Blog

  • ಆರ್. ಕೆ ಗೆಲುವು ಖಚಿತವೆಂದ ಸಮೀಕ್ಷೆ

    ಆರ್. ಕೆ ಗೆಲುವು ಖಚಿತವೆಂದ ಸಮೀಕ್ಷೆ

    ಸತ್ಯಕಾಮ ವಾರ್ತೆ ಕಲಬುರ್ಗಿ:
    ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೊರಬಂದಿದ್ದೂ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಾರಿ ಅಂತರದಲ್ಲಿ ಗೆಲುವಿನ ಪಟಾಕಿ ಸಿಡಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ವರದಿ ಮಾಡಿವೆ.

    2019ರ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿ ಬಿಜೆಪಿಯ ಬಾವುಟವನ್ನು ಹಾರಿಸಿದ್ದ ಉಮೇಶ್ ಜಾಧವ್ ಅವರು ಈ ಬಾರಿಯೂ ಗೆಲುವು ಸಾಧಿಸಿ ಕಲಬುರ್ಗಿ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸದಿಂದ ಮತ್ತೆ ಹೈಕಮಾಂಡ್ ಉಮೇಶ್ ಜಾಧವ್ ಅವರನ್ನು ಕಣಕ್ಕೆ ಇಳಿಸಿದೆ.

    ಆದರೆ ಇದೆಲದ್ದಕ್ಕೂ ತೆರೆ ಎಳೆದಿರುವ ಚುನಾವಣೋತ್ತರ ಸಮೀಕ್ಷೆಗಳು ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುಧ್ಧ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೂ ಕಳೆದ ಬಾರಿ ಬಿಜೆಪಿಗೆ ಮತ ಚಲಾಯಿಸಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಮೆಚ್ಚಿ ಈ ಬಾರಿ ರಾಧಾಕೃಷ್ಣ ದೊಡ್ಡಮನಿ ಅವರ ಕೈ ಹಿಡಿದಿರುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಸಮೀಕ್ಷೆಗಳ ಬಹಿರಂಗಗೊಳಿಸಿವೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿರುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮೇ 07 ರಂದು ಎರಡನೇ ಹಂತದ ಚುನಾವಣೆ ನಡೆದಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ಕಾಂಗ್ರೆಸ್ಸ್ ಅಭ್ಯರ್ಥಿಯಾಗಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಸ್ಪರ್ಧಿಸಿದ್ದರು.

    ಈ ಬಾರಿ ನಾನೇ ಗೆಲ್ಲುವೇ ಎಂದು ಪಣತೊಟ್ಟಿರುವ ಇಬ್ಬರೂ ಅಭ್ಯರ್ಥಿಗಳು ಜೂನ್ 04 ರ ಫಲಿತಾಂಶಕ್ಕೆ ಕಾಯಬೇಕಿದೆ.

    apvc-iconPost Views: 5051
  • ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ : ಇನ್ನೂ ಆಕ್ಟಿವ್

    ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ : ಇನ್ನೂ ಆಕ್ಟಿವ್

    ಜಿಲ್ಲಾಧಿಕಾರಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸಾರ್ವಜನಿಕರಿಗೆ ರಿಪ್ಲೈ ಮಾಡಿದ ಖದೀಮರು

    ಸತ್ಯಕಾಮ ವಾರ್ತೆ
    ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬೀ ಅವರ ನಕಲಿ ಫೇಸ್ ಖಾತೆ ತೆರೆಯಲಾಗಿದೆ, ಅಲ್ಲದೇ ಈ ಖಾತೆಯಿಂದ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಜಿಲ್ಲಾಡಳಿತದಲ್ಲಿನ ಅಧಿಕಾರಿ ವರ್ಗದವರಿಗೆ ಖದೀಮರು ಮೆಸೇಜ್ ಕಳಿಸುತ್ತಿದ್ದಾರೆ.

    ಡೆಪ್ಯೂಟಿ ಕಮಿಷನ್ ಯಾದಗಿರಿ ಐಎಎಸ್ (ಸುಶೀಲಾ ಬಿ) ಎಂಬ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿ ಮಾಡಿರುವ ಖದೀಮರು ಜಿಲ್ಲಾಧಿಕಾರಿಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿಯೇ ಆ ಮೇಸೆಜ್ ಗಳಿಗೆ ರಿಪ್ಲೇ ಮಾಡಿದ್ದಾರೆ ಎಂದು ಸಾರ್ವಜನಿಕರು ನಂಬಿದ್ದಾರೆ, ಅಲ್ಲದೇ ಜಿಲ್ಲಾಧಿಕಾರಿ ಅವರಿಗೆ ಫೋಟೋ ಸ್ಟೇಟಸ್ ಇಟ್ಟುಕೊಂಡಿದ್ದ ಸ್ಕ್ರೀನ್ ಶಾಟ್ ಗಳನ್ನು ತೆಗೆದುಕೊಂಡ ಕದೀಮರು ಅದನ್ನು ಜಿಲ್ಲಾಧಿಕಾರಿಯವರ ನಕಲಿ ಫೇಸ್ಬುಕ್ ಖಾತೆಯಲ್ಲಿ ಸ್ಟೇಟಸ್ ಇಟ್ಟಿದ್ದಾರೆ.

    ಜಿಲ್ಲಾಧಿಕಾರಿಗಳ ಹೆಸರು ಮತ್ತು ಡಿಪಿ ಯಲ್ಲಿ ಪೋಟೋ ಬಳಸಿಕೊಂಡು ವಂಚನೆ ಮಾಡಲು ಯತ್ನಿಸುವ ಪ್ರಕರಣಗಳು ಕಂಡು ಬಂದ ಮೇರೆಗೆ ಸ್ವತಹ ಜಿಲ್ಲಾಧಿಕಾರಿಯೇ ಸೈಬರ್ ಕ್ರೈಂ ನಲ್ಲಿ ಪ್ರಕರಣ ದಾಖಲಿಸಿರುವುದಾಗಿ ಮೊನ್ನೆಯಷ್ಟೇ ಹೇಳಿಕೊಂಡಿದ್ದರು. ಅದರೆ ಇದುವರೆಗೂ ಪ್ರಕರಣವನ್ನು ಭೇದಿಸದ ಸೈಬರ್ ಕ್ರೈಂ ಪೊಲೀಸರು ಜಿಲ್ಲಾಧಿಕಾರಿ ಹೆಸರಿನ ನಕಲಿ ಖಾತೆಯನ್ನು ಪತ್ತೆ ಹಚ್ಚುವಲ್ಲಿ ಆಸಕ್ತಿ ತೋರುತ್ತಿಲ್ಲ.

    ಆದಷ್ಟು ಬೇಗನೆ ಸೈಬರ್ ಕ್ರೈಂ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲಾಧಿಕಾರಿ ಖಾತೆಯಿಂದ ಮೋಸ ಹೋಗದಂತೆ ತಡೆಯಬೇಕಾಗಿದೆ.

    apvc-iconPost Views: 5019
  • ಅನಧಿಕೃತ ಕೇಬಲ್ ತೆರವಿಗೆ  ಮುಹೂರ್ತ ಯಾವಾಗ..?

    ಅನಧಿಕೃತ ಕೇಬಲ್ ತೆರವಿಗೆ ಮುಹೂರ್ತ ಯಾವಾಗ..?

    ಜನಪ್ರತಿನಿಧಿಗಳು, ಜೆಸ್ಕಾಂ ಅಧಿಕಾರಿಗಳು ಅವಘಡ ಸಂಭವಿಸಿದ ಮೇಲೆ ಎಚ್ಚೆತ್ತುಕೊಳ್ಳುವರೇ?

    *ಸತ್ಯಕಾಮ ವಾರ್ತೆ ಯಾದಗಿರಿ:*
    ಜಿಲ್ಲೆಯಲ್ಲಿ ಅನದಿಕೃತ ಕೇಬಲ್ ಗಳ ಹಾವಳಿ ಮಿತಿ ಮೀರಿದ್ದು, ಕಳೆದ ಶನಿವಾರ ಸತ್ಯಕಾಮ ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯಾ. ಜಿಯೋ ಹೊರತುಪಡಿಸಿ ಇನ್ನುಳಿದ ಕೇಬಲ್ ಗಳು ಅನದಿಕೃತವೆಂದು ಸುದ್ದಿ ಪ್ರಕಟಿಸಿತ್ತು. ಸುದ್ದಿ ಪ್ರಕಟವಾಗಿ ನಾಲ್ಕೈದು ಐದು ದಿನ ಕಳೆದರೂ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಧಿಕಾರಿಯಾಗಲಿ, ನಗರಸಭೆ ಆಯುಕ್ತರಾಗಲಿ(ಪ್ರ), ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದ್ದಿದ್ದಾರೆ..?

    ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಮ್ಮ ಪ್ರತಿನಿಧಿ ಜಿಲ್ಲಾಧಿಕಾರಿ ಡಾ. ಸುಶೀಲಾ. ಬೀ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಗಮನಕ್ಕೆ ತಂದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿರುವುದಕ್ಕೆ ಕಾರಣವೇನಿರಬಹುದು.?

    ಕಾನೂನು ಬದ್ಧವಾಗಿ ಒಎಫ್‌ಸಿ ಅಳವಡಿಕೆಗೆ ನಿರ್ದಿಷ್ಟ ಶುಲ್ಕಗಳನ್ನು ಪಾವತಿಸದೆ, ಅನುಮತಿ ಪಡೆಯದೇ ಕೇಬಲ್ ಗಳನ್ನು ಅಳವಡಿಸಲಾಗಿದೆ. ಕೇಬಲ್ ಗಳಿಂದ ನಗರದ ಸೌಂದ ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆಯೇ ವಿನಾ ಇದರಿಂದ ಸರ್ಕಾರದ ಬೊಕ್ಕಸ ತುಂಬಬೇಕಿದ್ದ ಲಕ್ಷಾಂತರ ರೂಪಾಯಿ ಗುಳುಂ ಆಗುತ್ತಿದೆ.

    ನಗರದಲ್ಲಿ ಇತ್ತಿಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಮರಗಳು, ಕಂಬಗಳು ಜೊತೆಗೆ ಒಎಫ್‌ಸಿ, ಫೋನ್, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವು ಕಡೆ ತುಂಡಾಗಿ ಬಿದ್ದಿದ್ದರೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿನ ಕೇಬಲ್ ಬಂಡಲ್ ಗಳು ಜೋತುಬಿದಿದ್ದು,
    ರಸ್ತೆ ಮೇಲೆ ವಾಹನ ಸವಾರರು ಸಂಚರಿಸುವಾಗ ಯಾವ ವಾಹನ/, ವ್ಯಕ್ತಿಯ ಮೇಲೆ ಕೇಬಲ್‌ಗಳು ಬೀಳುತ್ತವೆಯೋ ಹೇಳಲಾಗದು.

    ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಧಿಕಾರಿಗಳು ಹಾಗೂ ಜನ್ರತಿನಿಧಿಗಳು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಪ್ರಮುಖವಾಗಿ ವಿದ್ಯುತ್ ಕಂಬದಲ್ಲಿನ ವಿಷಯಕ್ಕೆ ಸಂಬAಧಿಸಿದAತೆ ಜೆಸ್ಕಾಂ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು, ವಿದ್ಯುತ್ ಕಂಬದಿAದ ಸ್ವಲ್ಪ ವ್ಯತ್ಯಾಸವಾದರೂ ಜೀವಹಾನಿ ಸಂಭವಿಸುವ ಅಪಾಯವಿರುತ್ತದೆ. ಇನ್ನೂ ನಿರ್ಲಕ್ಷö್ಯವಹಿಸಿದಿದಲ್ಲಿ ಅದಕ್ಕೆ ಇಲಾಖೆಯೇ ಭಾರಿ ಬೆಲೆತೆತ್ತ ಬೇಕಾಗುತ್ತದೆ!

    ಕಟ್ಟುನಿಟ್ಟಿನ ಮೇಲ್ವಿಚಾರಣೆ ಮತ್ತು ಕಠಿಣ ಕ್ರಮ ವಹಿಸಿದರೆ ಮಾತ್ರ ಕೇಬಲ್ ಮಾಫಿಯಾವನ್ನು ನಿಯಂತ್ರಿಸಲು ಸಾಧ್ಯ. ಜನಜೀವನಕ್ಕೆ ತೊಂದರೆಯಾಗುವAತೆ ಕೇಬಲ್ ಅಳವಡಿಸಿದವರಿಗೆ ಶಿಕ್ಷೆಯಾದಾಗ ಮಾತ್ರ ಸಿಕ್ಕಸಿಕ್ಕಲ್ಲಿ ಕೇಬಲ್ ಅಳವಡಿಸುವುದು ಕಡಿಮೆಯಾಗಲಿದೆ. ಜನರು ದೂರುತ್ತಾರೆಂಬ ಕಾರಣಕ್ಕೆ ನಾಮಕೇವಾಸ್ತೆಗೆ ಅದನ್ನು ಪರಿಶೀಲನೆ, ನೋಟಿಸ್‌ಗಳು ನೀಡಿ ಕೈತೊಳೆದುಕೊಂಡು ಕುಳಿತಲ್ಲಿ ಅಕ್ರಮ ನಿಯಂತ್ರಿಸುವುದು ಕಷ್ಟ ಎಂಬುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ,

    ಅವಘಡ ಸಂಭವಿಸುವುದಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಾದ ಅಧಿಕಾರಿಗಳು,ಜನಪ್ರತಿನಿಧಿಗಳು ದುರ್ಘಟನೆ ನಡೆದಾದ ಮೇಲೆ ಎಚ್ಚೆತ್ತುಕೊಳ್ಳುವವರಾ ಎಂಬ ಅನುಮಾನ ಜನಸಾಮಾನ್ಯರಲ್ಲಿ ಮೂಡಿದೆ, ಇನ್ನು ಯಾವಾಗ ಕ್ರಮ ಕೈಗೊಳ್ಳುವರು ಎಂಬುದನ್ನು ಕಾದುನೋಡಬೇಕಿದೆ.

    apvc-iconPost Views: 5005
  • ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯ

    ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯ

    ಜಿಯೋ ಹೊರತು ಪಡಿಸಿ ಇನ್ನುಳಿದ ಕೇಬಲ್ ಗಳು ಅನಧಿಕೃತ

    ಸತ್ಯಕಾಮ ವಾರ್ತೆ ಯಾದಗಿರಿ:
    ನಗರದ ರಸ್ತೆ, ಪಾದಚಾರಿ ಮಾರ್ಗ, ಮರ, ವಿದ್ಯುತ್‌ ಕಂಬ, ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಖಾಸಗಿ ಕೇಬಲ್‌ಗಳು ಮೀನಿನ ಬಲೆಯಂತೆ ವ್ಯಾಪಿಸಿ ನಾಗರಿಕರಿಗೆ ಅಪಾಯ ತಂದೊಡ್ಡಿರುವ ಕಪ್ಪು ಬಣ್ಣದ ಕೇಬಲ್‌ಗಳು ಅನಧಿಕೃತವಾಗಿವೆಂದು ಗೊತ್ತಿದ್ದರೂ ಕೂಡ ಆಡಳಿತ ನಡೆಸುವವರು ಮಾತ್ರ ಇದರ ಬಗ್ಗೆ ಮೌನವಹಿಸಿದ್ದಾರೆ.

    ಹೌದು ಈ ಬಗ್ಗೆ ನಗರಸಭೆ ಹಾಗೂ ಜೆಸ್ಕಾಂ ಕಚೇರಿಗೆ ಯಾದಗಿರಿ ನಗರದಲ್ಲಿ ಓಎಫ್‌ಸಿ ಕೇಬಲ್, ಇಂಟರನೆಟ್ ಕೇಬಲ್, ಡಿಷ್ ಟಿವಿ ಕೇಬಲ್, ಫೈಬರ್ ಕೇಬಲಗಳು ಅಳವಡಿಸಲು ಇರುವ ಗೈಡ್ ಲೈನ್ಸ್‌ಗಳ ಪತ್ರದ ಪ್ರತಿ ಹಾಗೂ ಅನುಮತಿ ಪಡೆದವರ ವಿವರಗಳನ್ನು ನೀಡುವಂತೆ ಮಾಹಿತಿ ಹಕ್ಕು ಅಧಿನಿಯಮದ ಅಡಿ ಕೋರಿದ ಮಾಹಿತಿಗೆ ಉತ್ತರ ನೀಡಿದ ಜೆಸ್ಕಾಂ ಹಾಗೂ ನಗರಸಭೆ, ಜಿಲ್ಲೆಯಲ್ಲಿ ಅಧಿಕೃತವಾಗಿ ಇಲಾಖೆಗೆ ಹಣ ಪಾವತಿ ಮಾಡಿದ್ದು ಕೇವಲ ಒಂದೇ ಒಂದು ಕಂಪೆನಿ ಅದೂ ಜಿಯೋ ಮಾತ್ರ ಇನ್ನುಳಿದ ಯಾವುದೇ ಕಂಪನಿಯು ಪರವಾನಿಗೆ ಪಡೆದಿಲ್ಲ ಎಂದು ಉತ್ತರಿಸಿವೆ.

    ಜಿಲ್ಲೆಯಲ್ಲಿ ಒಎಫ್‌ಸಿ ಕೇಬಲ್‌ ಅಕ್ರಮವಾಗಿ ಹರಡಿಕೊಂಡಿದ್ದೂ. ಸರ್ಕಾರದ ಇಲಾಖೆಗಳನ್ನು ನಿಯಂತ್ರಿಸುವ ಮಾಫಿಯಾಗಳಲ್ಲಿ ಈ ಒಎಫ್‌ಸಿ ಕೇಬಲ್‌ ಮಾಫಿಯಾ ಕೂಡ ಒಂದು. ಹೀಗಾಗಿಯೇ ಅಧಿಕಾರಿಗಳು ಅನಧಿಕೃತ ಕೇಬಲ್‌ ತೆರವುಗೊಳಿಸಲು ಹಾಗೂ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯ ತೋರುತ್ತಿಲ್ಲ.

    ಟೆಲಿಕಾಂ ಸೇವಾ ಕಂಪನಿಗಳು 4 ರಿಂದ 6 ಕಿ.ಮೀ ಉದ್ದದ ಒಎಫ್‌ಸಿ ಕೆಬಲ್ ಗೆ ಅನುಮತಿ ಪಡೆದು ಐದು ಪಟ್ಟು ಅಧಿಕ ಡಕ್ಟ್ ಅಳವಡಿಸಿ ಲಕ್ಷಾಂತರ ರೂ. ಶುಲ್ಕ ವಂಚಿಸುತ್ತಿವೆ. ಒಂದು ಸಂಸ್ಥೆಯು ಜಿಲ್ಲೆಯಲ್ಲಿ ಕೇಬಲ್ ಅಳವಡಿಕೆಗೆ ಅನುಮತಿ ಪಡೆದರೆ, ಇತರೆ ಮೂರ್ನಾಲ್ಕು ಸಂಸ್ಥೆಗಳು ಅಕ್ರಮವಾಗಿ ಅದರಲ್ಲಿ ಕೇಬಲ್‌ ಹಾಕುತ್ತಿವೆ. ಈ ಅಕ್ರಮವನ್ನು ಪರಿಶೀಲಿಸುವ ತಾಂತ್ರಿಕ ನೈಪುಣ್ಯತೆ ಅಧಿಕಾರಿಗಳಿಗಿಲ್ಲ ಈ ಕಾರಣದಿಂದ್ದಾಗಿ ಅಕ್ರಮ ಕಬಲ್ ಮಾಫಿಯಾ ಜಾಲ ವಿಸ್ತಾರಣೆಗೊಂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ.

    ಮೊಬೈಲ್‌ ಟವರ್‌ಗಳು, ಬ್ರಾಂಡ್‌ಬ್ಯಾಂಡ್‌ ಸೇವೆಗಳು ಸಂಪೂರ್ಣವಾಗಿ ಒಎಫ್‌ಸಿಯನ್ನೇ ಅವಲಂಬಿಸಿವೆ. ದೂರ ಸಂಪರ್ಕ ಸೇವೆ ಒದಗಿಸುವ ಸೇವಾದಾರರದ್ದು ಒಂದು ವಿಧವಾದರೆ, ಟಿವಿ ಸೇವೆಯೊಂದಿಗೆ ಅಂತರ್ಜಾಲ ಸೇವೆ ಒದಗಿಸುವರದ್ದು ಇನ್ನೊಂದು ವಿಧ. ಐಎಸ್‌ಪಿ ಸೇವೆ ಒದಗಿಸುವವರು ಒಎಫ್‌ಸಿಯನ್ನು ಮರದಿಂದ ಮರಕ್ಕೆ, ಕಂಬದಿಂದ ಕಂಬಕ್ಕೆ ಎಳೆದು, ರಸ್ತೆಗಳಲ್ಲಿ ತೋರಣ ಕಟ್ಟಿದ್ದಾರೆ!

    ಇನ್ನೂ ಒಎಫ್‌ಸಿ ಮಾರ್ಗದ ಶುಲ್ಕದಿಂದ ತಪ್ಪಿಸಿಕೊಳ್ಳಲು ಹಲವು ಸಂಸ್ಥೆಗಳು ಅನುಮತಿ ಪಡೆದಿರುವ ಕಂಪನಿಯೊಂದಿಗೆ ಶಾಮೀಲಾಗಿ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ಹಣ ಉಳ್ಳವರ ಪಾಲಾಗುತ್ತಿದೆ.

    ನಗರದಲ್ಲಿ ಬಹುತೇಕ ಕಂಬಗಳು ಕೇಬಲ್‌ನಿಂದ ಆವರಿಸಿದ್ದೂ. ಈ ಕಂಬಗಳಲ್ಲಿ ರಿಪೇರಿ ಇದ್ದರೆ ಲೈನ್‌ಮನ್‌ಗೆ ಕಂಬವೇರುವುದು ತ್ರಾಸದಾಯಕ. ಇದರಿಂದ ಅವಘಡ ಸಾಧ್ಯತೆಯೂ ಹೆಚ್ಚು, ತುರ್ತು ಸಂದರ್ಭಗಳಲ್ಲಿ ಲೈನ್‌ಮನ್‌ ಗಳು ಕಂಬವೇರಲು ಹರಸಾಹಸ ಪಡಬೇಕಾಗಿದೆ.

    ನಗರದಲ್ಲಿ ಅಕ್ರಮವಾಗಿ ಒಎಫ್ ಸಿ, ಕೇಬಲ್ ಹಾಕುವಾಗಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಂಡರೆ ಅಕ್ರಮ ಒಎಫ್ ಸಿ ಕೇಬಲ್ ಗಳ ಹಾವಳಿ ತಪ್ಪಿಸಬಹುದು. ಆದರೆ ಅಧಿಕಾರಿಗಳು ಈ ಭ್ರಷ್ಟ ವ್ಯವಸ್ಥೆಗೆ ಕುಮ್ಮಕ್ಕು ನೀಡುತ್ತಿರುವುದರಿಂದ ಆಪ್ಟಿಕಲ್ ಕೇಬಲ್ ಹಾವಳಿಗೆ ಕಡಿವಾಣ ಹಾಕಲಾಗುತ್ತಿಲ್ಲ.

    ಕೂಡಲೇ ಸಂಬದಪ್ಪಟ್ಟ ಅಧಿಕಾರಿಗಳು ಅನಧಿಕೃತ ಕೇಬಲ್ ಮಾಫಿಯ ಕಡೆ ಗಮನಹರಿಸಿ ಕಡಿವಾಣ ಹಾಕುವರಾ ಎಂಬುದನ್ನ ಕಾದುನೋಡಬೇಕಿದೆ.

    apvc-iconPost Views: 5012
  • ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ

    ಸತ್ಯಕಾಮ ವಾರ್ತೆ ಯಾದಗಿರಿ:
    ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ  ಮತದಾರರು ಮತದಾನದ ನಂತರ ಮೊಬೈಲ್‌ ರೆಕಾರ್ಡ್‌ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ಜಿಲ್ಲೆಯ ಕೆಲವಡೆ ನಡೆದಿವೆ.

    ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂಬ ಆದೇಶವಿದ್ರು, ಕೂಡ ಜಿಲ್ಲೆಯ ಕೆಲವು ಕಡೆ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ.

    ಇದಕ್ಕೆ ಸಾಕ್ಷಿಯಂತೆ ವಡಗೇರಾ ತಾಲೂಕಿನ ಕಾಡಂಗೇರಾ (ಬೀ) ಗ್ರಾಮದಲ್ಲಿ ಯುವಕನೊಬ್ಬ ಬಿಜೆಪಿ ಪಕ್ಷಕ್ಕೆ ಮತ ಹಾಕಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಜೊತೆಗೆ, ಬ್ಯಾಲೆಟ್‌ ಪೇಪರ್‌ ಮುದ್ರಣ ಆಗುವುದನ್ನೂ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ, ನಂತರ ಕೆಲ ಗಂಟೆಗಳ ನಂತರ ತೆಗೆದು ಹಾಕಿದ್ದೇನೆ.

    ಇದಲ್ಲದೆ ಯಾದಗಿರಿಯ ಗಂಗು ಮಡಿವಾಳ ಎಂಬ ಯುವಕ ಬಿಜೆಪಿ ಪಕ್ಷಕ್ಕೆ ಮತ ಹಾಕಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಜೊತೆಗೆ, ಬ್ಯಾಲೆಟ್‌ ಪೇಪರ್‌ ಮುದ್ರಣ ಆಗುವುದನ್ನೂ ವಿಡಿಯೋ ಮಾಡಿಕೊಂಡು ಫೇಸ್ ಬುಕ್, ವಾಟ್ಸಾಪ್ ಸ್ಟೇಟ್ ಸನಲ್ಲಿ ಹಂಚಿಕೊಂಡಿದ್ದಾರೆ.

    apvc-iconPost Views: 3
  • ಸುಕ್ಷೇತ್ರ ಅಬ್ದುಲ್ ಭಾಷಾ ದೇವಸ್ಥಾನದ ಬಳಿ ಜೂಜಾಟ ಜೋರು

    ಸುಕ್ಷೇತ್ರ ಅಬ್ದುಲ್ ಭಾಷಾ ದೇವಸ್ಥಾನದ ಬಳಿ ಜೂಜಾಟ ಜೋರು

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯದ ಬಳಿ ಗುರುವಾರ ಮದ್ಯಾಹ್ನ ಜೂಜುಕೋರರು ಯಾರ ಭಯವಿಲ್ಲದೆ ರಾಜಾರೋಷವಾಗಿ ಜೂಜಾಟದಲ್ಲಿ ತೊಡಗಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಹೌದು ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬರುತ್ತದೆ. ಭಕ್ತಿ ಭಾವದಿಂದ ದೇವರ ಮೊರೆ ಹೋಗುತ್ತಾರೆ. ಕಷ್ಟಗಳನ್ನು ನಿಭಾಯಿಸುವ ಶಕ್ತಿ ನೀಡೆಂದು ಭಕ್ತರು ದೇವರ ಬಳಿ ಅಂಗಲಾಚುತ್ತಾರೆ. ಆದರೆ ಇತ್ತೀಚಿಗೆ ಇಂತಹ ಪುಣ್ಯಕ್ಷೇತ್ರದ ಬಳಿ ಜೂಜಾಕೋರರು ಯಾರ ಭಯವಿಲ್ಲದೆ ಜೂಜಾಟವಾಡುತ್ತಿದ್ದೂ, ದೇವಸ್ಥಾನದ ಸುತ್ತಮುತ್ತಲಿನ ಜಾಗವನ್ನು ಜೂಜುಕೋರರು ಇಸ್ಪೀಟ್ ಅಡ್ಡೆಗಳನ್ನಾಗಿ ಮಾಡಿಕೊಂಡಿದ್ದರೆ ಎಂದು ಭಕ್ತರು ಆರೋಪಿಸುತ್ತಿದ್ದಾರೆ.

    ಭಗವಂತನ ಸನ್ನಿಧಿ ಅಕ್ರಮ ಚಟುವಟಿಕೆ ತಾಣವಾಗಿರುವುದು ಸರಿಯಲ್ಲ. ಈ ತಾಣಗಳು ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತರನ್ನು ಕೈಬೀಸಿ ಕರೆಯುತ್ತಿವೆ, ಇದ್ದರಿಂದ ದೇವಾಲಯಕ್ಕೆ ಬಂದ ಭಕ್ತರು ಜೂಜಾಟದಲ್ಲಿ ತೊಡಗಿಕೊಂಡು ಹಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ, ಆದ್ದರಿಂದ ಇಂತಹ ಚಟುವಟಿಕೆ ನಡೆಸುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಒಂದು ವೇಳೆ ಪೊಲೀಸರು ಜೂಜಾಟ ತಡೆಯದಿದ್ದರೆ ದೇವಸ್ಥಾನದ ಸ್ಥಳಗಳು ಮುಂದಿನ ದಿನಗಳಲ್ಲಿ ನಾನಾ ಅಕ್ರಮಗಳ ತಾಣವಾಗಿ ಮಾರ್ಪಡುತ್ತವೆ ಎಂದು ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

    ಪೊಲೀಸರು ಇತ್ತ ಗಮನಹರಿಸಿ ಜೂಜಾಟ ನಿಯಂತ್ರಣಕ್ಕೆ ಬ್ರೇಕ್ ಹಾಕುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

    apvc-iconPost Views: 18
  • ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಘದ ಪದಾಧಿಕಾರಿಗಳ ಅವಿರೋಧ ಆಯ್ಕೆ

    ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಘದ ಪದಾಧಿಕಾರಿಗಳ ಅವಿರೋಧ ಆಯ್ಕೆ

     


    ಕಲಬುರಗಿ: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಘದ ಸಭೆಯು ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೆಸ್ವಾಮ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಂಪಾದಕರ ಸಮಸ್ಯೆಗಳು ಹಾಗು ಅದರ ಪರಿಹಾರ ಹೇಗೆ ಕಂಡುಕೊಳ್ಳಬೇಕೆಂದು ಎಳೆ ಎಳೆಯಾಗಿ ವಿವರಿಸಿದರು. ತದ ನಂತರ ಕಲಬುರಗಿ ಜಿಲ್ಲಾ ಸಮಿತಿ ರಚನೆಗಾಗಿ ಹೆಸರುಗಳನ್ನು ಸೂಚಿಸಲು ತಿಳಿಸಿದಾಗ ಎಲ್ಲ ಸಂಪಾದಕರು ಒಮ್ಮತದ ಅಭ್ಯರ್ಥಿಗಳನ್ನು ಅವಿರೋಧವಾಗಿ ಕಲಬುರಗಿ ಜಿಲ್ಲಾ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘಕ್ಕೆ ಆಯ್ಕೆಯಾದರು.
    ಜಿಲ್ಲಾ ಅಧ್ಯಕ್ಷರಾಗಿ ಸಿದ್ರಾಮಪ್ಪ ಮಾಲಿಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ ಪಿ. ಮಣ್ಣೂರ, ಉಪಾಧ್ಯಕ್ಷರಾಗಿ ಸುರೇಶ ಗೌರೆ, ಅಜೀಜುಲ್ಲಾ ಸರ್ಮಸ್ತ, ಚಂದ್ರಕಾಂತ ಹಾವನೂರ, ಭರತ ಖಮಿತಕರ, ವಾಸುದೇವ ದೇಸಾಯಿ, ಖಜಾಂಚಿಯಾಗಿ ಗುರುರಾಜ ಕುಲಕರ್ಣಿ, ಕಾರ್ಯದರ್ಶಿಗಳಾಗಿ ಹಣಮಂತ ಬೋಧನಕರ್, ಶಿವಕುಮಾರ ಸಿಂಧೆ, ಸಹ ಕಾರ್ಯದರ್ಶಿಗಳಾಗಿ ವಿಜಯಕುಮಾರ ಜಿಡಗಿ, ಮಲ್ಲಿಕಾರ್ಜುನ ಜೋಗ, ಜಂಟಿ ಕಾರ್ಯದರ್ಶಿಗಳಾಗಿ ಜಯಪ್ರಕಾಶ ಪೂಜಾರಿ, ಅವಿನಾಶ ಕೊಳ್ಳೂರ, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಾಜಿ ಚಿತ್ತೇಕರ, ಅನೀಲ ಕಪನೂರ ಮತ್ತು ರಾಜ್ಯ ಸಮಿತಿಯ ಹಿರಿಯ ಸಲಹೆಗಾರರಾಗಿ ಸಿದ್ದಣ್ಣ ಮಾಲಗಾರ, ಶಿವರಾಯ ದೊಡ್ಮನಿ, ದೇವೇಂದ್ರಪ್ಪ ಕಪನೂರ, ಶಂಕರ ಕೋಡ್ಲಾ, ಮತ್ತು ಬಿ.ವ್ಹಿ.ಚಕ್ರವರ್ತಿಯವರನ್ನು ಆಯ್ಕೆ ಮಾಡಲಾಗಿದೆ.‌ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನಸಾಬ ಮೋಮಿನ, ರಾಜ್ಯ ಕಾರ್ಯದರ್ಶಿ ಸುರೇಶ ಶಿಂಧೆ ಮತ್ತು ರಾಜ್ಯ ಸಹ ಕಾರ್ಯದರ್ಶಿ ಬೌದ್ಧಪ್ರಿಯ ನಾಗಸೇನ ಮತ್ತಿತರರು ಉಪಸ್ಥಿತರಿದ್ದರೆಂದು ನೂತನ ಜಿಲ್ಲಾ‌ ಪ್ರಧಾನ ಕಾರ್ಯದರ್ಶಿ ಆನಂದ‌ ಪಿ. ಮಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    apvc-iconPost Views: 1
  • ಎಸ್.ಎಸ್.ಎಲ್.ಸಿ. ಪರೀಕ್ಷೆ ನಕಲು,ಇಬ್ಬರ ಶಿಕ್ಷಕರ ಅಮಾನತ್ತು

     

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲೆಯಾದ್ಯಂತ ಎಸ್.ಎಸ್.ಎಲ್. ಸಿ ಪರೀಕ್ಷೆ ಆರಂಭವಾಗಿದ್ದು, ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಆರೋಪದ ಮೇರೆಗೆ ಇಬ್ಬರು ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿ.ಡಿ.ಪಿ.ಐ
    ಮಂಜುನಾಥ ಎಚ್.ಟಿ. ಅವರು ಆದೇಶ ಹೊರಡಿಸಿದ್ದಾರೆ.

    ಸುರಪುರ ತಾಲೂಕಿನ ಹುಣಸಗಿ ಸರಕಾರಿ ಪದವಿ ಪೂರ್ವ ಕಾಲೇಜು (ಬಾಲಕರ) ಮತ್ತು ಸುರಪುರ ಪದವಿ ಪೂರ್ವ ಕಾಲೇಜು (ಬಾಲಕರ) ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಕ್ರಮವಾಗಿ ಸುರಪುರ ತಾಲೂಕಿನ ಏವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಮತ್ತು ಸುರಪುರ ತಾಲೂಕಿನ ಝಂಡದಕೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಹಣಮಂತ್ರಾಯ ಇವರು ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ವಿಫಲರಾದ ಕಾರಣ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957 ನಿಯಮ 10(1) ರನ್ವಯ ಅಮಾನತ್ತು ಮಾಡಲಾಗಿದೆ.

    ಯಾದಗಿರಿ ಜಿಲ್ಲಾ ಪಂಚಾಯತ ಸಿ.ಇ.ಓ ಅವರು ವೆಬ್ ಕಾಸ್ಟಿಂಗ್ ಸಿ.ಸಿ. ಕ್ಯಾಮರಾ ವೀಕ್ಷಣೆ ಮಾಡಿದಾಗ ಹುಣಸಗಿ ಮತ್ತು ಸುರಪುರ ಈ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆಯುತ್ತಿದರು, ಕೊಠಡಿ ಮೇಲ್ವಿಚಾರಕರು ಯಾವುದೇ ಕ್ರಮ‌ ಕೈಗೊಳ್ಳದ ಕಾರಣ ಕೊಠಡಿ ಮೆಲ್ವಿಚಾರಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿ.ಡಿ.ಪಿ.ಐ ಅವರಿಗೆ ಸೂಚಿಸಿದರು.

    ನೌಕರರು ಕರ್ನಾಟಕ‌ ನಾಗರಿಕ ಸೇವಾ ನಿಯಮ-98ರಂತೆ ಜೀವನಾಂಶ ಭತ್ಯೆ ಪಡೆಯಲು ಅರ್ಹರಿದ್ದು, ಸಕ್ಷಮ ಪ್ರಾಧಿಕಾರಿಯ ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    apvc-iconPost Views: 0
  • ಸತ್ಯಕಾಮ ವರದಿ ಫಲಶ್ರುತಿ : ಗುತ್ತಿಗೆದಾರರಿಂದ ಹಣ ಪಡೆದ ಮೀನಾಕ್ಷಿ ಅಮಾನತ್ತು

    ಸತ್ಯಕಾಮ ವರದಿ ಫಲಶ್ರುತಿ : ಗುತ್ತಿಗೆದಾರರಿಂದ ಹಣ ಪಡೆದ ಮೀನಾಕ್ಷಿ ಅಮಾನತ್ತು

     

    *ಸತ್ಯಕಾಮ ವಾರ್ತೆ ಯಾದಗಿರಿ:*
    ಶಹಾಪುರ ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕಿ ಮೀನಾಕ್ಷಿ ಎಂಬುವವರು ಗುತ್ತಿಗೆದಾರರಿಂದ 14 ಸಾವಿರ ರೂ ಹಣ ಪಡೆದಿರುವ ಬಗ್ಗೆ ಸತ್ಯಕಾಮ ವೆಬ್ ಮತ್ತು ಪತ್ರಿಕೆಯಲ್ಲಿ ವರದಿ ಪ್ರಕಟಿಸಿಲಾಗಿತ್ತು, ವರದಿ ಪ್ರಕಟವಾದ ಬೆನ್ನಲೇ ಜಿಲ್ಲಾಪಂಚಾಯತ್ ಸಿಇಒ ಗರಿಮಾ ಪನ್ವಾರ್ ಕಿರಿಯ ಲೆಕ್ಕ ಸಹಾಯಕಿ ಮೀನಾಕ್ಷಿಯವರನ್ನು ಅಮಾನತ್ತು ಮಾಡಿ ಆದೇಶಿಸಿದ್ದಾರೆ.

    ಪ್ರಸ್ತುತ ತಾಲ್ಲೂಕು ಪಂಚಾಯತ ಕಾರ್ಯಾಲಯ ಶಹಾಪೂರನಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಮೀನಾಕ್ಷಿಯವರು ಗುತ್ತಿಗೆದಾರರಿಂದ ಹಣ ಪಡೆದಿರುವುದು ಸರ್ಕಾರಿ ನೌಕರನಿಗೆ ತಕ್ಕುದಲ್ಲದ ರೀತಿಯಲ್ಲಿ ನಡೆದುಕೊಂಡು ದುರ್ನಡತೆಯನ್ನು ಎಸಗಿರುವುದರಿಂದ ಹಾಗೂ ಕರ್ನಾಟಕ ನಾಗರೀಕ ಸೇವಾ(ನಡತೆ) ನಿಯಮಗಳು 2021, ನಿಯಮ 3ರ ನಿಯಮ (i) (ii) (iii) ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು * ಮೇಲ್ಮನವಿ) ನಿಯಮಗಳು, 1957 ರ ನಿಯಮ 10(1)(ಡಿ) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.

    ಸದರಿಯವರು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ. ಹಾಗೂ ಕರ್ನಾಟಕ ನಾಗರೀಕ ಸೇವಾ ನಿಯಮಗಳು, 1957 ರ ನಿಯಮ 98 ರ ಅನುಸಾರ ಜೀವನ ನಿರ್ವಹಣೆ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಸಿಇಒ ಗರಿಮಾ ಪನ್ವಾರ್ ಅವರು ಆದೇಶಿಸಿದ್ದಾರೆ.

    apvc-iconPost Views: 4
  • ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ- ಮಗ

    ಹತ್ತನೇ ತರಗತಿ ಪರೀಕ್ಷೆ ಬರೆದ ತಾಯಿ- ಮಗ

    ಸತ್ಯಕಾಮ ವಾರ್ತೆ ಶಹಾಪುರ:
    ಎಸ್,ಎಸ್.ಎಲ್ ಸಿ.ಪರೀಕ್ಷೆಯ ಮೊದಲ ದಿನವಾದ ಸೋಮವಾರದಂದು ತಾಲೂಕಿನಾದ್ಯಂತ ಸುಗಮವಾಗಿ ನಡೆದಿದ್ದು.ಅದರಲ್ಲೂ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಗನೊಂದಿಗೆ ಇಂದು ತಾಯಿ ಹತ್ತನೇ ತರಗತಿಯ ಪರೀಕ್ಷೆ ಬರೆಯಲು ಆಗಮಿಸಿದ್ದು ವಿಶೇಷವಾಗಿತ್ತು.ಒಟ್ಟು ಈ ಪರೀಕ್ಷಾ ಕೇಂದ್ರದಲ್ಲಿ 17 ಬ್ಲಾಕ್ ಗಳಿದ್ದು 387 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು,14 ವಿದ್ಯಾರ್ಥಿಗಳು ಗೈರು ಹಾಜರಿದ್ದರು.

    33 ವರ್ಷದ ಗಂಗಮ್ಮ ಎಂಬ ಮಹಿಳೆ ಉತ್ಸಾಹದಿಂದ ಪರೀಕ್ಷೆ ಬರೆಯಲು ಆಗಮಿಸಿದ್ದರು, ಎಸ್.ಎಸ್,ಎಲ್,ಸಿ ಪರೀಕ್ಷೆ ಬರೆಯುವ ಮೂಲಕ ರಾಜ್ಯದಾದ್ಯಂತ ಗಮನ ಸೆಳೆದಿದ್ದಾರೆ,ನನಗೆ ಓದಬೇಕೆಂಬ ಬಯಕೆ ತುಂಬಾ ಇತ್ತು ಆದರೆ ಮನೆಯಲ್ಲಿ ಬಡತನ ಹಾಗೂ ನನಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿಕೊಟ್ಟ ಕಾರಣದಿಂದಾಗಿ ನನಗೆ ವಿದ್ಯಾಭ್ಯಾಸ ಮೂಟಕು ಗೊಳಿಸಲು ಕಾರಣವಾಯಿತು,ಈಗ ನನಗೆ ಅವಕಾಶ ಸಿಕ್ಕಿದೆ,ಆದರೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಷ್ಟಪಟ್ಟು ಓದಿ 10ನೇ ತರಗತಿ ಪಾಸ್ ಮಾಡಿ ಯಾವುದಾದರೂ ಸರ್ಕಾರಿ ಹುದ್ದೆ ಪಡಿಯಬೇಕೆಂಬ ಆಸೆ ನನ್ನೊಳಗೆ ಚಿಗುರೊಡೆದ ಕಾರಣ ಇಂದು ನನ್ನ ಮಗ ಮಲ್ಲಿಕಾರ್ಜುನ ಜೊತೆಗೆ ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯುತ್ತಿದ್ದೇನೆ ಎಂದರು.

    ಮನೆಯಲ್ಲಿ ತನ್ನ ಮಗನೊಂದಿಗೆ ಸತತ ಅಭ್ಯಾಸ ಮಾಡಿ ತನಗಿಂತ ಹದಿನೈದು ವರ್ಷದ ಕಿರಿಯ ವಿದ್ಯಾರ್ಥಿಗಳ ಜೊತೆಗೆ ಇಂದು ಪರೀಕ್ಷೆ ಬರೆಯಲು ತುಂಬಾ ನನಗೆ ಖುಷಿ ನೀಡುತ್ತಿದೆ ಎಂದು ಮುಗುಳ್ನಕ್ಕರು ಕಾರಣ ಇಷ್ಟೇ. ನನ್ನಂತ ಅದೆಷ್ಟೋ ಜನ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ,ಅವರನ್ನೆಲ್ಲರನ್ನು ಪ್ರೇರೇಪಿಸುತ್ತಾ,ಶಾಲೆಗೆ ಕರೆ ತರುವುದೇ ನನ್ನ ಮುಖ್ಯ ಉದ್ದೇಶವಾಗಿದೆ.ಕಲಿಯುವವರಿಗೆ ಯಾವುದೇ ಸಮಯ ಹಾಗೂ ವಯಸ್ಸಿನ ಮಿತಿ ಇಲ್ಲ ಎಂಬ ಮಾತನ್ನು ಗಂಗಮ್ಮಳು ಮತ್ತೊಮ್ಮೆ ಸಾಬೀತು ಮಾಡಿದ್ದಾಳೆ.

    ಅಭ್ಯಾಸಕ್ಕೆ ವಯಸ್ಸಿನ ಹಂಗಿಲ್ಲ ಎಂಬ ಮಾತಿಗೆ ಗಂಗಮ್ಮಳೆ ಸಾಕ್ಷಿ, ಇಂಥ ವಯಸ್ಸಿನಲ್ಲೂ ಮಗನೊಂದಿಗೆ ಪರೀಕ್ಷೆ ಬರೆಯಲು ಮುಂದಾಗಿದ್ದು ನಿಜಕ್ಕೂ ಇವರ ಕಾರ್ಯ ಶ್ಲಾಘನೀವಾದದ್ದು,ಎಂದು ಗ್ರಾಮದ ನಾಗರಿಕರು,ಪ್ರಗತಿಪರ ಚಿಂತಕರು ಹರ್ಷ ಭಕ್ತ ಪಡಿಸಿದ್ದಾರೆ ಶಿಕ್ಷಣ ವಂಚಿತ ಮಹಿಳೆಯರಿಗೆ ಇವರೇ ಮಾದರಿ ಎಂಬುವುದು ತೋರಿಸಿಕೊಟ್ಟಿದ್ದಾರೆ.ಹಲವಾರು ಜವಾಬ್ದಾರಿಗಳ ನಡುವೆ ಶ್ರದ್ಧೆಯಿಂದ ಮಾಡಿದ ಸಾಧನೆ ನಮ್ಮ ಮಕ್ಕಳಿಗೆ ಮಾದರಿಯಾದರೆ ಎಷ್ಟೊಂದು ಒಳ್ಳೆಯದು ಎಂದೆನಿಸುತ್ತಿದೆ.

    apvc-iconPost Views: 2