ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ
Latest News

ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ

Satyakam NewsDesk
Last updated: 2024/06/24 at 5:40 PM
Satyakam NewsDesk
Share
3 Min Read
SHARE



ಸತ್ಯಕಾಮ ವಾರ್ತೆ ಯಾದಗಿರಿ:

ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿಧ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ಪಟ್ಟರು.

ಗುರುಮಿಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ ೨೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆ ಆದ್ಯತೆ ನೀಡುವ ಜೊತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿಧ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜೊತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ವಸತಿ ಶಾಲೆಯ ಶಿಕ್ಷಕರಿಗೆ ಸಂಬಳ ನೀಡಲಾಗುತ್ತಿದೆ, ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಶಾಲಾ ಕೋಣೆಗಳನ್ನು ಮಂಜೂರು ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರು, ಜಿಲ್ಲೆಯಲ್ಲಿ ೩ ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ ೨ ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿಧ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು,ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ ೩ ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.

ಈ ಹಿಂದೆ ಶಾಸಕರಾಗಿದ್ದ ನಮ್ಮ ತಂದೆ ದಿ. ನಾಗನಗೌಡ ಕಂದಕೂರ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು, ಅವರ ಜೊತೆಯಲ್ಲಿ ನಾನೂ ಕೂಡ ಜನರ ಹಾಗೂ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿದ ಪರಿಣಾಮ ನೀವೂ ನನ್ನನ್ನೂ ಶಾಸಕನಾಗಿ ಆಯ್ಕೆ ಮಾಡಿದ್ದೀರಿ, ಈ ಭಾಗದ ಹಳ್ಳಿಗಳ ಪ್ರಗತಿಗೆ ಆದ್ಯತೆ ಮೇರೆಗೆ ನಾನೂ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ವೇದಿಕೆ ಮೇಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷಿö್ಮ, ಪ್ರಾಂಶುಪಾಲೆ ರಮಾಭಾಯಿ, ಗುರುಮಿಠಕಲ್ ಪಟ್ಟಣ ಪಂಚಾಯತ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಗಿರಿನಾಥರಡ್ಡಿ ಚಿಂತಗುAಟಾ, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

apvc-iconTotal Visits: 44
apvc-iconAll time total visits: 30014

You Might Also Like

ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

TAGGED: gurmitkal, mla kandakura, yadgir
Satyakam NewsDesk June 24, 2024 June 24, 2024
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?
Next Article ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

Stay Connected

Facebook Like
Twitter Follow
Instagram Follow
Youtube Subscribe

Latest News

ವಿಶ್ವದಲ್ಲೇ ಮೊದಲು ಹೊಸ ಫೀಚರ್ಸ್‌ಗಳೊಂದಿಗೆ iQOO 15 ಲಾಂಚ್! 
ಮೊಬೈಲ್ October 22, 2025
ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!
Sports October 22, 2025
ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ
Crime October 22, 2025
ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ
ಕಲಬುರ್ಗಿ October 22, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube