅವರು, “ಜಿಲ್ಲೆಯ ನೂರಾರು ಸರ್ಕಾರಿ ಶಾಲೆಗಳಲ್ಲಿ ಇನ್ನೂ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಮಕ್ಕಳಿಗೆ ಸೂಕ್ತ ತರಗತಿ ಕೋಣೆಗಳು ಇಲ್ಲ, ಶೌಚಾಲಯಗಳಿಲ್ಲ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ – ಈ ಎಲ್ಲಾ ಸಮಸ್ಯೆಗಳು ಇನ್ನೂ ದೂರವಾಗಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇನ್ನು ಕೆಲವು ಶಾಲೆಗಳ ಮೇಲ್ಛಾವಣಿಗಳು ಕುಸಿಯುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಲವಾರು ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಗ್ರಾಮಸ್ಥರು ಶಾಲೆಗಳ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ತಲೆಕೆಡಿಸಿಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಮಕ್ಕಳ ಭವಿಷ್ಯಕ್ಕೆ ನೇರ ಧಕ್ಕೆಯಾಗಿದೆ, ಎಂದು ಗುಡುಗಿದ್ದಾರೆ.

    ಮಾಧ್ಯಮಗಳಲ್ಲಿ ಸುದ್ದಿ ಬರುವ ತನಕ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬರುವುದಿಲ್ಲ. ಮಕ್ಕಳಿಗಾಗಿ ಪೋಷಕರ ಆತಂಕ, ಕಣ್ಣೀರು, ಇದ್ಯಾವುದೂ ಇವರಿಗೆ ಕಾಣುವುದಿಲ್ಲ, ನೆಪ ಮಾತ್ರಕ್ಕೆ ಸುದ್ದಿಯಾದಾಗ ಮಾತ್ರ ವೀಕ್ಷಣಾ ಭೇಟಿ – ಇದು ಕೇವಲ ನಾಟಕ ಮಾತ್ರ? ಎಂದು ಬೇಸರ ವ್ಯಕ್ತಪಡಿಸಿದರು. ಇದರಿಂದಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ.

    ಅದರಲ್ಲೂ ಪ್ರಮುಖವಾಗಿ ಹಲವಾರು ಶಾಲೆಗಳಲ್ಲಿ ವಿಷಯ ಶಿಕ್ಷಕರ ಕೊರತೆಯಿಂದ ಪಾಠಪ್ರಕ್ರಿಯೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ವಿಷಯ ಶಿಕ್ಷಕರಿಲ್ಲದೆ ಶಾಲೆ ಹೋದ ಮಕ್ಕಳು ಏನು ಕಲಿತು ಬರುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಪ್ರಾಥಮಿಕ ಶಿಕ್ಷಣವೇ ಭವಿಷ್ಯದ ಅಡಿಪಾಯ. ಅದು ಬಲವಾಗಿಲ್ಲದಿದ್ದರೆ, ವಿದ್ಯಾರ್ಥಿಗಳು ಮುಂದಿನ ಹಂತ ತಲುಪುವುದು ಹೇಗೆ?  ಎಂದಿದ್ದಾರೆ, ಇದು ರಾಜ್ಯದ ಶಿಕ್ಷಣ ಇಲಾಖೆಯ ಸಂಪೂರ್ಣ ವೈಫಲ್ಯ. ಶಿಕ್ಷಕರ ನೇಮಕಾತಿ ವಿಳಂಬವಾಗುತ್ತಿರುವುದು ಜಿಲ್ಲೆಯ ಮಕ್ಕಳ ಭವಿಷ್ಯವೇ ಅಪಾಯದಲ್ಲಿ ಸಿಲುಕಿದೆ ಎಂದರು.

    ಚುನಾವಣೆಯ ವೇಳೆ ಮನೆ ಮನೆಗೆ ಭೇಟಿ ನೀಡಿ ಮತ ಕೇಳಿದವರು, ಶಾಲೆಗಳ ದುಸ್ಥಿತಿಯ ಕುರಿತಾಗಿ ಎಷ್ಟು ಬಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ?,ಎಂದು ಪ್ರಶ್ನಿಸಿದ್ದಾರೆ.

    apvc-iconPost Views: 31
  • ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಸಿಂಗೆ

    ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಸಿಂಗೆ

    ಸತ್ಯಕಾಮ ವಾರ್ತೆ ಕಲಬುರಗಿ:

    ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಮಹಿಳೆಯರನ್ನು ಆರ್ಥಿಕ ಶೈಕ್ಷಣಿಕ ಶಕ್ತಿ ತುಂಬಿರುವ ಸರಕಾರದ ಗ್ಯಾರಂಟಿಗಳ ಪ್ರಚಾರ ಮಾಡಬೇಕು ಮತ್ತು ಪಕ್ಷವನ್ನು ಸಂಘಟಿಸಿ ಮತ್ತಷ್ಟು ಬಲಪಡಿಸಬೇಕೆಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ಕರೆ ನೀಡಿದರು.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಪಂಚಗ್ಯಾರAಟಿ ಸದುಪಯೋಗ ಪಡಿಸಿ ಕೊಂಡು ಮಹಿಳೆಯರು ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಅನುಕೂಲ ಮಾಡಿದೆ ಇದರ ಪ್ರಚಾರ ಇನ್ನಷ್ಟು ಮಹಿಳೆಯರಿಗೆ ತಲುಪಿಸುವ ಕೆಲಸ ಮಹಿಳಾ ಕಾರ್ಯಕರ್ತರು ಮಾಡಬೇಕೆಂದರು.

    ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ ನಿಕಟಪೂರ್ವ ಜಿಲ್ಲಾಧ್ಯಕ್ಷೆ ಲತಾ ರಾಠೋಡ ಅವರು ನೂತನ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ರೇಣುಕಾ ಸಿಂಗೆ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

    ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು, ಮಾತನಾಡಿ ಸ್ವಂತ ಬಲದಮೇಲೆ ಬಿಜೆಪಿ ಭದ್ರಕೋಟೆಯನ್ನು ಛಿದ್ರಮಾಡಿ ಶಾಸಕಿಯಾಗಿ ಆಯ್ಕೆಯಾದ ಬಲಿಷ್ಠ ನಾಯಕಿ ಸೌಮ್ಯರೆಡ್ಡಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತಾ ಕಾಂಗ್ರೆಸ್ ಸರಕಾರ ಮಹಿಳೆಯಿರಿಗೆ ನೀಡಿರುವ ಶಕ್ತಿ ಮತ್ತು ಭಕ್ತಿಯ ಬಲದಿಂದ ಪಕ್ಷ ಬಲಿಷ್ಠಗೊಳಿಸಬೇಕೆಂದು ಹೇಳಿದರು.

    ಬಿಜೆಪಿ ಮನೆಯೊಡೆಯುವ ಕೆಲಸ ಮಾಡಿದರೆ ಕಾಂಗ್ರೆಸ್ ಮಹಿಳೆಯರಿಗೆ ಸೌಲಭ್ಯಗಳನ್ನು ಕೊಟ್ಟು ಮನೆ ನಡೆಸುವ ಮತ್ತು ಮನೆ ನಿರ್ವಹಣೆಗೆ ಕೆಲಸ ಮಾಡಿದೆ ಎಂದರು.

    ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಂಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಜಗದೇವ್ ಗುತ್ತೇದಾರ್ ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

    apvc-iconPost Views: 5