
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಬಿರಾದಾರ ಮಾತನಾಡಿ, ಏಡ್ಸ್ಗೆ ಚಿಕಿತ್ಸೆ ಸಾಧ್ಯ. ಆದರೆ ಸಂಪೂರ್ಣ ಗುಣಮುಖರಾಗಲು ಅಸಾಧ್ಯ. ಈ ಕಾರಣದಿಂದ ರೋಗಕ್ಕೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಏಡ್ಸ್ ಕುರಿತು ಅರಿವು ಹೊಂದಬೇಕು. ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಸಂಜೀವಕುಮಾರ ಸಿಂಗ್ ರಾಯಚೂರಕರ್ ಮಾತನಾಡಿ, ಯುವಕ ಯುವಕರಲ್ಲಿ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದೆ. ಹಾನಿಕಾರಕ ಈ ರೋಗ ಸಂಪೂರ್ಣ ಗುಣಮುಖಕ್ಕೆ ಲಸಿಕೆ ಲಭ್ಯವಾಗಿಲ್ಲ. ಆದರೆ ಇದನ್ನು ತಡೆಗಟ್ಟಲು ವಿಧಾನ ಸುಲಭ. ಅಸುರಕ್ಷಿತ ಲೈಂಗಿಕ ಪ್ರಕ್ರಿಯೆಯಿಂದ ಈ ರೋಗ ಬರುತ್ತದೆ. ನಿರ್ಲಕ್ಷದ ಸೂಜಿಗಳಿಂದ ರೋಗ ಬರುತ್ತದೆ. ತಾಯಿಯಿಂದ ಮಗುವಿಗೆ ಬರುತ್ತದೆ. ಇದನ್ನು ತಡೆಗಟ್ಟ ಬಹುದು.ಅಸುರಕ್ಷಿತ ಲೈಂಗಿಕ ಸಂಬAಧದಿAದ ಗ್ರಾಮೀಣ ಭಾಗದಲ್ಲಿಯೂ ಏಡ್ಸ್ ಹೆಚ್ಚಾಗುತ್ತಿದೆ. ಲೈಂಗಿಕ ಕ್ರಿಯೆಗಳು ಮದುವೆ ಮುಂಚೆ ನಡೆಯುತ್ತಿರುವುದು ಕಳವಳ ಸಂಗತಿ ಎಂದರು.
ಆರಂಭದಲ್ಲಿ ಗಾಂಧಿ ವೃತ್ತದಲ್ಲಿ ಏಡ್ಸ್ ಜಾಗೃತಿ ಜಾಥಾಕ್ಕೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮರೆಪ್ಪ ಜಾಥಾಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಸಾಜೀದ್, ತಾಲೂಕು ಆರೋಗ್ಯಧಿಕಾರಿ ಡಾ. ಹನುಮಂತ ರೆಡ್ಡಿ, ಐಎಮ್ ಎ ಜಿಲ್ಲಾಧ್ಯಕ್ಷ ಡಾ.ಚಂದ್ರಕಾAತ ಪೂಜಾರಿ, ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ ಸಿನ್ನೂರ್, ಡಾ.ಶರಣಬಸಪ್ಪ ಎಲ್ಹೇರಿ, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ , ತುಳಸಿರಾಮ, ಅಮರೇಶ ಬೋತಿ ಇದ್ದರು. ಇದೆ ಸಂದರ್ಭದಲ್ಲಿ ಹೆಚ್.ಐ.ವಿ ಸಮುದಾಯಕ್ಕೆ ಸಹಾಯ, ಸಹಕಾರ ಮತ್ತು ಹೆಚ್ ಐ.ವಿ ಪರೀಕ್ಷೆ ಮಾಡುವಲ್ಲಿ ಗುರಿ ಸಾಧನೆ ಮಾಡಿದ್ದಕ್ಕಾಗಿ ಸಂಬAಧಿಸಿದ ಸಿಬ್ಬಂದಿಗಳನ್ನು ಸನ್ಮಾನ ಮಾಡಲಾಯಿತು.
 Total Visits: 70
Total Visits: 70 All time total visits: 31221
All time total visits: 31221
 
			 
                                 
                              
         
         
         
        
