Blog

  • ಲಾಕ್ ಗೇಟ್ ಅಳವಡಿಸಿದ ಕಾರ್ಮಿಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಸಂಸದ ಜಿ.ಕುಮಾರ ನಾಯಕ

    ಲಾಕ್ ಗೇಟ್ ಅಳವಡಿಸಿದ ಕಾರ್ಮಿಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಸಂಸದ ಜಿ.ಕುಮಾರ ನಾಯಕ

    ಟಿಬಿ ಡ್ಯಾಮ್ ನ ಸ್ಟಾಪ್ ಲಾಕ್ ಗೇಟ್ ಅಳವಡಿಸಿದ ಕಾರ್ಮಿಕರಿಗೆ ಸನ್ಮಾನಿಸಿ ಸಿಹಿ ತಿನ್ನಿಸಿ ಸಂಸದ ಜಿ ಕುಮಾರ ನಾಯಕ.

    ಕರ್ನಾಟಕದ ನಾಲ್ಕು ಜಿಲ್ಲೆಗಳು ಸೇರಿದಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದ್ದ 40 ಟಿಎಂಸಿ ನೀರು ತಡೆಯುವ ಸ್ಟಾಪ್ ಲಾಕ್ ಗೇಟ್ ಅಳವಡಿಕೆಯಲ್ಲಿ ಯಶಸ್ವಿಯಾದ ಎಲ್ಲಾ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ್ ನಾಯಕ ಅವರು ಅಭಿನಂದನೆ ಸಲ್ಲಿಸಿದರು.

    ಅವರಿಂದು ತುಂಗಭದ್ರಾ ಜಲಾಶಯದ ಪ್ರದೇಶಕ್ಕೆ ಭೇಟಿ ನೀಡಿ,ನದಿಗೆ ಹರಿದು ಹೋಗುತ್ತಿರುವ ನೀರು ತಡೆಯುವ ಗೇಟ್ ಅಳವಡಿಕೆಯಲ್ಲಿ ಯಶಸ್ವಿಯಾದ ಕಾರ್ಮಿಕರು,ಅಧಿಕಾರಿಗ ಅಭಿನಂದಿಸಿ ಮಾತನಾಡಿದರು.

    ಭೋರ್ಗರೆದು ಪ್ರವಾಹದ ನೀರಿನೊಂದಿಗೆ ಸೆಣಸಾಡಿ ಜಲಾಶಯದ ಕುಸಿದ 19ನೇ ಗೇಟ್ ಸ್ಥಳದಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸುವ ಮೂಲಕ ತುಂಗಭದ್ರಾ ಜಲಾಶಯದಿಂದ ನದಿಗೆ ಹರಿದು ಹೋಗುತ್ತಿರುವ ಸುಮಾರು 40 ಟಿಎಂಸಿ ನೀರು ಉಳಿಸುವಲ್ಲಿ ಅಧಿಕಾರಿಗಳು ಮತ್ತು ವಿವಿಧ ಕಂಪನಿಯ ಕಾರ್ಮಿಕರ ಸಾಧನೆ ಶ್ಲಾಘನೀಯವಾಗಿದೆ.

    ನಾನು ಒಬ್ಬ ಸಿವಿಲ್ ಇಂಜಿನಿಯರ್ ಆಗಿದ್ದರಿಂದ, ಈ ಕಾರ್ಯ ಎಂತಹ ಕಷ್ಟಕರ ಎನ್ನುವ ಮನವರಿಕೆ ಇದೆ. ಕೇವಲ ಆರು ದಿನಗಳಲ್ಲಿ ನದಿಗೆ ಹರಿದು ಹೋಗುತ್ತಿರುವ ಬಹುಪಾಲು ನೀರು ತಡೆಯುವಲ್ಲಿ ಯಶಸ್ವಿಯಾದ ಜಲಾಶಯದ ಕಾರ್ಮಿಕರು, ಅಧಿಕಾರಿಗಳು ಮತ್ತು ವಿವಿಧ ಕಂಪನಿಯ ತಜ್ಞರು ಪ್ರಶಂಸಾರ್ಹರಾಗಿದ್ದಾರೆ.

    ಜಲಾಶಯದ 19ನೇ ಗೇಟ್ ಕುಸಿತದಿಂದ ಭಾರಿ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿರುವ ಘಟನೆಯಿಂದ ರೈತರು ತೀವ್ರ ಆತಂಕಕ್ಕೆ ಗುರಿಯಾಗಿದ್ದರು. ಗೇಟ್ ಅಳವಡಿಕೆ ಹೇಗೆ ಎನ್ನುವ ಸವಾಲನ್ನು ಜಲಾಶಯದ ಸಿಬ್ಬಂದಿ ವರ್ಗ ಹಾಗೂ ಕಾರ್ಮಿಕರು ನಿವಾರಿಸುವ ಮೂಲಕ ಇಂದು ರೈತರ ಆತಂಕ ದೂರ ಮಾಡಿದ್ದಾರೆ. ಇವರ ಕಾರ್ಯ ಸಾಧನೆಗೆ ಸರ್ಕಾರದಿಂದ ಸೂಕ್ತ ಬಹುಮಾನ ನೀಡುವಂತೆ ನಾನು ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದರು.

    ಅದೃಷ್ಟವಶಾತ್ ಮೇಲ್ಭಾಗದಲ್ಲಿ ಇನ್ನೂ ಮಳೆ ಪ್ರಮಾಣ ಉತ್ತಮವಾಗಿದೆ. ಸ್ಟಾಪ್ ಲಾಂಗ್ ಗೇಟ್ ಅಳವಡಿಕೆಯ ನಂತರ ಆರು ಟಿಎಂಸಿ ನೀರು ಜಲಾಶಯಕ್ಕೆ ಸಂಗ್ರಹವಾಗಿದೆ. ಎಲ್ಲ ಶ್ರೇಯಸ್ಸು ಇಲ್ಲಿಯ ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಸಲ್ಲುತ್ತದೆ ಎಂದರು.

    apvc-iconPost Views: 49
  • ಸಿ.ಎಂ ಕನಸಿನ ಯೋಜನೆಗೆ ಯಾದಗಿರಿಯಲ್ಲಿ ಎಳ್ಳು ನೀರು ಬಿಟ್ರಾ ಅಧಿಕಾರಿಗಳು..

    ಸಿ.ಎಂ ಕನಸಿನ ಯೋಜನೆಗೆ ಯಾದಗಿರಿಯಲ್ಲಿ ಎಳ್ಳು ನೀರು ಬಿಟ್ರಾ ಅಧಿಕಾರಿಗಳು..

    ನಿಗಮದ ಕಚೇರಿಯಲ್ಲಿ ನಾಪತ್ತೆಯಾದ ಅನಿಲಭಾಗ್ಯ ಅಡುಗೆ ಒಲೆಗಳು

    ವರದಿ: ಕುದಾನ್ ಸಾಬ್
    ಸತ್ಯಕಾಮ ವಾರ್ತೆ ಯಾದಗಿರಿ:
    ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯನವರ ಕನಸಿನ‌ ಮಹತ್ವಾಕ್ಷಾಂಕ್ಷಿ ಯೋಜನೆಯಾದ ಅನಿಲ ಭಾಗ್ಯ ಯೋಜನೆಗೆ ಯಾದಗಿರಿಯ ಆಹಾರ ಇಲಾಖೆ ಅಧಿಕಾರಿಗಳು ಎಳ್ಳುನೀರು ಬಿಟ್ಟಿದ್ದೂ,ಜಿಲ್ಲೆಯ ಕರ್ನಾಟಕ ಆಹಾರ ಸರಬರಾಜು ನಿಗಮ ನಿಯಮಿತ ಕಛೇರಿಯಲ್ಲಿ ಅನಿಲ ಭಾಗ್ಯ ಯೊಜನೆಯ ಅರ್ಹ ಪಲಾನುಭವಿಗಳಿಗೆ ತಲುಪಬೇಕಾದ ಅಡುಗೆ ಒಲೆಗಳು ಮೂಲೆ ಗುಂಪಾಗಿವೆ.

    ಅಡುಗೆ ಅನಿಲ ಸಂಪರ್ಕರಹಿತ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು 2017-18ರ ಬಜೆಟ್ನಲ್ಲಿ ಅಂದಿನ ಸರ್ಕಾರ “ಮುಖ್ಯಮಂತ್ರಿ ಅನಿಲಭಾಗ್ಯ ಯೋಜನ ನಿಗಧಿಪಡಿಸಲಾಗಿತ್ತು…

    ಅದರಂತೆ ಯಾದಗಿರಿ ಜಿಲ್ಲೆಗೆ 4902 ಬಿಪಿಎಲ್ ಕಾರ್ಡ್ದಾರರಿಗೆ ಅನಿಲಭಾಗ್ಯ ಯೋಜನೆ ಗುರಿಪಡಿಸಿತ್ತು, ಆದೇಶದಂತೆ ಜಿಲ್ಲೆಗೆ ಸರ್ಕಾರದಿಂದ 4390 ಸ್ಟೌವ್ಗಳು ಮಾತ್ರ ಬಂದಿತ್ತು. ಇದರಲ್ಲಿ 4092 ಗ್ಯಾಸ್ ಸ್ಟೋವ್ ಗಳನ್ನು ವಿತರಣೆ ಮಾಡಲಾಗಿದೆ.

    ಈ ವೇಳೆ ಉಳಿಯಬೇಕಾದ 298 ಸ್ಟೌವ್ಗಳ ಪೈಕಿ 166 ಸ್ಟೌವ್ಗಳ ಕಚೇರಿಯಲ್ಲಿದ್ದೂ 132 ಗ್ಯಾಸ್ ಸ್ಟೋವ್ ಗಳು ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗೋದಾಮಿನಿಂದ ನಾಪತ್ತೆಯಾಗಿವೆ..

    ನಾಪತ್ತೆಯಾಗಿರುವ 132 ಅಡುಗೆ ಅನಿಲ ಒಲೆಗಳ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನಿಸಿದರೆ ಆಹಾರ ಇಲಾಖೆ ಅಧಿಕಾರಿಗಳು KFCSC ಮೇಲೆ, KFCSCಯವರು ಆಹಾರ ಇಲಾಖೆಯವರು ಮೇಲೆ ಒಬ್ಬರನ್ನೊಬ್ಬರು ದೂರುತ್ತಿದ್ದಾರೆ ಹೊರತು ನಾಪತ್ತೆಯಾದ ಸ್ಟೌವ್ ಗಳು ಎಲ್ಲಿ ಹೋಗಿವೆ ಎಂಬುದನ್ನಾ ಅಧಿಕಾರಿಗಳು ಬಾಯಿ ಬಿಡುತ್ತಿಲ್ಲ.

    ಅದರಲ್ಲೂ ಪ್ರಮುಖವಾಗಿ ಕಚೇರಿಯಲ್ಲಿ ಇರಬೇಕಿದ್ದ 298 ಸ್ಟೋವ್ ಗಳ ಪೈಕಿ ಉಳಿದ 166 ಸ್ಟೋವ್ ಗಳನ್ನೂ ಫಲಾನುಭವಿಗಳಿಗೆ ಕೊಡದೇ ಫಲಾನುಭವಿಗಳಿಗೆ ಹಂಚಲು ಇನ್ನೂ 512 ಅನಿಲ ಗ್ಯಾಸ್ ಗಳು ಬೇಕು ಎಂದು ಜಿಲ್ಲಾ ಆಹಾರ ಇಲಾಖೆ ಬೇಡಿಕೆ ಇಟ್ಟಿತ್ತು.

    ಸದ್ಯ ಗೋದಾಮುನಿಲ್ಲಿರುವ 167 ಗ್ಯಾಸ್ ಸ್ಟೋವ್ ಗಳು ನಿತ್ರಾಣ ಸ್ಥಿತಿಯಲ್ಲಿದ್ದು, ಆಹಾರ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು, ಈ ಹಿಂದೆ ಅನಿಲ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತದೇಯಾ ಅಥವಾ ತಮ್ಮ ಮೊಂಡತನದಿಂದ ಗೋದಾಮಿನಲ್ಲಿ ತುಕ್ಕು ಹಿಡಿಯಲು ಬಿಟ್ಟು ಸರ್ಕಾರದ ಹಣವನ್ನು ಪೋಲು ಮಾಡಲು ಬಿಡುತ್ತಾರಾ ಎಂಬುದು ಕಾದು ನೋಡಬೇಕಿದೆ.

    ಆಹಾರ ಇಲಾಖೆ ಅಧಿಕಾರಿಗಳಿಗೆ ಚಾಟಿ ಬೀಸುವರಾ ಜಿಲ್ಲಾಧಿಕಾರಿ.?

    ಇತ್ತೀಚಿಗೆ ಜಿಲ್ಲೆಯ ಆಹಾರ ಇಲಾಖೆಯ ಮೇಲೆ ಹಲವು ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲಿ ಈ ಅನಿಲ ಭಾಗ್ಯ ಕೂಡ ಒಂದು ಆಗಿದ್ದು, ಫಲಾನುಭವಿಗಳಿಗೆ ತಲುಪಬೇಕಾದ ಗ್ಯಾಸ್ ಸ್ಟೋವ್ ಗಳು ಗೋದಾಮಿನಲ್ಲಿ ಹಾಗೂ ಅಧಿಕಾರಿಗಳ ಪಾಲಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಆಹಾರ ನಿಗಮ ನಿಯಮಿತ ಕಛೇರಿಯಲ್ಲಿ ಆಡುಗೆ ಅನಿಲ ಭಾಗ್ಯ ಒಲೆಗಳು ಉಳಿಯಲು ಕಾರಣರಾದ ಭ್ರಷ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಚಾಟಿ ಬೀಸುವರಾ ಎಂಬುದನ್ನ ಕಾದು ನೋಡಬೇಕಿದೆ.

    ===========================

    ಇಲಾಖೆ ಬಳಿಯಿಲ್ಲ ಅರ್ಜಿಗಳ ಮಾಹಿತಿ

    ಅನಿಲ ಭಾಗ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆಹಾರ ಇಲಾಖೆಗೆ ಎಷ್ಟು ಅರ್ಜಿಗಳು ಬಂದಿವೆ ಹಾಗೂ ವಿತರಿಸಲಾಗಿರುವ ಫಲಾನುಭವಿಗಳ ಮಾಹಿತಿ ಸೇರಿದಂತೆ ಅನಿಲ ಭಾಗ್ಯದ ದಾಖಲಾತಿಗಳು ಇಲಾಖೆ ಬಳಿಯಿಲ್ಲ.

    ==================================

    ನಾಪತ್ತೆಯಾದ ಸ್ಟೋವ್ ಗಳಲ್ಲಿ ನಿವೃತ್ತಿಗೊಂಡ ಗೋದಾಮು ವ್ಯವಸ್ಥಾಪಕನ ಕೈವಾಡ.?

    ಈ ಹಿಂದೆ ನಿಗಮದಲ್ಲಿ ಗೊದಮು ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಬಸವಂತ ರೆಡ್ಡಿಯವರು ಅನಿಲ ಭಾಗ್ಯ ಯೋಜನೆಯ ಒಲೆಗಳನ್ನು ವಿತರಿಸುವಲ್ಲಿ ಗೋಲ್ ಮಾಲ್ ಮಾಡಿರುವ ಪ್ರಕರಣ ಒಂದು ಬೆಳಕಿಗೆ ಬಂದಿದ್ದು, ಬಸವಂತ ರೆಡ್ಡಿಯವರು 42 ಅನಿಲ ಭಾಗ್ಯ ಯೋಜನೆಯ ಒಲೆಗಳನ್ನು ನಾಯ್ಕಲ್ ಗ್ರಾಮದಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಗೆ ನೀಡಿರುವುದರ ಸ್ವೀಕೃತಿ ಪತ್ರ ಪತ್ರಿಕೆಗೆ ಲಭ್ಯವಾಗಿದ್ದು, ಪತ್ರಿಕೆ ಅದನ್ನು ಸೂಕ್ಷ್ಮವಾಗಿ ಪರಿಗಣಿಸಿ  ಬಸವಂತ ರೆಡ್ಡಿಯವರು ಸ್ವೀಕೃತಿ ಪತ್ರದಲ್ಲಿ ಸಹಿ ತೆಗೆದುಕೊಂಡಿರುವವರ ಏಜೆನ್ಸಿಯನ್ನು ಸಂಪರ್ಕಿಸಿದಾಗ ಸ್ವೀಕೃತಿ ಪತ್ರದಲ್ಲಿ ಸಹಿ ಮಾಡಿರುವವರು 2018 ರಲ್ಲಿ  ಭಾರತ್ ಗ್ಯಾಸ್ ನಿಂದ ಕೆಲಸ ಬಿಟ್ಟಿದ್ದಾರೆಂದು ಖುದ್ದಾಗಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕ ಸತ್ಯಕಾಮ ಪತ್ರಿಕೆಗೆ ತಿಳಿಸಿದ್ದಾರೆ. ಹಾಗಾದರೇ ನಿವೃತ್ತಿಗೊಂಡ ಗೋದಾಮು ವ್ಯವಸ್ಥಾಪಕ ಬಸವಂತ ರೆಡ್ಡಿಯವರು ಆತನ ಸಹಿಯನ್ನೇ ನಕಲಿ ಮಾಡಿದ್ರಾ ಅನುಮಾನವಿಗ ವ್ಯಕ್ತವಾಗುತ್ತಿದ್ದೂ,  ಈ ಅನಿಲಭಾಗ್ಯದಲ್ಲಿನ ಸೂಕ್ತ ಮಾಹಿತಿ ದೊರೆಯಾಗಬೇಕಾದರೇ ನಿವೃತ್ತಿಗೊಂಡ ಗೋದಾಮು ವ್ಯವಸ್ಥಾಪಕನ ವಿರುದ್ಧ ಸೂಕ್ತ ತನಿಖೆ ನಡೆಸಿಬೇಕಾಗಿದೆ.

    apvc-iconPost Views: 338
  • ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ

    ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ

    ಬರಹ:ಎನ್.ಎಚ್.ಮದರಕಲ್ಲ

    ಹವ್ಯಾಸಿ ಬರಹಗಾರರು, ಯಾದಗಿರಿ

     

    ಓದುವ ಅವ್ಯಾಸಕ್ಕಾಗಿ ಮಕ್ಕಳ ಸ್ನೇಹಿ ಗ್ರಂಥಾಲಯ ಪ್ರತಿ ವರ್ಷದಂತೆ ಈ ವರ್ಷವು ಅಗಸ್ಟ 12(August 12) ರಂದು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದನ್ನು ಎಸ್.ಆರ್. ರಂಗನಾಥನ್(S.R Ranganathan) ಅವರ ಹುಟ್ಟಿದ ದಿನದ ಸವಿನೆನಪಿಗಾಗಿ ನಡೆಸಲಾಗುವುದು. ಕಾರಣ ಅವರು ಗ್ರಂಥಾಲಯ ಕ್ಷೇತ್ರದಲ್ಲಿ ವಿಶೇಷವಾಗಿ ಸಲ್ಲಿಸಿದ ಸೇವೆ ಮತ್ತು ಗ್ರಂಥಾಲಯ ಅಭಿವೃದ್ಧಿಗಾಗಿ ನೀಡಿದ ಮಹತ್ತರ ಕೊಡುಗೆಯ ಕಾರಣಕ್ಕಾಗಿ ಈ ದಿನಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಆದ್ದರಿಂದಲೇ ಅವರನ್ನು ಸಾರ್ವಜನಿಕ ಗ್ರಂಥಾಲಯದ ಪಿತಾಮಹ ಎಂದು ಕರೆಯುತ್ತಾರೆ.

    ಕರ್ನಾಟಕದಲ್ಲಿ ಮೈಸೂರು ವಿಶ್ವವಿದ್ಯಾಲಯ ತುಂಬಾ ಹಳೆಯದಾದ (1916) ಗ್ರಂಥಾಲಯವಾಗಿದೆ. ದೇಶದಲ್ಲಿ ದೊಡ್ಡದಾದ (1903 ರಾಷ್ಟ್ರೀಯ ಗ್ರಂಥಾಲಯ) ಗ್ರಂಥಾಲಯ ಕಲ್ಕತ್ತಾದಲಿದೆ.

    1965ರ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಆಕ್ಟ್ ಕರ್ನಾಟಕದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪಸಿ ಮತ್ತು ನಿರ್ವಹಣೆ ಮಾಡುವ ಕುರಿತು ಹೇಳುತ್ತದೆ. ಸದ್ಯ ಕರ್ನಾಟಕದಲ್ಲಿ 692 ಸಾರ್ವಜನಿಕ ಗ್ರಂಥಾಲಯಗಳು, ಇಡೀ ದೇಶದಲ್ಲಿ 54,856 ಸಾರ್ವಜನಿಕ ಗ್ರಂಥಾಲಯಗಳಿವೆ ಎಂಬ ಮಾಹಿತಿ ಇದೆ. ಅದರೊಂದಿಗೆ ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಶಾಲಾ-ಕಾಲೇಜುಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಸೇವೆಯನ್ನು ಒದಗಿಸುತ್ತಿವೆ.

    ಗ್ರಂಥಾಲಯಗಳ ಪ್ರಮುಖ ಉದ್ದೇಶ ಹಲವಾರು ರೀತಿಯ ಗ್ರಂಥಗಳು ಅಥವಾ ಪುಸ್ತಕಗಳನ್ನು ಶೇಖರಿಸಿಡುವುದರ ಜೊತೆಗೆ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಓದುವ ಹವ್ಯಾಸವನ್ನು ವೃದ್ಧಿಸುವುರೊಂದಿಗೆ, ಉಚಿತವಾಗಿ ವಿತರಣೆ ಮಾಡುವ ಮೂಲಕ ಜನರಲ್ಲಿ ಶೈಕ್ಷಣಿಕ ಅರಿವು ಮೂಡಿಸಿ ಓದುವ ಹವ್ಯಾಸ ಮೂಡಿಸುವುದಾಗಿದೆ. ಅಲ್ಲದೇ ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ಲೇಷಣಾತ್ಮಕ, ಸಂಶೋಧನಾ ಮನೋಭಾವ ಬೆಳೆಸುವುದಾಗಿದೆ.

    ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ನಮ್ಮ ಪ್ರಾಥಮಿಕ ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಮಕ್ಕಳ ಸ್ನೇಹಿಯಾಗಿಸಲು ದಿನಾಂಕ: 25.07.2024ರಂದು ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿ, 1ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ “ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮದಡಿಯಲ್ಲಿ ಕಡ್ಡಾಯವಾಗಿ ವಾರಕ್ಕೊಂದು ಅವಧಿಯನ್ನು ಓದುವಿಕೆಗಾಗಿ ನಿಗಧಿಪಡಿಸಿ, ಅನುಷ್ಠಾನಗೊಳಿಸಲು ಸುತ್ತೋಲೆ ಹೊರಡಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

    ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಆಗುವುದಲ್ಲದೇ, ಶಿಕ್ಷಣದ ಧ್ಯೇಯವಾಗಿರುವ ವಿದ್ಯಾರ್ಥಿಗಳ ಜ್ಞಾನ, ಬುದ್ಧಿ ಮತ್ತು ಮೌಲ್ಯದ ಕ್ರೀಯಾಶೀಲ ವಿಕಾಸಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳು ಓದುವುದು ಅಗತ್ಯವಾಗಿದೆ. ಪುಸ್ತಕ ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ಧಭಂಡಾರ ವೃದ್ಧಿಸುತ್ತದೆ ಅಲ್ಲದೇ, ಅವರ ಮನೋವಿಕಾಸಕ್ಕೆ ಪೂರಕವಾಗಿರುತ್ತದೆ. ಅಲ್ಲದೇ ಮಕ್ಕಳಲ್ಲಿ ಶಬ್ಧಭಂಡಾರವಲ್ಲದೇ, ಓದುವಿಕೆಯಲ್ಲಿ ನಿರರ್ಗಳತೆ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿರುತ್ತದೆ ಎಂಬುದು ಇದರ ಹಿಂದಿರುವ ಉದ್ದೇಶವಾಗಿದೆ.

    ಈ ಹಿನ್ನೆಲೆಯಲ್ಲಿ ಎಲ್ಲ ಶಾಲಾ-ಕಾಲೇಜುಗಳು “ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಘೋಷವ್ಯಾಖ್ಯೆಯೊಂದಿಗೆ ಒಂದು ವಾರಗಳ ಕಾಲ ‘ಗ್ರಂಥಾಲಯ ದಿನಾಚರಣೆ’ ಯನ್ನು ಆಚರಿಸುವ ಮೂಲಕ ಗ್ರಂಥಾಲಯವನ್ನು ಮಕ್ಕಳ ಸ್ನೇಹಿಯನ್ನಾಗಿ ಮಾಡುವುದು ಮತ್ತು ಓದುವಿಕೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದು ತುಂಬಾ ಪ್ರಮುಖವಾಗಿದೆ.

     

    apvc-iconPost Views: 84
  • ಮಹಾಪೌರರಾದ ಯಲ್ಲಪ್ಪ ಎಸ್ ನಾಯ್ಕೋಡಿ ರವರಿಗೆ ಉದಯ ನಗರ ನಾಗರಿಕರಿಂದ  ಸನ್ಮಾನ ಕಾರ್ಯಕ್ರಮ

    ಮಹಾಪೌರರಾದ ಯಲ್ಲಪ್ಪ ಎಸ್ ನಾಯ್ಕೋಡಿ ರವರಿಗೆ ಉದಯ ನಗರ ನಾಗರಿಕರಿಂದ ಸನ್ಮಾನ ಕಾರ್ಯಕ್ರಮ

    ಕಲಬುರಗಿ: ಪೌರರಾದ ಯಲ್ಲಪ್ಪ ಎಸ್ ನಾಯ್ಕೋಡಿ ರವರಿಗೆ ಉದಯ ನಗರ ನಾಗರಿಕರಿಂದ ಅದ್ದೂರಿ ಹೃದಯಸ್ವರ್ಶ ಸನ್ಮಾನ ಕಾರ್ಯಕ್ರಮ,

    ಕಾರ್ಯಕ್ರಮದ ಅತಿಥಿಗಳಾಗಿ ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ ಕೂಡ ಭಾಗಿಯಾಗಲಿದ್ದಾರೆ.

    ಕಲಬುರಗಿ ನಗರದ ೫೩ನೇ ವಾರ್ಡನಿಂದ ಮಹಾನಗರ ಪಾಲಿಕೆಗೆ ಸದಸ್ಯರಾಗಿ ಆಯ್ಕೆಯಾಗಿದ್ದ ಯಲ್ಲಪ್ಪ. ಎಸ್. ನಾಯ್ಕೋಡಿ ಇವರು, ನೂತನವಾಗಿ ಕಲಬುರಗಿ ಮಹಾನಗರ ಪಾಲಿಕೆಗೆ ಮಹಾ ಪೌರರಾಗಿ ನೇಮಕಗೊಂಡ ಪ್ರಯುಕ್ತ ದಿನಾಂಕ: ೭-೦೮-೨೦೨೪ ರಂದು ಮುಂಜಾನೆ ೧೦.೩೦ ಗಂಟೆಗೆ ಉದಯ ನಗರ ಬಡಾವಣೆಯ ನಾಗರಿಕರಿಂದ ಮಹಾ ಪೌರರಿಗೆ ಅದ್ದೂರಿಯಾಗಿ ಹೃದಯಸ್ವರ್ಶ ಸನ್ಮಾನ ಹಮ್ಮಿಕೊಳ್ಳಲಾಗಿದೆ, ಸದರಿ ಕಾರ್ಯಕ್ರಮಕ್ಕೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ ರವರು ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಉದಯ ನಗರ ಬಡಾವಣೆಯ ಸಂಘದ ಅಧ್ಯಕ್ಷರಾದ  ಮೋನಪ್ಪ ಬಡಿಗೇರ ವಹಿಸಲಿದ್ದಾರೆ ಪ್ರಯುಕ್ತ ಸದರಿ ಕರ್ಯಾಕ್ರಮಕ್ಕೆ ಬಡಾವಣೆಯ ಜನತೆಯು  ಮಹಾಪೌರರ ಅಭೀಮಾನಿಗಳು ಹೆಚ್ಚನ ಸಂಖೈಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿಗಳಾದ  ದೇವೆಂದ್ರಪ್ಪ ತೋಟ್ನಳ್ಳಿ ಮತ್ತು ಗುರುರಾಜ ಕುಲಕರ್ಣಿ ಪತ್ರಿಕಾ ಪ್ರಕಟಣೆ ಮೂಲಕ ತೀಳಿಸಿರುತಾರೆ.

    apvc-iconPost Views: 29
  • ಲೋಕಾಯುಕ್ತರ ಬಲೆಗೆ:  ಅಗ್ನಿಶಾಮಕ ಅಧಿಕಾರಿ ಗುರುರಾಜ್ ಹಾಗೂ ಸಿಬ್ಬಂದಿ ಸೋಪನ್ ರಾವ್

    ಲೋಕಾಯುಕ್ತರ ಬಲೆಗೆ: ಅಗ್ನಿಶಾಮಕ ಅಧಿಕಾರಿ ಗುರುರಾಜ್ ಹಾಗೂ ಸಿಬ್ಬಂದಿ ಸೋಪನ್ ರಾವ್


    *ಸತ್ಯಕಾಮ ವಾರ್ತೆ ಕಲಬುರಗಿ:*
    ಪೆಟ್ರೋಲ್ ಬಂಕ್ ನಿರಾಕ್ಷೇಪಣಾ ಪತ್ರ (ಎನ್‌ಒಸಿ)ವನ್ನು ನೀಡಲು 20 ಸಾವಿರ ಹಣ ಪಡೆಯುತ್ತಿದ್ದಾಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್ ಹಾಗೂ ಸಿಬ್ಬಂದಿ ಸೋಪನ್ ರಾವ್ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    ಚಿತ್ತಾಪೂರದ ರಾಜರಾಮಪ್ಪ ನಾಯಕ್ ಅವರು ತಮ್ಮ ಪೆಟ್ರೋಲ್ ಬಂಕ್ ಎನ್‌ಒಸಿ ಕೋರಿ ಅಗ್ನಿಶಾಮಕ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಎನ್ಒಸಿ ನೀಡುವುದಕ್ಕೆ ಕಲಬುರ್ಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್ ಹಾಗೂ ಸಿಬ್ಬಂದಿ ಸೋಪನ್ ರಾವ್ ಒಂದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಬ್ಬರು ಫಲಾನುಭವಿಯಿಂದ ಮುಂಗಡವಾಗಿ 20 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

    ಲೋಕಾಯುಕ್ತ ಎಸ್‌.ಪಿ.ಜಾನ್ ಆಂಟೋನಿ ನೇತೃತ್ವದಲ್ಲಿ ಡಿ.ಎಸ್‌.ಪಿ . ಮಂಜುನಾಥ್. ಇನ್‌ಸ್ಪೆಕ್ಟರ್‌ ದ್ರುವತಾರ, ಸಿಬ್ಬಂದಿ ಮಲ್ಲಿನಾಥ್. ಮಸೂದ್. .ದಾಳಿ ನಡೆಸಿದ್ದರು.

    apvc-iconPost Views: 143
  • ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ; ಕುಮಾರಸ್ವಾಮಿ ಸಹೋದರನ ಆಸ್ತಿ ಲೆಕ್ಕ ನೀಡಲಿ: ಡಿಸಿಎಂ ಡಿ. ಕೆ. ಶಿವಕುಮಾರ್

    ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ; ಕುಮಾರಸ್ವಾಮಿ ಸಹೋದರನ ಆಸ್ತಿ ಲೆಕ್ಕ ನೀಡಲಿ: ಡಿಸಿಎಂ ಡಿ. ಕೆ. ಶಿವಕುಮಾರ್


    *ಬೆಂಗಳೂರು, ಆ.5:*

    “ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸವಾಲೆಸೆದರು.

    ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು “ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ತಿರುಗೇಟು ನೀಡಿದರು.

    “ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ನಾನು ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ” ಎಂದರು.

    “ವಿಜಯೇಂದ್ರ ಹೇಳುತ್ತಾನೆ ಭ್ರಷ್ಟಾಚಾರದ ಪಿತಾಮಹಾ ನಾನು ಎಂದು. ನೀನು ಮೊದಲು ಹೇಳಪ್ಪ, ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲಾ ಆಯಿತು ಇದರ ಲೆಕ್ಕಾಚಾರ ಮೊದಲು ನೀಡು. ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ” ಎಂದು ಹೇಳಿದರು.

    “ಇಂದು ಮದ್ದೂರಿನಲ್ಲಿ ಜನಾಂದೋಲನ ಯಾತ್ರೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ” ಎಂದರು.

    apvc-iconPost Views: 41
  • ಕಂದಗನೂರು’ನಲ್ಲಿ ಚಿರತೆ ಪತ್ತೆ ದೃಢ; ಕತ್ತೆ ಕಿರುಬ ಎಂದಿದ್ದ ಅರಣ್ಯ ಅಧಿಕಾರಿಗಳು.!

    ಕಂದಗನೂರು’ನಲ್ಲಿ ಚಿರತೆ ಪತ್ತೆ ದೃಢ; ಕತ್ತೆ ಕಿರುಬ ಎಂದಿದ್ದ ಅರಣ್ಯ ಅಧಿಕಾರಿಗಳು.!

    ವರದಿ: ಶ್ರೀಶೈಲ್ ಪೂಜಾರಿ

    ಸತ್ಯಕಾಮ ವಾರ್ತೆ ಮುದ್ದೇಬಿಹಾಳ;

    ತಾಲೂಕಿನ ಕಂದಗನೂರು ಗ್ರಾಮದಲ್ಲಿ ಚಿರತೆ ಇರುವುದು ದೃಢವಾಗಿದೆ. ನಿನ್ನೆ(ಮಂಗಳವಾರ) ಅಳವಡಿಸಿದ್ದ ಸೆನ್ಸಾರ್ ಕ್ಯಾಮರಾದಲ್ಲಿ ಚಿರತೆ ಬಂದು ಹೋಗಿರುವುದು ಹಾಗೂ ಅದರ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ವಲಯ ಅರಣ್ಯ ಅಧಿಕಾರಿಗಳೊಬ್ಬರು ಸ್ಪಷ್ಟಪಡಿಸಿದರು.

    ಮೂರು ದಿನ ಹಿಂದೆ ಚಿರತೆ ಚಲನವಲನಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿದುಬಂದಿದ್ದು, ಅರಣ್ಯ ಇಲಾಖೆ ನಿನ್ನೆಯಿಂದ ಚಿರತೆಯ ಸೆರೆಗೆ ಬೋನು ಇರಿಸಿದ್ದರು. ಮಂಗಳವಾರ ರಾತ್ರಿ (ಜುಲೈ 30) ಚಿರತೆ ಬಂದು ಹೋಗಿರುವುದು ಹಾಗೂ ಅದರ ಹೆಜ್ಜೆಗುರುತುಗಳು ಪತ್ತೆಯಾಗಿದೆ. ಚಿರತೆ ಹಿಡಿಯಲು ಬೋನಿನಲ್ಲಿ ಮಾಂಸ ಅಳವಡಿಸಲಾಗಿತ್ತು ಆದರೆ ಮೊದಲು ಬೋನಿನಲ್ಲಿ ನಾಯಿ ಬಿದ್ದಿದ್ದು, ತದನಂತರ ಬೋನಿನ ಸಮೀಪ ಚಿರತೆ ಬಂದು ಹೋಗಿದೆ. ಚಿರತೆ ಹಿಡಿಯಲು ಕಾರ್ಯಾಚರಣೆ ಮುಂದುವರೆಸಿದ್ದೇವೆ ಎಂದು ವಲಯ ಅರಣ್ಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

    ಇತ್ತೀಚೆಗೆ ಕಂದಗನೂರನಲ್ಲಿ ಜುಲೈ 28 ಕ್ಕೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಅಲ್ಲದೇ ಗ್ರಾಮದ ಸಿದ್ರಾಮಪ್ಪ ಬೋವಿ ಅವರ ಹೊಲದಲ್ಲಿ ಆಕಳು, ಎಮ್ಮೆಯನ್ನು ತಿಂದು ಕಡಿದು ಹಾಕಿತ್ತು. ಇದರಿಂದ ಗ್ರಾಮದ ರೈತರು ಭಯಭೀತರಾಗಿ ಕೃಷಿಗೆ ಹೋಗುವುದನ್ನ ನಿಲ್ಲಿಸಿದ್ದರು. ಈಗ ಚಿರತೆ ಇರುವುದು ದೃಢವಾದ ಹಿನ್ನಲೆಯಲ್ಲಿ ಮತ್ತೆ ಜಮೀನಿಗೆ ನೀರು ಹಾಯಿಸಲು ಹಾಗೂ ಇನ್ನೀತರ ಕೆಲಸ ಕಾರ್ಯಗಳಿಗೆ ಹೋಗಲು ರೈತರು ಹಿಂದೇಟು ಹಾಕುವಂತಾಗಿದೆ. ಆಗ ಅರಣ್ಯ ಅಧಿಕಾರಿಗಳು ಚಿರತೆ ಅಲ್ಲ ಕತ್ತೆ ಕಿರುಬ ಎಂದು ಹೇಳಿ ನುಣುಚಿಕೊಳ್ಳುವ ಯತ್ನ ಮಾಡಿದ್ದರು.

    ಚಿರತೆ ಸೆರೆಗೆ ಪರಿಣಿತ ತಂಡ ರಚನೆ ಯಾವಾಗ?

    ಇಷ್ಟೆಲ್ಲಾ ಘಟನೆ ಸಂಭವಿಸಿದರು ಈ ವರೆಗೂ ವಲಯ ಅರಣ್ಯಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಚಿರತೆ ಕಾಣಿಸಿಕೊಂಡಿರುವುದನ್ನು ಗ್ರಾಮಸ್ಥರು ಮೂರು ದಿನದಿಂದ ಹೇಳುತ್ತಿದ್ದರು ಅಧಿಕಾರಿಗಳು ಕಾಲಹರಣ ಮಾಡಿದ್ದು ನಿನ್ನೆಯಿಂದ ಬೋನು ಅಳವಡಿಸಲಾಗಿದೆ.

    ಈವರೆಗೂ ಚಿರತೆ ಹಿಡಿಯಲು ಪರಿಣಿತ ತಂಡ ರಚನೆ ಆಗಿಲ್ಲ. ಇಲ್ಲಿನ ಸಿಬ್ಬಂದಿಗಳಿಗೆ ಶಿಪ್ಟ್ ರೀತಿಯಲ್ಲಿ ಐದು ಜನರ ತಂಡ ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ. ಆದರೆ ಗ್ರಾಮದ ಸುತ್ತಮುತ್ತಲೂ ಕಬ್ಬು ಇರುವುದರಿಂದ ಕಾರ್ಯಾಚರಣೆಗೆ ಅಡಚಣೆ ಆಗಿದ್ದು, ಪರಣಿತ ತಂಡ ರಚನೆ ಆಗುವವರೆಗೂ ಈ ಚಿರತೆ ಸೆರೆ ಹಿಡಿಯುವುದು ಯಶಸ್ವಿ ಆಗುತ್ತಾ ಎನ್ನುವಂತಾಗಿದೆ.

    ವಿಡಿಯೋ ವೈರಲ್; ಚಿರತೆ ಇಲ್ಲ ಕೇವಲ ವದಂತಿ ಎಂದು ಕೆಲವರು ಅಂದರೆ ಇನ್ನು ಕೆಲವರು ಚಿರತೆ ಯನ್ನು ಸೆರೆ ಹಿಡಿಯಲಾಗಿದೆ ಎಂದು ಹೇಳಿದ್ದರು. ಆದರೆ ಇದೆಲ್ಲದಕ್ಕೂ ಈಗ ತೆರೆಬಿದ್ದಿದ್ದು, ಕಂದಗನೂರಿನಲ್ಲಿ ಗ್ರಾಮ ವ್ಯಾಪ್ತಿ ಜಮೀನಿನಲ್ಲಿ ಚಿರತೆ ಓಡಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    apvc-iconPost Views: 184
  • ಮುದ್ರಣ ಮಾಧ್ಯಮದ ಮೇಲೆ ಜನರಿಗೆ ಅಪಾರ ವಿಶ್ವಾಸ ;ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ

    ಮುದ್ರಣ ಮಾಧ್ಯಮದ ಮೇಲೆ ಜನರಿಗೆ ಅಪಾರ ವಿಶ್ವಾಸ ;ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ

    ಸತ್ಯಕಾಮ ವಾರ್ತೆ ಯಾದಗಿರಿ:
    ಮುದ್ರಣ ಮಾಧ್ಯಮದ ಮೇಲೆ ಜನರ ಮೇಲೆ ಅಪಾರವಾದ ವಿಶ್ವಾಸವಿದೆ. ಹೀಗಾಗಿಯೇ ಸಾಮಾಜಿಕ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವುದೇ ವಿಷಯವನ್ನು ಜನರಿಗೆ ತಿಳಿಸುವ ಮುನ್ನ ಸತ್ಯಾಸತ್ಯತೆ ಅರಿಯಬೇಕು. ನಿಖರವಾದ ಮಾಹಿತಿಯ ತಿಳಿಸಬೇಕು. ತಪ್ಪಾಗಿ ನೀಡಿದರೇ ಸಮಾಜದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ. ಇದಕ್ಕೆ ಎಂದಿಗೂ ಅವಕಾಶ ಮಾಡಿಕೊಡಬಾರದು ಎಂದು ತಿಳಿಸಿದರು.

    ನಂತರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ ಎಲ್ಲಿಯೂ ನ್ಯಾಯ ಸಿಗದಿದ್ದಾಗ ಮಾಧ್ಯಮಗಳ ಮುಂದೆ ಹೋದರೇ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಜನರ ಮೇಲಿದೆ. ಹೀಗಾಗಿಯೇ ಪತ್ರಕರ್ತರು ಸತ್ಯವನ್ನು ಜನತೆಗೆ ತಿಳಿಸುವಂತಹ ಕೆಲಸ ಮಾಡಲು ಮುಂದಾಗುವುದು ತುಂಬ ಅಗತ್ಯವಿದೆ ಎಂದು ಹೇಳಿದರು.

    ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ಮಾತನಾಡಿ; ರಾಜ್ಯ ಸರಕಾರ ಆಂಧ್ರ ಮಾದರಿಯಲ್ಲಿ ಪತ್ರಕರ್ತರಿಗೆ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಪತ್ರಕರ್ತರಿಗೆ ನಿವೇಶನಗಳನ್ನು ನೀಡಲು ರಾಜ್ಯ ಸರಕಾರ ಮುಂದಾಗಬೇಕು ಎಂದು ತಿಳಿಸಿದರು.

    ರಾಜ್ಯ ಸರಕಾರ ಶೀಘ್ರದಲ್ಲಿಯೇ ಗ್ರಾಮೀಣ ಪ್ರತಕರ್ತರಿಗೆ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಿದೆ. ಇದರ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವುದು ತುಂಬ ಅಗತ್ಯವಿದೆ ಎಂದು ತಿಳಿಸಿದರು.

    ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಮಾತನಾಡಿ; ಪತ್ರಿಕೋದ್ಯಮದಲ್ಲಿ ನೈಜ ಪತ್ರಕರ್ತರ ಸಂಖ್ಯೆ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇದಲ್ಲದೇ ಯಾವುದೇ ಸುದ್ದಿ ಬರೆಯುವ ಮುನ್ನ ಅದರ ಅಧ್ಯಯನ ಮಾಡಬೇಕು ಎಂದರು.

    ಡಿಡಿಯು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ. ಭೀಮಣ್ಣ ಮೇಟಿ ಮಾತನಾಡಿ; ಸ್ಪರ್ಧಾತ್ಮ ಜಗತ್ತಿನಲ್ಲಿ ಸಾಕಷ್ಟು ಮಾಧ್ಯಮಗಳು ಹೊಸದಾಗಿ ಬರುತ್ತಿವೆ. ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗಿಂತಲೂ ಮುದ್ರಣ ಮಾಧ್ಯಮ ಮೇಲೆ ಸಾಕಷ್ಟು ವಿಶ್ವಾಸವಿದೆ. ಇದನ್ನು ಉಳಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ನದಾಫ್ ಸೇರಿದಂತೆ ಇನ್ನಿತರರು ಇದ್ದರು.

    apvc-iconPost Views: 18
  • ಕಾರ್ಗಿಲ್ ವಿಜಯಕ್ಕೆ ರಜತ ಸಂಭ್ರಮ!

    ಕಾರ್ಗಿಲ್ ವಿಜಯಕ್ಕೆ ರಜತ ಸಂಭ್ರಮ!

    ಚಿದಾನಂದ ಮಾಯಪ್ಪಾ ಪಡದಾಳೆ

    ಅಂದು ಮೇ. 3, 1999. ಫರ್ಕೂನ್ ಎಂಬ ಹಳ್ಳಿಯ ತಶಿ ನಂಗ್ಯಾಲ್ ಎಂಬಾತ ಕುರಿಗಳನ್ನು ಮೇಯಿಸಲು ಹೊರಟಿದ್ದ. ಆಗ ಆತನ ಗಮನ ಟೋಲೋಲಿಂಗ್ ಬೆಟ್ಟದ ಕಡೆಗೆ ನೆಟ್ಟಿತು. ಆತ ಸೂಕ್ಷ್ಮವಾಗಿ ಗಮನಿಸಿದ ಅವರು ಗಾಢ ಬಣ್ಣದ ಬಟ್ಟೆ ಧರಿಸಿದ್ದರು. ಅವರು ತಮ್ಮ ಕೆಲಸದಲ್ಲಿ ನಿರತವಾಗಿದ್ದರು. ಈತನಿಗೆ ಸಂಶಯ ಉಂಟಾಗಿ ಆ ಪ್ರದೇಶದ ಸೈನ್ಯಾಧಿಕಾರಿಗೆ ವಿಷಯ ಮುಟ್ಟಿಸಿದ. ಸೈನ್ಯಾಧಿಕಾರಿಯು ತನ್ನ ಸೈನಿಕರಿಗೆ ಬೆಟ್ಟದ ಮೇಲಿರುವ ಬಂಕರ್‍ಗಳನ್ನು ಪರೀಕ್ಷಿಸಿ ಬರುವಂತೆ ಆದೇಶ ನೀಡುತ್ತಾರೆ. ಆರು ಜನರಿದ್ದ ಗುಂಪೊಂದು ಆ ಬೆಟ್ಟದ ಮೇಲೆ ಹೋಗಿ 22 ದಿನಗಳ ನಂತರ ವಾಪಸಾಗುತ್ತದೆ. ಆದರೆ ಜೀವಂತವಾಗಿ ಅಲ್ಲ. ಬದಲಾಗಿ ಗುರುತು ಹಿಡಿಯಲಾರದಂಥ ಶವಗಳಾಗಿ! ಆ ಶವಗಳು ಬೇರಾರೂ ಆಗಿರುವುದಿಲ್ಲ ಸ್ವತಃ ನಮ್ಮ ಭಾರತ ದೇಶದ ಸೈನಿಕರ ಶವಗಳವು! ಈ ಬರ್ಬರ ಕೃತ್ಯ ಎಸಗಿದವರು ಬೇರಾರೂ ಅಲ್ಲ ಕುರಿ ಕಾಯುವಾತ ಕಂಡಿದ್ದ ಗಾಢ ಬಣ್ಣದ ಬಟ್ಟೆ ಧರಿಸಿದವರು. ಆ ಬಟ್ಟೆ ಧರಿಸಿದವರು ಬೇರಾರೂ ಅಲ್ಲ, ಅಕ್ರಮವಾಗಿ ಭಾರತದ ಗಡಿಯನ್ನು ನುಸುಳಿ ಬಂದ ಪಾಕಿಸ್ತಾನಿ ಹೇಡಿ ಸೈನಿಕರು.! ಪಾಕಿಸ್ತಾನ ಮುನ್ಸೂಚನೆ ಇಲ್ಲದೆಯೇ ಭಾರತದ ಗಡಿಯನ್ನು ದಾಟಿ ಬಂದಿತ್ತಿಲ್ಲದೇ ನಮ್ಮ ಆರು ಜನ ಸೈನಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಂದು ಹಾಕಿತ್ತು. ಈ ಕೃತ್ಯದ ಹಿಂದಿದ್ದಿವರು ಬೇರಾರೂ ಅಲ್ಲ, ಆಗಿನ ಪಾಕ್ ಪ್ರಧಾನಿ ನವಾಜ್ ಷರೀಫ್ ಮತ್ತು ಪಾಕ್ ಸೇನಾ ಮುಖ್ಯಸ್ಥ ಜನರ್ ಪರ್ವೇಜ್ ಮುಷರಫ್!

    ಹಿನ್ನೆಲೆ:
    1971ರಲ್ಲಿಯೇ ಭಾರತ ಹಾಗೂ ಪಾಕಿಸ್ತಾನದ ಮಧ್ಯೆ ‘ಸಿಮ್ಲಾ’ ಒಪ್ಪಂದವಾಗಿತ್ತು. ಒಪ್ಪಂದದಂತೆ ಉಭಯ ದೇಶಗಳು ಸೌಹಾರ್ದತೆ, ಮಾನವೀಯತೆಯಿಂದ ತಮ್ಮ ನೆಲೆಗಳಲ್ಲಿಯೇ ಬಾಳಬೇಕು. ಗಡಿ ನಿಯಂತ್ರಣ ರೇಖೆ ಉಲ್ಲಂಘಿಸದಂತೆ ಎರಡೂ ದೇಶಗಳು ನೋಡಿಕೊಳ್ಳಬೇಕು ಎಂಬುವುದಾಗಿತ್ತು. ಇದಕ್ಕೆ ಪೂರಕ ಎನ್ನುವಂತೆ 1990ರ ಫೆಬ್ರುವರಿ ತಿಂಗಳಲ್ಲಿ ಅಂದಿನ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಬಸ್ ಯಾತ್ರೆಯ ಮೂಲಕ ಪಾಕಿಸ್ತಾನಕ್ಕೆ ತೆರಳಿ ‘ಲಾಹೋರ್ ಘೋಷಣೆ’ಗೆ ಅಂಕಿತ ಹಾಕಿದ್ದರು. ಈ ಘೋಷಣೆಯ ಮುಖ್ಯ ಉದ್ದೇಶವೆಂದರೆ, ‘ಕಾಶ್ಮೀರದ ಬಿಕ್ಕಟ್ಟಿಗೆ ಶಾಂತಿಯುತವಾದ ದ್ವಿ-ಪಕ್ಷೀಯ ಪರಿಹಾರ ಹುಡುಕುವುದಾಗಿತ್ತು’. ಈ ಸಂದರ್ಭದಲ್ಲಿ ಷರೀಫರಿಗೆ ವಾಜಪೇಯಿಯವರು ಭಾರತಕ್ಕೆ ಬರುವಂತೆ ಆಹ್ವಾನವಿತ್ತಿದ್ದರು. ಆಗ ಭಾರತ-ಪಾಕಿಸ್ತಾನ ‘ಭಾಯಿ-ಭಾಯಿ’ ಎನ್ನುತ್ತಿದ್ದವರು, ವಾಜಪೇಯಿಯವರು ಭಾರತಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಪಾಕಿಸ್ತಾನ ತನ್ನ ನರಿ ಬುದ್ಧಿಯನ್ನು ತೋರಿತ್ತು! ಪಾಕ್ ಸೈನಿಕರನ್ನು ಭಾರತದೊಳಗೆ ನುಸುಳುವಂತೆ ಸೂಚಿಸಿತ್ತಾದರೂ; ತಾವು ಈ ಕೃತ್ಯ ಮಾಡಿಲ್ಲ ಎಂದು ಬೊಗಳೆ ಬಿಟ್ಟಿತೇ ಹೊರತು ತನ್ನ ತಪ್ಪನ್ನು ಒಪ್ಪಿಕೊಳ್ಳಲಿಲ್ಲ. 1998ರ ಅಕ್ಟೋಬರ್‍ನಲ್ಲಿಯೇ ಅಧಿಕಾರ ಸ್ವೀಕರಿಸಿದ್ದ ಮುಷರಫ್ ತನ್ನ ಸೈನಿಕರಿಗೆ ಭಾರತದ ಬಗ್ಗೆ ವಿಷದ ಬೀಜವನ್ನು ಬಿತ್ತುವ ಕೆಲಸವನ್ನು ಮಾಡಿದ್ದ. 30-40 ಜನರ ತಂಡಗಳನ್ನು ರಚಿಸಿದ. ಇದರಲ್ಲಿ ಮುಜಾಹಿದ್ದೀನ್ ಕೂಡ ಇದ್ದರು ಎನ್ನುವುದು ಜಗಜ್ಜಾಹಿರು. ‘ಆಪರೇಷನ್ ಬದ್ರ್’ ಎಂಬ ತಂತ್ರ ರೂಪಿಸಿ ಕಾಶ್ಮೀರ ಕಣಿವೆಯಿಂದ ಲಡಾಖ್‍ನ್ನು ಬೇರ್ಪಡಿಸಿ, ಸಿಯಾಚಿನ್ ಗ್ಲೇಷಿಯರನ್ನು ವಶಪಡಿಸಿಕೊಳ್ಳುವುದು ಮುಷರಫ್ ಉದ್ದೇಶವಾಗಿತ್ತು. ಇದಕ್ಕಾಗಿ ಗಡಿ ನಿಯಂತ್ರಣ ರೇಖೆಯಿಂದ ಕಾರ್ಗಿಲ್‍ನ ಸುಮಾರು 160 ಕಿ.ಮೀ.ವರೆಗೆ ಪಾಕ್ ಸೈನಿಕರು ನುಗ್ಗಿ ಬಂದಿದ್ದರು. ಅಂದರೆ ‘ಸಿಮ್ಲಾ’ ಒಪ್ಪಂದಕ್ಕೆ ಹಾಗೂ ‘ಲಾಹೋರ್ ಘೋಷಣೆ’ಗೆ ಎಳ್ಳು ನೀರು ಹೊಯ್ದು ಕೈ ತೊಳೆದುಕೊಂಡು ತೋಳೆರಿಸಿ ಪಾಕ್, ಭಾರತದ ಮುಂದೆಯೇ ಎದೆಯುಬ್ಬಿಸಿ ನಿಂತಿತ್ತು. ಆದರೆ ಅದಕ್ಕೇನು ಗೊತ್ತು ಭಾರತದ ಶಕ್ತಿ?

    ಪಾಕಿಸ್ತಾನ ಗಡಿಯೊಳಗೆ ನುಸುಳಿದೆ ಎಂದು ಗೊತ್ತಾದೊಡನೆ ವಾಜಪೇಯಿಯವರು ಜಾಗೃತರಾಗಿ 1999ರ ಜೂನ್ 7ರಂದು ದೇಶವನ್ನುದ್ದೇಶಿಸಿ ಮಾತನಾಡಿ, ‘ನಮ್ಮ ಸೈನ್ಯ ಹಾಗೂ ಸೈನಿಕರ ಮೇಲೆ ಸಂಪೂರ್ಣ ನಂಬಿಕೆಯಿದೆ. ಪಾಕ್ ಆಕ್ರಮಿಸಿಕೊಂಡ ಇಂಚಿಂಚು ನೆಲವನ್ನು ಕೂಡ ನಮ್ಮ ಯೋಧರು ವಾಪಸ್ ಪಡೆದುಕೊಳ್ಳುತಾರೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ’ ಎಂದರು. ಇಂತಹ ಮಾತುಗಳಿಂದ ಪ್ರೇರಿತರಾದ ನಮ್ಮ ವೀರ ಯೋಧರು ಯುದ್ಧಕ್ಕೆ ಸನ್ನದ್ಧರಾದರು. ವಾಜಪೇಯಿಯವರ ವಿಶ್ವಾಸದ ಮಾತುಗಳಿಂದ ಸೈನಿಕರ ಬಲ ನೂರ್ಮಡಿಗೊಂಡಿತು. ಯುದ್ಧ ಗೆಲ್ಲುವುದು ಖಚಿತ ಎಂಬ ಭಾವನೆ ಭಾರತೀಯರೆಲ್ಲರಲ್ಲೂ ಮನೆ ಮಾಡಿತು. ದೇಶದ ಪ್ರತಿಯೊಬ್ಬರ ಹೃದಯ ಗೆಲುವಿಗಾಗಿ ಪ್ರಾರ್ಥಿಸಿತು. ಆ ಪ್ರಾರ್ಥನೆಗೆ ವ್ಯರ್ಥವಾಗಲಿಲ್ಲ.

    ಆಪರೇಷನ್ ವಿಜಯ್:
    1999ರ ಮೇ 3ರಂದು ಕುರಿ ಕಾಯುವವ ನೀಡಿದ ಸುಳಿವಿನಂತೆ, ಮೇ ಎರಡನೇ ವಾರದಲ್ಲಿ ಕ್ಯಾಪ್ಟನ್ ಸೌರಭ್ ಕಾಲಿಯಾ ನೇತೃತ್ವದಲ್ಲಿ 5 ಜನರ ಸೇನಾ ತುಕಡಿಯನ್ನು ಬೆಟ್ಟದ ಮೇಲಿರುವ ಬಂಕರ್‍ಗಳನ್ನು ಪರೀಕ್ಷಿಸಿ ಬರುವಂತೆ ಆದೇಶ ನೀಡಲಾಗುತ್ತದೆ. ಆದರೆ ಅವರನ್ನು ಮೇ 15ರಂದು ಸೆರೆಹಿಡಿದು, ಚಿತ್ರಹಿಂಸೆ ನೀಡಿ, ಬರ್ಬರವಾಗಿ ಹತ್ಯೆಗೈದು 22 ದಿನಗಳ ನಂತರ ಅಂದರೆ ಜೂನ್ 7ಕ್ಕೆ ಭಾರತಕ್ಕೆ ಯೋಧರ ಶವಗಳನ್ನು ಗೋಣಿ ಚೀಲಗಳಲ್ಲಿ ಹಾಕಿ ಕಳುಹಿಸಿರುತ್ತಾರೆ ಪಾಪಿಗಳು! ಕಾರ್ಗಿಲ್ ಯುದ್ಧ ಆರಂಭವಾಗುವುದಕ್ಕೆ ಇದೂ ಒಂದು ಮುಖ್ಯ ಕಾರಣವಾಯ್ತು. ಇದರಿಂದ ಕ್ರುದ್ಧಗೊಂಡ ವಾಜಪೇಯಿಯವರು ಪಾಕ್ ವಿರುದ್ಧ ಯುದ್ಧ ಸಾರಿಯೇ ಬಿಟ್ಟರು. ಅನುಮತಿಯನ್ನೇ ಕಾಯುತ್ತಿದ್ದ ಬಾರತೀಯ ಸೈನಿಕರ ಸಹನೆ ಕಟ್ಟೆಯೊಡೆಯಿತು. ‘ಆಪರೇಷನ್ ವಿಜಯ್’ ಮೂಲಕ ಹುಲಿಗಳಂತೆ ಪಾಕ್ ಸೈನಿಕರ ಮೇಲೆ ನುಗ್ಗಿದರು. ಕಾರ್ಗಿಲ್-ಡ್ರಾಸ್ ವಲಯದಲ್ಲಿ ಸುಮಾರು 30,000ದಷ್ಟು ಸೈನಿಕರಿದ್ದರು. ಇದರಲ್ಲಿ 20,000 ಭೂ ಸೇನಾ ಪಡೆಯ ಯೋಧರು, 10,000 ವಾಯು ಸೇನೆ ಯೋಧರು ಹಾಗೂ ಅರೆಸೇನಾಪಡೆಯ ಯೋಧರೂ ಇದ್ದರು. ಅವರೆಲ್ಲರೂ ಹೋರಾಡಬೇಕಾದ ಪ್ರದೇಶ ಅತ್ಯಂತ ದುರ್ಗಮ ಪ್ರದೇಶವಾಗಿತ್ತು. -15 ಡಿಗ್ರಿಗಳಷ್ಟು ಮೈ ಹೆಪ್ಪುಗಟ್ಟುವಂತಹ ಛಳಿಯಿದ್ದರೂ ಸಹಿತ, ಸಮುದ್ರ ಮಟ್ಟಕ್ಕಿಂತ 16,000 ಅಡಿಗಳಷ್ಟು ಎತ್ತರದ ಯುದ್ದಭೂಮಿಯಲ್ಲಿ ಹೋರಾಡಿದರು. ಇದಕ್ಕೆ ವಾಯು ಸೇನೆಯು ‘ಆಪರೇಷನ್ ಸಫೇದ್ ಸಾಗರ್’ ಮೂಲಕ ಬೆಂಬಲ ನೀಡಿ ಸೈನಿಕರನ್ನು ಹುರಿದುಂಬಿಸಿತು.

    ಟೋಲೋಲಿಂಗ್ ವಶ:
    ಯುದ್ಧ ಪ್ರಾರಂಭವಾಗುವ ಹಂತದಲ್ಲೇ ಟೋಲೋಲಿಂಗ್ ಬೆಟ್ಟ ಪಾಕ್ ವಶವಾಗಿತ್ತು. ಈ ಬೆಟ್ಟ ಕಾರ್ಗಿಲ್‍ನಿಂದ 20 ಕಿ.ಮೀ. ಹಾಗೂ ಡ್ರಾಸ್‍ನಿಂದ 6 ಕಿ.ಮೀ ಅಂತರದಲ್ಲಿತ್ತು. ಆದರೆ ಈ ಬೆಟ್ಟವನ್ನು ವೈರಿ ಸೈನಿಕರಿಂದ ಬಿಡಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿರಲಿಲ್ಲ. ಅದಲ್ಲದೇ ಈ ಪ್ರದೇಶ ಸಮುದ್ರ ಮಟ್ಟದಿಂದ 16,000 ಅಡಿ ಎತ್ತರದಲ್ಲಿರುವ ಹುಲ್ಲು ಕಡ್ಡಿಯೂ ಬೆಳೆಯದ ಬರಡು ಭೂಮಿಯಾಗಿತ್ತು. ಆದಷ್ಟು ಬೇಗ ಈ ಪ್ರದೇಶ ನಮ್ಮ ವಶವಾಗಬೇಕಿತ್ತು, ಏಕೆಂದರೆ ಅದು ಲೇಹ್‍ನ ಓಊ-1 ರಾಷ್ಟ್ರೀಯ ಹೆದ್ದಾರಿಯ ಪ್ರದೇಶದಲ್ಲಿತ್ತು. ಟೋಲೋಲಿಂಗ್‍ಗೆ ಹೋಗಲು ಈ ದಾರಿಯೊಂದೆ ಸೂಕ್ತ ಹಾಗೂ ಏಕೈಕ ಮಾರ್ಗವಾಗಿತ್ತು. ಈ ದಾರಿಯಿಂದ ಯಾರೇ ಮುನ್ನುಗ್ಗಿದರೂ ಶವವಾಗಿ ಮರಳುತ್ತಿದ್ದರು. ಹಲವಾರು ಸೈನಿಕರ ಬಲಿದಾನದ ಬಳಿಕ ಈ ಬೆಟ್ಟ ನಮ್ಮ ಸೈನಿಕರ ವಶವಾಯಿತು. ಭೀಕರ ಹೋರಾಟದ ನಂತರ ರೈಫಲ್ಸ್ ಕಮಾಂಡರ್ ರವೀಂದ್ರನಾಥ್ ನೇತೃತ್ವದ ತಂಡ ಜೂನ್ 12ರಂದು ಟೋಲೋಲಿಂಗ್ ವಶಪಡಿಸಿಕೊಂಡು ಸಾಹಸ ಮೆರೆಯಿತು. ಆದರೆ ದುಃಖಮಯ ಸಂಗತಿಯೆಂದರೆ ಕಾರ್ಗಿಲ್‍ನಲ್ಲಿ ಪ್ರಾಣ ತೆತ್ತ ಅರ್ಧದಷ್ಟು ಸೈನಿಕರು ಇದೇ ಟೋಲೋಲಿಂಗ್‍ನಲ್ಲಿ ಹತರಾದರು.
    ಟೋಲೋಲಿಂಗ್ ವಶದ ನಂತರ ಸೇನೆಗೆ ಮತ್ತಷ್ಟು ಹುರುಪು ಬಂದಿತು. ಈ ನಿಟ್ಟಿನಲ್ಲಿ ಕೇವಲ ಒಂದೇ ವಾರದಲ್ಲಿ ಪಾಯಿಂಟ್ 4590, 5140 ಗೆಲ್ಲುವುದರ ಮೂಲಕ ನಾಲ್ಕು ದಿಗ್ವಿಜಯಗಳನ್ನು ಭಾರತದ ಯೋಧರು ಸಾಧಿಸಿದರು. ಇದಕ್ಕಿಂತ ಮೊದಲು ಲೆಫ್ಟಿನೆಂಟ್ ಕೇಶಿಂಗ್ ಸೋನುಗ್ರಮ್‍ರ ನಾಯಕತ್ವದಲ್ಲಿ ಪಾಯಿಂಟ್ 4812ನ್ನು ವಶಪಡಿಸಿಕೊಳ್ಳಲು ಮುಂದಡಿಯಿಟ್ಟರು. ಅದರೆ ಅದು ಅಷ್ಟು ಸುಲಭದ ಮಾತಾಗಿರಲಿಲ್ಲ. ಪಾಕ್ ಸೈನಿಕರು ಭಾರೀ ತಯಾರಿಯೊಂದಿಗೆ ಇದ್ದರು. ಅದಕ್ಕಾಗಿ ಅಲ್ಲಿ ದಾಳಿ ಮಾಡುವ ಯಾವುದೇ ರೀತಿಯ ಉಪಾಯ ಹೊಳೆಯಲಿಲ್ಲ. ಸ್ವಲ್ಪ ಹೊತ್ತು ಕಾದ ಸೋನುಗ್ರಮ್ ಶತ್ರುಗಳಿಂದ ತೂರಿಬರುತ್ತಿರುವ ಗುಂಡುಗಳ ಮಧ್ಯೆಯೇ ಎದುರಾಗಿ ದಾಳಿ ಆರಂಭಿಸಿಯೇ ಬಿಟ್ಟರು. ವೈರಿ ಬಂಕರ್ ಮೇಲೆ ಗ್ರೇನೆಡ್ ಎಸೆದು ಛಿದ್ರವಾಗಿಸಿದರು. ಆದರೆ ದುರಾದೃಷ್ಟ…… ವೀರಯೋಧ ಸೋನುಗ್ರಮ್ ಶತ್ರುಗಳ ಗುಂಡುಗಳಿಗೆ ಎದೆಯೊಡ್ಡಿದ್ದರು! ಆದರೂ ಪಾಯಿಂಟ್ ವಶವಾಗುವವರೆಗೆ ಆತ ಮಾತ್ರ ಹೋರಾಡುತ್ತಲೇ ಇದ್ದ. ಪಾಯಿಂಟ್ ವಶವಾದ ನಂತರ ಆತ ಕೊನೆಯುಸಿರೆಳೆದ! ಎಂಥಾ ದೇಶಪ್ರೇಮವದು!

    ಟೈಗರ್ ಹಿಲ್ ವಶ:
    ಕಾರ್ಗಿಲ್‍ನ ಮತ್ತೊಂದು ದುರ್ಗಮ ಪ್ರದೇಶ ಈ ಟೈಗರ್ ಹಿಲ್. ಸುಮಾರು 15 ರಿಂದ 18 ಸಾವಿರ ಅಡಿ ಎತ್ತರದಲ್ಲಿರುವ ಈ ಬೆಟ್ಟವನ್ನು ಕಾಲ್ನಡಿಗೆಯಲ್ಲಿಯೇ ಹತ್ತಬೇಕು. ಇದನ್ನು ಏರಲು ಯೋಧನಿಗೆ ಸುಮಾರು 11 ಗಂಟೆಗಳಾದರೂ ಬೇಕು. ಏರಿ ಹೋಗುವಾಗ ಶತ್ರುಗಳು ದಾಳಿ ಮಾಡುವ ಸಂಭವವು ಇತ್ತು. ಆದರೆ ಧೃತಿಗೆಡದ ಸೈನಿಕರು ಹೋರಾಟ ನಡೆಸಿದ ಫಲವಾಗಿ ಟೈಗರ್ ಹಿಲ್ ಜುಲೈ 5 ರಂದು ಭಾರತದ ವಶವಾಗಿತ್ತು. ಈ ಸಮಯಕ್ಕೆ ಪಾಕ್ ಯುದ್ಧ ಸಾಕು ಎನ್ನುವಷ್ಟರ ಮಟ್ಟಿಗೆ ಬಳಲಿತ್ತು. ಭಾರತೀಯರ ಆರ್ಭಟಕ್ಕೆ ಬೆದರಿದ ಷರೀಫ್‍ನ ನೀರಿಳಿದಿತ್ತು. ಯುದ್ಧವನ್ನು ನಿಲ್ಲಿಸುವಂತೆ ಅಮೆರಿಕ ಅಧ್ಯಕ್ಷ ಬಿಲ್ ಕ್ಲಿಂಟನ್‍ರಿಗೆ 1999ರ ಜುಲೈ 4ರಂದು ಭೇಟಿಯಾಗಿ ಕಾಲಿಗೆ ಬೀಳುವುದು ಒಂದೇ ಬಾಕಿ, ಭಾರತಕ್ಕೆ ಯುದ್ಧವನ್ನು ನಿಲ್ಲಿಸುವಂತೆ ಕ್ಲಿಂಟನ್‍ರಿಗೆ ಹೇಳಿದಾಗ ಕ್ಯಾರೇ ಎನ್ನದ ಅವರು ನಿಮ್ಮ ಸೈನಿಕರನ್ನು ಮೊದಲು ಹಿಂದೆ ಕರೆಸಿಕೊಳ್ಳಿ ಎಂದು ಉಗಿದು ಕಳಿಸಿದರು. ಆದರೆ ಷರೀಫ್ ಏನೂ ಮಾಡುವಂತಿರಲಿಲ್ಲ. ಏಕೆಂದರೆ ಸೈನ್ಯದ ಲಗಾಮು ಮುಷರಫ್ ಕೈಯಲ್ಲಿತ್ತು! ಆಗ ಷರೀಫ್ ಪರಿಸ್ಥಿತಿ ‘ಅಂಡ ಸುಟ್ಟ ಬೆಕ್ಕಿನ ಹಾಗಾಗಿತ್ತು!
    ಈಗ ಪಾಕ್ ಸೈನ್ಯವನ್ನು ಹಿಂದೆ ಕರೆಸಿಕೊಳ್ಳಬೇಕೆನಿಸುವಷ್ಟರಲ್ಲಿ ಶೇ.80% ಭಾಗವನ್ನು ಭಾರತ ಅದಾಗಲೇ ವಶಪಡಿಸಿಕೊಂಡಿತ್ತು. ಕೊನೆಯ ಭಾಗವಾದ ಡ್ರಾಸ್ ಪ್ರದೇಶವನ್ನು ಗೆದ್ದು, ಪಾಕ್ ಸೈನ್ಯವನ್ನು ಯಶಸ್ವಿಯಾಗಿ ಬಗ್ಗು ಬಡಿದು ಜುಲೈ 26ರಂದು ಗೆಲುವಿನ ಕೇಕೆ ಹಾಕಿತ್ತು ನಮ್ಮ ಭಾರತ! ಆದರೆ 527 ವೀರಯೋಧರನ್ನು ನಾವು ಕಳೆದುಕೊಂಡೆವು. 1363 ಸೈನಿಕರು ಕಣ್ಣು, ಕೈ, ಕಾಲುಗಳನ್ನು ಕಳೆದುಕೊಂಡು ಅಂಗವಿಕಲರಾದರು. ಪಾಕ್ ಸೈನ್ಯದಲ್ಲಿನ 696 ಸೈನಿಕರನ್ನು ಭಾರತೀಯರು ಸೈನಿಕರು ಹೊಸಕಿ ಹಾಕಿದ್ದರು. ಯುದ್ಧಾನಂತರ ತನ್ನ ದೇಶದ ಸೈನಿಕರ ಶವ ಒಯ್ಯಲು ಸ್ವತಃ ಪಾಕಿಸ್ತಾನ ಬರಲಿಲ್ಲ. ಕ್ಯಾ. ಸೌರಭ್ ಕಾಲಿಯಾ, ಕ್ಯಾ ವಿಕ್ರಮ್ ಬಾತ್ರಾ, ಲೆ. ಮನೋಜ್‍ಕುಮಾರ್ ಪಾಂಡೆ, ಸಿಪಾಯಿ ಅಮರದೀಪ ಸಿಂಗ್, ಸ್ಕ್ವಾಡ್ರನ್ ಲೀಡರ್ ಅಜಯ್ ಅಹುಜಾ, ಗ್ರೆನೇಡಿಯರ್ ಯೋಗೇಂದ್ರ ಸಿಂಗ್, ರೈಫಲ್ ಮ್ಯಾನ್ ಸಂಜಯ್‍ಕುಮಾರ್, ಲೆ. ಕಣಾದ್ ಭಟ್ಟಾಚಾರ್ಯ, ಕ್ಯಾ. ಸಜುಚೇರಿಯನ್, ಲೆ. ನಂಗ್ರಮ್, ಕ್ಯಾ. ಜೆರ್ರಿ ಪ್ರೇಮ್ ರಾಜ್, ಮೇಜರ್ ಸೋನಮ್ ವಾಂಗತ್ ಚುಕ್, ಕ್ಯಾ. ವಿಜಯ್ ಥಾಪರ್, ವೈ.ಕೆ.ಜೋಷಿ, ಅನೂಜ್ ನಯ್ಯರ್ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಅದೆಷ್ಟೋ ವೀರಪುತ್ರರು ನಮಗೆ ದೊರೆಯುತ್ತಾರೆ. ಪ್ರತಿಯೊಬ್ಬರೂ ಶೌರ್ಯ, ಸಾಹಸದ ಅವತಾರ ಮೂರ್ತಿಗಳು. ಸತ್ತ ಪಾಕ್ ಯೋಧರನ್ನು ನಮ್ಮ ಭಾರತೀಯ ಯೋಧರೇ ಅಂತಿಮ ಸಂಸ್ಕಾರ ಮಾಡಿ ಮಾನವೀಯತೆ ಮರೆದರು.

    ಎಲ್ಲರಿಗೂ ಕಾರ್ಗಿಲ್ ವಿಜಯೋತ್ಸವದ ಶುಭಾಷಯಗಳು
    ಭಾರತ್ ಮಾತಾ ಕೀ ಜೈ

    apvc-iconPost Views: 20
  • ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನ: ಜುಲೈ 27ಕ್ಕೆ ತೆಂಗಿನ ಬಹಿರಂಗ ಹರಾಜು ಪ್ರಕ್ರಿಯೆ

    ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನ: ಜುಲೈ 27ಕ್ಕೆ ತೆಂಗಿನ ಬಹಿರಂಗ ಹರಾಜು ಪ್ರಕ್ರಿಯೆ

    ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ರೇವಗ್ಗಿ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ಜಾತ್ರಾ
    ಮಹೋತ್ಸವ ಪ್ರಯುಕ್ತ ಶ್ರಾವಣ ಮಾಸದ ಅವದಿಗೆ ತೆಂಗಿನ ಬಹಿರಂಗ ಹರಾಜು ಪ್ರಕ್ರಿಯೆ ಜುಲೈ 27 ರಂದು ಮಧ್ಯಾಹ್ನ 1
    ಗಂಟೆಗೆ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಆಶಪ್ಪ  ಪೂಜಾರಿ ತಿಳಿಸಿದ್ದಾರೆ.
    ಇಚ್ಛೆವುಳ್ಳ ಸಾರ್ವಜನಿಕರು, ವ್ಯಾಪಾರಸ್ಥರು, ಹೋಲಸೇಲ್ ಅಂಗಡಿದಾರರು ಭಾಗವಹಿಸಬೇಕೆಂದು ಕೋರಲಾಗಿದೆ.

    apvc-iconPost Views: 11