ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ
ಇದೀಗ ಬಂದ ಸುದ್ದಿ

ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ

Satyakam NewsDesk
Last updated: 2025/07/16 at 4:37 PM
Satyakam NewsDesk
Share
3 Min Read
ತಾಳಿಕೋಟೆ : ಬೂದಿಹಾಳ-ಫೀರಾಪೂರ ಏತ ನೀರಾವರಿ ಮುಂದುವರೆದ ಕಾಮಗಾರಿಯನ್ನು ಪ್ರಾರಂಬಿಸಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತಾಪಿ ಜನರು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬೆಟ್ಟಿ ನೀಡಿದ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿದರು.
ತಾಳಿಕೋಟೆ : ಬೂದಿಹಾಳ-ಫೀರಾಪೂರ ಏತ ನೀರಾವರಿ ಮುಂದುವರೆದ ಕಾಮಗಾರಿಯನ್ನು ಪ್ರಾರಂಬಿಸಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತಾಪಿ ಜನರು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬೆಟ್ಟಿ ನೀಡಿದ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿದರು.
SHARE
  • ಬೂದಿಹಾಳ ಪೀರಾಪೂರ ಏತ ನೀರಾವರಿ ಹೋರಾಟಕ್ಕೆ ರೈತ ಸಂಘಟನೆಯ ಬೆಂಬಲ

ಸತ್ಯಕಾಮ ವಾರ್ತೆ ತಾಳಿಕೋಟೆ:

ಬೂದಿಹಾಳ ಪೀರಾಪೂರ ಏತ ನೀರಾವರಿ ಕಾಮಗಾರಿಗೆ ಸಂಬಂದಿಸಿ ಕಳೆದ ೪ ದಿನಗಳಿಂದಲೂ ರೈತ ಸಂಘಟನೆಯ ನೇತೃತ್ವದಲ್ಲಿ ಸಾವಿರಾರು ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಾ ಸಾಗಿದರೂ ಯಾವೊಬ್ಬ ಸರ್ಕಾರದ ಜನಪ್ರತಿನಿಧಿ ಬೆಟ್ಟಿ ನೀಡದಿರುವದು ಅವರ ರೈತಪರ ಕಾಳಜಿ ಎತ್ತಿ ತೋರಿಸುತ್ತಿದೆ ರೈತರೆಲ್ಲರೂ ಒಗ್ಗಟ್ಟಾಗಿ ದ್ವನಿಗೂಡಿಸದಿದ್ದರೆ ರೈತ ಕುಲಕ್ಕೆ ಉಳಿಗಾಲವಿಲ್ಲಾವೆಂದು ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ಹೇಳಿದರು.

ಮಂಗಳವಾರರಂದು ತಾಲೂಕಿನ ಕೊಡಗಾನೂರ ಕ್ರಾಸ್‌ನಲ್ಲಿ ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಕೊನೆ ಹಂತದ ಎಫ್.ಐ.ಸಿ (ಹೊಲ ಗಾಲುವೆ) ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ತಾಲೂಕಿನ ೩೮ ಗ್ರಾಮಗಳ ರೈತಾಪಿ ಜನರು ನಡೆಸಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಬೆಟ್ಟಿ ನೀಡಿ ತಮ್ಮ ರೈತ ಸಂಘ ಹಸಿರುಸೇನೆ ಸಂಘಟನೆಯ ವತಿಯಿಂದ ಬೆಂಬಲ ಸೂಚಿಸಿ ಮಾತನಾಡುತ್ತಿದ್ದ ಅವರು ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆಯ ಕಾಮಗಾರಿಗೂ ಈಗಾಗಲೇ ಅವೈಜ್ಞಾನಿಕವಾಗಿ ಕೈಗೊಳ್ಳಲಾಗಿದೆ ಓರಪ್ಲೋ ಡಬ್ಬಿಗಳನ್ನು ಎಲ್ಲಿ ಕೂಡಿಸಬೇಕಿತ್ತು ಅಲ್ಲಿ ಕೂಡಿಸಿಲ್ಲಾ ರಾಜಕೀಯ ಒತ್ತಡಕ್ಕೆ ಮಣಿದು ಮನಸ್ಸಿಚ್ಚೆಯಂತೆ ಕೂಡಿಸಲಾಗಿದೆ ಇದರಿಂದ ರೈತರ ಜಮೀನುಗಳಿಗೆ ನೀರು ಬರುವದು ಕಡಿಮೆ ಎಂದು ಹೇಳಲಾಗುತ್ತಿದೆ ದೇಶಕ್ಕೆ ಅನ್ನ ನೀಡುವ ರೈತರ ಭವಣೆಗೆ ಸರ್ಕಾರಗಳು ಸ್ಪಂದಿಸಬೇಕು ಆದರೆ ಈಗೀನ ಕಾಂಗ್ರೇಸ್ ಸರ್ಕಾರ ಗ್ಯಾರೆಂಟಿ ನಿದ್ರೆಯಲ್ಲಿ ಜಾರಿದೆ ಅವರಿಗೆ ಯಾರೂ ಕಾಣುತ್ತಿಲ್ಲಾವೆಂದು ಹರಿಹಾಯ್ದ ಅವರು ರೈತರಿಗೆ ಯಾವುದೇ ಜಾತಿ ಪಕ್ಷವೆಂಬುದು ಇಲ್ಲಾ ಅವರಿಗೆ ಕೇವಲ ಬೆಳೆ ಬೆಳೆಯಬೇಕು ಎಂಬ ಚಿಂತೆಯಲ್ಲಿರುತ್ತಾರೆ ಬೂದಿಹಾಳ-ಫೀರಾಪೂರ ಯೋಜನೆಗೆ ಸಂಬಂದಿಸಿ ಡಬ್ಬಿಗಳು ಇನ್ನೂ ೫೦೦ ಕ್ಕೂ ಅಧಿಕ ಕೂಡಬೇಕಾಗಿದೆ ಈಗಾಗಲೇ ಹಾಕಲಾದ ಪೈಪುಗಳು ಪಿಡಬ್ಲುಡಿ ರಸ್ತೆಯಲ್ಲಿ ಹಾಕಿದ್ದಾರೆ ರೈತರೆಲ್ಲರೂ ಒಗ್ಗೂಡಿ ದ್ವನಿಗೂಡಿಸಬೇಕೆಂದು ಅವರು ಇಂಡಿ ಪಟ್ಟಣಕ್ಕೆ ಮುಖ್ಯಮಂತ್ರಿಗಳು ಬೆಟ್ಟಿ ನೀಡಿದಾಗ ನಮ್ಮ ರೈತ ಸಂಘದ ವತಿಯಿಂದ ಬೂದಿಹಾಳ-ಫೀರಾಪೂರ ಏತನೀರವಾರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿ ಕೈಗೊಳ್ಳಲು ಮನವಿ ಸಲ್ಲಿಸಿದ್ದೇವೆ ಕೂಡಲೇ ಸ್ಪಂದಿಸುವ ಬರವಸೆ ನೀಡಿದ್ದಾರೆ ಅವರು ನೀಡಿದ ಬರವಸೆ ಬರವಸೆಯಾಗಿ ಉಳಿಯದಂತೆ ನಾವೇಲ್ಲಾ ರೈತರ ಉಗ್ರ ಸ್ವರೂಪದ ಹೋರಾಟಕ್ಕೆ ಅಣಿಯಾಗಬೇಕೆಂದರು.

ಇನ್ನೋರ್ವ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆ ಶ್ರೀಮತಿ ಸುಜಾತಾ ಅಸ್ಕಿ ಅವರು ಮಾತನಾಡಿ ಕಾಂಗ್ರೇಸ್ ಸರ್ಕಾರವು ತನ್ನ ಅಂಗೈ ತೋರಿಸಿದರೆ ಅವಲಕ್ಷಣ ಕಳೆದುಕೊಳ್ಳಲಿದೆ ಬ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ರೈತರ ಸಂಕಷ್ಟವೆಂಬುದು ಕಾಣುತ್ತಿಲ್ಲಾ ಕಳೆದ ೪ ದಿನಗಳಿಂದ ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿ ಕೈಗೊಳ್ಳಲು ಸಾವಿರಾರು ರೈತರು ಹೋರಾಟಕ್ಕೆ ಇಳಿದಿದ್ದರೂ ಕೂಡಾ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿದ್ರೆಗೆ ಜಾರಿರುವದು ಅವರ ನಿಸ್ಕಾಳಜಿ ತನಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದ ಅವರು ಕೂಡಲೇ ಸರ್ಕಾರದ ಜನಪ್ರತಿನಿಧಿಗಳು ಸ್ಪಂದಿಸಿ ಹೋರಾಟಕ್ಕೆ ಸ್ಪಂದಿಸುವ ಕೆಲಸ ಮಾಡಲಿ ಎಂದರು.

- Advertisement -

ಇನ್ನೋರ್ವ ರೈತ ಮುಖಂಡ ಪ್ರಭುಗೌಡ ಮದರಕಲ್ಲ, ಹಣಮಗೌಡ ಗೂಗಲ್ಲ, ಚಿನ್ನಪ್ಪಗೌಡ ಮಾಳಿ, ರವಿಗೌಡ ಪಾಟೀಲ ಅವರು ಮಾತನಾಡಿ ಈ ಭಾಗದ ರೈತರ ಜೀವನಾಡಿಯಾಗಲಿರುವ ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾಗಿದೆ ರೈತರು ಕೈಗೊಂಡಿರುವ ಹೋರಾಟಕ್ಕೆ ನಮ್ಮ ಬೆಂಬಲ ಅವರಿಗೆ ಸದಾ ವಿದೆ ಎಂದರು.

ಅಖಂಡ ಕರ್ನಾಟಕ ರೈತ ಸಂಘಟನೆಯ ರಾಜ್ಯ ಪ್ರದಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿದರು.

ಈ ಸಮಯದಲ್ಲಿ ರೈತ ಮುಖಂಡ ಪ್ರಭುಗೌಡ ಬಿರಾದಾರ, ಶಿವಪುತ್ರಪ್ಪ ಚೌದ್ರಿ, ಗುರುರಾಜ ಪಡಶೆಟ್ಟಿ, ರಾಯಪ್ಪಗೌಡ ಪಾಟೀಲ, ಸಾಹೇಬಗೌಡ ಯಾಳಗಿ, ಬಸನಗೌಡ ಯಾಳವಾರ, ಬಸನಗೌಡ ಚೌದ್ರಿ, ನಾನಾಗೌಡ ಬಿರಾದಾರ, ಎಚ್.ಎನ್.ಬಿರಾದಾರ, ಸುರೇಶಕುಮಾರ ಇಂಗಳಗೇರಿ, ಡಾ.ಪ್ರಭುಗೌಡ ಬಿರಾದಾರ(ಅಸ್ಕಿ), ಮಹಾದೇವ ಅಸ್ಕಿ, ಪರಶುರಾಮ ತಳವಾರ, ಪರಶುರಾಮ ನಾಲತವಾಡ, ಬಾಬುಗೌಡ ಬಿರಾದಾರ, ಚಿದುಗೌಡ ಬಿರಾದಾರ, ಶಂಕ್ರಗೌಡ ದೇಸಾಯಿ, ಬಸವರಾಜ ಹೊಸಳ್ಳಿ, ಡಿಎಸ್‌ಎಸ್ ಅಂಬೇಡ್ಕರ್ ದಾರಿ ಸಂಘಟನೆಯ ರಾಜ್ಯಾಧ್ಯಕ್ಷ ಬಸವರಾಜ ಕಟ್ಟಿಮನಿ, ಮುಖಂಡರುಗಳಾದ ಶಿವಶಂಕರ ಕಟ್ಟಿಮನಿ, ಸಿದ್ದಪ್ಪ ಹೊಸಮನಿ, ಶಾಂತಪ್ಪ ಕೊಡಗಾನೂರ, ಸಿದ್ದಪ್ಪ ಬಸರಿಕಟ್ಟಿ, ಬಸವರಾಜ ತಳವಾರ, ಕಾಶೆಪ್ಪ ತೊಗರಿ, ಒಳಗೊಂಡು ನಾವದಗಿ, ನೀರಲಗಿ, ಗೊಟಗುಣಕಿ, ಗುಂಡಕನಾಳ, ಫೀರಾಪೂರ, ಕಾರನೂರ, ಕೊಡಗಾನೂರ, ಅಸ್ಕಿ, ಗ್ರಾಮ ಒಳಗೊಂಡು ೩೮ ಗ್ರಾಮಗಳ ರೈತಾಪಿ ಜನರು ಪಾಲ್ಗೊಂಡಿದ್ದರು.

apvc-iconTotal Visits: 22
apvc-iconAll time total visits: 16073

You Might Also Like

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಎಲ್ಲಾ ಫಲಾನುಭವಿಗಳಿಗೆ ನೀಡಿ:ಬಸವರಾಜಪ್ಪ ಭಾಗ್ಲಿ

ಜಯ ಕರ್ನಾಟಕ ಸಂಘಟನೆ ಮನವಿಗೆ ಪುರಸಭೆ ಟೆಂಡ‌ರ್ ಗಳ ಮುಂದೂಡಿಕೆ!

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk July 16, 2025 July 16, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಎಲ್ಲಾ ಫಲಾನುಭವಿಗಳಿಗೆ ನೀಡಿ:ಬಸವರಾಜಪ್ಪ ಭಾಗ್ಲಿ
Next Article ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

Stay Connected

Facebook Like
Twitter Follow
Instagram Follow
Youtube Subscribe

Latest News

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಎಲ್ಲಾ ಫಲಾನುಭವಿಗಳಿಗೆ ನೀಡಿ:ಬಸವರಾಜಪ್ಪ ಭಾಗ್ಲಿ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube