ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕರವೇ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕರವೇ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ
Latest News

ಕರವೇ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ

ಕರವೇ ನಡೆ ಹಳ್ಳಿ ಕಡೆ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲ್ಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಸಲಹೆ ನೀಡಿದರು.

Satyakam NewsDesk
Last updated: 2025/07/30 at 6:41 PM
Satyakam NewsDesk
Share
2 Min Read
SHARE

ಪಲ್ಲಿಗಳು ಹಳ್ಳಿಗಳಾಗಿಸಿ, ಮೊರಾರ್ಜಿ, ಏಕಲವ್ಯ ಶಾಲೆ ಸಮಸ್ಯೆ ಪರಿಹರಿಸಿ

ಸಮಸ್ಯೆ ಪರಿಹರಿಸಲು ಹೋರಾಟ ರೂಪಿಸಿ; ಭೀಮುನಾಯಕ ಕರೆ

ಸುರಪುರ: ಕರವೇ ನಡೆ ಹಳ್ಳಿ ಕಡೆ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲ್ಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಸಲಹೆ ನೀಡಿದರು.

ಕಸಾಪ ಭವನದಲ್ಲಿ ಬುಧವಾರ ಜರುಗಿದ ಕರವೇ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳು ಬಹಳಷ್ಟಿವೆ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಇನ್ನು ಹೆಚ್ಚಾಗಿದ್ದು, ಇವುಗಳ ಪರಿಹಾರಕ್ಕೆ ಕರವೇ ಕಾರ್ಯಕರ್ತರು ಹೋರಾಟ ರೂಪಿಸಬೇಕು ಎಂದು ತಿಳಿಸಿದರು.

ವಿಶೇಷವಾಗಿ ಗುರುಮಠಕಲ್ ತಾಲ್ಲೂಕಿನಾದ್ಯಂತ ಅನೇಕ ಸಮಸ್ಯೆಗಳಿವೆ ಅನೇಕ ಹಳ್ಳಿಗಳು ಇನ್ನು ಪಲ್ಲಿ ಎಂದು ತೆಲುಗಿನಲ್ಲಿಯೇ ಇದ್ದು ಇವುಗಳ ಬದಲಿಸಲು ಜಿಲ್ಲಾಡಳಿತ, ಸಚಿವ, ಶಾಸಕರು ಶ್ರಮಿಸಬೇಕು ಈಗಾಗಲೇ ಕೊಲಾರದ ಬಾಗೇಪಲ್ಲಿಯನ್ನು ಸರ್ಕಾರ ಭಾಗ್ಯನಗರ ಎಂದು ಬದಲಿಸಿದೆ ಇದೇಮಾದರಿಯಲ್ಲಿ ಗುರುಮಠಕಲ್ ತಾಲ್ಲೂಕಿನಲ್ಲಿ ಹತ್ತಾರು ಹಳ್ಳಿಗಳು ಪಲ್ಲಿಗಳಾಗಿಯೇ ಉಳಿದಿವೆ. ಇವನ್ನು ಬದಲಿಸಲು ಹೋರಾಟ ಮಾಡಬೇಕೆಂದು ತಿಳಿಸಿದರು.

ಮೋಟ್ನಳ್ಳಿ ಮೊರಾರ್ಜಿ ವಸತಿ ಶಾಲೆ ಶಿಥಿಲಗೊಂಡಿದ್ದು, ಅದನ್ನು ಬಂದಳ್ಳಿ ಗೆ ಸ್ಥಳಾಂತರಿಸಿದ್ದು, ೫ ವರ್ಷಗಳಾದರೂ ಕಟ್ಟಡ ದುರಸ್ತಿ ಮಾಡಿಸಲು ಆಗುವುದಿಲ್ಲ ಎಂದರೆ ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಶಾಸಕರು ಇದ್ದು ಏನು ಪ್ರಯೋಜನ, ಆ ಶಾಲೆಯ ಮಕ್ಕಳ ಸಮಸ್ಯೆ ಕಾಣುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸೌಲಭ್ಯ ಇರುವ ಶಾಲೆಗಳಿಗೆ ಭೇಟಿ ನೀಡುವ ಶಾಸಕ, ಸಚಿವ ಹಾಗೂ ಇನ್ನಿತರ ಜನಪ್ರತಿನಿಧಿಗಳಿಗೆ ಮೋಟ್ನಳ್ಳಿ ಶಾಲೆ ಸಮಸ್ಯೆ ಕಾಣುತ್ತಿಲ್ಲವೇ? ಎಂದು ಅವರು ಕೆಂಡ ಕಾರಿದರು.

