Tag: Yadagiri news

  • ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆಯಿಂದ 3 ಜೀವ ರಕ್ಷಣೆ: ಡಾ|| ಅಮೋಘ ಸಿದ್ದೇಶ್ವರ

    ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆಯಿಂದ 3 ಜೀವ ರಕ್ಷಣೆ: ಡಾ|| ಅಮೋಘ ಸಿದ್ದೇಶ್ವರ

    ಸತ್ಯಕಾಮ ವಾರ್ತೆ ಯಾದಗಿರಿ:

    ತುರ್ತು ಪರಿಸ್ಥಿತಿಯಲ್ಲಿ ಕಲ್ಬುರ್ಗಿ, ರಾಯಚೂರು ಮುಖಮಾಡುವ ಪರಿಸ್ಥಿತಿ ಇರುವ ವೇಳೆ ನಗರದಲ್ಲಿ ಸಿಪಾಕಾದೊಂದಿಗೆ ಆರಂಭಿಸಿದ 24*7 ಸೇವೆ ನೀಡುವ ಐಸಿಯು ಸೇವೆ ಹಾಗೂ (ಸುವರ್ಣ ತಾಸುಗಳ) ಗೋಲ್ಡನ್ ಹವರ್ (Golden Hour)ಅವಧಿಯ ಚಿಕಿತ್ಸೆಯಿಂದ ಮೂರು ಅಮೂಲ್ಯ ಜೀವ ಉಳಿದಿವೆ ಎಂದು ಇಲ್ಲಿನ ವಿಬಿಆರ್ ಮುದ್ನಾಳ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ವೈದ್ಯರಾದ ಡಾ. ಅಮೋಘ ಸಿದ್ದೇಶ್ವರ ನರಸಣಗಿ ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಕರ್ನಾಟಕದ ಮೊದಲ ಸಿಪಾಕಾ ಜಾಗತಿಕ ಗುಣಮಟ್ಟದ ಐಸಿಯು ಸೇವೆಯ ಸೌಲಭ್ಯ ಆರಂಭಿಸಿದ ನಂತರ ಅನೇಕ ಜನತೆಗೆ ಇದರಿಂದ ಉಪಯೋಗವಾಗಿದೆ.

    ಅದರಲ್ಲೂ ವಿಶೇಷವಾಗಿ ಕಳೆದ ತಿಂಗಳೊಪ್ಪತ್ತಿನಲ್ಲಿ ಮೂರು ವಿಶಿಷ್ಟ ಸವಾಲಿನ ಪ್ರಕರಣಗಳು ಯಶಸ್ವಿಯಾಗಿ ನಿಭಾಯಿಸಿ ಜೀವ ಉಳಿಸಿದ ಘಟನೆಗಳು ನಡೆದಿವೆ ಎಂದು ವಿವರಿಸಿದ ಅವರು, ಬೆನ್ನು ಮೂಳೆ ನರ ಅಪ್ಪಚ್ಚಿಯಾಗಿದ್ದ ಪ್ರಕರಣವನ್ನು ಶಸ್ತçಚಿಕಿತ್ಸೆ ಮೂಲಕ ಗುಣಪಡಿಸಿದ್ದಲ್ಲದೇ ಕೇವಲ 6 ತಾಸಿನಲ್ಲಿಯೇ ರೋಗಿ ಐಸಿಯುನಿಂದ ಸಾಮಾನ್ಯ ನಂತೆ ನಡೆದುಕೊಂಡು ಹೋಗುವಂತೆ ಮಾಡಿದ ಪ್ರಕರಣ ಯಶಸ್ವಿಯಾಗಿತ್ತು ಎಂದು ತಿಳಿಸಿದರು.

