ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ
Latest News

ಕೃಷ್ಣಾ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

Satyakam NewsDesk
Last updated: 2024/07/18 at 11:46 AM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ :

ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಮುನ್ಸೂಚನೆ ನೀಡಲಾಗುತ್ತಿದೆ ಎಂದು ನಾರಾಯಣಪೂರ ಕೃ.ಭಾ.ಜ.ನಿ.ನಿ ಅಧೀಕ್ಷಕ ಅಭಿಯಂತರರು ಅವರು ತಿಳಿಸಿದ್ದಾರೆ.

2024-25ನೇ ಸಾಲಿನ ಮುಂಗಾರು ಪ್ರಾರಂಭವಾಗಿದ್ದು, ಮಹಾರಾಷ್ಟç ರಾಜ್ಯದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಪ್ರಾರಂಭವಾಗಿರುತ್ತದೆ. ಆಲಮಟ್ಟಿ ಜಲಾಶಯದಿಂದ ನಾರಾಯಪೂರ ಜಲಾಶಯಕ್ಕೆ 40,000 ಕ್ಯೂಸೆಕ್ಸ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದೆ. 2024ರ ಜುಲೈ 16 ರಂದು ನಾರಾಯಣಪೂರ ಜಲಶಯದ ನೀರಿನ ಮಟ್ಟ 490.18 ಮೀ.ಇದ್ದು, ಜಲಾಶಯದ ನೀರಿನ ಸಂಗ್ರಹಣೆ 24.675 ಟಿಎಂಸಿ ಇರುತ್ತದೆ ಹಾಗೂ ಜಲಾಶಯಕ್ಕೆ 40,000 ಕ್ಯೂಸೆಕ್ಸ್ ನೀರಿನ ಒಳಹರಿವು ಬರುತ್ತಿದೆ.

ನಾರಾಯಣಪೂರ ಜಲಾಶಯಕ್ಕೆ ಬರುವ ನಿರೀಕ್ಷಿತ ಒಳಹರಿವಿನ ಮಾಹಿತಿಯನ್ನು ಕೇಂದ್ರ ಜಲ ಆಯೋಗ ಮೂಲಕ ಪಡೆಯಲಾಗುತ್ತಿದೆ. ಅದೇ ರೀತಿ ನಾರಾಯಣಪೂರ ಜಲಾಶಯದ ಹಿಂಭಾಗದ ಜಲಾಶಯಗಳಾದ ಆಲಮಟ್ಟಿ ಜಲಾಶಯ ಹಾಗೂ ನವಿಲು ತೀರ್ಥ ಜಲಾಶಯಗಳಿಂದ ಬಿಡಬಹುದಾದ ಹೊರಹರಿವಿನ ಮಾಹಿತಿಯನ್ನು ಸಂಬAಧಪಟ್ಟ ಅಧಿಕಾರಿಗಳಿಂದ ಮುಂಜಾಗ್ರತಾ ಕ್ರಮಕ್ಕಾಗಿ ಪಡೆಯಲಾಗುತ್ತಿದ್ದು, ಪ್ರವಾಹ ನಿಯಂತ್ರಣ ಕಾರ್ಯಕ್ಕಾಗಿ ನಾರಾಯಣಪೂರ ಜಲಾಶಯವನ್ನು ಸನ್ನದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ.

ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆಗೊಳಿಸುವ ಸಾಧ್ಯವಿರುವ ಕಾರಣ ನಾರಾಯಣಪೂರ ಜಲಾಶಯಕ್ಕೆ ಹರಿದು ಬರುವ ಒಳಹರಿವು ಪ್ರಮಾಣಕ್ಕನುಗುಣವಾಗಿ ನಾರಾಯಣಪೂರ ಜಲಾಶಯದಿಂದ ಕೆಳಭಾಗದ ಕೃಷ್ಣಾ ನದಿ ಪಾತ್ರಕ್ಕೆ ಯಾವುದೇ ಕ್ಷಣದಲ್ಲಿ ಪ್ರವಾಹದ ನೀರನ್ನು ಹರಿಬಿಡುವ ಸಾಧ್ಯತೆ ಇರುತ್ತದೆ.

ನಾರಾಯಣಪೂರ ಜಲಾಶಯದ ಕೆಳಭಾಗದ ಕೃಷ್ಣಾ ನದಿ ಪಾತ್ರದ ಪ್ರದೇಶದಲ್ಲಿರುವ ಗ್ರಾಮಗಳ ಜನರು, ರೈತರು ಜಾಗ್ರತೆಯಿಂದ ಇರಲು ಹಾಗೂ ತಮ್ಮ ಜಾನುವಾರುಗಳು, ಪಂಪ್‌ಸೆಟ್ ಇತ್ಯಾದಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳಲು ಹಾಗೂ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಪ್ರವಾಹದ ಮುನ್ಸೂಚನೆ ನೀಡಲು ಸಂಬAಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲು ತಿಳಿಸಿದೆ.

ಪ್ರವಾಹ ಮುನ್ನಚ್ಚರಿಕೆ ಕ್ರಮಗಳಿಗಾಗಿ ಮನವಿ 1,00,000 ಕ್ಯೂಸೆಕ್ಸ ವರೆಗೆ ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳಿಗೆ ಸುರಕ್ಷತೆಗಾಗಿ ನದಿಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗ್ರತೆ ನೀಡುವುದು. 1,50,000 ಕ್ಯೂಸೆಕ್ಸ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು. 2,50,000 ಕ್ಯೂಸೆಕ್ಸ ಹೂವಿನಹೆಡಗಿ ಸೇತುವೆ (ದೇವದುರ್ಗಾ-ಕಲಬುರ್ಗಿ ರಾಜ್ಯ ಹೆದ್ದಾರಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು.

 

3,00,000 ಕ್ಯೂಸೆಕ್ಸ ಸುರಪುರ ತಾಲೂಕಿನ ನೀಲಕಂಠರಾಯನಗಡ್ಡಿ ಗ್ರಾಮ ನಡುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಗುರ್ಜಾಪುರ ಬ್ಯಾರೇಜ್ ಹಾಗೂ ಸೇತುವೆ ಮುಳುಗಡೆಯಾಗಬಹುದು. 3,90,000 ಕ್ಯೂಸೆಕ್ಸ ಮೇಲ್ಪಟ್ಟು ಕೃಷ್ಣಾ ನದಿ ಇಕ್ಕೆಲಗಳಲ್ಲಿ ಪ್ರವಾಹ ಉಕ್ಕಿ ಹರಿಯುವುದರಿಂದ, ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಸುರಕ್ಷತೆ ಕುರಿತು ಮುನ್ನೆಚ್ಚರಿಕೆಯಿಂದಿರಲು ಸೂಚಿಸುವುದು. 5,40,000 ಕ್ಯೂಸೆಕ್ಸ್ ಯರಗೋಡಿ ಸೇತುವೆ, ಜಲದುರ್ಗಾ ಸೇತುವೆ ಮತ್ತು ಗೂಗಲ್ ಗ್ರಾಮದ ಹತ್ತಿರ ಗೂಗಲ್ ಬ್ಯಾರೇಜ್ ಮುಳುಗಡೆಯಾಗಬಹುದು. 7,50,000 ಕ್ಯೂಸೆಕ್ಸ ಸುರಪುರ ತಾಲೂಕಿನ ರಾಷ್ಟಿçÃಯ ಹೆದ್ದಾರಿಯ ತಿಂಥಣಿ ಸೇತುವೆ ಮುಳುಗಡೆಯಾಗಿ ವಾಹನ ಸಂಚಾರ ಸ್ಥಗಿತಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

apvc-iconTotal Visits: 17
apvc-iconAll time total visits: 25262

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 18, 2024 July 18, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ
Next Article ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube