Blog

  • ಕೆಕೆಆರ್‌ಟಿಸಿ ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

    ಕೆಕೆಆರ್‌ಟಿಸಿ ಬಸ್ ಗೆ ಬೆಂಕಿ ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

    ಕಲಬುರಗಿ,ಅ.30
    ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ

    ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಸ್ಥಳೀಯ ಪೊಲೀಸರ ನೆರವಿನಿಂದ
    ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    apvc-iconPost Views: 0
  • ಮನೆಯ ಮುಂದೆ ರಂಗೋಲಿ, ದೀಪ ಹಚ್ಚುವಂತೆ ಜಿಲ್ಲಾಧಿಕಾರಿಗಳ ಮನವಿ

    ಮನೆಯ ಮುಂದೆ ರಂಗೋಲಿ, ದೀಪ ಹಚ್ಚುವಂತೆ ಜಿಲ್ಲಾಧಿಕಾರಿಗಳ ಮನವಿ

    ಕಲಬುರಗಿ,ಅ.30: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬರುವ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಮನೆಯ ಮುಂದೆ ರಂಗೋಲಿ, ಹಣತೆಯ ದೀಪ ಹಚ್ಚುವ ಮೂಲಕ ಕನ್ನಡ ಪ್ರೇಮ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

    ಅಂದು ಬೆಳಿಗ್ಗೆ ಮನೆಯ ಮುಂದೆ
    ಕೆಂಪು-ಹಳದಿ ಬಣ್ಣದ ರಂಗೋಲಿಯಲ್ಲಿ
    “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂದು ವಾಕ್ಯವನ್ನು ಬಿಡಿಸಬೇಕು. ಇನ್ನು ಸಂಜೆ 7 ಗಂಟೆಗೆ ಮನೆ, ಕಚೇರಿ, ಅಂಗಡಿ-ಮುಂಗಟ್ಟುಗಳ ಮುಂದೆ ಹಣತೆ ದೀಪ ಹಚ್ಚಿ ಕನ್ನಡದ ಜ್ಯೋತಿ ಬೆಳಗಿಸಬೇಕೆಂದು ಅವರು ಕೋರಿದ್ದಾರೆ.

    ಇನ್ನು ರಾಜ್ಯೋತ್ಸವ ದಿನ ಸಂಜೆ 5 ಗಂಟೆಗೆ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ಡಿ.ಸಿ. ಅವರು ಜಿಲ್ಲೆಯ ಜನತೆಗೆ ಕರೆ ನೀಡಿದ್ದಾರೆ.

    ಕರ್ನಾಟಕ ನಾಮಕರಣದ‌ ಸುವರ್ಣ ಸಂದರ್ಭ ಇದಾಗಿರುವುದರಿಂದ ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಅಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳು ರಾಜ್ಯೋತ್ಸವ ದಿನಾಚರಣೆ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಜರುಗುವಂತೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

    *ನಾಡಗೀತೆಗೆ ಗೌರವ ಸಲ್ಲಿಸಿ:*

    ರಾಜ್ಯೋತ್ಸವ ದಿನದಂದು ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುತ್ತಿದೆ. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

    apvc-iconPost Views: 0
  • ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ

    ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ

    ಯಾದಗಿರಿ: ಪಿಎಸ್‌ಐ ಪರೀಕ್ಷಾ ಹಗರಣ ಮಾಸುವ ಮುನ್ನವೇ, ಈಗ ಅಂತಹದ್ದೇ ಮತ್ತೊಂದು ಹಗರಣವೊಂದು ಯಾದಗಿರಿಯಲ್ಲಿ ಬಯಲಾಗಿದೆ. ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡುತ್ತಿದ್ದ ಯುವಕ ಹಾಗೂ ಆತನಿಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಸಹ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದ ಆರೋಪಿಯನ್ನು ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂದು ಗುರುತಿಸಲಾಗಿದೆ. ಮತ್ತಿಬ್ಬರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆರೋಪಿ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಈ ವೇಳೆ ವಿಚಾರಣೆ ನಡೆಸಿದಾಗ ಆತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ.

    ಸುದ್ದಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಹಾಗೂ ಎಸ್ಪಿ ಜಿ.ಸಂಗೀತಾ ದೌಡಾಯಿಸಿ, ಕೆಲಹೊತ್ತು ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಇಂದು ಮತ್ತು ನಾಳೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡುವ ಮಾಹಿತಿ ಎಸ್ ಪಿ ಗೆ ಬಂದಿದೆ. ಈ ಹಿನ್ನಲೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇಲ್ಲಿವರಗೇ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ. ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

    ರಾಜ್ಯಾದ್ಯಂತ 350 ಕೇಂದ್ರಗಳಲ್ಲಿ ಶನಿವಾರ ಮತ್ತು ಭಾನುವಾರ ಸರಕಾರಿ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ, ನಾಳೆಯ ಕೂಡ ಪರೀಕ್ಷೆ ನಡೆಯಲಿದೆ,

    ಒಟ್ಟಾರೆಯಾಗಿ ಯಾದಗಿರಿಯಲ್ಲಿ ಐದಾರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು. ಈ ಅಕ್ರಮದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ,

    apvc-iconPost Views: 3
  • ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್  ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ

    ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ

    ವರದಿ: ಕುದಾನ್ ಸಾಬ್
    ಯಾದಗಿರಿ: ಜನಸಾಮಾನ್ಯರಿಗೆ ಒಂದು ಕಾನೂನು, ಸರ್ಕಾರಿ ಅಧಿಕಾರಿಗಳಿಗೆ ಮತ್ತೊಂದು ಕಾನೂನು ಎನ್ನುವ ಪ್ರಶ್ನೆ ಇದೀಗ ಜಿಲ್ಲೆಯಲ್ಲಿ ಉದ್ಭವಿಸಿದೆ. ವಿಮೆ ಮಾಡಿಸಿ ಅಂತ ಸಾರ್ವಜನಿಕರಿಗೆ ತಿಳಿಹೇಳುವ ಸರ್ಕಾರಿ ಅಧಿಕಾರಿಗಳೇ ತಾವು ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ವಾಹನಗಳಿಗೆ ವಿಮೆ ಮಾಡಿಸದೇ ನಿರ್ಲಕ್ಷ ತೋರುತ್ತಿದ್ದಾರೆ.

    ಜನಸಾಮಾನ್ಯರಿಗಾದ್ರೆ ಹೆಲ್ಮೆಟ್ ಇಲ್ಲ. ಸೀಟ್ ಬೆಲ್ಟ್ ಹಾಕಿಲ್ಲ. ಇನ್ಸುರೆನ್ಸ್ ಇಲ್ಲ, ಎಮಿಷನ್ ಟೆಸ್ಟ್ ಇಲ್ಲ, ಮಿರರ್ ಇಲ್ಲ ಅದಿಲ್ಲ-ಇದಿಲ್ಲ ಅಂತೆಲ್ಲಾ ಪೊಲೀಸರು ಕೇಸ್ ಮೇಲೆ ಕೇಸ್ ಹಾಕಿ ಜನ ಸಾಮಾನ್ಯರ ಬಳಿ ದಂಡದ ರೂಪದಲ್ಲಿ ಪೊಲೀಸರು ಸಾವಿರಾರು ರೂಪಾಯಿ ಹಣ ವಸೂಲಿ ಮಾಡ್ತಾರೆ. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಹಲವು ಸರ್ಕಾರಿ ವಾಹನಗಳ ಇನ್ಸೂರೆನ್ಸ್ ಮುಗಿದು ಹಲವು ವರ್ಷಗಳೇ ಕಳೆದರೂ ಅಂತಹ ಅಧಿಕಾರಿಗಳ ವಿರುದ್ದ ಆರ್. ಟಿ. ಓ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಮೌನವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಜಿಲ್ಲೆಯಲ್ಲಿರುವ ಹಲವು ಸರ್ಕಾರಿ ವಾಹನಗಳು ವಿಮೆರಹಿತವಾಗಿದ್ದೂ, ಪಶು ಸಂಗೋಪನಾ ಇಲಾಖೆಯ ವಾಹನದ ಇನ್ಶೂರೆನ್ಸ್ ಮುಗಿದು ಒಂದೆರಡು ತಿಂಗಳಲ್ಲ ಬರೋಬ್ಬರಿ ಹನ್ನೆರಡು ವರ್ಷವಾಗಿದೆ. ಪೊಲೀಸ್ ಇಲಾಖೆಯ ಹಲವು ವಾಹನಗಳಿಗೆ ನಾಲ್ಕೈದು ವರ್ಷಗಳ ಹಿಂದೆಯೇ ಇನ್ಶೂರೆನ್ಸ್ ಮುಗಿದಿದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಸುತ್ತಿರುವ ವಾಹನದ ಇನ್ಶೂರೆನ್ಸ್ ಎರಡು ವರ್ಷಗಳ ಹಿಂದೆಯೇ ಮುಗಿದಿದೆ. ಇನ್ನೂ ಹಲವು ಇಲಾಖೆಯ ಅದೆಷ್ಟೋ ಸರ್ಕಾರಿ ವಾಹನಗಳಿಗೆ ಇದುವರೆಗೂ ವಿಮೆ ಮಾಡಿಸಿಲ್ಲ. ಹೀಗಾಗಿ ಸಾರ್ವಜನಿಕರು ಕಾನೂನು ಪಾಲಿಸಿ ಸಾರ್ವಜನಿಕರಿಗೆ ಮಾದರಿಯಾಗಿರಬೇಕಿದ್ದ ಅಧಿಕಾರಿಗಳೇ ಕಾನೂನು ಉಲ್ಲಂಘಿಸುತ್ತಿದ್ದು ಬೆಕ್ಕಿನ ಕೊರಳಿಗೆ ಘಂಟೆ ಕಟ್ಟುವವರು ಯಾರು ಎಂದು ಸರ್ಕಾರಕ್ಕೆ ಪ್ರಶ್ನಿಸುವಂತಾಗಿದೆ.

    ವಾಹನಗಳ ತಪಾಸಣೆಗಾಗಿ ದಾರಿಯುದ್ಧಕ್ಕೂ ನಿಲ್ಲುವ ಅಧಿಕಾರಿಗಳು ಜನಸಾಮಾನ್ಯರ ವಾಹನಗಳ ದಾಖಲೆ ಕೇಳುವುದಕ್ಕೂ ಮೊದಲು, ಸರ್ಕಾರಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ಸರ್ಕಾರಿ ಅಧಿಕಾರಿಗಳ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಬಹುದಿತ್ತಲ್ಲವೇ ಎಂಬ ಪ್ರಶ್ನೆ ಜಿಲ್ಲೆಯ ಜನಸಾಮಾನ್ಯರಲ್ಲಿ ಮೂಡಿದೆ.

    ಒಟ್ಟಿನಲ್ಲಿ ಸರ್ಕಾರಿ ವಾಹನಗಳಿಗೆ ಇನ್ಸುರೆನ್ಸ್ ತುಂಬುವ ಮೂಲಕ ಜವಾಬ್ದಾರಿ ಮೆರೆಯಬೇಕಾಗಿದ್ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದ್ದು. ಸಾರ್ವಜನಿಕರು ಕೂಡ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುವಂತಾಗಿದೆ. ಇನ್ನಾದ್ರೂ ಆರ್.ಟಿ.ಓ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ಕಾರಿ ವಾಹನಗಳಿಗೆ ವಿಮೆ ಮಾಡಿಸುವ ಎಚ್ಚರಿಕೆ ನೀಡುವ ಮೂಲಕ ನಿಯಮ ಉಲ್ಲಂಘಿಸುತ್ತಿರುವ
    ಅಧಿಕಾರಿಗಳಿಗೆ ಬ್ರೇಕ್ ಹಾಕುತ್ತಾರೋ ಇಲ್ಲವೋ ಅನ್ನುವುದನ್ನು ಕಾದು ನೋಡಬೇಕಾಗಿದೆ.

    ಸತ್ಯಕಾಮ ರಿಯಾಲಿಟಿ ಚೆಕ್ ನಲ್ಲಿ ಕಂಡುಬಂದ ಇನ್ಶೂರೆನ್ಸ್ ಇಲ್ಲದ ವಾಹನಗಳು

    ಕೆಎ33ಜಿ0264
    ಕೆಎ33ಜಿ8008
    ಕೆಎ33ಜಿ0108
    ಕೆಎ33ಜಿ0182
    ಕೆಎ33ಜಿ0184
    ಕೆಎ33ಜಿ0134
    ಕೆಎ33ಜಿ0252
    ಕೆಎ33ಜಿ0067
    ಕೆಎ33ಜಿ0104 ಇದಲ್ಲದೇ ಇನ್ನೂ ಹಲವು ಇಲಾಖೆಯಲ್ಲಿನ ವಾಹನಗಳ ಇನ್ಶೂರೆನ್ಸ್ ಮುಗಿದೂ ಹಲವು ವರ್ಷಗಳಾಗಿವೆ.

    apvc-iconPost Views: 7
  • ಅಕ್ರಮ ಸರಾಯಿ ಮಾರಾಟ ಮಾಲು ಜಪ್ತಿ ಪ್ರಕರಣ ದಾಖಲು

    ಅಕ್ರಮ ಸರಾಯಿ ಮಾರಾಟ ಮಾಲು ಜಪ್ತಿ ಪ್ರಕರಣ ದಾಖಲು

    ಬೀದರ : ಗಣೇಶ್ ಚತುರ್ಥಿಯ ಹಬ್ಬದ ನಿಮಿತ್ಯ ಬೀದರ್ ಜಿಲ್ಲಾಧಿಕಾರಿಗಳಾದ ಶ್ರೀ ಗೋವಿಂದ ರೆಡ್ಡಿ ಅವರು ಸರಾಯಿ ಮಾರಾಟ ನಿಷೇಧ ಘೋಷಣೆ ಮಾಡಿದ್ದರು. ಆದೇಶ ಉಲ್ಲಂಘನೆ ಮಾಡಿ ಸರಾಯಿ ಮಾರಾಟ ಮಾಡಿ ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ಆರೋಪಿಗಳ ಸ್ಟೋರಿ ಒಂದು ಬೆಳಕಿಗೆ ಬಂದಿದೆ.
    ಬೀದರ್ ನಗರದ ನೂತನ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದ ಖಚಿತ ವರದಿಯ ಮೇರೆಗೆ ವರಿಷ್ಠ ಪೊಲೀಸ್ ಅಧಿಕಾರಿ ಶ್ರೀ ಚನ್ನಬಸಣ್ಣ ಎಸ್ ಎಲ್ ಹಾಗೂ ಮಹೇಶ್ ಮೇಘಣ್ಣನವರ್ ಹೆಚ್ಚುವರಿ ಎಸ್ಪಿ ರವರ ದಿವ್ಯ ಮಾರ್ಗದರ್ಶನದಲ್ಲಿ ಠಾಣೆ ಪ್ರಭಾರಿ ಪಿಐ ಶ್ರೀವಿಜಯಕುಮಾರ್, ಶ್ರೀಮತಿ ತಸ್ಲೀಮ್ ಸುಲ್ತಾನಾ ಪಿ ಎಸ್ ಐ, ಮುಖ್ಯಪೇದೆ ಹನುಮ ಗೌಡರು ಹಾಗೂ ಇತರ ಪೊಲೀಸ್ ಪೇದೆಗಳೊಂದಿಗೆ ಹಠಾತ್ತನೆ ದಾಳಿ ನಡೆಸಿ ವಿವಿಧ ನಮೂನೆಯ ಅಂದಾಜು ರೂಪಾಯಿ 83,553/- ಬೆಲೆಬಾಳುವ ಸರಾಯಿ ಮತ್ತು 13,000/- ರೂಪಾಯಿ ಬೆಲೆಬಾಳುವ ಎರಡು ಮೊಬೈಲ್ ಹೀಗೆ ಒಟ್ಟು ರೂಪಾಯಿ 96,553/- ಮೌಲ್ಯದ ಮಾಲನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡ ಘಟನೆಯೊಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    apvc-iconPost Views: 3
  • ಮಹಿಪಾಲರೆಡ್ಡಿ ಸೇರಿ ಐವರಿಗೆ `ಕನ್ನಡ ನಿತ್ಯೋತ್ಸವ’ ಪ್ರಶಸ್ತಿ