ಬಂದಳ್ಳಿ ಏಕಲವ್ಯ ವಸತಿ ಶಾಲೆಗೂ ಮೂಲಭೂತ ಸೌಕರ್ಯಗಳಿಲ್ಲ, ಆರಂಭವಾದಾಗಿನಿAದ ಸಮಸ್ಯೆಯ ಗೂಡಾಗಿದೆ ತಕ್ಷಣ ಜಿಲ್ಲಾಧಿಕಾರಿಗಳು ಈ ಎರಡು ಶಾಲೆಗಳ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕೆAದು ಆಗ್ರಹಿಸಿದರು.

ಇನ್ನು ಕರವೇ ಪದಾಧಿಕಾರಿಗಳು ಸಂಘಟನೆ ಹಾಗೂಹೋರಾಟದ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಮತ್ತು ಕರವೇ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ರಾಜಿಯ ಮಾತೇ ಇಲ್ಲ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಅದ್ಯಕ್ಷ ಮಲ್ಲು ಮಾಳಿಕೇರಿ, ಸಂತೋಷ ನಿರ್ಮಲಕರ್, ಚೌಡಯ್ಯ ಬಾವೂರ, ಹಣಮಂತ ಖಾನಳ್ಳಿ, ಶರಣಪ್ಪ ದಳಪತಿ, ಪಪ್ಪುಗೌಡ ಚಿನ್ನಾಕಾರ, ಪ್ರಕಾಶ ಪಾಟೀಲ್ ಜೈಗ್ರಾಮ್, ಸಾಹೇಬಗೌಡ ನಾಯಕ, ಅರ್ಜುನ ಪವಾರ್, ಯಮುನಯ್ಯ ಗುತ್ತೇದಾರ, ವಿಶ್ವರಾಜ ಪಾಟೀಲ್, ವೆಂಕಟೇಶ ಬೈರಿಮಡ್ಡಿ, ಶರಣಬಸಪ್ಪ ಯಲ್ಹೇರಿ, ಅಬ್ದುಲ್ ಚಿಗಾನೂರ, ಬಸವರಾಜ ಚೆನ್ನೂರ, ಭೀಮು ಮಲ್ಲಿಭಾವಿ, ಸಿದ್ದಪ್ಪ ಕೂಯಿಲೂರ, ಸಿದ್ದಪ್ಪ ಕ್ಯಾಸಪನಳ್ಳಿ, ಭೀಮರಾಯ ರಾಮಸಮುದ್ರ, ಹಣಮಂತ್ರಾಯ ತೇಕರಾಳ, ಸುರೇಶ ಬೆಳಗುಂದಿ, ಜನಾರ್ಧನ್ ಚಾಮನಳ್ಳಿ, ಹುಲುಗಪ್ಪ ಚಟ್ನಳ್ಳಿ, ಸಲಿಮ್ ಯರಗೋಳ, ಯಲ್ಲಾಲಿಂಗ ಚಾಮನಳ್ಳಿ, ಸೈದಪ್ಪ ಗೌಡಗೇರಾ, ನಾಗಪ್ಪ ಗೋಪಾಳಪುರ,ಮಲ್ಲಿಕಾರ್ಜುನ ಕನ್ನಡಿ, ವೆಂಕಟರಾಮು ಸೈದಾಪೂರ, ಅಬ್ದುಲ್ ರಿಯಾಜ್ ಸೇರಿದಂತೆ ಅನೇಕರು ಪಾಲ್ಗೊಂಡರು.

apvc-iconTotal Visits: 10
apvc-iconAll time total visits: 24663

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 30, 2025 July 30, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಎಲ್ಲರೂ ಶ್ರಮಿಸೋಣ: ಡಿಸಿ ಹರ್ಷಲ್ ಭೋಯರ್
Next Article ಮಾನವ ಕಳ್ಳ ಸಾಗಣೆ ಎನ್ನುವುದು ಸಮಾಜಕ್ಕೆ ಅಂಟಿದ ಪಿಡುಗು- ಜಿ.ಆರ್.ಬನ್ನಾಳ

Stay Connected

Facebook Like
Twitter Follow
Instagram Follow
Youtube Subscribe

Latest News

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube