ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ
Politics

ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ

Sukanya
Last updated: 2025/12/12 at 3:39 PM
By Sukanya
Share
1 Min Read
SHARE

ಕರ್ನಾಟಕ ರಾಜಕೀಯದ ವಾತಾವರಣ ಕಳೆದ ಕೆಲವು ವಾರಗಳಿಂದ ನಾಯಕತ್ವ ಬದಲಾವಣೆಯ ಚರ್ಚೆಯಿಂದ ಗದ್ದಲಗೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವಿನ ಅಧಿಕಾರ ಹಸ್ತಾಂತರದ ಪ್ರಶ್ನೆ ಹಲವು ಬಾರಿ ಸುದ್ದಿಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದರೂ, ಎರಡೂ ನಾಯಕರು ಈ ವಿಚಾರವನ್ನು ತಣ್ಣಗಾಗಿಸುವ ಪ್ರಯತ್ನ ನಡೆಸಿದ್ದರು. ಹೈಕಮಾಂಡ್‌ನಿಂದಲೂ ಸ್ಪಷ್ಟ ಸೂಚನೆಗಳು ಬಂದ ನಂತರ ಗಾಸಿಪ್‌ಗಳಿಗೆ ಕಡಿವಾಣಬಿದ್ದಂತೆ ಕಂಡಿತ್ತು. ಆದರೆ ಇದೀಗ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ನಾಯಕತ್ವ ಬದಲಾವಣೆ ಇಲ್ಲ ಹೈಕಮಾಂಡ್‌ ಹೇಳಿಕೆ ಸ್ಪಷ್ಟ: ಯತೀಂದ್ರ

ಮಾಧ್ಯಮಗಳೊಂದಿಗೆ ಮಾತನಾಡಿದ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಕೂಡಾ ಅದನ್ನು ಸ್ಪಷ್ಟಪಡಿಸಿದೆ. ನನ್ನ ತಂದೆಯೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ವತಃ ಪಕ್ಷದ ಒಳಗಿನ ನಾಯಕರಿಗೆ ಹೈಕಮಾಂಡ್‌ ಹೇಳುವವರೆಗೆ ನಾನೇ ಸಿಎಂ ಎಂದು ಸೂಚನೆ ನೀಡಿದ್ದರೂ, ಈ ವಿಷಯದ ಮೇಲೆ ಮಾತನಾಡಬಾರದು ಎಂಬ ನಿರ್ದೇಶನ ನೀಡಲಾಗಿತ್ತು. ಆದರೆ ಪುತ್ರ ಯತೀಂದ್ರ ಅವರ ನೇರ ಹೇಳಿಕೆ ಮತ್ತೆ ರಾಜಕೀಯ ಚರ್ಚೆಗೆ ಹೊಸ ಆಯಾಮ ತಂದಿದೆ.

ಬ್ರೇಕ್‌ಫಾಸ್ಟ್‌ ರಾಜಕೀಯ ಸಿಎಂ ಡಿಕೆಶಿ ಭೇಟಿ ಬಳಿಕ ಶಾಂತಿ ಕಂಡ ರಾಜಕೀಯ:

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಎರಡು ಬಾರಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿತ್ತು. ಈ ಭೇಟಿಯ ಬಳಿಕ ಇಬ್ಬರೂ ನಾಯಕರೂ ಒಂದೇ ವೇದಿಕೆಯಲ್ಲಿ ಬಂದು, ಸರ್ಕಾರ ಸ್ಥಿರವಾಗಿದೆ, ಹೈಕಮಾಂಡ್‌ ಹೇಳಿಕೆಯ ಮೇರೆಗೆ ಎಲ್ಲವೂ ನಡೆಯುತ್ತದೆ ಎಂದು ತಿಳಿಸಿದ್ದರು. ಆದರೆ ಈಗ ಯತೀಂದ್ರ ಅವರ ಹೊಸ ಹೇಳಿಕೆ ಮತ್ತೆ ಕೋಲಾಹಲಕ್ಕೆ ಕಾರಣವಾಗಿದ್ದು, ಕುರ್ಚಿ ಕಿತ್ತಾಟ ವಿಚಾರವನ್ನು ಮತ್ತೊಮ್ಮೆ ಸಾರ್ವಜನಿಕ ಚರ್ಚೆಗೆ ತಳ್ಳಿದೆ.

apvc-iconTotal Visits: 0
apvc-iconAll time total visits: 33.4k

You Might Also Like

‘ಶಕ್ತಿ’ ಯೋಜನೆ:NWKRTCಗೆ  ಹೊರಲಾರದ ಭಾರ!

ಆರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ ಸರ್ಕಾರ

ಡಿಕೆಶಿ ಸಿಎಂ ಆಗಿಯೇ ಬಿಡ್ತಾರಾ: ಕೆ.ಎನ್. ರಾಜಣ್ಣ ಪ್ರಶ್ನೆ

“ಕ್ಯಾಮೆರಾದಲ್ಲಿ ಸೆರೆ ಹಿಡಿದು ನಿಮ್ಮ ಮನೆ ಮುಂದೆ ಕಸ ತಂದು ಹಾಕ್ತೀನಿ” : ಡಿಕೆಶಿ ಕಠಿಣ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಂದ ಬೇರೆ ಅನುದಾನಗಳಿಗೆ ಅಡ್ಡಿಯಾಗುತ್ತಿದೆ- ಜಮೀರ್ ಅಹ್ಮದ್

TAGGED: Congress, Statement, Yathindra Siddaramaiah
Sukanya December 12, 2025 December 12, 2025
Share This Article
Facebook Twitter Whatsapp Whatsapp Telegram Copy Link Print
Share
Previous Article “ಕ್ರಿಕೆಟ್ ಬಿಟ್ರೆ ನನಗೆ ಬೇರೇನೂ ಇಷ್ಟವಿಲ್ಲ” – ಸ್ಮೃತಿ ಮಂದಾನಾ
Next Article IND vs SA :ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ ಸೂರ್ಯ ಪಡೆ

Stay Connected

Facebook Like
Twitter Follow
Instagram Follow
Youtube Subscribe

Latest News

ಸದನದಲ್ಲೇ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ!
State December 14, 2025
ಹೊಸ ಆರು ತಾಲೂಕುಗಳು ಸೇರ್ಪಡೆ ; ರೂಪುಗೊಳ್ಳಲಿದೆ ‘ಹೊಸ ಬೆಂಗಳೂರು’
State December 14, 2025
ಬೆಂಗಳೂರು ಮೆಟ್ರೋಗೆ ದೇಶದ ಮೊದಲ ‘ಮೇಡ್‌ಇನ್‌ಇಂಡಿಯಾ’ ಚಾಲಕರಹಿತ ರೈಲು
State Technology December 12, 2025
₹11,718 ಕೋಟಿ ಬಜೆಟ್ — 2027ರಲ್ಲಿ ಭಾರತದ ಮೊದಲ ಸಂಪೂರ್ಣ ಡಿಜಿಟಲ್ ಜನಗಣತಿ
National December 12, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube