Tag: Kadamgera B

  • ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಸತ್ಯಕಾಮ ವಾರ್ತೆ ವಡಗೇರಾ:

    ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ರವರು ದೇಶ ಕಂಡ ಧೀಮಂತ ನಾಯಕ ಕಲ್ಯಾಣ ಕರ್ನಾಟಕ ಭಾಗಕ್ಕೆ  ಜೆ 371  ಕಲಾಂ ಜಾರಿಗೆ ತರುವ ಮೂಲಕ ಈ ಭಾಗದ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸಾಬಣ್ಣ ಹಂಚಿನಾಳ ಹೇಳಿದರು.
    ತಾಲೂಕಿನ ಕಾಡಮಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ರವರ  83 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಾಖಲೆಯ ಹತ್ತು ಬಾರಿ ಶಾಸಕರಾಗಿ, ಮೂರು ಬಾರಿ ಸಂಸದರಾಗಿ, ಕೇಂದ್ರ, ರಾಜ್ಯ ಸಚಿವರಾಗಿ, ರಾಜ್ಯಸಭೆ, ಲೋಕಸಭೆ, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕರಾಗಿ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿದ ಏಕೈಕ ವ್ಯಕ್ತಿ ಅಂದರೆ ತಪ್ಪಾಗಲಾಗದು ದೇವರು ಅವರಿಗೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಈ ಸಮಯದಲ್ಲಿ ಹಾರೈಸಿದರು.
    ಅವರ ಅಭಿಮಾನಿಗಳು  ಕೇಕ್ ಕತ್ತರಿಸಿ. ಮಲ್ಲಿಕಾರ್ಜುನ್ ಖರ್ಗೆ ಜಿ ರವರ ಬ್ಯಾನರ್ ಗೆ ಹಾಲಿನ ಅಭಿಷೇಕ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
    ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್  ಮುಖಂಡರುಗಳಾದ ಚಂದ್ರಶೇಖರ್ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ, ದೊಡ್ಡಪ್ಪ ಕಾಡಮಗೇರಾ, ನಾಗಪ್ಪ ಉಲ್ಟಿ ,ಮಲ್ಲು ಯಾದವ್, ರೆಡ್ಡಿ ಆನೂರ, ಹಣಮಂತ ನಾಟೇಕಾರ,  ದೇವೇಂದ್ರಪ್ಪ ದೊರೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು​.
  • ಕಾಡಂಗೇರಾ(ಬಿ) ವಿದ್ಯಾರ್ಥಿನಿ ತನುಶ್ರೀ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

    ಕಾಡಂಗೇರಾ(ಬಿ) ವಿದ್ಯಾರ್ಥಿನಿ ತನುಶ್ರೀ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

    ಸತ್ಯಕಾಮ ವಾರ್ತೆ ವಡಗೇರಾ:

    ಶಹಾಪೂರ ತಾಲೂಕು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಾಡಂಗೇರಾ)ಬಿ) ಗ್ರಾಮದ ಇಂದಿರಾಗಾಂಧಿ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ತನುಶ್ರೀ ತಂದೆ ಕಾಂತಿಲಾಲ್ 100 ಮೀಟರ್ ಓಟದ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.

    ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿನಿ ಕು.ತನುಶ್ರೀ ಅವರು ಶಾಲೆಗೆ ಕೀರ್ತಿ ತಂದಿದ್ದಕ್ಕೆ ವಿದ್ಯಾರ್ಥಿನಿಯನ್ನು ಹಾಗೂ ಕ್ರೀಡಾಪಟುಗಳಿಗೆ ಶಾಲೆಯ ಪ್ರಾಂಶುಪಾಲ ನಾಗರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ರಾಜು ರಾಠೋಡ್ ಹಾಗೂ ಶಾಲೆಯ ಎಲ್ಲ ಸಿಬ್ಬಂದಿಗಳು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿಯೂ ವಿಜೇತರಾಗಲಿ ಎಂದು ಹಾರೈಸಿದ್ದಾರೆ.