ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ವಿಶ್ವ ಹಿರಿಯ ನಾಗರಿಕರ ದಿನಾಚರಣೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ವಿಶ್ವ ಹಿರಿಯ ನಾಗರಿಕರ ದಿನಾಚರಣೆ
Cultural

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯ ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

Satyakam NewsDesk
Last updated: 2025/10/03 at 5:31 PM
By Satyakam NewsDesk
Share
2 Min Read
SHARE

ಯಾದಗಿರಿ: ಹಿರಿಯರಿಂದಲೇ ಎಲ್ಲರೂ ಎನ್ನುವ‌ ಸತ್ಯ ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

Contents
Related posts:ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ‌ ಪದವಿ ಮಹಾವಿದ್ಯಾಲಯದ‌ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದು ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಅಧಿಕವಾಗಿದೆ. ಅವರು ನಮ್ಮ ತಂದೆ,ತಾಯಿ, ಅಜ್ಜ,ಅಜ್ಜಿ ಅಲ್ಲದೆ ಪ್ರತಿ ಮನೆಯ ಹಿರಿಯ ಜೀವಿಗಳಾಗಿದ್ದಾರೆ. ಅಂತಹ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕೆಂದು ಶಾಸಕರು ಮಾರ್ಮಿಕವಾಗಿ ನುಡಿದರು.

ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೇ, ಅವರ ಮಾರ್ಗದರ್ಶನ, ಸಲಹೆ ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆಯೇ ನಮ್ಮನ್ನು ತಿದ್ದಿ,ತೀಡಿ‌ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ, ಆದರೇ ಅದನ್ನು ಪಾಸಿಟಿವ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ಮಾಡುವುದೇ ಹೆಚ್ಚಾಗಿದೆ. ಇದು ನಿಲ್ಲಬೇಕು, ಅವರೆಂದಿಗೂ ನಮ್ಮ ಜೊತೆಯಲ್ಲಿಯೇ ಇರುವಂತಹ ವಾತಾವರಣ ಮೂಡಿಸಬೇಕೆಂದು ಪ್ರಸಕ್ತ ಸನ್ನಿವೇಶವನ್ನು ಶಾಸಕ ಪಾಟೀಲ್ ವಿವರಿಸಿದರು.

ಹಿರಿಯರೇ ಆಸ್ತಿ, ಆದರೇ ಇಂದು ಬಹಳಷ್ಟು ಜನರು ಅವರನ್ನು ಸಾಕಲು ಹಿಂದೆ,ಮುಂದೆ ನೋಡಿ ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತವಿದ್ದಾಗಲೇ ಒಂಟಿ ಮಾಡಿ ನೋವು ಕೊಡುತ್ತಿದ್ದೇವೆ. ಹೀಗೆ ಮಾಡುವವರು ಒಮ್ಮೆ ಆಲೋಚನೆ ಮಾಡಬೇಕು, ಮುಂದೆ ನಾವೂ ಕೂಡಾ ಹಿರಿಯರಾಗುತ್ತೇವೆ, ಆಗ ನಮ್ಮ ಮಕ್ಕಳು ನಮ್ಮನ್ನು ಅನಾಥರಾಗಿ ಮಾಡಿದರೇ ಪರಸ್ಥಿತಿ ಏನಾಗುತ್ತದೆ ಎಂಬುವುದನ್ನು ತಿಳಿದುಕೊಂಡು ಗೌರವದಿಂದ ನಡೆಸಿಕೊಳ್ಳಬೇಕೆಂದು‌ ಶಾಸಕ ಚನ್ನಾರಡ್ಡಿ ಮನಮುಟ್ಟುವಂತೆಯೇ ತಿಳಿಸಿದರು.

ಕಾರ್ಯಕ್ರಮದಲ್ಲಿ‌ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ಜಿಲ್ಲಾ ಅಧಿಕಾರಿ‌ ಶರಣಪ್ಪ ಪಾಟೀಲ್ ಮಾತನಾಡಿ, ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಹಿರಿಯರಾದ ಸಿ.ಎಮ್‌ ಪಟ್ಟೇದಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯರಾದ ನಿವೃತ್ತ ಎಎಸ್ ಐ ಸಾಮೂವೆಲ್, ಕಂದಾಯ ಇಲಾಖೆ ಲಕ್ಷ್ಮಣ ದೇಗಲಮಡಿ, ನಿರಾವರಿ ಇಲಾಖೆ ಮಲ್ಲಿನಾಥ ಮಲಗೊಂಡ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ವಾಹೀದ್ ಮಿಯಾ,‌ ಶಿಕ್ಷಣ ಕ್ಷೇತ್ರ ಚಂದ್ರಾಮಪ್ಪ ಬಳಿಚಕ್ರ, ಸಮಾಜ ಸೇವಕ ಸಭಾಪತಿ ಮಹಾದೇವಪ್ಪ ಕಡ್ಡಿ ಅಬ್ಬೆತುಮಕೂರು, ಸಮಾಜ ಸೇವೆ ಶರಣಪ್ಪ ಜಾಕಾ, ನಿವೃತ್ತ ಶಿಕ್ಷಕರಾದ ಸಿದ್ದಪ್ಪ ಬಬಲಾದ, ಮಾಜಿ ನಗರಸಭೆ ಸದಸ್ಯರಾದ ಸಂಗಣ್ಣ ಬುಕಿಸ್ಟಗಾರ ಶಹಾಪುರ, ಸಮಾಜ ಸೇವೆ ನಿರ್ಮಲ್ ಕುಮಾರ ಜೈನ್, ಸಮಾಜ ಸೇವಕರಾದ ಬಿ.ಸಿ ಪಾಟೀಲ್, ನಿವೃತ್ತ ಶಿರಸ್ತೆದಾರ ನ್ಯಾಯಾಂಗ ಇಲಾಖೆ ಭೀಮರಾಯ, ಸಮಾಜ ಸೇವಕ ಮಾಣಿಕಮ್ಮ ಸೋಮಯ್ಯ ಸ್ವಾಮೀ, ಸಮಾಜ ಸೇವಕ ಶರಣಪ್ಪ ಆರ್ ಬಡಿಗೇರ್, ಸಮಾಜ ಸೇವಕ ಯಂಕೋಬಾ ಚಿಂತನಳ್ಳಿ ಅವರಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನಗರಠಾಣೆ ಪಿಎಸ್ ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಬಂಡೆಪ್ಪ‌ ಆಕಳ, ಸಿ.ಎಮ್ ಪಟೇದಾರ್, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಸುಭಾಶ್ಚಂದ್ರ ಕೌಲಗಿ ಇದ್ದರು.

apvc-iconTotal Visits: 10
apvc-iconAll time total visits: 29777

Related posts:

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

Technology

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

Cultural

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

Cultural

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

Cultural

You Might Also Like

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

Satyakam NewsDesk October 3, 2025 October 3, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ
Next Article ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube