ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ
Crime

ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ

Satyakam NewsDesk
Last updated: 2025/10/22 at 5:43 PM
Satyakam NewsDesk
Share
1 Min Read
SHARE

ಬೆಂಗಳೂರು: ನಗರದ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ದುರ್ಘಟನೆ ಒಂದು ವಿದ್ಯಾರ್ಥಿ ಕುಟುಂಬವನ್ನು ಕಂಗಾಲಾಗುವಂತೆ ಮಾಡಿದೆ. ತಿರುಪತಿ ಮೂಲದ ಬಿಟೆಕ್ ವಿದ್ಯಾರ್ಥಿ ಪವನ್, ತಾನು ವಾಸವಾಗಿದ್ದ ಪಿಜಿಯಲ್ಲೇ ಸಿಂಪಡಿಸಿದ್ದ ತಿಗಣೆ (ಪೆಸ್ಟಿಸೈಡ್) ಔಷಧಿಯ ವಾಸನೆಗೆ ಬಲಿಯಾದ ಘಟನೆ ನಗರದಲ್ಲಿ ದೊಡ್ಡ ಆತಂಕ ಮೂಡಿಸಿದೆ.

ಪವನ್ ವಾಸವಾಗಿದ್ದ ಅಶ್ವಥ್ ನಗರದಲ್ಲಿನ ಬಿಎಸ್‌ಆರ್ ಪಿಜಿಯಲ್ಲಿ ಕೆಲವು ದಿನಗಳಿಂದ ತಿಗಣೆಗಳ ತೊಂದರೆ ಇತ್ತು ಎಂದು ತಿಳಿದುಬಂದಿದೆ. ಇದಕ್ಕಾಗಿ ಪಿಜಿ ನಿರ್ವಾಹಕರು ಔಷಧ ಸಿಂಪಡಿಸಿದ್ದರು. ಆದರೆ ವಿದ್ಯಾರ್ಥಿಗಳಿಗೆ ಅದರ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಪವನ್ ಔಷಧ ಸಿಂಪಡಿಸಿದ ಬಳಿಕ ಕೊಠಡಿಗೆ ಹೋದಾಗ, ವಿಷಕಾರಿ ವಾಸನೆಯಿಂದ ಉಸಿರಾಟ ತೊಂದರೆ ಅನುಭವಿಸಿದ್ದಾನೆಂಬ ಶಂಕೆ ವ್ಯಕ್ತವಾಗಿದೆ.

ಅಸ್ವಸ್ಥನಾದ ಪವನ್‌ನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಗಲೇ ಪವನ್ ಮೃತಪಟ್ಟಿದ್ದಾನೆಂದು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ಪವನ್ ತಂದೆ ದೇವರಾಜಲು ಮತ್ತು ತಾಯಿ ರಮ್ಯಾ ಘಟನೆ ಕುರಿತು ಮಾತನಾಡುತ್ತಾ, “ಬೆಳಗ್ಗೆ 7 ಗಂಟೆಗೆ ಪವನ್ ಕರೆ ಮಾಡಿದ್ದ. ಉಸಿರಾಟಕ್ಕೆ ತೊಂದರೆ ಆಗುತ್ತಿದೆ ಅಂದ. ಅದಾದ ಬಳಿಕ ಸಂಪರ್ಕಕ್ಕೆ ಸಿಗಲಿಲ್ಲ. ನಂತರ ಪಿಜಿ ನಿರ್ವಾಹಕರಿಂದ ಮಗ ಮೃತಪಟ್ಟಿದ್ದಾನೆಂಬ ದುಃಖಕರ ಸುದ್ದಿ ಬಂದಿತು,” ಎಂದು ಕಣ್ಣೀರಿನೊಂದಿಗೆ ಹೇಳಿದರು.

ಪೋಷಕರು ಪಿಜಿ ನಿರ್ವಾಹಕರ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣವೆಂದು ಆರೋಪಿಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. “ಔಷಧ ಸಿಂಪಡಣೆ ಮಾಡುವ ಮುನ್ನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಬೇಕಿತ್ತು. ಆದರೆ ಅಂಥ ಮಾಹಿತಿ ನೀಡದೆ ನಿರ್ಲಕ್ಷ್ಯದಿಂದ ವರ್ತಿಸಿದ್ದಾರೆ,” ಎಂದು ಆರೋಪಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ (Unnatural Death Report) ದಾಖಲಾಗಿದೆ. ಪೊಲೀಸರು ಪಿಜಿ ನಿರ್ವಾಹಕರು ಮತ್ತು ಔಷಧ ಸಿಂಪಡಣೆ ನಡೆಸಿದವರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪಿಜಿಗಳ ಸಂಖ್ಯೆ ಮತ್ತು ಸುರಕ್ಷತಾ ಕ್ರಮಗಳ ಕೊರತೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿವೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ನಡೆಯಬಾರದು ಎಂಬ ಬೇಡಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಮೊಳಗುತ್ತಿದೆ.

apvc-iconTotal Visits: 11
apvc-iconAll time total visits: 30023

You Might Also Like

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು

ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

TAGGED: Bed Bugs, Medicine
Satyakam NewsDesk October 22, 2025 October 22, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ
Next Article ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!

Stay Connected

Facebook Like
Twitter Follow
Instagram Follow
Youtube Subscribe

Latest News

Greater Bengaluru: 7.5 ಲಕ್ಷ ಬಿ ಖಾತಾ ಆಸ್ತಿಗಳಿಗೆ ನವೆಂಬರ್ 2ರಿಂದ ಎ ಖಾತಾ ಸೌಲಭ್ಯ
Govt Schemes October 22, 2025
ವಿಶ್ವದಲ್ಲೇ ಮೊದಲು ಹೊಸ ಫೀಚರ್ಸ್‌ಗಳೊಂದಿಗೆ iQOO 15 ಲಾಂಚ್! 
ಮೊಬೈಲ್ October 22, 2025
ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!
Sports October 22, 2025
ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ
ಕಲಬುರ್ಗಿ October 22, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube