ಸತ್ಯಕಾಮ ವಾರ್ತೆ ತಾಳಿಕೋಟೆ :
ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು. ಹೊರಗಿನ ಆಕರ್ಷಣೆಗೆ ಮತ್ತು ಒತ್ತಡಗಳಿಗೆ ಒಳಗಾಗುತ್ತಿರುವ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಶಿಸ್ತಿನಡಿ ತರಬೇಕಾದರೆ ಶಾಲೆ ಮತ್ತು ಮನೆ ಪರಸ್ಪರ ಪೂರಕವಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಜೆ ಎಸ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸಾಹೇಬಗೌಡ ಗಬಸಾವಳಗಿ ಹೇಳಿದರು.
ತಾಲೂಕಿನ ಕೊಡಗಾನೂರ ಗ್ರಾಮದ ಬೇಲೂರು ಕ್ರಾಸ್ ಹತ್ತಿರ ಇರುವ ಜೆ ಎಸ್ ಎಸ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ “ಪಾಲಕರ ನಮನ” ಎಂಬ ಪಾಲಕರ ಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿ, ಪೂರ್ವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಈ ಎರಡು ಹಂತಗಳು ವಿದ್ಯಾರ್ಥಿಯ ಕಲಿಕಾ ಜೀವನದಲ್ಲಿ ಪ್ರಮುಖವಾದ ಘಟ್ಟ. ಈ ಹೊತ್ತಿನಲ್ಲಿ ಪಾಲಕರು, ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಒಟ್ಟಿಗೆ ಕೆಲಸ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಜತೆಗೆ ಒಳ್ಳೆಯ ಸಂಸ್ಕಾರ ನೀಡುವದು ಅನಿವಾರ್ಯತೆ ಇದೆ. ತಂದೆ ತಾಯಿ ಮಕ್ಕಳಿಗೆ ಜನ್ಮ ಕೊಟ್ಟರೆ,ಶಿಕ್ಷಕರು ಮಕ್ಕಳ ಜೀವನದಲ್ಲಿ ದಿಕ್ಕು ತೋರಿಸುವ ದೀಪದಂತೆ. ಅವರು ಮಕ್ಕಳಿಗೆ ಕೇವಲ ಪಾಠಗಳನ್ನು ಮಾತ್ರ ಕಲಿಸುವುದಿಲ್ಲ, ಬದಲಾಗಿ ಅವರ ಭವಿಷ್ಯವನ್ನು ರೂಪಿಸು ಕಾರ್ಯ ಮಾಡುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿದ್ದನಗೌಡ ಗಬಸಾವಳಗಿ, ವಿಜಯಲಕ್ಷ್ಮಿ ಸಾಗಬಸಾವಳಗಿ, ಮಹದೇವ ತಳವಾರ,ವಿನಾಯಕ ಪಟಗಾರ,ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಅನೇಕ ಪಾಲಕರು ಉಪಸ್ಥಿತರಿದ್ದರು.
- Advertisement -

