Tag: Kargil Victory Day Celebrations

  • ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ

    ಸತ್ಯಕಾಮ ವಾರ್ತೆ ಸುರಪುರ: 

    ಸೇನೆ, ಅರೆ ಸೇನಾಪಡೆ ಮತ್ತು ಮಾಜಿ ಸೈನಿಕರ ಸಂಘ ಸುರಪುರ ವತಿಯಿಂದ ಏರ್ಪಡಿಸಿದ್ದ 26ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಆಪರೇಷನ್ ಸಿಂಧೂರ ಯಶಸ್ವಿ ಸಮಾರಂಭದಲ್ಲಿ ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಹಾಗೂ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮಿನಾರಾಯಣ ನಾಯಕ ಅವರು ಭಾಗಿಯಾಗಿ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಗರುಡಾದ್ರಿ ಕಲಾ ಮಂದಿರದ ವರೆಗೆ ನಡೆದ ವಿಜಯೋತ್ಸವ ಯಾತ್ರೆಗೆ ಚಾಲನೆ ನೀಡಿದರು.

    ನಂತರ ಗರುಡಾದ್ರಿ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸೈನಿಕರಿಗೆ ಸನ್ಮಾನಿಸಿ ಗೌರವಿಸಿ ವಿಜಯೋತ್ಸವ ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾಜಿ ಸೈನಿಕರುಗಳು ಹಾಗೂ ತಾಲೂಕು ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಗ್ಯಾರಂಟಿ ಯೋಜನೆ ಅಧ್ಯಕ್ಷರು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯಮಾನ್ಯರು ಉಪಸ್ಥಿತರಿದ್ದರು