ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ವೀರಪ್ಪನ್ ಪುತ್ರಿ ವಿದ್ಯಾರಾಣಿ ಈಗ ಎಲ್ಲಿದ್ದಾರೆ? ಹೇಗಿದ್ದಾರೆ?
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ವೀರಪ್ಪನ್ ಪುತ್ರಿ ವಿದ್ಯಾರಾಣಿ ಈಗ ಎಲ್ಲಿದ್ದಾರೆ? ಹೇಗಿದ್ದಾರೆ?
Special News

ವೀರಪ್ಪನ್ ಪುತ್ರಿ ವಿದ್ಯಾರಾಣಿ ಈಗ ಎಲ್ಲಿದ್ದಾರೆ? ಹೇಗಿದ್ದಾರೆ?

Satyakam NewsDesk
Last updated: 2025/10/29 at 6:46 AM
Satyakam NewsDesk
Share
2 Min Read
SHARE

ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ವೈರಲ್‌ ಆಗಿರುವ ಒಂದು ವಿಡಿಯೋ ತುಣುಕಿನಿಂದ ಕಾಡಿನ ಕಳ್ಳ ವೀರಪ್ಪನ್ ಅವರ ಪುತ್ರಿಯರು ಮತ್ತೆ ಸುದ್ದಿಯಲ್ಲಿದ್ದಾರೆ. ಅಂಕಣಕಾರ ಶ್ರೀಕಂಠ ಬಾಳಗಂಚಿ ನೀಡಿರುವ ಸಂದರ್ಶನದ ಒಂದು ಭಾಗದಲ್ಲಿ ಅವರು “ವೀರಪ್ಪನ್ ಸತ್ತ ನಂತರ ಆರ್‌ಎಸ್ ಎಸ್ ಸಂಸ್ಥೆ ಅವರ ಮಗಳನ್ನು ಶಿಕ್ಷಣದ ದಾರಿಗೆ ತಂದಿತು. ಇಂದು ಅವರು ವಕೀಲೆಯಾಗಿ ಸಮಾಜಕ್ಕೆ ಸೇವೆ ಮಾಡುತ್ತಿದ್ದಾರೆ” ಎಂದು ಹೇಳಿರುವುದು ಜನರ ಗಮನ ಸೆಳೆದಿದೆ.

ಈ ವಿಡಿಯೋ ಪ್ರಸಾರವಾದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವೀರಪ್ಪನ್ ಪುತ್ರಿಯರು ಈಗ ಎಲ್ಲಿದ್ದಾರೆ, ಹೇಗಿದ್ದಾರೆ ಎಂಬ ಕುತೂಹಲ ಚರ್ಚೆಗೆ ಗ್ರಾಸವಾಗಿದೆ ಎಂದು ಹೇಳಬಹುದು.

ವೀರಪ್ಪನ್ ಅವರಿಗೆ ಇಬ್ಬರು ಹೆಣ್ಣುಮಕ್ಕಳು ವಿದ್ಯಾರಾಣಿ ಮತ್ತು ಪ್ರಭಾರಾಣಿ. ತಂದೆಯ ಸಾವಿನ ನಂತರ ಇಬ್ಬರ ಬದುಕು ಸಂಪೂರ್ಣ ಬದಲಾಗಿದೆ. ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡ ಈ ಇಬ್ಬರು ಮಗಳುಗಳು ಜೀವನದ ನೂರಾರು ಕಠಿಣ ಹಾದಿಗಳನ್ನು ಎದುರಿಸಿ ತಮ್ಮದೇ ದಾರಿಯಲ್ಲಿ ಮುಂದುವರಿದಿದ್ದಾರೆ.

ವಿದ್ಯಾರಾಣಿಯವರು ವಾರಾಣಸಿಯಲ್ಲಿರುವ ಆರ್‌ಎಸ್ಸೆಸ್‌ನ ಕಲ್ಯಾಣ ಆಶ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ ಬೆಂಗಳೂರಿನ ಕಾಲೇಜಿಲ್ಲಿ ಕಾನೂನು ಪದವಿ ಪೂರ್ಣಗೊಳಿಸಿ ವಕೀಲೆಯಾದರು. 2024ರ ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ಅವರು ಈಗ ಕೃಷ್ಣಗಿರಿಯಲ್ಲೇ ನೆಲೆಸಿ ವಕೀಲೆಯಾಗಿ ಮತ್ತು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ದ ಸ್ಟೇಟ್ಸ್‌ಮನ್ ವರದಿ ಪ್ರಕಾರ, ವಿದ್ಯಾರಾಣಿ ದಲಿತ ಕ್ರೈಸ್ತ ಯುವಕನನ್ನು ಮದುವೆಯಾಗಿದ್ದು, ಸ್ಥಳೀಯವಾಗಿ ಶಾಲೆ ನಡೆಸುತ್ತಿದ್ದಾರೆ.

ತಂದೆಯ ದುಷ್ಕೀರ್ತಿ ಹಿನ್ನಲೆಯಲ್ಲಿ ಸಮಾಜದಿಂದ ದೂರವಿದ್ದ ಅವರು, ಶಿಕ್ಷಣ ಮತ್ತು ಸೇವೆಯ ಮೂಲಕ ಹೊಸ ಗುರುತನ್ನು ಗಳಿಸಿದ್ದಾರೆ. ವಿದ್ಯಾರಾಣಿ ಹಿಂದೆ ಬಿಜೆಪಿಗೆ ಸೇರಿದ್ದರು. ನಂತರ 2024ರ ಲೋಕಸಭಾ ಚುನಾವಣೆಗೆ ಮುನ್ನ ಪಕ್ಷ ತೊರೆದು ನಾಮ್ ತಮಿಳರ್ ಕಚ್ಚಿ ಪಕ್ಷದ ಟಿಕೆಟ್‌ನಿಂದ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸಿದರು. ಆದರೆ ಆ ಚುನಾವಣೆಯಲ್ಲಿ ಸೋಲು ಕಂಡರು.

ವೀರಪ್ಪನ್ ಅವರ ಕಿರಿಯ ಮಗಳು ಪ್ರಭಾರಾಣಿ ತಂದೆ ಮೃತಪಟ್ಟಾಗ ಕೇವಲ 11 ವರ್ಷದವಳು. ಆಕೆಯ ಶಿಕ್ಷಣದ ಜವಾಬ್ದಾರಿಯನ್ನು ಚೆನ್ನೈನ ವಕೀಲರೊಬ್ಬರು ಹೊತ್ತಿದ್ದರು. ಪ್ರಭಾರಾಣಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಆಕೆಯ ಪ್ರಸ್ತುತ ಜೀವನದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ.

ವೀರಪ್ಪನ್ ಪುತ್ರಿಯರು ತಂದೆಯ ನೆರಳಿನಿಂದ ದೂರವಾಗಿ, ಶಿಕ್ಷಣ, ಗೌರವ ಮತ್ತು ಸಮಾಜಸೇವೆಯ ಜೀವನ ಕಟ್ಟಿಕೊಂಡಿದ್ದಾರೆ. ಅರಣ್ಯದಲ್ಲಿ ಹುಟ್ಟಿ ಬದುಕಿದ ತಂದೆಯ ಮಕ್ಕಳು ಇಂದಿನ ದಿನಗಳಲ್ಲಿ ಶಿಕ್ಷಣದ ಬೆಳಕಿನ ಮೂಲಕ ಹೊಸ ಜೀವನ ಕಟ್ಟಿಕೊಂಡಿರುವುದು ಮನಮುಟ್ಟುವ ಸಂಗತಿ.

apvc-iconTotal Visits: 8
apvc-iconAll time total visits: 31039

You Might Also Like

ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!

Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ

ರಾಜ್ಯದ ಜನತೆಗೆ ಮಹತ್ವದ ಮಾಹಿತಿ : ಜಾತಿ ಗಣತಿ ಸಮೀಕ್ಷೆಯಲ್ಲಿ ನಿಮ್ಮ ಸಹಕಾರ ಅಗತ್ಯ

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!

TAGGED: Politics, Veerappan, Veerappan's daughter Vidyarani, Vidyarani
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ
Next Article 5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ

Stay Connected

Facebook Like
Twitter Follow
Instagram Follow
Youtube Subscribe

Latest News

5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ
Latest News October 29, 2025
ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ
Politics October 28, 2025
ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ
Latest News National October 28, 2025
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ
Crime Entertainment October 27, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube