Tag: KL Rahul

  • “ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ” – ಕೆಎಲ್ ರಾಹುಲ್

    “ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ” – ಕೆಎಲ್ ರಾಹುಲ್

    ಕ್ರಿಕೆಟ್ ಲೋಕದಲ್ಲಿ ಕೆಎಲ್ ರಾಹುಲ್ ಎಂಬ ಹೆಸರು ಅಷ್ಟೇ ಶಾಂತವಾಗಿ, ಅಷ್ಟೇ ಪ್ರಭಾವಶಾಲಿಯಾಗಿ ಬೆಳಗುತ್ತಿದೆ. ಮೈದಾನದಲ್ಲಿ ಗಂಭೀರವಾಗಿ, ದೃಢತೆಯಿಂದ ಆಟವಾಡುವ ಈ ಆಟಗಾರನ ಮತ್ತೊಂದು ಮುಖ ಹಾಸ್ಯ ಮತ್ತು ಸ್ನೇಹಭಾವದಿಂದ ಕೂಡಿದೆ. ಇತ್ತೀಚೆಗೆ ಅವರು ಹಂಚಿಕೊಂಡ ಒಂದು ಸಣ್ಣ ಘಟನೆ ಕ್ರಿಕೆಟ್ ಅಭಿಮಾನಿಗಳಲ್ಲಿ ನಗುವಿನ ಅಲೆ ಎಬ್ಬಿಸಿದೆ. ಅದು ಅವರ ಮೆಂಟರ್ ಆಗಿದ್ದ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಬಗ್ಗೆ ಮತ್ತು ಅದರಲ್ಲಿ ಪ್ರಮುಖ ಪಾತ್ರದಲ್ಲಿ ಅವರ ಪತ್ನಿಯೂ ಕೂಡ ಇದ್ದಾರೆ.

    ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿದ್ದ ಸಮಯದಲ್ಲಿ, ತಂಡದ ಮೆಂಟರ್ ಆಗಿದ್ದವರು ಕೆವಿನ್ ಪೀಟರ್ಸನ್. ಕಠಿಣ ಶಿಸ್ತು, ದೃಢ ಮಾರ್ಗದರ್ಶನ ಮತ್ತು ಕಟುವಾದ ವಿಶ್ಲೇಷಣೆಗಳು ಪೀಟರ್ಸನ್ ಅವರ ಕೋಚಿಂಗ್ ಶೈಲಿಯ ಮುಖ್ಯ ಅಂಶಗಳಾಗಿವೆ. ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದ ರಾಹುಲ್‌ಗೆ ಅನೇಕ ಪಾಠಗಳು ಕಲಿತರೂ, ಕೆಲವೊಮ್ಮೆ ಆ ಕಠಿಣತನ ತಾಳಲಾಗದಂತಾಗುತ್ತಿತ್ತು.

    ರಾಹುಲ್‌ನ ಪ್ರಕಾರ, “ಕೆವಿನ್ ಪೀಟರ್ಸನ್ ಅವರಿಂದ ನಾನು ತುಂಬಾ ಕಲಿತಿದ್ದೇನೆ. ಆದರೆ ಅವರು ಕೆಲವೊಮ್ಮೆ ತುಂಬಾ ಗಂಭೀರವಾಗಿ ಮಾತಾಡುತ್ತಿದ್ದರು. ಅವರ ಪಾಠ ಕೇಳುವಾಗ ನಕ್ಕುಬಿಡಲು ಸಹ ಆಗುತ್ತಿರಲಿಲ್ಲ. ಅವರು ತುಂಬಾ ಏಕಾಗ್ರತೆಯಲ್ಲಿರುತ್ತಾರೆ, ನಾನು ಒಳಗೆ ನಕ್ಕುಕೊಂಡೇ ಇರ್ತೀನಿ.”

    ಈ ಘಟನೆಯ ಕುತೂಹಲಕರ ಭಾಗವೆಂದರೆ ರಾಹುಲ್ ಅವರು ಒಮ್ಮೆ ಕೆವಿನ್ ಪೀಟರ್ಸನ್ ಅವರ ಪತ್ನಿಗೇ ದೂರು ನೀಡಿಬಿಟ್ಟಿದ್ದೆ ಎಂದು ಹೇಳಿಕೊಂಡಿದ್ದಾರೆ.

    “ನಾವು ಯೂರೋಪ್ ಪ್ರವಾಸದಲ್ಲಿದ್ದಾಗ ಒಮ್ಮೆ ಅವರ ಪತ್ನಿಯನ್ನು ಭೇಟಿ ಮಾಡಿದ್ದೆ. ಅಲ್ಲಿ ನಾನು ನಕ್ಕು ಅವರ ಬಳಿ ಹೇಳಿದೆ ‘ಮೇಡಂ, ನಿಮ್ಮ ಹಸ್ಬೆಂಡ್ ತುಂಬಾ ಒರಟ. ಅಭ್ಯಾಸದಲ್ಲಿ ತುಂಬಾ ಕಠಿಣವಾಗಿ ಮಾತನಾಡುತ್ತಾರೆ. ಸ್ವಲ್ಪ ಅವರಿಗೆ ಹೇಳಿ ಪ್ಲೀಸ್, ನನ್ನ ಮೇಲೆ ಮೃದುಧೋರಣೆಯಿಂದ ಕನಿಕರ ಇರಲಿ!’”

    ಅದನ್ನು ಕೇಳಿ ಪೀಟರ್ಸನ್ ಅವರ ಪತ್ನಿಯೂ ನಕ್ಕರಂತೆ. ಈ ಹಾಸ್ಯಭರಿತ ಕ್ಷಣವು ಪೀಟರ್ಸನ್ ಮತ್ತು ರಾಹುಲ್ ನಡುವಿನ ಸ್ನೇಹದ ನಿಜವಾದ ಹತ್ತಿರತನವನ್ನು ತೋರಿಸುತ್ತದೆ.

    ಈ ಘಟನೆ ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ನಡೆಸಿದ 2 Sloggers ಎಂಬ ಯುಟ್ಯೂಬ್ ಪಾಡ್‌ಕಾಸ್ಟ್‌ನಲ್ಲಿ ಬಹಿರಂಗವಾಯಿತು. ಸಂಭಾಷಣೆಯ ವೇಳೆ ಅಥಿಯಾ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ರಾಹುಲ್ ತಮ್ಮ ಗುರು ಶಿಷ್ಯರ ನಡುವಿನ ಸಣ್ಣಪುಟ್ಟ ನೊಣಜಗಳ ಕುರಿತು ಹಾಸ್ಯಾತ್ಮಕವಾಗಿ ಹಂಚಿಕೊಂಡರು.

    “ಪ್ರತಿ ಬಾರಿ ಕೆವಿನ್ ಜೊತೆ ಜಗಳವಾದಾಗ, ನನ್ನ ಪತ್ನಿಯೇ ನನಗೆ ಬುದ್ಧಿ ಹೇಳುತ್ತಾಳೆ,” ಎಂದು ನಗುತ್ತಾ ಹೇಳಿದ್ದಾರೆ ರಾಹುಲ್. “ಆದರೂ ಕೆವಿನ್ ನನ್ನ ಜೀವನದಲ್ಲಿ ಒಬ್ಬ ಪ್ರೇರಕ. ಅವರಿಂದ ಕಲಿತ ಪಾಠಗಳು ಇಂದು ನನ್ನ ಆಟದ ಗುಣಮಟ್ಟವನ್ನು ರೂಪಿಸಿವೆ” ಎಂದು ಹೇಳಿಕೊಂಡಿದ್ದಾರೆ.

  • ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

    ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

    ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಸತ್ಯಪರೀಕ್ಷೆಗೆ ಬಲಿಷ್ಠ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತೆ ಕಣಕ್ಕಿಳಿಯಲು ಸಜ್ಜಾಗಿವೆ. ಕಳೆದ ವರ್ಷದ ವಿಶ್ವಕಪ್ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋಲಿನ ಕಹಿ ಅನುಭವಿಸಿದ ಭಾರತಕ್ಕೆ, ಈ ಸರಣಿ ಒಂದು ರೀತಿಯ ಪ್ರತೀಕಾರದ ವೇದಿಕೆಯಾಗಿದೆ. ಇತ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ್ದ ನೆನಪು ಇದ್ದರೂ, ಈ ಬಾರಿ ಪರಿಸ್ಥಿತಿ ಸಂಪೂರ್ಣ ವಿಭಿನ್ನವಾಗಿದೆ ಸ್ಥಳ, ಪಿಚ್, ತಂಡದ ಸಂಯೋಜನೆ ಎಲ್ಲವೂ ಭಾರತಕ್ಕೆ ಹೊಸ ಸವಾಲುಗಳು.

    ಪರ್ತ್‌ನ ವಾಕಾ ಮೈದಾನ ಎಂದರೆ ಬೌನ್ಸಿಗೆ ಪ್ರಸಿದ್ಧ ಅಲ್ಲಿ ವೇಗಿಗಳೇ ಮೇಲುಗೈ ಅದಕ್ಕಾಗಿಯೇ ಎಷ್ಟು ಪೇಸರ್‌ಗಳೊಂದಿಗೆ ಕಣಕ್ಕಿಳಿಯಬೇಕು ಎಂಬ ಪ್ರಶ್ನೆ ಈಗ ತಂಡದ ಮುಂದಿದೆ.

    ಈ ಹಿನ್ನೆಲೆಯಲ್ಲಿ ಕನ್ನಡಿಗರ ಹೆಸರುಗಳೂ ಚರ್ಚೆಯಲ್ಲಿವೆ

    ಕೆಎಲ್ ರಾಹುಲ್, ತಂಡದ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅವರ ಅನುಭವ, ತಾಳ್ಮೆ ಮತ್ತು ಮಧ್ಯ ಕ್ರಮದಲ್ಲಿ ನಿಲ್ಲುವ ಶಕ್ತಿ ಭಾರತಕ್ಕೆ ಅಗತ್ಯವಾದ ಅಂಶಗಳಾಗಿವೆ.

    ಮತ್ತೊಂದು ಹೆಸರು ಪ್ರಸಿದ್ಧ ಕೃಷ್ಣ ವೇಗದ ಬೌಲರ್. ವಾಕಾದಂತಹ ಪಿಚ್‌ನಲ್ಲಿ ಅವರ ಉದ್ದದ ಬೌನ್ಸ್ ಎದುರಾಳಿಗಳಿಗೆ ಕಠಿಣ ಪರೀಕ್ಷೆಯಾಗಬಹುದು. ಆದರೂ ಅವರ ಸ್ಥಾನ ಖಚಿತವೆಂದು ಹೇಳಲು ಸಾಧ್ಯವಿಲ್ಲ, ಏಕೆಂದರೆ ಯುವ ವೇಗಿ ಹರ್ಷಿತ್ ರಾಣಾ ಅವರ ಪ್ರದರ್ಶನವೂ ಆಯ್ಕೆದಾರರ ಗಮನ ಸೆಳೆದಿದೆ.

    ಇತ್ತ ನಾಯಕ ಶುಭಮನ್ ಗಿಲ್ ನೇತೃತ್ವದ ಹೊಸ ತಂಡದತ್ತ ಎಲ್ಲರ ಕಣ್ಣು, ಏಷ್ಯಾ ಕಪ್ ಗೆಲುವಿನ ನಂತರ, ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯ ಕ್ಲೀನ್ ಸ್ವೀಪ್ ಮಾಡಿ ಈ ಎಲ್ಲ ಯಶಸ್ಸುಗಳ ನಡುವೆ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. ಆದರೆ ಆಸ್ಟ್ರೇಲಿಯಾದಂತಹ ಬಲಿಷ್ಠ ಎದುರಾಳಿಯ ಮುಂದೆ ಅದು ಸಾಕಾಗುತ್ತದೆಯಾ ಎಂಬುದು ಈಗಿನ ಪ್ರಶ್ನೆ.

    ಅಕ್ಟೋಬರ್ 19ರಂದು ಭಾನುವಾರ ನಡೆಯಲಿರುವ ಈ ಮೊದಲ ಏಕದಿನ ಪಂದ್ಯ ಕೇವಲ ಪಂದ್ಯವಲ್ಲ ಅದು ಗೌರವ, ಆತ್ಮಗೌರವ ಮತ್ತು ಪ್ರತೀಕಾರದ ಪರ್ತ್‌ನ ಬೌನ್ಸಿ ಪಿಚ್‌ನಲ್ಲಿ ವೇಗಿಗಳ ರಣಭೂಮಿ ಸಜ್ಜಾಗಿದೆ.