ಸತ್ಯಕಾಮ ವಾರ್ತೆ ಯಾದಗಿರಿ:
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಕಿಳು ಮಟ್ಟದ ಹೇಳಿಕೆ ನೀಡಿರುವುದು ಇಡೀ ಮಹಿಳಾ ಕುಲವನ್ನೇ ಅವಮಾನಿಸಿದಂತಾಗಿದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರುದ್ರಾಂಬಿಕ. ಆರ್. ಪಾಟೀಲ್ ಚಟ್ನಳ್ಳಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಖ್ಯ ಕಾರ್ಯದರ್ಶಿಗಳು ರಾತ್ರಿಯಲ್ಲಿ ಸರಕಾರಕ್ಕೆ ಹಾಗೂ ಇಡೀ ದಿನ ಮುಖ್ಯಮಂತ್ರಿಗಳಿಗಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಮಹಿಳೆಯರ ಬಗ್ಗೆ ತಪ್ಪು ಕಲ್ಪನೆ ಮೂಡುತ್ತದೆ ರವಿಕುಮಾರ್ ರವರು ಇದೆ ಮೊದಲ ಬಾರಿಗೆ ಈ ರೀತಿಯಾಗಿ ಮಾತನಾಡಿಲ್ಲ ಈ ಮುಂಚೆಯೂ ಕೂಡಾ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಬಿಜೆಪಿ ಹೈಕಮಾಂಡ್ ಇಂಥವರಿಗೆ ಮೊದಲು ಮೂಗುದಾರ ಹಾಕಬೇಕು ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಇಂಥ ಹೇಳಿಕೆಗಳು ಅವರಿಗೆ ಶೋಭೆ ತರಲ್ಲ ಮಹಿಳೆ ಪುರುಷನಷ್ಟೇ ಸರಿ ಸಮಾನವಾಗಿ ಎಲ್ಲಾ ಕಾರ್ಯಗಳಲ್ಲಿಯೂ ವಿವಿಧ ಕ್ಷೇತ್ರದಲ್ಲಿ ಕೂಡ ಅತ್ಯುತ್ತಮ ಸಾಧನೆ ಮಾಡಿದ ಕೀರ್ತಿ ಮಹಿಳೆಯರಿಗೆ ಇದೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಮೊದಲು ಹಲವಾರು ಹುದ್ದೆಗಳನ್ನು ನಿಭಾಯಿಸಿ ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಬಿಜೆಪಿ ಹೈಕಮಾಂಡ್ ರವಿಕುಮಾರ್ ರವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮಹಿಳೆಯರು ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಜಯ ಕರ್ನಾಟಕ ಜನಪರ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರುದ್ರಾಂಬಿಕ. ಆರ್. ಪಾಟೀಲ್ ಚಟ್ನಳ್ಳಿ ಎಚ್ಚರಿಸಿದ್ದಾರೆ