    ಮಹಿಪಾಲರೆಡ್ಡಿ ಸೇರಿ ಐವರಿಗೆ `ಕನ್ನಡ ನಿತ್ಯೋತ್ಸವ’ ಪ್ರಶಸ್ತಿ

    ಬೆಂಗಳೂರು, ಸೆ.7- ಸುಗಮ ಸಂಗೀತ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿರುವ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿಯು 2023 ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ `ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಯನ್ನು ಪ್ರಕಟಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
    ಕಲ್ಯಾಣ ಕರ್ನಾಟಕದ ಕಲಬುರಗಿಯ ಕವಿ, ಲೇಖಕರಾದ ಮಹಿಪಾಲರೆಡ್ಡಿ ಮುನ್ನೂರ್, ಖ್ಯಾತ ಗಾಯಕಿ ಶಶಿಕಲಾ ಸುನೀಲ್, ಪ್ರತಿಷ್ಠಿತ ಸಂಸ್ಥೆ ವೀಣಾ ಮ್ಯೂಸಿಕಲ್‌ನ ಮಾಲೀಕರಾದ ಪಿ.ನಾಗರಾಜ್, ಕನ್ನಡ ಕಾರ್ಯಕರ್ತ, ಸಂಘಟಕ ಜಾವಗಲ್ ಪ್ರಸನ್ನಕುಮಾರ, ರಂಗಕರ್ಮಿ, ನಟ ಬೆಳ್ಳಿಚುಕ್ಕಿ ವೀರೇಂದ್ರ ಅವರುಗಳಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
    ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾ ಸಂಘದಲ್ಲಿ ಸೆ.10 ರಂದು ಸಂಜೆ 6 ಕ್ಕೆ ಆಯೋಜಿಸಲಾಗಿದೆ. ಮಾಜಿ ವಿಧಾನಸಭಾಧ್ಯಕ್ಷರಾದ ಪ್ರೊ.ಬಿ.ಕೆ.ಚಂದ್ರಶೇಖರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಅಕಾಡೆಮಿ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ಬಸವನಗುಡಿ ಶಾಸಕರಾದದ ಎಲ್.ಎ.ರವಿ ಸುಬ್ರಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು. ಹಿರಿಯ ಸಾಹಿತಿ ಮತ್ತು ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಭೈರಮಂಗಲ ರಾಮೇಗೌಡ ಅವರು ಸಮಾರೋಪ ನುಡಿಗಳಾಡುವರು. ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಹೆಚ್.ಬಿ.ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ ತಂಡದವರಿಂದ ವಾದ್ಯ ವೈಭವ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

    apvc-iconPost Views: 6
  • 12 ಜನ ಸಾಧಕರಿಗೆ” ಸಾಹಿತ್ಯ ಸಾರಥಿ” ಪ್ರಶಸ್ತಿ

    ಕಲಬುರಗಿ : ಸಾಹಿತ್ಯ ಸಾರಥಿ ರಾಜ್ಯಮಟ್ಟದ ಸಾಹಿತಿಕ ಪತ್ರಿಕೆಯ 6ನೇ ವರ್ಷದ ಸಂಭ್ರಮದ ಪ್ರಯುಕ್ತ 12 ಜನ ಸಾಧಕರನ್ನು ಸಾಹಿತ್ಯ ಸಾರಥಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಹಾಗೂ ಸಾಹಿತಿ ಬಿ.ಎಚ್ .ನಿರಗುಡಿ ತಿಳಿಸಿದ್ದಾರೆ.
    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು
    “ಸಾಹಿತ್ಯಕ್ಷೇತ್ರ ಡಾ. ಲಕ್ಷ್ಮಣ ಕೌಂಟೆ, ಡಾ. ವಿಕ್ರಮ್ ವಿಸಾಜಿ, ಡಾ ಅಮೃತಾ ಕಟಕೆ
    ” ಮಾಧ್ಯಮ ಕ್ಷೇತ್ರ ” ಶ್ರೀ ಸ, ದಾ, ಜೋಶಿ ಶ್ರೀ,ಸುಭಾಸ ಬಣಗಾರ,ಶ್ರೀ ಪ್ರಭುಲಿಂಗ ನೀಲೂರೆ, ವಿಜ್ಞಾನ ಕ್ಷೇತ್ರ ಡಾ ಶ್ರೀಶೈಲ ಘೂಳಿ, ವೈದ್ಯಕೀಯ ಕ್ಷೇತ್ರ ಡಾ ಈರಣ್ಣಾ ಹೀರಾಪೂರ, ಶಿಕ್ಷಣ ಕ್ಷೇತ್ರ ಶ್ರೀ ಶಿವಾನಂದ ಖಜೂರಗಿ ,ನಾಟಕ ಕ್ಷೇತ್ರ ಬಸಯ್ಯಸ್ವಾಮಿ ಪ್ಯಾಠಿಮಠ, ಚಿತ್ರಕಲಾ ಕ್ಷೇತ್ರ ಶಾಹೀದ್ ಪಾಶಾ ಸಮಾಜಸೇವೆ ಉಮಾ ಪಾಟೀಲ ಮುಂತಾದವರ ಸಮಗ್ರ ಸಾಧನೆಯನ್ನು ಪರಿಗಣಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
    2023 ಸೆಪ್ಟೆಂಬರ್ 3 ರಂದು ಕಲಬುರಗಿ ನಗರದ ಚೇಂಬರ್ ಆಪ್ ಕಾಮರ್ಸ್
    ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗುವುದು. ಎಂದು ತಿಳಿಸಿದ್ದಾರೆ.

    apvc-iconPost Views: 3
  • ಜುಜಾಟದ ಅಡ್ಡೆಮೇಲೆ ದಾಳಿ  ಬೃಹತ್ ಪ್ರಮಾಣದ ಮೊತ್ತ ವಶ !

    ಜುಜಾಟದ ಅಡ್ಡೆಮೇಲೆ ದಾಳಿ ಬೃಹತ್ ಪ್ರಮಾಣದ ಮೊತ್ತ ವಶ !


    ಹುಮ್ನಾಬಾದ :— ಬೀದರ್ ಜಿಲ್ಲಾ ಎಸ್ ಪಿ ಶ್ರೀ ಚನ್ನಬಸಣ್ಣ ಎಸ್ ಎಲ್ ರವರ ದಿವ್ಯ ಮಾರ್ಗದರ್ಶನದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಐತಿಹಾಸಿಕ ಗ್ರಾಮ ಜಲಸಂಗಿ ಯಲ್ಲಿ ಮಹಾದೇವ ಮಂದಿರದ ಸಮ್ಮುಖದಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಜೂಜಾಟ ನಡೆದಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
    ಹುಮನಾಬಾದ್ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಪಿಎಸ್ಐ ಶ್ರೀ ತಿಮ್ಮಯ್ಯ ಬಿಕೆ ಸಿಬ್ಬಂದಿಗಳಾದ ಭಗವಾನ್ ಪ್ರಭುಲಿಂಗ ಸ್ವಾಮಿ ಬಸವರಾಜ್ ಬಾಲಾಜಿ ಸೂರ್ಯಕಾಂತ ಆಕಾಶ್ ವಜೀರ್ ಬಾಬುರಾವ್ ಕೋರೆ ಆಕಾಶ್ ರವರೊಂದಿಗೆ ಗ್ರಾಮಕ್ಕೆ ತೆರಳಿ ಜೂಜುಗಾರರ ಮೇಲೆ ದಾಳಿ ನಡೆಸಿ ಅವರಿಂದ 1,50,000 ರೂಪಾಯಿಗಳನ್ನು,ಅವರು ಬಳಸಿದ್ದ 52 ಇಷ್ಟು ಎಲೆಗಳು ಹಾಗೂ ಆರು ಮೊಬೈಲ್ ಐದು ದ್ವಿಚಕ್ರ ವಾಹನ ಸೇರಿ 4,15,000 ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡು 15 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಉನ್ನತ ಪೊಲೀಸ್ ಮೂಲಗಳಿಂದ ವರದಿಯಾಗಿದೆ.

    apvc-iconPost Views: 2
  • ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′

    ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′


    ಬೆಂಗಳೂರು:
    ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′ ರ ಅಂತಿಮ ಸುತ್ತನ್ನು ಪ್ರವೇಶಿಸಿದ 5 ಅತ್ಯುತ್ತಮ ಕಾದಂಬರಿಗಳ ಪಟ್ಟಿ  ಹಾಗೂ ಕನ್ನಡ ಕಥಾಲೋಕ ಕುತೂಹಲದಿಂದ ಕಾಯುತ್ತಿದ್ದ ‘ಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ- 2023’ಯಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಾರರ ಪಟ್ಟಿ ಪ್ರಕಟವಾಗಿದೆ. 

    ಅಂತಿಮ ಸುತ್ತಿನಲ್ಲಿರುವ ಕಾದಂಬರಿಗಳು:

    ಡಾ.ಎಚ್.ಎಸ್. ಅನುಪಮಾ ಅವರ ‘ಬೆಳಗಿನೊಳಗು ಮಹಾದೇವಿಯಕ್ಕ’ (ಲಡಾಯಿ ಪ್ರಕಾಶನ)
    ಉಷಾ ನರಸಿಂಹನ್ ಅವರ ‘ಕೆಂಡದ ರೊಟ್ಟಿ’ (ಅಂಕಿತ ಪುಸ್ತಕ)
    ಕಾ.ತ. ಚಿಕ್ಕಣ್ಣ ಅವರ ‘ಪುರಾಣ ಕನ್ಯೆ’ (ರಶ್ಮಿ ಪುಸ್ತಕ)
    ಪೂರ್ಣಿಮಾ ಮಾಳಗಿಮನಿ ಅವರ ‘ಅಗಮ್ಯ’ (ಸಪ್ನ ಬುಕ್ ಹೌಸ್)
    ಎಂ.ಆರ್. ದತ್ತಾತ್ರಿ ಅವರ ‘ಒಂದೊಂದು ತಲೆಗೂ ಒಂದೊಂದು ಬೆಲೆ’ (ಅಂಕಿತ ಪುಸ್ತಕ)

    ಈ ಐದು ಕಾದಂಬರಿಗಳಲ್ಲಿ ಒಂದು ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತಿದೆ. ಈ ಒಂದು ಲಕ್ಷದಲ್ಲಿ 75 ಸಾವಿರ ರೂ. ಲೇಖಕರಿಗೆ ಹಾಗೂ 25 ಸಾವಿರ ರೂ. ಪ್ರಕಾಶಕರಿಗೆ ವಿತರಿಸಲಾಗುತ್ತಿದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುತ್ತಿದ್ದು, ಈ ಪೈಕಿ 3 ಸಾವಿರ ರೂ. ಲೇಖಕರಿಗೆ ಹಾಗೂ 2 ಸಾವಿರ ರೂ. ಪ್ರಕಾಶಕರಿಗೆ ನೀಡಲಾಗುತ್ತದೆ.

    ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ- 2023’ರ ಅಂತಿಮ ಸುತ್ತಿನಲ್ಲಿರುವ 25 ಕಥೆಗಾರರು: 

    ದೀಪ್ತಿ ಭದ್ರಾವತಿ
    ಜಯರಾಮಚಾರಿ

    ಮಾಧವಿ ಭಂಡಾರಿ ಕೆರೆಕೋಣ
    ಪ್ರವೀಣ್ ಕುಮಾರ್ ಜಿ. 
    ಲಕ್ಷ್ಮಣ ಬಾದಾಮಿ
    ಸ್ಮಿತಾ ಅಮೃತರಾಜ್. ಸಂಪಾಜೆ
    ಗಿರೀಶ್ ಎಂ.ಬಿ
    ಇಂದ್ರಕುಮಾರ್ ಎಚ್.ಬಿ
    ಕವಿತ ಹೆಗಡೆ ಅಭಯಂ 
    ಮಂಜುನಾಥ್ ಚಾಂದ್
    ಸಂದೀಪ ನಾಯಕ
    ಪೂರ್ಣಿಮಾ ಭಟ್ಟ ಸಣ್ಣಕೇರಿ
    ಶರತ್ ಭಟ್ ಸೇರಾಜೆ
    ಸುರೇಶ ರುದ್ರಪ್ಪ ಮುದ್ದಾರ
    ಮಂಜುನಾಥ ನಾಯ್ಕ್ 
    ಶಿವಾಗ್ 
    ಮಹಾದೇವ ಹಡಪದ ಸಾಲಾಪೂರ 
    ವಿಜಯಶ್ರೀ ಎಂ. ಹಾಲಾಡಿ
    ಪೂರ್ಣಿಮಾ ಮಾಳಗಿಮನಿ
    ಸದಾಶಿವ್ ಸೊರಟೂರು
    ಕರುಣಾಕರ ಹಬ್ಬುಮನೆ
    ಎನ್.ಸಿ. ಮಹೇಶ್
    ಜೆ.ಆರ್. ರವಿಕುಮಾರ್ ಜನಿವಾರ
    ಅಕ್ಷಯ ಪಂಡಿತ್, ಸಾಗರ
    ವಿಕಾಸ್ ನೇಗಿಲೋಣಿ 

    ಈ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

    ಆಗಸ್ಟ್ 15, 2023 ರಂದು ಬೆಂಗಳೂರಿನ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ  ನಡೆಯಲಿರುವ ಪ್ರಶಸ್ತಿ ವಿತರಣಾ ಸಮಾರಂಭದ  ಸ್ಪರ್ಧೆಯಲ್ಲಿ ವಿಜೇತರಾದವರ ಹೆಸರನ್ನು ಪ್ರಕಟಿಸಲಾಗುತ್ತದೆ.

    apvc-iconPost Views: 22
  • ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮ

    ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮ

     


    ಕಮಲಾನಗರ-

    ಇಂದು ಆಳಂದ ತಾಲೂಕಿನ ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ಕೀಟ ಶಾಸ್ತ್ರಜ್ಞ ಚಾಮರಾಜ ದೊಡಮನಿ ಮಾತನಾಡಿ ಡೆಂಗ್ಯ ಮತ್ತು ಚಿಕೂನ್ ಗುನ್ಯಾ ರೋಗಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ರೋಗ ಬಂದ ಮೇಲೆ ಆಸ್ಪತ್ರೆಗಳಿಗೆ ಪರದಾಡುವುದಕ್ಕಿಂತ ರೋಗದ ಕುರಿತು ತಿಳಿದುಕೊಂಡು ನಮ್ಮ ಮನೆ ಒಳಗೆ ಹೊರಗೆ ಸುತ್ತ ಮುತ್ತ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದರ ಮೂಲಕ ರೋಗ ಬರದಂತೆ ನಾವು ನಮ್ಮನ್ನು ಸಂರಕ್ಷಿಸಿಕೊಳ್ಳ ಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡುವುದರು.ಹಾಗೂ ಸೊಳ್ಳೆಗಳಿಂದ ಸಂರಕಗಷಣೆ ಮಾಡಿಕೊಳ್ಳುವ ಸರಳ ವಿಧಾನಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು.
    ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ ತಮ್ಮ ಹಾಸ್ಯಚಟಾಕೆಗಳನ್ನು ಹಾರಿಸುವುದರ ಜೊತೆಗೆ ಮಕ್ಕಳಿಗೆ ಸಾಮಾನ್ಯದ ಆರೋಗ್ಯದ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕರಾದ ಸಂಜೀವ ಅರಳೆ,ಶಫಿ ಪಟೇಲ್,ಆರೋಗ್ಯ ಅಧಿಕಾರಿ ಅಮಿತಕುಮಾರ,ಆರೋಗ್ಯ ಸುರಕ್ಷತಾ ಅಧಿಕಾರಿ ಸುನಿತಾ ಶಿಕ್ಷಕರಾದ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ , ವಹಿಸಿಕೊಂಡಿದ್ದರು.ಶಿಕ್ಷಕರಾದ ಮಡಿವಾಳಪ್ಪ. ಬಿರಾದಾರ,ಜೈಪ್ರಕಾಶ ಸ್ವಾಗತಿಸಿ ನಿರೂಪಣೆ ಮಾಡಿದರು.

    apvc-iconPost Views: 0