    ಎರಡನೇ ಪ್ರಕರಣದಲ್ಲಿ ರೋಗಿ 15 ಬಿಪಿ ಮಾತ್ರೆ ಸೇವಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಸಂದರ್ಭದಲ್ಲಿ ತಕ್ಷಣವೇ ಗೋಲ್ಡನ್ ಹವರ್ಸ್ ನಲ್ಲಿ ಐಸಿಯುಗೆ ಸೇರಿಸಿ ಚಿಕಿತ್ಸೆ ಕೊಟ್ಟ ಪರಿಣಾಮ ಬಹುತೇಕ ಸತ್ತೇ ಹೋಗಿದ್ದ ವ್ಯಕ್ತಿ 4 ದಿನಗಳಲ್ಲಿ ಬಿಪಿ ಹತೋಟಿಗೆ ತಂದು ಪುನರ್ಜನ್ಮದೊಪಾದಿಯಲ್ಲಿ ಬದುಕಿದ ಪ್ರಕರಣ ದಾಖಲಾಯಿತು ಎಂದು ತಿಳಿಸಿದರು.

    ಜೊತೆಗೆ ಹೊಲದಲ್ಲಿ ಕ್ರಿಮಿನಾಶಕ ಸಿಂಪಡನೆ ವೇಳೆ ಅಪಾಯಕಾರಿ ಕ್ರಿಮಿನಾಶಕ ದೇಶ ಸೇರಿದ ಕೆವಲ ಅರ್ಧ ತಾಸಿನಲ್ಲಿ ಐಸಿಯುಗೆ ಸೇರಿಸಿ ಚಿಕಿತ್ಸೆ ನೀಡಿದ್ದರಿಂದ ಆ ರೋಗಿಯೂ ಪ್ರಾಣ ಉಳಿಸಿದ ಪ್ರಕರಣ ಯಶಸ್ವಿಯಾಗಿ ನಿಭಾಯಿಸಲಾಯಿತು ಎಂದು ವಿವರಣೆ ನೀಡಿದರು.

    ಮೂರು ಪ್ರಕರಣಗಳಿಂದ ಗೋಲ್ಟನ್ ಹವರ್ ಎಂತಹ ಪವಾಡ ಮಾಡುತ್ತದೆ ಎಂಬುದು ನಮ್ಮ ಭಾಗದ ಜನತೆಗೆ ತಿಳಿಸುವ ಅಗತ್ಯತೆ ಮನಗಂಡು ಮಾಧ್ಯಮಗಳ ಮುಂದೆ ಬಂದುದಾಗಿ ಹೇಳಿದ ಅವರು, ಜಿಲ್ಲೆಯಲ್ಲಿ ವಿಶೇಷವಾಗಿ ಅಪಘಾತ, ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ಬರುವ ತುರ್ತು ಸಂದರ್ಭಗಳಲ್ಲಿ ಗೋಲ್ಡನ್ ಹವರ್ ನ ಸದುಪಯೋಗಕ್ಕೆ ಚೆನ್ನೆöÊನ ಸಿಪಾಕಾ ನೆರವಿನೊಂದಿಗೆ ಆರಂಭಿಸಿದ ಐಸಿಯು ನಲ್ಲಿ ಯುಕೆ (ಲಂಡನ್) ನ ಗುಣಮಟ್ಟದ ಮಾರ್ಗದರ್ಶಿ ಸೂತ್ರಗಳನ್ವಯ ಕಾರ್ಯನಿರ್ವಹಣೆಯಿಂದಾಗಿ ಅಮೂಲ್ಯ ಮೂರು ಜೀವಗಳು ಉಳಿಸಲು ಸಾದ್ಯವಾಯಿತು ಎಂದು ವಿವರಿಸಿದರು.

    ಈ ಸಂದರ್ಭದಲ್ಲಿ ಮಾರುತಿ ಕಲಾಲ್, ಭೀಮು ಹಾಗೂ ಗುಣಮುಖರಾದ ರೋಗಿಗಳ ಕುಟುಂಬದವರು ಇನ್ನಿತರರು ಇದ್ದರು.

  • ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    • ಐದನೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
      ಜೋಡಾಟ-ರಥೋತ್ಸವ ಸೇರಿ ಹಲವು ಆಕರ್ಷಣೆ
    ಸತ್ಯಕಾಮ ವಾರ್ತೆ ಬೆಂಗಳೂರು: 
    ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ 'ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ'ವನ್ನು ಆಚರಣೆ ಮಾಡುತ್ತಿದ್ದು, ಈ ಸಲ ಬೆಂಗಳೂರಿನಲ್ಲಿ ಅದು ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.

    ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ ನೆರವೇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕುಂದಗನ್ನಡ ಲೋಕವನ್ನು ಭರ್ಜರಿಯಾಗಿ ಅನಾವರಣಗೊಳಿಸುವ ಈ ಕಾರ್ಯಕ್ರಮ ಆಗಸ್ಟ್ 17 ಮತ್ತು 18ರಂದು ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ನಡೆಯಲಿದೆ.

    ‘ಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರು’ ಮೂಲಕ ಆಯೋಜನೆ ಆಗುತ್ತಿರುವ ಈ ಆಚರಣೆಯ ದಿನ-ಸ್ಥಳ ಘೋಷಣೆ ಕುರಿತು ಬೆಂಗಳೂರಿನ ಸುದೀಕ್ಷಾ ಕನ್ವೆನ್ಷನ್ ಹಾಲ್‌ನಲ್ಲಿ ಜು. 7ರಂದು ಹಮ್ಮಿಕೊಂಡಿದ್ದ ‘ವಾಲ್ಗ’ ಕಾರ್ಯಕ್ರಮದಲ್ಲಿ ವಿವರಗಳನ್ನು ನೀಡಲಾಯಿತು. ಆರು ವರ್ಷಗಳ ಹಿಂದೆ ಈ ಆಚರಣೆ ಆರಂಭವಾಗಿದ್ದು, ಇದು ಐದನೇ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಆಗಿದೆ.

    Video: ರಾಜಧಾನಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ: ಆಗಸ್ಟ್ 17-18ರಂದು ಅರಮನೆ ಮೈದಾನದಲ್ಲಿ ಅದ್ಧೂರಿ ಆಯೋಜನೆ

    ಕಳೆದ ನಾಲ್ಕು ಕುಂದಾಪ್ರ ಕನ್ನಡ ಹಬ್ಬಗಳು ವಿಜಯನಗರದ ಬಂಟರ ಸಂಘದಲ್ಲಿ ಆಗಿದ್ದವು. ಆದರೆ ಅದಕ್ಕೆ ಬೃಹತ್ ಜನಸ್ತೋಮ ಹರಿದುಬಂದಿದ್ದು ಸುಮಾರು ಶೇ. 70 ಜನರಿಗೆ ಬಂಟರ ಸಂಘಕ್ಕೆ ಪ್ರವೇಶಿಸಲಿಕ್ಕೂ ಆಗಿರಲಿಲ್ಲ. ಹೀಗಾಗಿ ಈ ವರ್ಷ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ, ಈ ಬಾರಿ ಇನ್ನೂ ದೊಡ್ಡ ಪ್ರಮಾಣದಲ್ಲಿ ಜನರು ಸೇರಲಿದ್ದಾರೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದರು.

    ಬೃಹತ್ ಮೆರವಣಿಗೆ: ಎರಡು ದಿನಗಳ ಈ ಕಾರ್ಯಕ್ರಮ ‘ದಿಬ್ಣ’ದೊಂದಿಗೆ ಆರಂಭವಾಗಲಿದೆ. ಅದರಲ್ಲಿ ಬೆಂಗಳೂರಿನ ಕನಿಷ್ಠ 10 ಕಡೆಗಳಿಂದ ಜನರು ಮೆರವಣಿಗೆ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದ್ದಾರೆ. ‘ನಾಕ್ ಘನಾ ಸುರ್ಲ್’ ಎಂಬ ಕರಾವಳಿಯ ಅದ್ಭುತ ಗೀತೆಗಳ ಗಾಯನವಿರಲಿದೆ. ನಂತರ ‘ನುಡಿ ಚಾವಡಿ’ ಎಂಬ ಕಾರ್ಯಕ್ರಮದ ಮೂಲಕ ಉದ್ಘಾಟನಾ ಸಮಾರಂಭ ನಡೆಯಲಿದೆ. ಅ.17ರ ರಾತ್ರಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಜೋಡಾಟ’ ನಡೆಯಲಿದೆ. ರಾಜ್ಯದ ಯಕ್ಷರಂಗದ ಮೇರು ಕಲಾವಿದರು ಭಾಗವಹಿಸಲಿರುವ ಈ ಯಕ್ಷಗಾನಕ್ಕೇ 15-20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ದೀಪಕ್ ಶೆಟ್ಟಿ ವಿವರಿಸಿದರು. ಮಾತ್ರವಲ್ಲದೆ, ಕನ್ನಡ ಚಿತ್ರರಂಗದ ಸ್ಟಾರ್ ನಟ-ನಿರ್ದೇಶಕರು ಸೇರಿದಂತೆ ಹಲವು ತಾರೆಯರು ಕೂಡ ಭಾಗಿ ಆಗಲಿರುವುದರಿಂದ ಈ ಸಂಭ್ರಮಕ್ಕೆ ತಾರಾ ಕಳೆ ಇರಲಿದೆ ಎಂದರು.

    ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಯುನಿವರ್ಸಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕ ನಿರ್ದೇಶಕ ಆರ್.ಉಪೇಂದ್ರ ಶೆಟ್ಟಿ, ಹೋಟೆಲೋದ್ಯಮಿ ಸತೀಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಏನಿದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ?
    ಆಸಾಡಿ ಅಮಾಸಿ/ ಆಟಿ ಅಮಾವಾಸ್ಯೆ (ಕರ್ಕಾಟಕ ಅಮಾವಾಸ್ಯೆ) ದಿನ ಕರಾವಳಿಗರಿಗೆ ಅತ್ಯಂತ ವಿಶೇಷವಾದದ್ದು. ಕಳೆದ ಐದು ವರ್ಷಗಳಿಂದ ಪ್ರತಿ ವರ್ಷ ಈ ಕರ್ಕಾಟಕ ಅಮಾವಾಸ್ಯೆ ದಿನವನ್ನು ವಿಶ್ವ ಕುಂದಾಪ್ರ ಕನ್ನಡ ದಿನ ಎಂದು ಆಚರಣೆ ಮಾಡಲಾಗುತ್ತಿದ್ದು, ಈ ಸಲ ಆಗಸ್ಟ್ 04ರಂದು ಆಷಾಢ ಅಮಾವಾಸ್ಯೆ ಬಂದಿದೆ. ಅದು ವಾರದ ದಿನವಾದ್ದರಿಂದ, ಆಯೋಜನೆ ಹಾಗೂ ಆಗಮಿಸುವ ಅತಿಥಿ ಗಣ್ಯರ ಅನುಕೂಲದ ದೃಷ್ಟಿಯಿಂದ ಬೆಂಗಳೂರಿನಲ್ಲಿ ಆಗಸ್ಟ್ 17, 18ರಂದು ವಿಶ್ವ ಕುಂದಾಪುರ ಕನ್ನಡ ದಿನವನ್ನು ಕುಂದಾಪ್ರ ಕನ್ನಡ ಹಬ್ಬವಾಗಿ ಆಚರಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ಇದು ವೇದಿಕೆ ಆಗಲಿದ್ದು, ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಪಸರಿಸಲಿದೆ.

    ಇದು ಸಣ್ಣ ಆಲೋಚನೆ ಅಲ್ಲ‌. ಹಬ್ಬದ ಸಂಭ್ರಮ ಮಾತ್ರವಲ್ಲದೆ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಸೇರಿಸುವ ಬೃಹತ್ ಕಾರ್ಯಕ್ರಮ. ಇದು ಕುಂದಾಪುರದ ವೈಶಿಷ್ಟ್ಯ ಎಲ್ಲರಿಗೂ ತೋರಿಸಿ ಬೆಳೆಸುವ ಅದ್ಭುತ ಪ್ರಯತ್ನ.
    – ರವಿ ಬಸ್ರೂರು, ಖ್ಯಾತ ಸಂಗೀತ ನಿರ್ದೇಶಕ.

    2 ದಿನಗಳ ಕಾರ್ಯಕ್ರಮಗಳ ಪಟ್ಟಿ
    * ‘ಹಂದಾಡ್ತ ನೆಗ್ಯಾಡಿ’: ಕುಂದಾಪ್ರ ಕನ್ನಡದ ನಗೆ ರಾಯಭಾರಿ ಮನು ಹಂದಾಡಿ ಅವರಿಂದ ನಗೆ ಪ್ರಹಸನ.
    * ‘ಬಯಲಾಟ’: ಗ್ರಾಮೀಣ ಕ್ರೀಡೋತ್ಸವ
    * ‘ರಥೋತ್ಸವ’: ಹಬ್ಬದ ರೀತಿಯಲ್ಲೇ ಭಾವಬೀದಿಯಲ್ಲಿ ಭಾಷೆಯ ತೇರು.
    * ‘ಪೆಟ್ಟ್ ಒಂದೇ, ಸ್ವರ ಬೇರೆ’: ಆಫ್ರಿಕದ ಜಂಬೆ, ಕುಂದಾಪುರದ ಚೆಂಡೆ ಜುಗಲ್ ಬಂದಿ.
    * ‘ಭುಜಬಲದ ಪರಾಕ್ರಮ’ ಹಗ್ಗಜಗ್ಗಾಟ 8 ಊರಿನ ಹೆಸರಲ್ಲಿ ತಂಡ.
    * ‘ಯಬ್ಯಾ ಸೌಂಡೇ’: ರವಿ ಬಸ್ರೂರು ಅವರ ಶತಕುಂದ ಪದ್ಯಗಳ ಡಿಜೆ
    * ‘ಡ್ಯಾನ್ಸ್ ಕುಂದಾಪ್ರ ಡ್ಯಾನ್ಸ್’: ವಿಶೇಷ ನೃತ್ಯ‌ ಪ್ರದರ್ಶನ
    * ‘ಗಂಡಿನ್ ಪಿಚ್ಚರ್ ಬಿಡ್ತ್’: ವಿಶೇಷ ಕಿರುಚಿತ್ರ ಪ್ರದರ್ಶನ
    * ‘ನಮ್ ಊರ್ಮನಿ ಪಿಚ್ಚರ್ ಯಾಕ್ಟ್ರ್ಸ್’: ಊರಿನ ಸಿನಿತಾರೆಯರು, ಸೂಪರ್ ಸ್ಟಾರ್‌ಗಳ ಸಮಾಗಮ.
    * ‘ಕುಂದಾಪ್ರ ಸಂತಿ’: ಕುಂದಾಪುರದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಸಂತೆ.
    * ‘ಹೊಟ್ಟಿ ಕಂಡದ್ ನಾವೇ ಸೈ’: ಕರಾವಳಿಯ ವಿಶೇಷ ಖಾದ್ಯ ಮೇಳ.

  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    • ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್‌ ಪ್ರತಿಭಟನೆ

     

    ಸತ್ಯಕಾಮ ವಾರ್ತೆ ಯಾದಗಿರಿ:-

    ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಮಾತನಾಡಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ನೈತಿಕ ಹೊಣೆ ಹೊತ್ತು, ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ಈ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ ಹಿನ್ನೆಲೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ನವರ ತಲೆದಂಡವಾದರೆ ಸಾಲದು, ಈ ಹಗರಣದ ಕಿಂಗ್ ಪಿನ್ ಯಾರು ಎಂಬುದು ಬಯಲಾಗಬೇಕು, ಆತ್ಮಹತ್ಯೆ ಮಾಡಿಕೊಂಡ ಕಚೇರಿ ಅಧೀಕ್ಷಕ ಚಂದ್ರಶೇಖರ ಕುಟುಂಬಕ್ಕೆ ನ್ಯಾಯ ಸಿಗಬೇಕು, ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅನುಮಾನವಿದೆ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    ಕೇವಲ ಭ್ರಷ್ಟಾಚಾರ ಅಲ್ಲ ಇದು, ಬುಡಕಟ್ಟು ಸಮುದಾಯಗಳ ಹಣವನ್ನು ಕಳ್ಳತನ ಮಾಡಿದ ಸರ್ಕಾರವಿದು, ಇದರ ಕಿಂಗ್ ಪಿನ್ ಯಾರು ಎಂಬುದು ತನಿಖೆಯಾಗಬೇಕು ಎಂದಿದ್ದಾರೆ.

    ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಯಂಕ್ಷಿಂತಿ ಮಾತನಾಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಹೈದರಾಬಾದ್ ಮೂಲದ ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಲೋಕಸಭೆ ಚುನಾವಣೆಗೆ ಬಳಸಿದ್ದು ಹಣ ದುರುಪಯೋಗ ಆಗಿದೆ ಹಾಗೂ ಬಾರ್‌ನಲ್ಲಿ ಕುಳಿತು ಕುಡಿದ ಬಿಲ್ ನಿಗಮದ ಹಣ ನೀಡಿ ದುರುಪಯೋಗ ಮಾಡಿದ್ದಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕು.ಲಲಿತಾ ಅನಪುರ, ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ,ಪರುಶುರಾಮ ಕುರಕುಂದಿ,ಮೆಲಪ್ಪ ಗುಳಗಿ,ದೆವಿಂದ್ರನಾಥ ನಾದ,ವೆಂಕಟರಡ್ಡಿ ಅಬ್ಬೆತುಮಕೂರು,ಬಸವರಾಜ ವಿಭೂತಿಹಳ್ಳಿ,ದೇವರಾಜ ನಾಯಕ, ನಗರಸಭೆ ಸದಸ್ಯ ವಿಲಾಸ ಪಾಟೀಲ್ ಮತ್ತು ಸ್ವಾಮಿದೇವ ದಾಸನಕೇರಿ, ಶ್ರೀದೇವಿ ಶೆಟ್ಟಿಹಳ್ಳಿ,ಮಂಜುನಾಥ ಜಡಿ, ವೀಣಾ ಮೋದಿ, ಶಂಕರ್ ಕರಣಗಿ,

    ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಶಹಾಪುರ ಮಂಡಲ ಅಧ್ಯಕ್ಷ ಚಂದ್ರಶೇಖರ ಕಂಬಾರ, ಮಲ್ಲಿಕಾರ್ಜುನ ಕಟ್ಟಿಮನಿ,ಕರಬಸಪ್ಪ ಬಿಳಾರ, ಗೋವಿಂದಪ್ಪ ಖಾನಾಪುರ, ಶಿವು ಕೊಂಕಲ,ರಾಜು ಸ್ವಾಮಿ ಅಲಂಪಲ್ಲಿ, ಪ್ರಭಾವತಿ ಕಲಾಲ,ಭೀಮಬಾಯಿ ಶೆಂಡಿಗಿ, ಮಲ್ಲು ಕೋಲಿವಾಡ,ಸಾಬು ಚಂಡ್ರಕಿ ಸೇರಿದಂತೆ ಅನೇಕರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.