Tag: yadgir

  • ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

    ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

    ಸುರಪುರ: ಪಟ್ಟಣದ ನಗರಸಭೆಯ ಕಿರಿಯ ಅಭಿಯಂತರ ಮಹೇಶ್ ಮಾಳಗಿ ಅವರ ಬೊಂಬಾಯಿ ಬಸಣ್ಣ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಮಂಗಳವಾರ ರಾತ್ರಿ ನಡೆದಿರುವ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಕುಟುಂಬದವರು ಮನೆಯಿಂದ ಹೊರಗಿದ್ದ ಸಂದರ್ಭ ಮನೆಯ ಬೀಗ ಮುರಿದು ಚಿನ್ನ–ಬೆಳ್ಳಿ ಆಭರಣಗಳು ಹಾಗೂ ನಗದು ಸೇರಿದಂತೆ ಸುಮಾರು ₹46.11 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

    ಮಂಗಳವಾರ ಸಂಜೆ 7.30ರಿಂದ ರಾತ್ರಿ 10.30ರ ನಡುವೆ ಸುರಪುರದ ದೀವಳಗುಡ್ಡದಲ್ಲಿ ಸಹೋದರನ ಪತ್ನಿಯ ಮನೆಯಲ್ಲಿ ದೇವರ ಕಾರ್ಯಕ್ಕೆ ಕುಟುಂಬದವರು ತೆರಳಿದ್ದರು. ಈ ವೇಳೆ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಕಳ್ಳರು ಬೀಗ ಮುರಿದು ಒಳನುಗ್ಗಿದ್ದಾರೆ.

    ಮನೆಯಲ್ಲಿ ಇತ್ತಿದ್ದ 642 ಗ್ರಾಂ ಬಂಗಾರದ ಆಭರಣಗಳು (ಮೌಲ್ಯ ₹44.94 ಲಕ್ಷ), 1295 ಗ್ರಾಂ ಬೆಳ್ಳಿಯ ಆಭರಣಗಳು (₹77,700) ಮತ್ತು ₹40,000 ನಗದು ಸೇರಿ ಒಟ್ಟು ₹46,11,700 ಮೌಲ್ಯದ ವಸ್ತುಗಳು ಕಳುವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಬೀಗ ಮುರಿದಿರುವುದು ಕಂಡ ಕುಟುಂಬದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಸುರಪುರ ಠಾಣೆಗೆ ಅಧಿಕೃತ ದೂರು ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್, ಸುರಪುರ ಉಪವಿಭಾಗದ ಪ್ರಭಾರಿ ಡಿವೈಎಸ್ಪಿ ನಾಗರಾಜ, ಪಿಐ ಉಮೇಶ್ ನಾಯಕ್, ಪಿಎಸ್ಐ ಕೃಷ್ಣಾ ಸುಬೇದಾರ, ಸಿದ್ದಣ್ಣ ಯಡ್ರಾಮಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇದುವರೆಗೆ ಕಳ್ಳರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

  • ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

    ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

    ಸತ್ಯಕಾಮ ವಾರ್ತೆ ಯಾದಗಿರಿ:

    ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾವಾಗಿ ನ.2 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಕಸಾಪ ಸಭಾಂಗಣದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವ ಮತ್ತು 2025 ನೇ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಷ್ಕತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದ್ದಾರೆ.

    ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವಕರ್ಮ ಏಕದಂಡಿಗಿ ಮಠದ ಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಈ ಜೋಡು ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಎಸ್. ಮುದೋಳ್ ಉದ್ಘಾಟಿಸುವರು,ನಿವೃತ್ತ ಶಿಕ್ಷಕರಾದ ಸಕ್ರಪ್ಪ ಮಾಮನಿ, ಬಸವರಾಜ ಸಾಹು ಗೊಂದಡಗಿ, ಶಿವಪ್ಪ ದಾಸನಕೇರಿ, ಹಸನ್ ಸಾಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ಹೊಟ್ಟಿ ಹೇಳಿದರು.

    ತಮ್ಮ ಅಧ್ಯಕ್ಷತೆಯಲ್ಲಿ ಸಾಗಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ವೆಂಕಟರಾವ್ ಕುಲಕರ್ಣಿ ಅವರು ಕರ್ನಾಟಕ ಏಕಿಕರಣ ಚಳುವಳಿ‌ ಕುರಿತು ಹಾಗೂ ಕನ್ನಡ ಅಧ್ಯಾಪಕ ಡಾ. ಡಿ.ಎನ್. ಪಾಟೀಲ್ ಕರಡಕಲ್ ಅವರು ಉತ್ತಮ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಕುರಿತು ಉಪನ್ಯಾಸ ನೀಡಲಿದ್ದಾರೆಂದರು.
    ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ.ರವಿಂದ್ರ ಹೊಸಮನಿ, ಯಾದಗಿರಿ ತಾಲೂಕು ಕಸಾಪ ಅಧ್ಯಕ್ಷ ವೆಂಕಟೇಶ ಕಲಕಂಭ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರೆಂದು ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ, ಗೌರವ ಕೋಶಾಧ್ಯಕ್ಷ ಬಸವರಾಜ ಅರಳಿ ಮೊಟನಳ್ಳಿ, ತಾಲೂಕು ಗೌರವ ಕಾರ್ಯದರ್ಶಿ ಮಹೇಶ ಪಾಟೀಲ್ ಕಿಲ್ಲನಕೇರಾ, ದೇವರಾಜಗೌಡ ಬೆಳಗೆರಿ, ಗೌರವ ಕೋಶಾಧ್ಯಕ್ಷ ವೀರಭದ್ರಪ್ಪ ಸ್ವಾಮಿ ಜಾಕಾ ಮಠ, ನಾಗಪ್ಪ ಸಜ್ಜನ್‌,  ವೆಂಕಟೇಶ ಕಲಕಂಬ,  ಸ್ವಾಮಿದೇವ ದಾಸನಕೇರಿ  ಸೇರಿದಂತೆಯೇ ಇತರರಿದ್ದರು.

  • ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

    ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

    ಸತ್ಯಕಾಮ ವಾರ್ತೆ ಯಾದಗಿರಿ: 

    ಆಸ್ಪತ್ರೆಗೆ ಬರುವ ಬಡರೋಗಿಗಳಿಗೆ ಉತ್ತಮ‌ ಚಿಕಿತ್ಸೆ ನೀಡುವ ಮೂಲಕ ತಮ್ಮ ಸೇವೆಯನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಶಾಸಕ ಶರಣಗೌಡ ಕಂದಕೂರ ವೈದ್ಯರಿಗೆ ಕಿವಿ ಮಾತು ಹೇಳಿದರು.

    ತಾಲೂಕಿನ ಅರಕೇರಾ(ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಶಸ್ತ್ರ ಚಿಕಿತ್ಸಾಲಯದ ಕೋಣೆಯನ್ನು ಉದ್ಘಾಟಿಸಿದ ಶಾಸಕರು, ಸರ್ಕಾರಿ ದವಾಖಾನಿಗಳಿಗೆ ಬರುವವರು ಬಡವರೇ ಆಗಿರುತ್ತಾರೆ. ಅವರಿಗೋಸ್ಕರವೇ ಸರ್ಕಾರಗಳು‌ ಇಂತಹ ವ್ಯವಸ್ತೆ ಮಾಡಿರುತ್ತದೆ. ಕಾರಣ, ನಿಗದಿತ ಅವಧಿಯಲ್ಲಿ ರೋಗಕ್ಕೆ ತಕ್ಕ ಚಿಕಿತ್ಸೆ ನೀಡುವ ಮೂಲಕ ತಾವುಗಳು ಎರಡನೇ ದೇವರಾಗಬೇಕೆಂದು ಮಾರ್ಮಿಕವಾಗಿ ಹೇಳಿದರು.

    ಇಲ್ಲಿ ಇನ್ನೂ ಏನಾದರೂ ಸೌಲಭ್ಯಗಳು ಬೇಕಾದರೇ ತಮ್ಮ ಗಮನಕ್ಕೆ ತಂದರೇ ಅವುಗಳನ್ನು ಒದಗಿಸುವ ನಿಟ್ಟಿನಲ್ಲಿ‌ ಪ್ರಯತ್ನ ಮಾಡಲಾಗುವುದೆಂದರು.

    ಪರಮಾನಂದೇಶ್ವರ ಶ್ರೀಗಳು ಮಾತನಾಡಿದರು.

    ಈ ಸಂದರ್ಭದಲ್ಲಿ ಡಿಎಚ್ ಒ ಡಾ.ಮಹೇಶ ಬಿರಾದಾರ, ಡಾ.ಎಂ.ಎಸ್.ಪಾಟೀಲ್, ಡಾ.ಜ್ಯೋತಿ ಕಟ್ಟಿಮನಿ, ಡಾ.ಹಣಮಂತರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ನೀಲಾಂಬಿಕಾ ಎಂ.ಜಾಪಟ್ಟಿ, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.

  • ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

    ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

    ಸತ್ಯಕಾಮ ವಾರ್ತೆ ಯಾದಗಿರಿ:

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025–28 ನೇ ಅವಧಿಯ ಚುನಾವಣೆಯು ನವೆಂಬರ್ 9ರಂದು ನಡೆಯಲಿದ್ದು, ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ದಿನೇಶ್ ವಿ.ಸಿ ಮತ್ತು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಯಾದಗಿರಿ ಎಕ್ಸ್‌ಪ್ರೆಸ್ ಪತ್ರಿಕೆಯ ಸಂಪಾದಕ ಕುಮಾರಸ್ವಾಮಿ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ನರಸಪ್ಪ ಅವರಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.

    ಈ ವೇಳೆ ಸಂಜೆಕಾಲ ಪತ್ರಿಕೆಯ ಸಂಪಾದಕರಾದ ರಾಜೇಶ್ ಪಾಟೀಲ್, ಪತ್ರಕರ್ತರಾದ ತೋಟೆಂದ್ರ, ಮಲ್ಲು ಕಾಮರೆಡ್ಡಿ, ಕುದಾನ್ ಸಾಬ್, ಬಸವರಾಜ್ ಕಾಂಬಳೆ, ಮಂಜು ಬಿರಾದಾರ್, ದೇವಿಂದ್ರ ಕಿಲ್ಲನಕೇರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • 20 ದಿನಗಳಲ್ಲಿ 750 ವಾಹನಗಳಿಗೆ ಆನ್ ಲೈನ್ ದಂಡ : ಎಸ್.ಪಿ ಪೃಥ್ವಿಕ್ ಶಂಕರ್ ಮಾಹಿತಿ

    20 ದಿನಗಳಲ್ಲಿ 750 ವಾಹನಗಳಿಗೆ ಆನ್ ಲೈನ್ ದಂಡ : ಎಸ್.ಪಿ ಪೃಥ್ವಿಕ್ ಶಂಕರ್ ಮಾಹಿತಿ

    ಯಾದಗಿರಿ: ವಾಹನ ಸವಾರರು ಉಲ್ಲಂಘಿಸುವ ಸಂಚಾರ ನಿಯಮಗಳಿಗೆ ದಂಡ ಹಾಕುವ ಕೆಲಸ ಕಳೆದ ಅ.6 ರಿಂದ ನಗರದಲ್ಲಿ ಆರಂಭಿಸಿರುವ ಪೊಲೀಸರು ಕೇವಲ ಮೂರೇ ವಾರದಲ್ಲಿ ಸುಮಾರು 750 ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

    ಶನಿವಾರ ತಮ್ಮ ಕಚೇರಿಯಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಮಾಡುವ ಮತ್ತು ಮೂರು ಜನರು ಕುಳಿತು ವಾಹನಗಳನ್ನು ಚಲಾಯಿಸುವ ಸವಾರರಿಗೆ ಆನ್ ಲೈನ್ ದಂಡ ಹಾಕಲಾಗುತ್ತಿದೆ.‌ ಈ ಸಂಪರ್ಕ ರಹಿತ ದಂಡ ಹಾಕುವ ಉದ್ದೇಶವಿಷ್ಠೆ. ಮಂಡ್ಯದಲ್ಲಿ ಸಂಚಾರ ನಿಮಯ ಉಲ್ಲಂಘಿಸಿ ಹೋಗುತ್ತಿದ್ದ ಸವಾರರನ್ನು ಹಿಡಿಯಲು ಪೊಲೀಸರು‌ ಮುಂದಾದಾಗ ತಪ್ಪಿಸಿಕೊಳ್ಳಲು ಹೋಗಿ‌ ಜೀವ‌ ಕಳೆದುಕೊಂಡಿದ್ದರಿಂದ ನಮ್ಮ ನಗರದಲ್ಲಿ‌ ಸಂಪರ್ಕ ರಹಿತ ದಂಡ ವಿಧಿಸುವ ಕೆಲಸ ಮಾಡಲಾಗುತ್ತಿದೆ ಇದು‌ ಬರುವ ದಿನಗಳಲ್ಲಿ‌ ಜಿಲ್ಲೆಯ ಎಲ್ಲಡೆ ವಿಸ್ತರಿಸಲಾಗುವುದೆಂದರು.

    ಜೀವಕ್ಕಿಂತ ದೊಡ್ಡದ್ದು ಏನು ಇಲ್ಲ. ಆದರೇ ನಗರ ಸೇರಿದಂತೆಯೇ ಜಿಲ್ಲೆಯಲ್ಲಿ‌ ಬಹುತೇಕ ವಾಹನ ಸವಾರರು ಸಂಚಾರಿ‌ ನಿಯಮಗಳನ್ನು ಉಲ್ಲಂಘಿಸಿಯೇ ಸಂಚರಿಸುತ್ತಾರೆ. ಇದು ಅವರ ಜೀವಗಳಿಗೆ ಅಪಾಯವಿದ್ದು, ಇದನ್ನು ತಡೆಗಟ್ಟಲು ದಂಡ ಹಾಕುವ ಮೂಲಕ ಅರಿವು‌ ಮೂಡಿಸುವ ಕೆಲಸ ನಡೆದಿದೆ. ಮುಂದೇ ಎಲ್ಲ ತರಹದ ಸಂಚಾರ ನಿಯಮಗಳನ್ನು‌ ಉಲ್ಲಂಘಿಸಿವವಿಗೂ ಈ ಆನ್ ಲೈನ್ ದಂಡ ಹಾಕಲಾಗುವುದೆಂದರು.

    ಐಟಿಎಂಎಸ್ ಅಳವಡಿಕೆಗೆ ಜಿಲ್ಲೆಗೆ 2.40 ಕೋಟಿ ರೂ. ಅನುದಾನ

    ಇಂಟಿಗ್ರೇಟೆಡ್‌ ಟ್ರಾಫಿಕ್ ಮ್ಯಾನೇಜ್‌ಮೆಂಟ್‌ ಸಿಸ್ಟಮ್ (ಐಟಿಎಂಎಸ್‌) ಅಳವಡಿಕೆಗೆ ರಾಜ್ಯ ಸರ್ಕಾರವು ಸಂಚಾರ ಮತ್ತು ರಸ್ತೆ ಸುರಕ್ಷತಾ ಕಮಿಷನರ್ (ಸಿಟಿಆರ್‌ಎಸ್‌) ಅಡಿ ಜಿಲ್ಲೆಗೆ 2.40 ಕೋಟಿ ಅನುದಾನ ನೀಡಿದೆ ಎಂದರು.

    ಐಟಿಎಂಎಸ್‌ ಅಡಿ ಹೈ ಡೆಫಿನಿಷನ್‌ ಸಿ.ಸಿ.ಟಿ.ವಿ ಕ್ಯಾಮೆರಾ, ಅಟೊಮೇಟಿಕ್ ನಂಬರ್ ಪ್ಲೇಟ್‌ ರಿಕಗ್ನಿಷನ್ (ಎಎನ್‌ಪಿಆರ್‌), ರಸ್ತೆಗಳಲ್ಲಿ ವಾಹನಗಳ ವೇಗವನ್ನು ಮಾಪನ ಮಾಡಿ ಅಳೆಯುವ ಸ್ಪೀಡ್ ರಾಡಾರ್ ತಂತ್ರಜ್ಞಾನದ ಗನ್, ಕ್ಯಾಟ್ ಐಸ್ ಉಪಕರಣ, ಡಿಜಿಟಲ್ ಸೈನ್ ಬೋರ್ಡ್‌ಗಳಂತಹ ಸಾಧನಗಳನ್ನು ಒಳಗೊಂಡಿರಲಿದೆ. ಈ ಸಾಧನಗಳ ಮೂಲಕ ತ್ರಿಬಲ್ ರೈಡ್, ಮೊಬೈಲ್ ಬಳಸುತ್ತಾ ವಾಹನಗಳ ಚಾಲನೆ, ಮಿತಿಗಿಂತ ವೇಗವಾಗಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಸುಲಭವಾಗುತ್ತದೆ.

    ಈ ಒಟ್ಟು ಅನುದಾನದಲ್ಲಿ 1.40 ಕೋಟಿ ರೂ. ಜಿಲ್ಲೆಯ ಏಳು ಕಡೆ ಐಟಿಎಂಎಸ್ ಅಳವಡಿಕೆಗೆ ಬಳಕೆಯಾಗಲಿದ್ದು. ಉಳಿದ ಒಂದು ಕೋಟಿ ರೂ.ದಲ್ಲಿ ಎಲ್ಲ ರೀತಿಯ ಸಂಚಾರಿ ಸಾಮಾಗ್ರಿಗಳನ್ನು ಖರೀದಿಸಲಾಗುವುದೆಂದು ಅವರು ಹೇಳಿದರು.

    ಮಹಿಳೆಗೆ ಅವಮಾನ ಘಟನೆ – ಇಬ್ಬರ ಬಂಧನ: ಶಹಾಪುರ ತಾಲೂಕಿನ ಚಾಮನಾಳ ತಾಂಡಾ ಮಹಿಳೆಯೊಬ್ಬಳ ತಲೆಗೂದಲು ಕತ್ತರಿಸಿ ತಲೆಗೆ ಸುಣ್ಣ ಹಚ್ಚಿ ಅಮಾನುಷವಾಗಿ‌ ವರ್ತಿಸಿದ‌ ಘಟನೆಗೆ ಸಂಬಂಧಿಸಿದಂತೆಯೇ ಕೆಂಭಾವಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಪ್ರಥ್ವಿಕ್ ಶಂಕರ್ ಹೇಳಿದ್ದಾರೆ.

  • ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ

    ಸತ್ಯಕಾಮ ವಾರ್ತೆ ವಡಗೇರಾ:

    ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ರವರು ದೇಶ ಕಂಡ ಧೀಮಂತ ನಾಯಕ ಕಲ್ಯಾಣ ಕರ್ನಾಟಕ ಭಾಗಕ್ಕೆ  ಜೆ 371  ಕಲಾಂ ಜಾರಿಗೆ ತರುವ ಮೂಲಕ ಈ ಭಾಗದ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸಾಬಣ್ಣ ಹಂಚಿನಾಳ ಹೇಳಿದರು.
    ತಾಲೂಕಿನ ಕಾಡಮಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ರವರ  83 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಾಖಲೆಯ ಹತ್ತು ಬಾರಿ ಶಾಸಕರಾಗಿ, ಮೂರು ಬಾರಿ ಸಂಸದರಾಗಿ, ಕೇಂದ್ರ, ರಾಜ್ಯ ಸಚಿವರಾಗಿ, ರಾಜ್ಯಸಭೆ, ಲೋಕಸಭೆ, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕರಾಗಿ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿದ ಏಕೈಕ ವ್ಯಕ್ತಿ ಅಂದರೆ ತಪ್ಪಾಗಲಾಗದು ದೇವರು ಅವರಿಗೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಈ ಸಮಯದಲ್ಲಿ ಹಾರೈಸಿದರು.
    ಅವರ ಅಭಿಮಾನಿಗಳು  ಕೇಕ್ ಕತ್ತರಿಸಿ. ಮಲ್ಲಿಕಾರ್ಜುನ್ ಖರ್ಗೆ ಜಿ ರವರ ಬ್ಯಾನರ್ ಗೆ ಹಾಲಿನ ಅಭಿಷೇಕ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
    ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್  ಮುಖಂಡರುಗಳಾದ ಚಂದ್ರಶೇಖರ್ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ, ದೊಡ್ಡಪ್ಪ ಕಾಡಮಗೇರಾ, ನಾಗಪ್ಪ ಉಲ್ಟಿ ,ಮಲ್ಲು ಯಾದವ್, ರೆಡ್ಡಿ ಆನೂರ, ಹಣಮಂತ ನಾಟೇಕಾರ,  ದೇವೇಂದ್ರಪ್ಪ ದೊರೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು​.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು:ಅಮೀನರಡ್ಡಿ ಯಾಳಗಿ

    • ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್‌ ಪ್ರತಿಭಟನೆ

     

    ಸತ್ಯಕಾಮ ವಾರ್ತೆ ಯಾದಗಿರಿ:-

    ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಮಾತನಾಡಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ನೈತಿಕ ಹೊಣೆ ಹೊತ್ತು, ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ಈ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ ಹಿನ್ನೆಲೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ನವರ ತಲೆದಂಡವಾದರೆ ಸಾಲದು, ಈ ಹಗರಣದ ಕಿಂಗ್ ಪಿನ್ ಯಾರು ಎಂಬುದು ಬಯಲಾಗಬೇಕು, ಆತ್ಮಹತ್ಯೆ ಮಾಡಿಕೊಂಡ ಕಚೇರಿ ಅಧೀಕ್ಷಕ ಚಂದ್ರಶೇಖರ ಕುಟುಂಬಕ್ಕೆ ನ್ಯಾಯ ಸಿಗಬೇಕು, ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅನುಮಾನವಿದೆ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    ಕೇವಲ ಭ್ರಷ್ಟಾಚಾರ ಅಲ್ಲ ಇದು, ಬುಡಕಟ್ಟು ಸಮುದಾಯಗಳ ಹಣವನ್ನು ಕಳ್ಳತನ ಮಾಡಿದ ಸರ್ಕಾರವಿದು, ಇದರ ಕಿಂಗ್ ಪಿನ್ ಯಾರು ಎಂಬುದು ತನಿಖೆಯಾಗಬೇಕು ಎಂದಿದ್ದಾರೆ.

    ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಘವೇಂದ್ರ ಯಂಕ್ಷಿಂತಿ ಮಾತನಾಡಿದ ಅವರು ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಹೈದರಾಬಾದ್ ಮೂಲದ ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಲೋಕಸಭೆ ಚುನಾವಣೆಗೆ ಬಳಸಿದ್ದು ಹಣ ದುರುಪಯೋಗ ಆಗಿದೆ ಹಾಗೂ ಬಾರ್‌ನಲ್ಲಿ ಕುಳಿತು ಕುಡಿದ ಬಿಲ್ ನಿಗಮದ ಹಣ ನೀಡಿ ದುರುಪಯೋಗ ಮಾಡಿದ್ದಾರೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕು.ಲಲಿತಾ ಅನಪುರ, ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ,ಪರುಶುರಾಮ ಕುರಕುಂದಿ,ಮೆಲಪ್ಪ ಗುಳಗಿ,ದೆವಿಂದ್ರನಾಥ ನಾದ,ವೆಂಕಟರಡ್ಡಿ ಅಬ್ಬೆತುಮಕೂರು,ಬಸವರಾಜ ವಿಭೂತಿಹಳ್ಳಿ,ದೇವರಾಜ ನಾಯಕ, ನಗರಸಭೆ ಸದಸ್ಯ ವಿಲಾಸ ಪಾಟೀಲ್ ಮತ್ತು ಸ್ವಾಮಿದೇವ ದಾಸನಕೇರಿ, ಶ್ರೀದೇವಿ ಶೆಟ್ಟಿಹಳ್ಳಿ,ಮಂಜುನಾಥ ಜಡಿ, ವೀಣಾ ಮೋದಿ, ಶಂಕರ್ ಕರಣಗಿ,

    ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಶಹಾಪುರ ಮಂಡಲ ಅಧ್ಯಕ್ಷ ಚಂದ್ರಶೇಖರ ಕಂಬಾರ, ಮಲ್ಲಿಕಾರ್ಜುನ ಕಟ್ಟಿಮನಿ,ಕರಬಸಪ್ಪ ಬಿಳಾರ, ಗೋವಿಂದಪ್ಪ ಖಾನಾಪುರ, ಶಿವು ಕೊಂಕಲ,ರಾಜು ಸ್ವಾಮಿ ಅಲಂಪಲ್ಲಿ, ಪ್ರಭಾವತಿ ಕಲಾಲ,ಭೀಮಬಾಯಿ ಶೆಂಡಿಗಿ, ಮಲ್ಲು ಕೋಲಿವಾಡ,ಸಾಬು ಚಂಡ್ರಕಿ ಸೇರಿದಂತೆ ಅನೇಕರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

  • ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ

    ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ

    
    
    
    ಸತ್ಯಕಾಮ ವಾರ್ತೆ ಯಾದಗಿರಿ:

    ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿಧ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ಪಟ್ಟರು.

    ಗುರುಮಿಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ ೨೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

    ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆ ಆದ್ಯತೆ ನೀಡುವ ಜೊತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿಧ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜೊತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

    ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ವಸತಿ ಶಾಲೆಯ ಶಿಕ್ಷಕರಿಗೆ ಸಂಬಳ ನೀಡಲಾಗುತ್ತಿದೆ, ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಶಾಲಾ ಕೋಣೆಗಳನ್ನು ಮಂಜೂರು ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರು, ಜಿಲ್ಲೆಯಲ್ಲಿ ೩ ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ ೨ ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

    ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿಧ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು,ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ ೩ ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.

    ಈ ಹಿಂದೆ ಶಾಸಕರಾಗಿದ್ದ ನಮ್ಮ ತಂದೆ ದಿ. ನಾಗನಗೌಡ ಕಂದಕೂರ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು, ಅವರ ಜೊತೆಯಲ್ಲಿ ನಾನೂ ಕೂಡ ಜನರ ಹಾಗೂ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿದ ಪರಿಣಾಮ ನೀವೂ ನನ್ನನ್ನೂ ಶಾಸಕನಾಗಿ ಆಯ್ಕೆ ಮಾಡಿದ್ದೀರಿ, ಈ ಭಾಗದ ಹಳ್ಳಿಗಳ ಪ್ರಗತಿಗೆ ಆದ್ಯತೆ ಮೇರೆಗೆ ನಾನೂ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ವೇದಿಕೆ ಮೇಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷಿö್ಮ, ಪ್ರಾಂಶುಪಾಲೆ ರಮಾಭಾಯಿ, ಗುರುಮಿಠಕಲ್ ಪಟ್ಟಣ ಪಂಚಾಯತ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಗಿರಿನಾಥರಡ್ಡಿ ಚಿಂತಗುAಟಾ, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.