Blog

  • ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷಕ್ಕೂ ಹೆಚ್ಚು ಹಣ ವಸೂಲಿ: ಜಿಲ್ಲಾಧಿಕಾರಿ

    ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷಕ್ಕೂ ಹೆಚ್ಚು ಹಣ ವಸೂಲಿ: ಜಿಲ್ಲಾಧಿಕಾರಿ

    ಖನಿಜ ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ, ಇಲ್ದಿದ್ರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿ ಡಾ.ಸುಶೀಲ ಬಿ

    ಮೇ ತಿಂಗಳಿಂದ ಜುಲೈ 20 ರ ವರೆಗೆ 20 ಲಕ್ಷದ 2 ಸಾವಿರ ರೂ ವಸೂಲಿ: ಜಿಲ್ಲಾಧಿಕಾರಿ

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಣೆ ನಡೆದಿರುವ ಮೇ ತಿಂಗಳಿಂದ ಜುಲೈ 20 ನೇ ವರೆಗೆ 44 ವಾಹನಗಳಿಗೆ ದಂಡ ವಿಧಿಸಿ 20 ಎಫ್.ಐ.ಆರ್ ದಾಖಲಿಸಿ ಒಟ್ಟು 20 ಲಕ್ಷದ 2 ಸಾವಿರ ರೂಗಳ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು, ಎಲ್ಲಾ ತರಹದ ಖನಿಜ ಸಾಗಾಣಿಕೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಒಂದು ವೇಳೆ ಜಿಪಿಎಸ್ ಇಲ್ಲದಿರುವುದು ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಪರವಾನಗಿಯನ್ನು ರದ್ದು ಮಾಡಲಾಗುತ್ತಿದೆ. ಜಿಪಿಎಸ್ ಅಳವಡಿಕೆ ಇಲ್ಲದ ಸುಮಾರು 62 ವಾಹನಗಳಿಗೆ ದಂಡ ವಿಧಿಸಿ 6 ಲಕ್ಷದ 20 ರೂಗಳ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡುಬಂದರೆ ಕಾನೂನಿನ ಚೌಕಟ್ಟಿನೊಳಗೆ ತಕ್ಷಣ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಸಮಪರ್ಕವಾಗಿ ನಿರ್ವಹಣೆ ಮಾಡಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಾಗಿ ಸೂಚಿಸಿದರು.

    ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

    ಅಕ್ರಮ ಸಾಗಾಟದಲ್ಲಿ ಭಾಗಿಯಾಗುವ ವಾಹನಗಳನ್ನು ಆರ್‌ಟಿಓ ಮತ್ತು ಸಂಬಂಧಿಸಿದ ಅಧಿಕಾರಿಗಳು ಸೀಜ್ ಮಾಡಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕು. ಜಿಪಿಎಸ್ ಅಳವಡಿಸಿಕೊಂಡಿರುವ ಲಾರಿಗಳಿಗೆ ಮಾತ್ರ ಮರಳು ಸಾಗಣೆಗೆ ಪರ್ಮೀಟ್ ಕೊಟ್ಟು, ಅಕ್ರಮವಾಗಿ ಸಾಗಣೆ ಮಾಡಿ ನಿಯಮ ಉಲ್ಲಂಘಿಸುವ ಲಾರಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

    ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟುಕೊಂಡರೆ ಆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ತಹಶೀಲ್ದಾರು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ರಮಕ್ಕೆ ಮುಂದಾಗಬೇಕು.

    ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಪರವಾನಿಗೆ, ರಾಯಲ್ಟಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ತಪಾಸಣೆ ಮಾಡಬೇಕು. ಅತಿಭಾರದೊಂದಿಗೆ ಸಾಗುವ ವಾಹನಗಳಿಗೆ ದಂಡ ಹಾಕುವುದಲ್ಲದೇ ಎಫ್‌ಐಆರ್ ದಾಖಲಿಸಬೇಕು. ಇನ್ನು ತಾಲೂಕು ಹಂತದಲ್ಲಿಯೂ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಬೇಕು. ಸಹಾಯಕ ಆಯುಕ್ತರ ಸಮಿತಿ‌ ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ನಿಗಾ ವಹಿಸಬೇಕು‌ ಎಂದರು.

    ಈ ಸಂದರ್ಭದಲ್ಲಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಲೋಜ್ ಪಾಟೀಲ, ಜಿಲ್ಲಾ ವರಿಷ್ಠಾಧಿಕಾರಿ ಜಿ ಸಂಗೀತ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪೂರ್ಣಿಮಾ ಸಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಸೇರಿದಂತೆ ಎಲ್ಲಾ ತಾಲೂಕಿನ ತಹಶಿಲ್ದಾರರು ಹಾಗೂ ಸಂಬಂಧಿಸಿದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    apvc-iconPost Views: 146
  • ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ

    ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ

    ಸಮತಾವಾದ, ಸಮಾಜವಾದ ಇವಾವುದೂ ಇಲ್ಲ. ಈಗೇನಿದ್ದರೂ ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ ಬರೀ ಅವಕಾಶಕ್ಕಾಗಿ ಕಾಯುವುದು ಅದೇ ಅವಕಾಶವಾದ.

    ಈ ವಿಚಾರ ಇತ್ತೀಚೆಗೆ ಮತ್ತೊಮ್ಮೆ ರುಜುಗೊಂಡುದು ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಾಗ. ಬಿಜೆಪಿ ಈ ಬಾರಿ 400 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿತ್ತು. ಕಾಂಗ್ರೆಸ್ ಎನ್‌ಡಿಎ ಸರ್ಕಾರವನ್ನು ಕೆಳಗಿಳಿಸಿ ಇಂಡಿ ಮೈತ್ರಿಕೂಟದ ಸರ್ಕಾರ ರಚಿಸುವ ಕನಸು ಕಂಡಿತ್ತು.

    ಚುನಾವಣೋತ್ತರ ಸಮೀಕ್ಷೆಗಳೆಲ್ಲಾ ಎನ್ ಡಿ ಎ ಪರವಾಗಿದ್ದವು. ಆದರೆ ಫಲಿತಾಂಶ ಮಾತ್ರ ಎಲ್ಲ ಸಮೀಕ್ಷೆಗಳನ್ನೂ ಎಲ್ಲರ ನಿರೀಕ್ಷೆಗಳನ್ನೂ ಹುಸಿಗೊಳಿಸಿತ್ತು. ಎನ್ ಡಿ ಎ ಮೈತ್ರಿಕೂಟ 293 ಸ್ಥಾನಗಳೊಂದಿಗೆ ಬಹುಮತ ಪಡೆಯಿತು. ಕಾಂಗ್ರೆಸ್ ಮುಂದಾಳುತ್ವದ ಇಂಡಿ ಮೈತ್ರಿಕೂಟ 232 ಸ್ಥಾನ ಪಡೆಯಿತು. ಪಕ್ಷವಾರು ಫಲಿತಾಂಶದ ಬಗ್ಗೆ ಹೇಳುವುದಾದರೆ ಬಿಜೆಪಿ 240 ಸ್ಥಾನ ಪಡೆದಿದ್ದರೆ ಕಾಂಗ್ರೆಸ್ ಕೇವಲ 99 ಸ್ಥಾನ ಪಡೆಯಿತು.

    ಆದರೆ ವಿಶೇಷವೆಂದರೆ ಸರಕಾರ ರಚಿಸುವ ನಿಟ್ಟಿನಲ್ಲಿ ಎನ್ ಡಿ ಎಗಿಂತ ಮೊದಲು ಸಭೆ ಸೇರಿದ್ದು ಇಂಡಿ ಮೈತ್ರಿಕೂಟ! 99 ಸ್ಥಾನ ಪಡೆದ ಕಾಂಗ್ರೆಸ್ 240 ಸ್ಥಾನ ಪಡೆದ ಅತಿ ದೊಡ್ಡ ಪಕ್ಷ ಬಿಜೆಪಿಯನ್ನು ಹೊರಗಿಟ್ಟು ಕೇಂದ್ರದಲ್ಲಿ ಸರಕಾರ ರಚಿಸುವ ಬಗ್ಗೆ ಚರ್ಚಿಸಿತು. ಎನ್ ಡಿಎ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಜೆಡಿಯು ಟಿಡಿಪಿ ಗಳನ್ನು ತನ್ನ ತೆಕ್ಕೆಗೆ ಎಳೆದುಕೊಳ್ಳಲು ನೋಡಿತು. ಆದರೆ ಅದು ಸಾಧ್ಯವಾಗಲಿಲ್ಲ. ಅದು ಬೇರೆ ವಿಚಾರ. ಆದರೆ ಕಾಂಗ್ರೆಸ್ ಸರಕಾರ ರಚನೆಯ ಅವಕಾಶವನ್ನು ತನ್ನದಾಗಿಸಿಕೊಳ್ಳಲು ಸರ್ಕಸ್ ಮಾಡಿದ್ದಂತೂ ಸತ್ಯ.

    2018ರಲ್ಲಿ ರಾಜ್ಯ ಕಾಂಗ್ರೆಸ್ ಕೂಡ ಹೀಗೆೇ ಮಾಡಿತ್ತು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ನಿಚ್ಚಳ ಬಹುಮತವಿರಲಿಲ್ಲ. ಬಿಜೆಪಿಗೆ 104 ಕಾಂಗ್ರೆಸ್ಸಿಗೆ 80 ಜೆಡಿಎಸ್ ಗೆ 40 ಸ್ಥಾನ ಲಭಿಸಿತ್ತು. ಆದರೆ ಕಾಂಗ್ರೆಸ್ ಅತ್ಯಂತ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ಜೆಡಿಎಸ್ ನೊಂದಿಗೆ ಕೈಜೋಡಿಸಿ ಮೈತ್ರಿ ಸರ್ಕಾರ ರಚಿಸುವ ಅವಕಾಶವನ್ನು ತನ್ನದಾಗಿಸಿಕೊಂಡಿತು. ಅದಕ್ಕಾಗಿ ಕಡಿಮೆ ಸ್ಥಾನ ಹೊಂದಿದ್ದ ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟಿತ್ತು. ಎಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಏನಾದರೂ ಸರ್ಕಾರ ರಚನೆಗೆ ಅವಕಾಶ ಸಿಕ್ಕ ಸಂತೃಪ್ತಿ ಕಾಂಗ್ರೆಸ್ಸಿನದು. ಮಾತೆತ್ತಿದರೆ ಸಂವಿಧಾನ ಪ್ರಜಾಪ್ರಭುತ್ವ ಎಂದೆಲ್ಲ ಹೇಳಿಕೊಳ್ಳುವ ಕಾಂಗ್ರೆಸ್ ಬಹುಮತ ಪಡೆದ ಪಕ್ಷವನ್ನು ಅಧಿಕಾರದಿಂದ ಹೊರಗಿಡಲು ನೋಡುತ್ತಿರುವುದು ಯಾವ ಬಗೆಯ ಪ್ರಜಾಪ್ರಭುತ್ವವೋ ತಿಳಿಯದು!

    ಕಾಂಗ್ರೆಸ್ ಎಂದಲ್ಲ ರಾಜಕೀಯದಲ್ಲಿ ಎಲ್ಲರೂ ಅವಕಾಶವಾದಿಗಳೇ. ಬೇಳೆ ಬೇಯಿಸಿಕೊಳ್ಳಲು ನೋಡುವವರೇ. ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ 272 ಸ್ಥಾನ ಪಡೆಯುವಲ್ಲಿ ಎಡವಿದ್ದರಿಂದ ಮಿತ್ರ ಪಕ್ಷಗಳ ಅವಲಂಬನೆ ಅನಿವಾರ್ಯವಾಗಿ ಬಿಟ್ಟಿತು. ಬಿಜೆಪಿಯ ಅಸಹಾಯಕ ಸ್ಥಿತಿಯನ್ನು ಬಳಸಿಕೊಂಡು ಜೆಡಿಎಸ್ ಟಿಡಿಪಿ ಗಳು ಮೋದಿ ಸರ್ಕಾರಕ್ಕೆ ಜೈ ಎಂದರೂ ವಿಶೇಷ ಸ್ಥಾನವೂ ಸೇರಿದಂತೆ ಕೆಲವೊಂದು ಬೇಡಿಕೆಗಳನ್ನು ಮುಂದಿಟ್ಟವು. ಪರಿಣಾಮವಾಗಿ ಏನ್ ಡಿಎ ಮೈತ್ರಿಸರ್ಕಾರ ಸಮ್ಮಿಶ್ರ ಸರ್ಕಾರವಾಗಿ ಮಾರ್ಪಟ್ಟಿತು. ಸಮ್ಮಿಶ್ರ ಸರ್ಕಾರವೆಂದ ಮೇಲೆ ಕೇಳಬೇಕೆ? ಸಂಪುಟ ರಚನೆಗೆ ಮುನ್ನವೇ ಸಂಕಟ ಸಹಜ.

     ದೇಶ ಮೊದಲು ಎನ್ನುತ್ತಲೇ ನರೇಂದ್ರ ಮೋದಿಯವರು ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರು. ಅವರ ಕಂಗಳಲ್ಲಿ ವಿಕಸಿತ ಭಾರತದ ಕನಸಿನ್ನೂ ಕಮರಿದಂತಿಲ್ಲ. ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ , ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಾವು ನಿಮ್ಮೊಂದಿಗಿದ್ದೇವೆ ಎಂದು ಸದ್ಯಕ್ಕೆ ಮೋದಿ ಬೆನ್ನಿಗೆ ನಿಂತಿದ್ದಾರೆ. ನಿತೀಶ್ ಕುಮಾರ್ ಅವರಂತೂ ನಾಲ್ಕೈದು ಬಾರಿ ಕಾಂಗ್ರೆಸ್ ಬಿಟ್ಟು ಬಿಜೆಪಿ, ಬಿಜೆಪಿ ಬಿಟ್ಟು ಕಾಂಗ್ರೆಸ್ ಜೊತೆ ಕೈಜೋಡಿ ಗುಜರಾತಿನಲ್ಲಿ ಮುಖ್ಯಮಂತ್ರಿ ಆಗಿದ್ದವರು.

    ಅಂದುಕೊಂಡಂತೆ ಆಗದಿದ್ದಲ್ಲಿ ಎನ್ ಡಿಎ ತೊರೆದು ಹೊರ ನಡೆದರೂ ಅಚ್ಚರಿಯಿಲ್ಲ. ಆದರೂ ಟಿವಿ ಮಾಧ್ಯಮವೊಂದರಲ್ಲಿ ನಿರೂಪಕರೊಬ್ಬರು ಹೇಳಿರುವಂತೆ ಒಬ್ಬರು ಇಬ್ಬರು ಹೋದರೂ ಒಳಕ್ಕೆ ಬರುವುದಕ್ಕೂ ರೆಡಿ ಇರುತ್ತಾರೆ. ಇಷ್ಟರಲ್ಲಿಯೇ ಶಿವಸೇನೆಯ ಉದ್ದವ ಠಾಕ್ರೆ ಎನ್ ಡಿ ಎ ಜೊತೆ ಕೈಜೋಡಲು ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ. ಅಧಿಕಾರಾರೂಢರ ಜೊತೆ ಸೇರುವ ಅವಕಾಶ ಯಾರಿಗೆ ತಾನೇ ಬೇಡ?

    ನಮ್ಮ ಜನರಿಗೆ ಬೇಕಾಗಿರುವುದು ಗುಲಾಮಗಿರಿ ಬಿಟ್ಟು ಭಾಗ್ಯ, ಸುಳ್ಳು ಭರವಸೆ, ಹಾಗೂ ಜಾತಿ ರಾಜಕೀಯ ಎಂದು ತಮಿಳುನಾಡಿನ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ನೊಂದು ನುಡಿದಿದ್ದಾರೆ. ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಮತದಾರರು ಅವರ ಕೈ ಹಿಡಿಯಲಿಲ್ಲ. ಅವರನ್ನು ಎಂದಲ್ಲ. ಉತ್ತರಪ್ರದೇಶ ಮಹಾರಾಷ್ಟ್ರಗಳಲ್ಲೂ ಬಿಜೆಪಿಗೆ ಕೈ ಕೊಟ್ಟಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವೂ ಸೇರಿದಂತೆ ಇನ್ನಿಲ್ಲದ ಸವಲತ್ತುಗಳನ್ನು ಕಲ್ಪಿಸಲಾಗಿದ್ದರೂ ಅಲ್ಲಿಯ ಬಿಜೆಪಿ ಅಭ್ಯರ್ಥಿಯೇ ಗೆಲ್ಲಲಾಗಿಲ್ಲ. ಅಲ್ಲಿನ ಮುಸ್ಲಿಂ ಮತದಾರರು ಎನ್ ಡಿಎ ಸರಕಾರ ಕೊಡ ಮಾಡಿದ ಸೌಲಭ್ಯಗಳನ್ನು ಅನುಭವಿಸಿದರೆೇ ಹೊರತು ಎನ್ ಡಿಎ ಅಭ್ಯರ್ಥಿಗಳಿಗೆ ಮತ ಚಲಾಯಿಸದಷ್ಟು ಕೃತಘ್ನರಾದರೆಂಬುದು ಬಿಜೆಪಿಗಾದ ಕಹಿ ಅನುಭವ.

    ರಾಜ್ಯ ಕಾಂಗ್ರೆಸ್ ಸರಕಾರಕ್ಕೂ ಇದೇ ಅನುಭವವಾದಂತಿದೆ. ಸರ್ಕಾರ ಬಿಟ್ಟಿ ಭಾಗ್ಯಗಳನ್ನು ನಂಬಿಕೊಂಡಿತ್ತು. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಯಿತು. ಬಿಟ್ಟಿ ಭಾಗ್ಯಗಳು ಮತಗಳಾಗಿ ಮಾರ್ಪಟ್ಟಿಲ್ಲ. ಜನ ಬಿಟ್ಟಿ ಭಾಗ್ಯದ ಸವಲತ್ತುಗಳನ್ನು ತಮ್ಮದಾಗಿಸಿಕೊಂಡರೆ ಹೊರತು ತನಗೆ ವೋಟು ಹಾಕಿಲ್ಲವೆಂಬುದು ಕಾಂಗ್ರೆಸ್ ಕಂಡುಕೊಂಡ ಕಟು ಸತ್ಯ.

    ಮತದಾರರಲ್ಲಿ ಕೃತಜ್ಞತಾ ಭಾವವೆಂಬುದು ಇದ್ದಲ್ಲಿ ಎನ್ ಡಿ ಎ ಗೆ ಉತ್ತರ ಪ್ರದೇಶದಲ್ಲಿ ಹೀಗಾಗುತ್ತಿರಲಿಲ್ಲ ಬಿಡಿ.

     ರಾಜಕೀಯವೆಂದರೆ ಬರೀ ಅವಕಾಶವಾದವೆನಿಸಿದೆ. ಈಗ ಎಲ್ಲರೂ ಅನುಕೂಲ ಸಿಂಧು ರಾಜಕೀಯ ಮಾಡುವವರೇ. ಅಧಿಕಾರವೇ ಮುಖ್ಯವೆನಿಸಿದಾಗ ದೇಶ ಹಿತ ಗೌಣವಾಗಿ ಬಿಡುತ್ತದೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿದರೂ ತಮ್ಮ ಪಕ್ಷ ಕೇಂದ್ರದಲ್ಲಿ ಇಂಡಿ ಮೈತ್ರಿಕೂಟದ ಭಾಗವಾಗಿರುವುದೆಂದರು. ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಇದು ಅವಕಾಶವಾದ ರಾಜಕೀಯವೆಂದಿದ್ದರು.

    ಮೋದಿಯವರ ಮೂರನೇ ಅವಧಿಯ ಸರ್ಕಾರ ಈ ಹಿಂದಿನಂತಲ್ಲ. ಇದು ಸಮ್ಮಿಶ್ರ ಸರ್ಕಾರ. ಸಮ್ಮಿಶ್ರ ಸರ್ಕಾರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಷ್ಟು ಸುಲಭವಲ್ಲ. ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಆಗ ನಿರ್ಧಾರ ತೆಗೆದುಕೊಳ್ಳುವುದು ನಿಧಾನವಾಗುತ್ತದೆ. ನಿರ್ಧಾರ ತೆಗೆದುಕೊಳ್ಳುವಲ್ಲಿನ ನಿಧಾನಗತಿ ಹೂಡಿಕೆದಾರರ ವಿಶ್ವಾಸದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮೂಡಿಸ್ ಅನಾಲಿಟಿಕ್ಸ್ ಅಭಿಪ್ರಾಯ ಪಟ್ಟಿದೆ. ಈ ನಡುವೆ ಅವಕಾಶವಾದಿಗಳನ್ನೂ ನಂಬುವಂತಿಲ್ಲ. ಇದಕ್ಕಿಂತ ಮಿಗಿಲಾದ ಅವಕಾಶ ಸಿಕ್ಕಲ್ಲಿ ಇಲ್ಲವೇ ಅಂದುಕೊಂಡಂತೆ ಆಗದೆ ಹೋದಲ್ಲಿ ಹೊರ ನಡೆದರೂ ಅಚ್ಚರಿ ಇಲ್ಲ. ಇಷ್ಟರಲ್ಲೇ ಸಚಿವ ಸಂಪುಟ ರಚನೆ ಮುಗಿದು ಮೋದಿ ನೇತೃತ್ವದ ಎನ ಡಿ ಎ ಸರಕಾರ ಮೂರನೇ ಅವಧಿಯ ಜೈತ್ರಯಾತ್ರೆಗೆ ಶುಭನಾಂದಿ ಹಾಡಿದೆ. ಆದರೆಬಎಲ್ಲಾ ಮಿತ್ರ ಪಕ್ಷಗಳ ಓಲೈಕೆ ಅನಿವಾರ್ಯವೆನಿಸುತ್ತದೆ. ಏನಿದ್ದರೂ ಸಮ್ಮಿಶ್ರ ಸರಕಾರವೆಂಬುದು ತಂತಿ ಮೇಲಿನ ನಡಿಗೆಯಿದ್ದಂತೆ. ಇಲ್ಲಿ ರಕ್ಷಣಾತ್ಮಕ ಆಟ ಅನಿವಾರ್ಯವೆನಿಸುತ್ತದೆ. ಏನಂತೀರಾ…?

    -ರಾಂ ಎಲ್ಲಂಗಳ, ರಾಜಕೀಯ ವಿಶ್ಲೇಷಕರು

    apvc-iconPost Views: 64
  • ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

    ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

    ಸತ್ಯಕಾಮ ವಾರ್ತೆ ಯಾದಗಿರಿ :

    ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಮುನ್ಸೂಚನೆ ನೀಡಲಾಗುತ್ತಿದೆ ಎಂದು ನಾರಾಯಣಪೂರ ಕೃ.ಭಾ.ಜ.ನಿ.ನಿ ಅಧೀಕ್ಷಕ ಅಭಿಯಂತರರು ಅವರು ತಿಳಿಸಿದ್ದಾರೆ.

    2024-25ನೇ ಸಾಲಿನ ಮುಂಗಾರು ಪ್ರಾರಂಭವಾಗಿದ್ದು, ಮಹಾರಾಷ್ಟç ರಾಜ್ಯದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಪ್ರಾರಂಭವಾಗಿರುತ್ತದೆ. ಆಲಮಟ್ಟಿ ಜಲಾಶಯದಿಂದ ನಾರಾಯಪೂರ ಜಲಾಶಯಕ್ಕೆ 40,000 ಕ್ಯೂಸೆಕ್ಸ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದೆ. 2024ರ ಜುಲೈ 16 ರಂದು ನಾರಾಯಣಪೂರ ಜಲಶಯದ ನೀರಿನ ಮಟ್ಟ 490.18 ಮೀ.ಇದ್ದು, ಜಲಾಶಯದ ನೀರಿನ ಸಂಗ್ರಹಣೆ 24.675 ಟಿಎಂಸಿ ಇರುತ್ತದೆ ಹಾಗೂ ಜಲಾಶಯಕ್ಕೆ 40,000 ಕ್ಯೂಸೆಕ್ಸ್ ನೀರಿನ ಒಳಹರಿವು ಬರುತ್ತಿದೆ.

    ನಾರಾಯಣಪೂರ ಜಲಾಶಯಕ್ಕೆ ಬರುವ ನಿರೀಕ್ಷಿತ ಒಳಹರಿವಿನ ಮಾಹಿತಿಯನ್ನು ಕೇಂದ್ರ ಜಲ ಆಯೋಗ ಮೂಲಕ ಪಡೆಯಲಾಗುತ್ತಿದೆ. ಅದೇ ರೀತಿ ನಾರಾಯಣಪೂರ ಜಲಾಶಯದ ಹಿಂಭಾಗದ ಜಲಾಶಯಗಳಾದ ಆಲಮಟ್ಟಿ ಜಲಾಶಯ ಹಾಗೂ ನವಿಲು ತೀರ್ಥ ಜಲಾಶಯಗಳಿಂದ ಬಿಡಬಹುದಾದ ಹೊರಹರಿವಿನ ಮಾಹಿತಿಯನ್ನು ಸಂಬAಧಪಟ್ಟ ಅಧಿಕಾರಿಗಳಿಂದ ಮುಂಜಾಗ್ರತಾ ಕ್ರಮಕ್ಕಾಗಿ ಪಡೆಯಲಾಗುತ್ತಿದ್ದು, ಪ್ರವಾಹ ನಿಯಂತ್ರಣ ಕಾರ್ಯಕ್ಕಾಗಿ ನಾರಾಯಣಪೂರ ಜಲಾಶಯವನ್ನು ಸನ್ನದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ.

    ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆಗೊಳಿಸುವ ಸಾಧ್ಯವಿರುವ ಕಾರಣ ನಾರಾಯಣಪೂರ ಜಲಾಶಯಕ್ಕೆ ಹರಿದು ಬರುವ ಒಳಹರಿವು ಪ್ರಮಾಣಕ್ಕನುಗುಣವಾಗಿ ನಾರಾಯಣಪೂರ ಜಲಾಶಯದಿಂದ ಕೆಳಭಾಗದ ಕೃಷ್ಣಾ ನದಿ ಪಾತ್ರಕ್ಕೆ ಯಾವುದೇ ಕ್ಷಣದಲ್ಲಿ ಪ್ರವಾಹದ ನೀರನ್ನು ಹರಿಬಿಡುವ ಸಾಧ್ಯತೆ ಇರುತ್ತದೆ.

    ನಾರಾಯಣಪೂರ ಜಲಾಶಯದ ಕೆಳಭಾಗದ ಕೃಷ್ಣಾ ನದಿ ಪಾತ್ರದ ಪ್ರದೇಶದಲ್ಲಿರುವ ಗ್ರಾಮಗಳ ಜನರು, ರೈತರು ಜಾಗ್ರತೆಯಿಂದ ಇರಲು ಹಾಗೂ ತಮ್ಮ ಜಾನುವಾರುಗಳು, ಪಂಪ್‌ಸೆಟ್ ಇತ್ಯಾದಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳಲು ಹಾಗೂ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಪ್ರವಾಹದ ಮುನ್ಸೂಚನೆ ನೀಡಲು ಸಂಬAಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲು ತಿಳಿಸಿದೆ.

    ಪ್ರವಾಹ ಮುನ್ನಚ್ಚರಿಕೆ ಕ್ರಮಗಳಿಗಾಗಿ ಮನವಿ 1,00,000 ಕ್ಯೂಸೆಕ್ಸ ವರೆಗೆ ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಸುರಕ್ಷತೆಗಾಗಿ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗ್ರತೆ ನೀಡುವುದು. 1,50,000 ಕ್ಯೂಸೆಕ್ಸ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು. 2,50,000 ಕ್ಯೂಸೆಕ್ಸ ಹೂವಿನಹೆಡಗಿ ಸೇತುವೆ (ದೇವದುರ್ಗಾ-ಕಲಬುರ್ಗಿ ರಾಜ್ಯ ಹೆದ್ದಾರಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು.

     

    3,00,000 ಕ್ಯೂಸೆಕ್ಸ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮ ನಡುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಗುರ್ಜಾಪುರ ಬ್ಯಾರೇಜ್ ಹಾಗೂ ಸೇತುವೆ ಮುಳುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಮೇಲ್ಪಟ್ಟು ಕೃಷ್ಣಾ ನದಿ ಇಕ್ಕೆಲಗಳಲ್ಲಿ ಪ್ರವಾಹ ಉಕ್ಕಿ ಹರಿಯುವುದರಿಂದ, ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಸುರಕ್ಷತೆ ಕುರಿತು ಮುನ್ನೆಚ್ಚರಿಕೆಯಿಂದಿರಲು ಸೂಚಿಸುವುದು. 5,40,000 ಕ್ಯೂಸೆಕ್ಸ್ ಯರಗೋಡಿ ಸೇತುವೆ, ಜಲದುರ್ಗಾ ಸೇತುವೆ ಮತ್ತು ಗೂಗಲ್ ಗ್ರಾಮದ ಹತ್ತಿರ ಗೂಗಲ್ ಬ್ಯಾರೇಜ್ ಮುಳುಗಡೆಯಾಗಬಹುದು. 7,50,000 ಕ್ಯೂಸೆಕ್ಸ ಸುರಪುರ ತಾಲೂಕಿನ ರಾಷ್ಟಿçÃಯ ಹೆದ್ದಾರಿಯ ತಿಂಥಣಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    apvc-iconPost Views: 17
  • ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ

    ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ

    ಸತ್ಯಕಾಮ ಬೆಂಗಳೂರು :
    ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಆಯೆಷಾ ಖಾನಂ ಅವರನ್ನು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಪದಾಧಿಕಾರಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಆಯೆಷಾ ಖಾನಂ ಅವರು, ಸರಕಾರವು ಮಹಿಳೆಯನ್ನು ಗುರುತಿಸಿ ನೇಮಕ ಮಾಡಿರುವುದು ನನಗೆ ಹೆಮ್ಮೆ ತಂದಿದೆ. ಎಲ್ಲರ ಸಹಕಾರದಿಂದ ಮಾಧ್ಯಮ ಅಕಾಡೆಮಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಪಕ್ಷಾತೀತವಾಗಿ ಎಲ್ಲರೂ ನನಗೆ ಅಭಿನಂದಿಸುತ್ತಿರುವುದು ನನಗೆ ಖುಷಿ ತಂದಿದೆ ಎಂದರು.

    ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಜಿ.ವೈ.ಪದ್ಮಾ ನಾಗರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್, ರಾಜ್ಯ ಕಾರ್ಯದರ್ಶಿ ಅನೂಪಕುಮಾರ, ಬೆಂಗಳೂರು ವಿವಿ ಪ್ರೊ.ಡಾ‌.ಸಮತಾ ದೇಶಮಾನೆ , ಮಲ್ಲಮ್ಮ ನುಡಿ ಸಂಪಾದಕ ರಮೇಶ ರೆಡ್ಡಿ ಬೀದರ ಸೇರಿದಂತೆ ಇನ್ನಿತರರು ಇದ್ದರು.

    apvc-iconPost Views: 79
  • ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ

    ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ

    1. ಮೊಹರಂ ಆಚರಣೆಗೆ ಕಳೆ ಹೆಚ್ಚಿಸಿದ ಮುಂಗಾರು ಮಳೆ 
    2. ಉತ್ತಮ ಮಳೆ ಬೆಳೆ ನಿರೀಕ್ಷೆ ತಂದ ಖುಷಿ, ಸರ್ವ ಧರ್ಮಿಯರ ಮೊಹರಂ ಖರೀದಿ ಜೋರು.
    3. ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ
    • ವರದಿ: ಪ್ರೀತಿ ಪಿ ರಾಠಿ

    ಸತ್ಯಕಾಮ ವಾರ್ತೆ ನಾರಾಯಣಪೂರ:

    ಈ ವರ್ಷ ಆರಂಭದಲ್ಲೇ ಮುಂಗಾರು ಮಳೆ ರೈತರಲ್ಲಿ ಆಶಾ ಭಾವನೆ ಮೂಡಿಸುವ ಮೂಲಕ ಈಗಾಗಲೇ ಬಿತ್ತನೆಯೂ ಮುಗಿದಿದೆ, ಅತ್ತ ಉತ್ತಮ ಫಸಲೂ ಸಹ ಚಿಗುರೊಡೆದಿದ್ದು ರೈತರಲ್ಲಿ ಮತ್ತಷ್ಟು ಖುಷಿ ತಂದಿದೆ, ಈಗಾಗಿ ಅಣ ಯಾಗಿರುವ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆಯ ಹಿನ್ನಲೆಯಲ್ಲಿ ನಾರಾಯಣಪೂರ ವ್ಯಾಪ್ತಿಯ ಹಳ್ಳಿಗಾಡು ಪ್ರದೇಶದಲ್ಲಿ ಹಬ್ಬದ ಆಚರಣೆಯ ಸಾಮಾನುಗಳ ಖರೀದಿ ಮಾರುಕಟ್ಟೆಯಲ್ಲಿ ಜೋರಾಗಿದೆ ನಡೆದಿದೆ.

    ಖರೀದಿ ಜೋರು: ನಾರಾಯಣಪೂರ ಸೇರಿದಂತೆ ಗಡಿ ಭಾಗದ ನಾಲತವಾಡ ಪಟ್ಟಣದ ಪ್ರಮುಖ ಮಾರುಕಟ್ಟೆ ಬಸವೇಶ್ವರ, ಕನಕ ವೃತ್ತ ಹಾಗೂ ಗಣೇಶ ವೃತ್ತದ ಬಳಿ ಸಿದ್ದಗೊಂಡಿರುವ ಮೋಹರಂ ಅಲಾಯಿ ದೇವರುಗಳಿಗೆ ಅವಶ್ಯಕತೆ ಹೂಗಳು ತುರಾಯಿ, ಪಂಜೆಗಳಿಗೆ ಬೆಳ್ಳಿ ಸಾಮಾನುಗಳು ಹಾಗೂ ಭಕ್ತರು ಅರ್ಪಿಸುವ ದಾರದ ಲಾಡಿ, ಚಿನ್ನಿ ಸಕ್ಕರೆ, ಉತ್ತತ್ತಿ ಮತ್ತು ಲೋಬಾನು ಖರೀದಿ ಪುರುಷೊತ್ತಿಲ್ಲದೆ ನಡೆದಿದೆ.

    ಇಷ್ಟಾರ್ಥ ಪೂರೈಕೆ:

    ಮೋಹರಂ ಶೋಕದ ಹಿನ್ನಲೆ ಹೊಂದಿದ್ದು ಭೇದ ಭಾವವಿಲ್ಲದೇ ಹಿಂದೂ ಮುಸ್ಲಿಂರ ಹಲವರು ಫಕೀರ್‌ಗಳು ಆಗುತ್ತಾರೆ, ಮೋಹರಂ ಹಬ್ಬವು ಪ್ರವಾದಿ ಮಹ್ಮದರ ಮೊಮ್ಮಕ್ಕಳಾದ ಹಸನ್ ಹುಸೇನ್‌ರ ಕರ್ಬಲಾ ಯುದ್ದದ ಪ್ರತೀಕವಾಗಿ ಆಚರಿಸಲಾಗುತ್ತಿದೆ.

    ಗೂಳೆ ಹೋದವರು ತವರಿಗೆ:

    ವರ್ಷವಿಡೀ ದುಡಿಯಲು ಪರ ರಾಜ್ಯಗಳಿಗೆ ಗೂಳೆ ಹೋದವರು ಮೋಹರಂ ಆಚರಿಸಲತ್ತಿದ್ದಾರೆ, ತಾವು ಬೇಡಿಕೊಂಡ ಅಲಾಯಿ ದೇವರುಗಳಿಗೆ ಇಷ್ಟಾರ್ಥ ಪೂರೈಸಲು ಪಂಜೆಗಳಿಗೆ ಮಲಮಲ ಬಟ್ಟೆ, ಡೋಲಿ ದೇವರುಗಳಿಗೆ ಬೆಳ್ಳಿ ಛತ್ರಿಗಳನ್ನು ಅರ್ಪಿಸುವ ನಿಟ್ಟಿನಲ್ಲಿ ಬಂಗಾರದ ಅಂಗಡಿಗಳಲ್ಲಿ ಖರೀದಿ ಜೋರಾಗಿ ನಡೆದಿದೆ.

    ಮಣ್ಣಿನ ಮಡಿಕೆಗೆ ಡಿಮ್ಯಾಂಡ್:

    ಅಲಾಯಿ ದೇವರುಗಳಿಗೆ ಸಾಂಪ್ರಾದಾಯಿಕವಾಗಿ ಆಚರಣೆ ವೇಳೆ ಹಲವರು ಮಣ್ಣಿನ ಮಡಿಕೆಯಲ್ಲಿ ಶರಬತ್, ನೈವೇದ್ಯ ತಯಾರಿಸಿ ಅರ್ಪಿಸುತ್ತಾರೆ, ಹಾಗಾಗಿ ಪಟ್ಟಣದಲ್ಲಿ ಮಣ್ಣಿನ ಮಡಿಕೆ ಖರೀದಿಗೂ ಜನ ಮುಂದಾಗಿದ್ದಾರೆ.

    apvc-iconPost Views: 27
  • ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಿ: ಬಸವರಾಜ್ ಶರಬೈ

    ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಿ: ಬಸವರಾಜ್ ಶರಬೈ

    ಸತ್ಯಕಾಮ ವಾರ್ತೆ ಯಾದಗಿರಿ:

    ಮಳೆಗಾಲ ಪ್ರಾರಂಭವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದಷ್ಟಿಯಿಂದ ಸಾಂಕ್ರಾಮಿಕ ರೋಗಗಳನ್ನು ಎಲ್ಲ ರೀತಿಯಿಂದಲೂ ನಿಯಂತ್ರಿಸುವ ಅವಶ್ಯಕತೆ ಇದ್ದು, ತಾಲೂಕಿನ ಎಲ್ಲ ಪಂಚಾಯಿತಿ ಅಭಿವದ್ಧಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸುವಂತೆ ಯಾದಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ ಸೂಚಿಸಿದರು.

    ಸೋಮವಾರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಸ್ವಚ್ಛತೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು, ಯಾದಗಿರಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಬೇಕು. ತೆರೆದ ಬಾವಿಗೆ ಪ್ರತಿದಿನ ಕ್ಲೋರಿನ್, ಬ್ಲಿಚಿಂಗ್ ಪೌಡರ್ ಹಾಕಬೇಕು. ಕುಡಿಯುವ ನೀರಿನ ಮೂಲಗಳ ಸುತ್ತಮುತ್ತಲು ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹಾಗೂ ಸರಬರಾಜು ಮಾಡುವ ಕೊಳವೆಗಳಲ್ಲಿ ಸೋರಿಕೆಗಳಿದ್ದಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.

    ಚರಂಡಿಗಳನ್ನು ಸ್ವಚ್ಛ ಮಾಡುವುದರ ಜೊತೆಗೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮೊಹರಂ ಹಬ್ಬ ಇರುವುದರಿಂದ ಪಟ್ಟಣ ಪ್ರದೇಶಗಳಿಂದ ಜನರು ಬಂದಿರುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್‌ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸೂಚಿಸಬೇಕು, ಹಾಗೂ ಸಾರ್ವಜನಿಕರಿಗೆ ಜನಜಾಗೃತಿ ಮೂಡಿಸಬೇಕು ಎಂದರು.

    ಈ ವೇಳೆ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಬಸವರಾಜ ಹೈರಡ್ಡಿ ಸಭೆಯಲ್ಲಿ ಹಾಜರಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ನೀಡಿದರು. ಮತ್ತು ಜೆ.ಜೆ.ಎಮ್ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.

    ಪೈಪ್ ಲೀಕೆಜ್ ಆದಲ್ಲಿ ಮತ್ತು ಕಾಮಗಾರಿ ಅಪೂರ್ಣ ಇದ್ದಲ್ಲಿ ತಕ್ಷಣವೇ ಪೂರ್ಣಗೊಳಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದರು.

    ತಾಲೂಕು ವೈದ್ಯಧಿಕಾರಿಗಳಾದ ಡಾ.ಹಣವಂತ ರೆಡ್ಡಿ ಸಭೆಯಲ್ಲಿ ಮಾತನಾಡಿ, ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವುದರೊಂದಿಗೆ ಬ್ಲಿಚಿಂಗ್ ಪೌಡರ್ ಸಿಂಪಡಿಸಲು ಸೂಚಿಸಲಾಗಿದೆ, ಈಗಾಗಲೇ ಗ್ರಾಮದಲ್ಲಿ ನಮ್ಮ ಆಶಾ ಕಾರ್ಯಕರ್ತೆಯರು ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮನೆ ಮನೆಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆಂದು ತಿಳಿಸಿದರು.

    ಈ ವೇಳೆ ಯಾದಗಿರಿ ಸಹಾಯಕ ನಿರ್ದೇಶಕರು, ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.

    apvc-iconPost Views: 84
  • ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್

    ಕನಕ ನೌಕರರ ಸಂಘದ ಸಂಘಟನೆ ಬಲಗೊಳಿಸಿ:ಬಸವರಾಜ್ ಪಾಟೀಲ್ ಕೊಂಕಲ್

    ಸತ್ಯಕಾಮ ವಾರ್ತೆ ಯಾದಗಿರಿ:

    ಕನಕ ನೌಕರರ ಸಂಘದ ಸಂಘಟನೆಯನ್ನು ಬಲಗೊಳಿಸಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕಲಬುರ್ಗಿ ವಿಭಾಗೀಯ ಕನಕ ನೌಕರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಕೂಂಕಲ್ ಹೇಳಿದರು.

    ಭಾನುವಾರ ಯಾದಗಿರಿ ಪಟ್ಟಣದ ಕುರುಬ ಸಂಘದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಯಾದಗಿರಿ ಜಿಲ್ಲಾ ಕನಕ ನೌಕರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಮಾತನಾಡಿದ ಅವರು ನಮ್ಮ ಸಮಾಜದ ನೌಕರ ಮೇಲಿನ ಕಿರುಕುಳ ಕಂಡುಬಂದಲ್ಲಿ ಒಗ್ಗಟ್ಟಿನಿಂದ ಎಲ್ಲರೂ ಹೋರಾಟ ಮಾಡುವಂತೆ ಸಲಹೆ ನೀಡಿದರು.

    ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಮಲ್ಲಣ್ಣ ಐಕೂರ ಮಾತನಾಡಿ ಕನಕ ನೌಕರರ ಸಂಘದ ಬೆಂಬಲಕ್ಕೆ ಜಿಲ್ಲಾ ಕುರುಬ ಸಂಘದಿಂದ ಸಂಪೂರ್ಣ ಬೆಂಬಲವಿರುತ್ತದೆ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ನಮ್ಮ ಗಮನಕ್ಕೆ ತರುವಂತೆ ಹೇಳಿದರು.

    • ನೂತನ ಪದಾಧಿಕಾರಿಗಳ ವಿವರ.
    • ಅಯಣ್ಣ ಇನಾಮದಾರ, ಜಿಲ್ಲಾಧ್ಯಕ್ಷ,
    • ಮಲ್ಲಿಕಾರ್ಜುನ್ ಪೂಜಾರಿ ಉಪಾಧ್ಯಕ್ಷ,
    • ಪ್ರಧಾನ ಕಾರ್ಯದರ್ಶಿ ಮನೋಹರ್ ಕಟ್ಟಿಮನಿ,
    • ಖಜಾಂಚಿ ದೇವೇಂದ್ರಪ್ಪ ಕರಿಕಳ್ಳಿ,

    ಸಂಘಟನಾ ಕಾರ್ಯದರ್ಶಿಗಳಾಗಿ ಚಂದ್ರಶೇಖರ್ ಧನವಾಡ, ಬನ್ನಪ್ಪ ಮೈಲಾಪುರ, ಬೀರಪ್ಪ ಸಂಕಿನ, ಸಹ ಕಾರ್ಯದರ್ಶಿಗಳಾಗಿ ದ್ಯಾಮಣ್ಣ ಹುಣಸಿಗಿ, ಸಿದ್ದು ಬಡಿಗೇರ್, ಹಾಗೂ ಪ್ರತಿ ತಾಲೂಕಿನಿಂದ ಐದು ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಕುರುಬ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮಗ್ಗ, ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ಜಿಲ್ಲಾ ಹಿರಿಯ ನಾಗರಿಕ ಮತ್ತು ಅಂಗವಿಕಲ ಕಲ್ಯಾಣ ಅಧಿಕಾರಿ ಶರಣಗೌಡ ಪಾಟೀಲ್ ಕ್ಯಾತನಾಳ, ಸರಕಾರಿ ನೌಕರರ ಸಂಘದ ವಡಗೇರಾ ತಾಲೂಕು ಅಧ್ಯಕ್ಷ ಶಂಕ್ರಪ್ಪ ಗೂಂದೆನೂರ, ಕುರುಬ ಸಂಘದ ತಾಲೂಕು ಅಧ್ಯಕ್ಷ ಸೂರ್ಯಕಾಂತ ಅಲ್ಲಿಪೂರ ,ಚಂದ್ರಕಾಂತ ನಾಯ್ಕೋಡಿ, ಸಾಯಿಬಣ್ಣ ಕೆಂಗೂರಿ, ಮಲ್ಲಯ್ಯ ಕಸಬಿ, ಹಾಗೂ ಕನಕ ನೌಕರ ಸಂಘದ ನಿರ್ದೇಶಕರು ಪದಾಧಿಕಾರಿಗಳು ವಿವಿಧ ಇಲಾಖೆಯ ನೌಕರರು ಕುರುಬ ಸಮಾಜದ ಮುಖಂಡರು ಉಪಸ್ಥಿತರಿದ್ದರು.

    apvc-iconPost Views: 5
  • ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ

    ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ : ಉಮೇಶ್ ಮುದ್ನಾಳ ಆರೋಪ

    • ಹದಗೆಟ್ಟ ಜಿಲ್ಲಾ ಪೊಲೀಸ್ ಕಾನೂನು ಸುವ್ಯವಸ್ಥೆ
    • ಸುಳ್ಳು ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್ಐ
    • ಬಡ ರೈತ ಕುಟುಂಬದ ಮೇಲೆ ಪ್ರಭಾವಿಗಳಿಂದ ಮಾರಣಾಂತಿಕ ಹಲ್ಲೆ
    • ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಡ ರೈತನ ಆರೋಗ್ಯ ವಿಚಾರಿಸಿದ ಉಮೇಶ್ ಮುದ್ನಾಳ್

    ಸತ್ಯಕಾಮ ವಾರ್ತೆ ಯಾದಗಿರಿ:

    ಜಮೀನಿನ ದಾರಿ ವಿಚಾರಕ್ಕಾಗಿ ಗ್ರಾಮದ ಪ್ರಭಾವಿ ಕುಟುಂಬಸ್ಥರು ಬಡ ರೈತನ ಮನೆಗೆ ನುಗ್ಗಿ‌ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ನಡೆದಿದ್ದೂ, ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆರೋಪಿಗಳು ಹೇಳಿದಂತೆ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಆರೋಪಿಸಿದ್ದಾರೆ.

    ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ಶರಣಪ್ಪ ಮಾಸ್ಟರ್, ಈಶಪ್ಪ ಈರಪ್ಪಣೋರ್ ಸೇರಿ 12 ರ ಜನರ ತಂಡ ಬಡ ರೈತ ಮಲ್ಲಪ್ಪ‌ ಗಂಗಣ್ಣೋರ ಹಾಗೂ ಆತನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

    ಕೊಡಲಿ, ಬಡಿಗೆ, ಹಾಗೂ ದೊಣ್ಣೆಗಳಿಂದ ಹೊಡೆದಿರುವ ಪರಿಣಾಮ ರೈತರ ಹಲ್ಲುಗಳು ಮುರುದಿವೆ. ಗ್ರಾಮಸ್ಥರು ಜಗಳ ಬಿಡಿಸಲು ಮುಂದಾಗ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.‌ ಗಾಯಾಳು ಮಲ್ಲಪ್ಪನನ್ನ ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಈ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ ಮುದ್ನಾಳ್ ಭೇಟಿ ನೀಡಿ, ಗಾಯಾಳು ಆರೋಗ್ಯ ವಿಚಾರಿಸಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ರು.

    ಇದೇ ವೇಳೆ ಮಾತನಾಡಿದ ಉಮೇಶ್ ‌ಮುದ್ನಾಳ್ ಹಲ್ಲೆ, ದರೋಡೆ, ಕೊಲೆ ಪ್ರಕರಣಕ್ಕೆ ಜಿಲ್ಲಾ ಪೋಲಿಸ್ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮೇಲ್ನೋಟಕ್ಕೆ ಗೋಚರಿಸುತ್ತದೆ. ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆರೋಪುಗಳು ಹೇಳಿದಂತೆ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಜೋಳದಡಗಿ ಗ್ರಾಮದಲ್ಲಿ ವಿವಿಧ ಸಮುದಾಯಗಳ ಮೇಲೆ ಇದೇ ರೀತಿ ದೌರ್ಜನ್ಯ, ದಬ್ಬಾಳಿಕೆ, ಹಲ್ಲೆ ‌ಮಾಡುತ್ತಾ ಬಂದಿರುವ ಚಾಳಿ‌ ಇದೆ. ಒಬ್ಬ ಹೆಡ್ ಮಾಸ್ಟರ್ ನಾಗಿ ಗ್ರಾಮದ ಎಲ್ಲರಿಗೂ ತಿಳಿಹೇಳಬೇಕಿದ್ದ ಶಿಕ್ಷಕ ಮುಂದೆ ನಿಂತು ಹಲ್ಲೆಗೆ ಪ್ರೇರಣೆ ನೀಡಿದ್ದಾನೆ. ಇವರಿಗೆ ಯಾವುದೇ ಕಾನೂನಿನ ಭಯವಿಲ್ಲ. ಗಾಯಾಳು ನೀಡಿದ ದೂರಿನಂತೆ ತಾವು ಸಹ ಅದೇ ಸೆಕ್ಷನ್ ನಲ್ಲಿ ಗಾಯಾಳು ಮಲ್ಲಪ್ಪ ಸೇರಿ 12 ಜನರ ಮೇಲೆ ಪ್ರಕರಣ ದಾಖಲಿಸಿ ಗ್ರಾಮದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ನೀಡಿರುವ ಪ್ರಕ ಕೂಡಲೇ ಕೈ ಬೀಡಬೇಕು. ಇಲ್ಲದಿದ್ದರೆ ಪೊಲೀಸ್ ಇಲಾಖೆ ವಿರುದ್ದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಇದೇ ಸಂದರ್ಭದಲ್ಲಿ ರಫೀಕ್ ಪಟೇಲ್, ಆಂಜನೇಯ, ಬಾಬಾ ಖಾನ್, ಜೋಳದಡಗಿ ಗ್ರಾಮದ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

    apvc-iconPost Views: 301
  • 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ

    2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ

    ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ದಾಖಲೆ ವಿದ್ಯುತ್ ಉತ್ಪಾದನೆ

    ಸತ್ಯಕಾಮ ವಾರ್ತೆ ರಾಯಚೂರು:

    ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

    ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ,” ಎಂದರು.

    “ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ,” ಎಂದು ತಿಳಿಸಿದರು.

    “ಈಗಾಗಲೇ 1000 ಸಹಾಯಕ ಇಂಜಿನಿಯರ್‌ಗಳ (ಎಇ), ಕಿರಿಯ ಇಂಜಿನಿಯರ್‌ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ,” ಎಂದು ಅವರು ಹೇಳಿದರು.

    ದಾಖಲೆ ಉತ್ಪಾದನೆ

    “ಈ ಬಾರಿ ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್‌ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮವನ್ನು ಪ್ರಶಂಸನೀಯ. ಅವರೆಲ್ಲನ್ನೂ ಅಭಿನಂದಿಸಲೆಂದೇ ಇಲ್ಲಿಗೆ ಬಂದಿದ್ದೇನೆ,”ಎಂದರು.

    “ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು, ಇದು ದಾಖಲೆಯಾಗಿದೆ,”

    “ಅದರಲ್ಲೂ ಆರ್‌ಟಿಪಿಎಸ್‌ ವಿದ್ಯುತ್‌ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್‌ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್‌ ಸಾಮರ್ಥ್ಯದ 3ನೇ ವಿದ್ಯುತ್‌ ಘಟಕದಲ್ಲಿ ಏಪ್ರಿಲ್‌ 4ರಂದು 216 ಮೆಗಾವ್ಯಾಟ್‌ ಉತ್ಪಾದನೆ ಮಾಡಲಾಗಿದ್ದು, ಆ ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ಟಿಪಿಎಸ್‌ನ ಏಳು ವಿದ್ಯುತ್‌ ಘಟಕಗಳು ಸೇರಿ ಶೇ. 85ರಷ್ಟು ವಿದ್ಯುತ್‌ ಉತ್ಪಾದಿಸಿವೆ,”

    “ಅದೇರೀತಿ, ಯರಮರಸ್‌ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ವೈಟಿಪಿಎಸ್‌) 2023-24 ಹಣಕಾಸು ವರ್ಷದಲ್ಲಿ 6229.250 ಮಿ.ಯೂ. ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6000 ಮಿ.ಯೂ. ಗುರಿಯನ್ನು ವೈಟಿಪಿಎಸ್‌ ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರ 8208.476 ಮಿ.ಯೂ ವಿದ್ಯುತ್‌ ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ,”

    “ಆರ್‌ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ಈ ಕುರಿತು ಊಹಾಪೋಹ ಅಷ್ಟ. ಆದರೆ ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗಲ್ಲಿ ತೀರ್ಮಾನ ತಗೊಂಡಿದೀವಿ‌ ಅದನ್ನ ಸರಿ ಮಾಡಲು ಅಗತ್ಯಹಣ ಬಿಡುಗಡೆಗೂ ನಿರ್ಧರಿಸಲಾಗಿದೆ,”ಎಂದು ಹೇಳಿದರು.

    ಕಲ್ಲಿದ್ದಲು ಕೊರತೆ ಇಲ್ಲ

    “ನಮ್ಮ ಸರ್ಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‌ನಿಂದಲೂ ಕಲ್ಲಿದ್ದಲು ಬರ್ತಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ,”ಎಂದು ಸಚಿವರು ವಿವರ ನೀಡಿದರು.

    ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಂಪಯ್ಯ‌ ನಾಯಕ್, ಮಾನಪ್ಪ ವಜ್ಜಲ್, ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್‌ ಪಾಂಡೆ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    apvc-iconPost Views: 75
  • ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    • ಐದನೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
      ಜೋಡಾಟ-ರಥೋತ್ಸವ ಸೇರಿ ಹಲವು ಆಕರ್ಷಣೆ
    ಸತ್ಯಕಾಮ ವಾರ್ತೆ ಬೆಂಗಳೂರು: 
    ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.

    ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.

    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಮೂಲಕ ಆಯೋಜನೆ ಆಗುತ್ತಿರುವ ಈ ಆಚರಣೆಯ ದಿನ-ಸ್ಥಳ ಘೋಷಣೆ ಕುರಿತು ಬೆಂಗಳೂರಿನ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಜು. 7ರಂದು ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದಲ್ಲಿ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ.

    Video: ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ಆಗಿದ್ದವು. ಆದರೆ ಅದಕ್ಕೆ ಬೃಹತ್ ಜನಸ್ತೋಮ ಹರಿದುಬಂದಿದ್ದು ಸುಮಾರು ಶೇ. 70 ಜನರಿಗೆ ಬಂಟರ ಸಂಘಕ್ಕೆ ಪ್ರವೇಶಿಸಲಿಕ್ಕೂ ಆಗಿರಲಿಲ್ಲ. ಹೀಗಾಗಿ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದರು.

    ಬೃಹತ್ ಮೆರವಣಿಗೆ: ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ ‘ನುಡಿ ಚಾವಡಿ’ ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ದೀಪಕ್ ಶೆಟ್ಟಿ ವಿವರಿಸಿದರು. ಮಾತ್ರವಲ್ಲದೆ, ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕರು ಸೇರಿದಂತೆ ಹಲವು ತಾರೆಯರು ಕೂಡ ಭಾಗಿ ಆಗಲಿರುವುದರಿಂದ ಈ ಸಂಭ್ರಮಕ್ಕೆ ತಾರಾ ಕಳೆ ಇರಲಿದೆ ಎಂದರು.

    ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕ ನಿರ್ದೇಶಕ ಆರ್.ಉಪೇಂದ್ರ ಶೆಟ್ಟಿ, ಹೋಟೆಲೋದ್ಯಮಿ ಸತೀಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಏನಿದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ?
    ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಐದು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ವಿಶ್ವ ಕುಂದಾಪ್ರ ಕನ್ನಡ ದಿನ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 04ರಂದು ಆಷಾಢ ಅಮಾವಾಸ್ಯೆ ಬಂದಿದೆ. ಅದು ವಾರದ ದಿನವಾದ್ದರಿಂದ, ಆಯೋಜನೆ ಹಾಗೂ ಆಗಮಿಸುವ ಅತಿಥಿ ಗಣ್ಯರ ಅನುಕೂಲದ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಗಸ್ಟ್ 17, 18ರಂದು ವಿಶ್ವ ಕುಂದಾಪುರ ಕನ್ನಡ ದಿನವನ್ನು ಕುಂದಾಪ್ರ ಕನ್ನಡ ಹಬ್ಬವಾಗಿ ಆಚರಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ಇದು ವೇದಿಕೆ ಆಗಲಿದ್ದು, ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಪಸರಿಸಲಿದೆ.

    ಇದು ಸಣ್ಣ ಆಲೋಚನೆ ಅಲ್ಲ‌. ಹಬ್ಬದ ಸಂಭ್ರಮ ಮಾತ್ರವಲ್ಲದೆ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಸೇರಿಸುವ ಬೃಹತ್ ಕಾರ್ಯಕ್ರಮ. ಇದು ಕುಂದಾಪುರದ ವೈಶಿಷ್ಟ್ಯ ಎಲ್ಲರಿಗೂ ತೋರಿಸಿ ಬೆಳೆಸುವ ಅದ್ಭುತ ಪ್ರಯತ್ನ.
    – ರವಿ ಬಸ್ರೂರು, ಖ್ಯಾತ ಸಂಗೀತ ನಿರ್ದೇಶಕ.

    2 ದಿನಗಳ ಕಾರ್ಯಕ್ರಮಗಳ ಪಟ್ಟಿ
    * ‘ಹಂದಾಡ್ತ ನೆಗ್ಯಾಡಿ’: ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
    * ‘ಬಯಲಾಟ’: ಗ್ರಾಮೀಣ ಕ್ರೀಡೋತ್ಸವ
    * ‘ರಥೋತ್ಸವ’: ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
    * ‘ಪೆಟ್ಟ್ ಒಂದೇ, ಸ್ವರ ಬೇರೆ’: ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
    * ‘ಭುಜಬಲದ ಪರಾಕ್ರಮ’ ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
    * ‘ಯಬ್ಯಾ ಸೌಂಡೇ’: ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
    * ‘ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್’: ವಿಶೇಷ ನೃತ್ಯ‌ ಪ್ರದರ್ಶನ
    * ‘ಗಂಡಿನ್ ಪಿಚ್ಚರ್ ಬಿಡ್ತ್’: ವಿಶೇಷ ಕಿರುಚಿತ್ರ ಪ್ರದರ್ಶನ
    * ‘ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್’: ಊರಿನ ಸಿನಿತಾರೆಯರು, ಸೂಪರ್ ಸ್ಟಾರ್‌ಗಳ ಸಮಾಗಮ.
    * ‘ಕುಂದಾಪ್ರ ಸಂತಿ’: ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
    * ‘ಹೊಟ್ಟಿ ಕಂಡದ್ ನಾವೇ ಸೈ’: ಕರಾವಳಿಯ ವಿಶೇಷ ಖಾದ್ಯ ಮೇಳ.

    apvc-iconPost Views: 10