ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ರಕ್ತದಾನ ಮಾಡಲು ಯುವಕರು ಮುಂದಾಗಬೇಕು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ರಕ್ತದಾನ ಮಾಡಲು ಯುವಕರು ಮುಂದಾಗಬೇಕು
ಇದೀಗ ಬಂದ ಸುದ್ದಿ

ರಕ್ತದಾನ ಮಾಡಲು ಯುವಕರು ಮುಂದಾಗಬೇಕು

Satyakam NewsDesk
Last updated: 2025/06/17 at 5:16 PM
Satyakam NewsDesk
Share
3 Min Read
SHARE
ಯಾದಗಿರಿ : ಜೂನ್ 17,  (ಕ.ವಾ) : ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ಪ್ರೇರೆಪಿಸಿದರು, ಇದರಲ್ಲಿ ವೈದ್ಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಹೇಳಿದರು.
     ಯಾದಗಿರಿ ನಗರದಲ್ಲಿ ಜೂ.17ರ ಮಂಗಳವಾರ ರಂದು ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ಯಾದಗಿರಿ ಜಿಲ್ಲೆಯಲ್ಲಿ ರಕ್ತ ಕೇಂದ್ರ ಆರಂಭವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ಪ್ರೇರೆಪಿಸಿದರು, 2025ರ ಜೂನ್ 14 ರಂದು ವಿಶ್ವದ್ಯಾಂತ ರಕ್ತದಾನಿಗಳ ದಿವಸ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ 2025ರ ಜೂನ್ 17 ರಂದು ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆಯ ವೈದ್ಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಯಾದಗಿರಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸಂಜೀವಕುಮಾರ ರಾಯಚೂರಕರ್ ಅವರು ಮಾತನಾಡಿ, 17 ರಿಂದ 65 ವರ್ಷ ಒಳಗಿರುವ ಆರೋಗ್ಯವಂತ ವ್ಯಕ್ತಿಗಳು ವರ್ಷಕ್ಕೆ 2 ಬಾರಿ ರಕ್ತದಾನ ಮಾಡಬಹುದು, ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಿದರೆ ಅವರ ದೇಹದಲ್ಲಿ ಹೊಸ ರಕ್ತ ಉಂಟಾಗಲು ಪ್ರಚೋದನೆಯಾಗುತ್ತದೆ ಯಾವುದೇ ತರಹದ ಆಪತ್ತು ಬರುವುದಿಲ್ಲ ಬದಲಾಗಿ ಹೊಸ ಚೈತನ್ಯ ಮೂಡುತ್ತದೆ. ರಕ್ತದಾನ ಮಾಡುವವರಿಗೆ ಬಿ.ಪಿ ಹಿಮೊಗ್ಲೋಬಿನ್, ಹೆಚ್.ಐ.ವಿ ಹೆಚ್.ಬಿ.ಐ.ಜಿ, ಸಿಫಲೀಸ್ ಇನ್ನೀತರ ಪರೀಕ್ಷೆ ಮಾಡಿದ ನಂತರವೇ 350 ರಿಂದ 450 ಎಂ.ಎಲ್ ರಕ್ತ ಪಡೆಯಲಾಗುತ್ತದೆ, ಅಪಘಾತ ಹೊಂದಿ ರಕ್ತಸ್ರಾವ ಆದವರಿಗೆ ಅನಿಮೀಯಾದಿಂದ ಬಳಲುತ್ತಿರುವ ಬಾಣಂತಿಯರಿಗೆ ದೊಟ್ಟ ಪ್ರಮಾಣದ ಶಾಸ್ತ್ರ ಚಿಕಿತ್ಸೆಗಳಿಗಾಗಿ, ಥಲಸಿಮೀಯಾ ಮತ್ತು ಹೀಮಿಫೆಮಿಯಾ ರೋಗಿಗಳಿಗೆ ಜೀವ ಉಳಿಸಲು ರಕ್ತದ ಅವಶ್ಯಕತೆ ಇರುತ್ತದೆ ಎಂದು ತಿಳಿಸಿದರು.
     ಯಿಮ್ಸ್ ವೈದ್ಯಕೀಯ ನಿರ್ದೇಶಕರು ಡಾ.ಸಂದೀಪ.ಹೆಚ್ ಅವರು ಮಾತನಾಡಿ ಪ್ರತಿಯೊಬ್ಬ ವೈದ್ಯಕೀಯ ವಿದ್ಯಾರ್ಥಿ ರಕ್ತದಾನ ಮಾಡಲು ಮುಂದೆ ಬಂದು ಸಮಾಜದಲ್ಲಿ ಒಂದು ಪ್ರೇರಣೆ ಆಗಬೇಕು ಎಂದು ಹೇಳಿದರು. ಯಾದಗಿರಿಯಲ್ಲಿ ರಕ್ತಕೇಂದ್ರ ಆರಂಭವಾಗಿದ್ದು ತುಂಬಾ ಜನರ ರಕ್ತದಾನದ ಅವಶ್ಯಕತೆ ಇದೆ ಎಂದು ಹೇಳಿದರು.
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಪಾಟೀಲ್, ಅವರು ಮಾತನಾಡಿದರು, ಕರ್ನಾಟಕದಲ್ಲಿ ಶೇ.1 ರಷ್ಟು ಜನರಿಗೆ ಪ್ರತಿ ವರ್ಷ ರಕ್ತದಾನದ ಅವಶ್ಯಕತೆ ಇದೆ ಆದರೆ 0.5 ಶೇಕಡಾ ಕೂಡ ರಕ್ತದಾನಿಗಳು ತುರ್ತು ಸಂದರ್ಭದಲ್ಲಿ ಲಭ್ಯವಿರುವುದಿಲ್ಲ ಕಾರಣ ರಕ್ತದಾನ ಒಂದು ಮಹಾ ಪುಣ್ಯದ ಕೆಲಸ ಜೀವ ಉಳಿಸುವ ಕಾರ್ಯ. ರಕ್ತವನ್ನು ಕೃತ್ರಿಮವಾಗಿ ತಯಾರಿಸಲು ಸಾದ್ಯವಿಲ್ಲ ಅದು ಕೇವಲ ಮಾನವನ ದೇಹದಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ಆದ ಕಾರಣ ಇನ್ನೀತರರ ಜೀವದ ಬಗ್ಗೆ ಕಾಳಜಿ ಇರುವವರು ರಕ್ತದಾನ ಮಾಡಬೇಕೆಂದು ಹೇಳಿದರು.
ಯಾದಗಿರಿ ಯಿಮ್ಸ್ ರಕ್ತ ಕೇಂದ್ರ ವೈದ್ಯಕೀಯ ಅಧಿಕಾರಿ ಡಾ.ಸಿದ್ದಲಿಂಗರೆಡ್ಡಿ ಅವರು ಮಾತನಾಡಿ, ರಕ್ತ ಕೇಂದ್ರ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ವಿವರ ನೀಡಿದರು.
     ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳಾದ ಯಿಮ್ಸ್ ನಿರ್ದೇಶಕರು ಡಾ.ಸಂದೀಪ.ಹೆಚ್ ಅವರು ಶ್ರೀ ನಿಂಗಪ್ಪ ಜಡಿ, ಅಭಿಲಾಷ ಮತ್ತು ಸುಪ್ರೀತ ಇವರಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಲಾಯಿತು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವತಿಯಿಂದ ರಕ್ತದಾನ ಶಿಬಿರದಲ್ಲಿ 34 ಜನ ರಕ್ತದಾನ ಮಾಡಲಾಯಿತು.
     ಈ ಸಂದರ್ಭದಲ್ಲಿ ಯಾದಗಿರಿ ಯಿಮ್ಸ್ ಪ್ರಾಂಶುಪಾಲರು ಡಾ.ನವಾಜ್ ಉಮರ್, ಯಾದಗಿರಿ ಯಿಮ್ಸ್ ಹಣಕಾಸು ಸಲಹೆಗಾರರು ಶ್ರೀ ಕಾಶಿನಾಥ ಜಿಲ್ಲಾ  ಶಾಸ್ತ್ರ ಚಿಕಿತ್ಸಕರು ಡಾ.ರಿಜ್ವಾನಾ ಆಫ್ರೀನ್, ಡಾ.ಮಾನಸಾ ದಾಸ, ಡಾ.ಶಿವಕುಮಾರ, ಡಾ.ಮಲ್ಲಪ್ಪ, ಡಾ.ಪದ್ಮಾನಂದ ಗಾಯಕವಾಡ್, ಡಾ.ಹಣಮಂತರೆಡ್ಡಿ, ಯಿಮ್ಸ್ ಭೋದಕ ಸಿಬ್ಬಂದಿ ಜಿಲ್ಲಾ ಡ್ಕಾಪ್ಕೋಯೋ ಮತ್ತು ಕ್ಷಯರೋಗ ಘಟಕದ ಸಿಬ್ಬಂದಿಗಳು, ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
apvc-iconTotal Visits: 10
apvc-iconAll time total visits: 16239

You Might Also Like

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk June 17, 2025 June 17, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು
Next Article ಗುಣಮಟ್ಟದ ರಸ್ತೆ ನಿರ್ಮಿಸಿ : ಶಾಸಕ ಶರಣಗೌಡ ಕಂದಕೂರ

Stay Connected

Facebook Like
Twitter Follow
Instagram Follow
Youtube Subscribe

Latest News

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.
ಇದೀಗ ಬಂದ ಸುದ್ದಿ July 19, 2025
ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ರಕ್ತದಾನ ಮಾಡಲು ಯುವಕರು ಮುಂದಾಗಬೇಕು?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube